AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Windfall Tax: ವಿಂಡ್​ಫಾಲ್ ಟ್ಯಾಕ್ಸ್ ರದ್ದತಿ, ಪೆಟ್ರೋಲ್ ಬೆಲೆ ಇಳಿಕೆ ಸಾಧ್ಯತೆ

Petrol and diesel prices may get reduced: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಸಾಕಷ್ಟು ಇಳಿದಿರುವುದರಿಂದ ಪೆಟ್ರೋಲ್ ಬೆಲೆ ಇಳಿಕೆ ಆಗುವ ಸಾಧ್ಯತೆ ಇದೆ. ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿದೆ. ಹಾಗೆಯೇ, ಕಚ್ಚಾ ತೈಲದ ಮೇಲೆ ಹಾಕಲಾಗುವ ವಿಂಡ್​ಫಾಲ್ ತೆರಿಗೆಯನ್ನು ಕೈಬಿಡುವ ಬಗ್ಗೆಯೂ ಸರ್ಕಾರ ಯೋಚಿಸುತ್ತಿದೆ.

Windfall Tax: ವಿಂಡ್​ಫಾಲ್ ಟ್ಯಾಕ್ಸ್ ರದ್ದತಿ, ಪೆಟ್ರೋಲ್ ಬೆಲೆ ಇಳಿಕೆ ಸಾಧ್ಯತೆ
ಪೆಟ್ರೋಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 12, 2024 | 3:33 PM

Share

ನವದೆಹಲಿ, ಸೆಪ್ಟೆಂಬರ್ 12: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಇಳಿಕೆ ಆಗಿರುವುದರಿಂದ ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಇಳಿಸಲು ಸರ್ಕಾರ ಆಲೋಚಿಸುತ್ತಿರುವುದು ತಿಳಿದುಬಂದಿದೆ. ಪೆಟ್ರೋಲ್ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಈ ಬಗ್ಗೆ ಸುಳಿವು ನೀಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡ ಅವರು, ತೈಲ ಕಂಪನಿಗಳಿಗೆ ಹಾಕಲಾಗುವ ವಿಂಡ್​ಫಾಲ್ ತೆರಿಗೆಯನ್ನು ತೆಗೆದುಹಾಕುವ ಪ್ರಸ್ತಾಪವೊಂದು ಸರ್ಕಾರದ ಪರಾಮರ್ಶೆಯಲ್ಲಿರುವುದನ್ನು ತಿಳಿಸಿದ್ದಾರೆ.

ಏನಿದು ವಿಂಡ್​ಫಾಲ್ ಟ್ಯಾಕ್ಸ್?

ಇದು ಆದಾಯ ತೆರಿಗೆಯಲ್ಲಿನ ಕ್ಯಾಪಿಟಲ್ ಗೇಯ್ನ್ ಟ್ಯಾಕ್ಸ್ ರೀತಿಯಂಥದ್ದು. ಅಸ್ವಾಭಾವಿಕವಾಗಿ ಲಾಭ ಹೆಚ್ಚಳ ಆದಾಗ ವಿಂಡ್​ಫಾಲ್ ಟ್ಯಾಕ್ಸ್ ವಿಧಿಸಲಾಗುತ್ತದೆ. ಪೆಟ್ರೋಲಿಯಂ ಸೇರಿ ಕೆಲ ಉದ್ಯಮಗಳಲ್ಲಿ ಸರ್ಕಾರ ಈ ತೆರಿಗೆ ಹಾಕುತ್ತದೆ. 2022ರಲ್ಲಿ ಮೊದಲ ಬಾರಿಗೆ ಸರ್ಕಾರ ವಿಂಡ್​ಫಾಲ್ ಟ್ಯಾಕ್ಸ್ ಜಾರಿಗೆ ತಂದಿತು. ಜಾಗತಿಕ ತೈಲ ಬೆಲೆಯಲ್ಲಿ ದಿಢೀರ್ ಏರಿಳಿತಗಳಾಗಿ ತೈಲ ಕಂಪನಿಗಳು ದೊಡ್ಡ ಲಾಭ ಗಳಿಸಿದಾಗ ಅದಕ್ಕೆ ತೆರಿಗೆ ವಿಧಿಸಲೆಂದು ಇದನ್ನು ತರಲಾಗಿತ್ತು.

ಜಾಗತಿಕ ತೈಲ ಬೆಲೆಗಳ ಅನುಸಾರವಾಗಿ ತಿಂಗಳಿಗೆ ಎರಡು ಬಾರಿ ಸರ್ಕಾರ ವಿಂಡ್​ಫಾಲ್ ಟ್ಯಾಕ್ಸ್ ಅನ್ನು ಪರಿಷ್ಕರಿಸುತ್ತದೆ. ಈಗ ಪೂರ್ಣವಾಗಿ ಟ್ಯಾಕ್ಸ್ ತೆಗೆದುಹಾಕುವ ಪ್ರಸ್ತಾಪ ಸರ್ಕಾರದ ಮುಂದಿದೆ. ತೈಲ ಸಂಸ್ಕರಣಾ ಕಂಪನಿಗಳಿಗೆ ಲಾಭದ ಮಾರ್ಜಿನ್ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿಂಡ್​ಫಾಲ್ ಟ್ಯಾಕ್ಸ್ ತೆಗೆದುಹಾಕಲು ಯೋಚಿಸಲಾಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ಐದು ಲಕ್ಷ ಕವರೇಜ್ ನೀಡುವ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್​ಗೆ ಅರ್ಜಿ ಸಲ್ಲಿಕೆ, ಅರ್ಹತೆ, ದಾಖಲೆ ಇತ್ಯಾದಿ ವಿವರ

ಪೆಟ್ರೋಲ್, ಡೀಸಲ್ ಬೆಲೆ ಇಳಿಕೆ ಸಾಧ್ಯತೆ

ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಸಾಕಷ್ಟು ಇಳಿಕೆ ಆಗಿರುವುದರಿಂದ ಭಾರತದಲ್ಲಿ ಪೆಟ್ರೋಲ್, ಡೀಸಲ್ ಇತ್ಯಾದಿ ಪೆಟ್ರೋಲಿಯಂ ಉತ್ಪನ್ನಗಳ ರೀಟೇಲ್ ಬೆಲೆಗಳನ್ನು ಇಳಿಸಲು ಸರ್ಕಾರ ಚಿಂತನೆ ನಡೆಸಿದೆ. ಶೀಘ್ರದಲ್ಲೇ ಈ ಸಂಬಂಧ ನಿರ್ಧಾರ ಕೈಗೊಳ್ಳಬಹುದಾದ ಸಾಧ್ಯತೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​