Sign In

By signing in or creating an account, you agree with Associated Broadcasting Company's Terms & Conditions and Privacy Policy.

Domestic Crude: ದೇಶೀಯ ಕಚ್ಚಾತೈಲದ ಮೇಲೆ ವಿಂಡ್​ಫಾಲ್ ಟ್ಯಾಕ್ಸ್​ ಹೆಚ್ಚಿಸಿದ ಭಾರತ ಸರ್ಕಾರ, ವೈಮಾನಿಕ ಇಂಧನಕ್ಕೆ ಸೆಸ್ ಬರೆ

ವಿದೇಶಿ ವಿನಿಮಯ ಮೀಸಲು ಸಂಗ್ರಹ, ಜಾಗತಿಕ ಕಚ್ಚಾ ತೈಲ ಬೆಲೆ ಹಾಗೂ ಇತರ ವಿದ್ಯಮಾನಗಳನ್ನು ಆಧರಿಸಿ ಪ್ರತಿ 15 ದಿನಗಳಿಗೆ ಒಮ್ಮೆ ಕೇಂದ್ರ ಸರ್ಕಾರವು ವಿಂಡ್​ಫಾಲ್ ಟ್ಯಾಕ್ಸ್​ ಪರಿಷ್ಕರಿಸುತ್ತದೆ.

Domestic Crude: ದೇಶೀಯ ಕಚ್ಚಾತೈಲದ ಮೇಲೆ ವಿಂಡ್​ಫಾಲ್ ಟ್ಯಾಕ್ಸ್​ ಹೆಚ್ಚಿಸಿದ ಭಾರತ ಸರ್ಕಾರ, ವೈಮಾನಿಕ ಇಂಧನಕ್ಕೆ ಸೆಸ್ ಬರೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 01, 2022 | 9:05 AM

ದೆಹಲಿ: ಸ್ಥಳೀಯವಾಗಿ ಉತ್ಪಾದಿಸಿದ ಕಚ್ಚಾತೈಲದ (Domestic Crude Oil) ಮೇಲೆ ಭಾರತ ಸರ್ಕಾರವು ವಿಂಡ್​ಫಾಲ್ ಟ್ಯಾಕ್ಸ್​ (Windfall Tax) ಹೆಚ್ಚಿಸಿದೆ. ಒಂದು ಟನ್ ಕಚ್ಚಾತೈಲದ ಮೇಲೆ ₹ 13,300 ವಿಂಡ್​ಫಾಲ್ ಟ್ಯಾಕ್ಸ್​ ವಿಧಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದೆ. ಹೊಸ ತೆರಿಗೆ ಗುರುವಾರದಿಂದಲೇ (ಸೆಪ್ಟೆಂಬರ್ 1) ಜಾರಿಗೆ ಬರಲಿದೆ. ಕಳೆದ ಎರಡು ವಾರಗಳಿಂದ ಭಾರತದಲ್ಲಿ ಉತ್ಪಾದನೆಯಾಗುವ ಕಚ್ಚಾತೈಲಕ್ಕೆ ₹ 13,000 ವಿಂಡ್​ಫಾಲ್ ಟ್ಯಾಕ್ಸ್ ವಿಧಿಸಲಾಗುತ್ತಿತ್ತು. ಅದಕ್ಕೂ ಮೊದಲು ತೆರಿಗೆ ಪ್ರಮಾಣ ಹೆಚ್ಚಾಗಿತ್ತು. ಆಗಸ್ಟ್ 19ರಲ್ಲಿ ವಿಂಡ್​ಫಾಲ್ ಟ್ಯಾಕ್ಸ್ ಮೊತ್ತವನ್ನು ₹ 17,750 ದಿಂದ ₹ 13,000ಕ್ಕೆ ಇಳಿಸಲಾಗಿತ್ತು.

ವೈಮಾನಿಕ ಕ್ಷೇತ್ರದಲ್ಲಿ ಬಳಕೆಯಾಗುವ ಇಂಧನದ (Aviation Turbine Fuel – ATF) ಮೇಲಿದ್ದ ತೆರಿಗೆಯನ್ನು ₹ 2ರಿಂದ ₹ 9ಕ್ಕೆ ಹೆಚ್ಚಿಸಲಾಗಿದೆ. ಡೀಸೆಲ್ ರಫ್ತಿನ ಮೇಲೆ ವಿಧಿಸುತ್ತಿದ್ದ ವಿಶೇಷ ಅಬಕಾರಿ ಸುಂಕವನ್ನು ₹ 6ರಿಂದ ₹ 12ಕ್ಕೆ ಹೆಚ್ಚಿಸಲಾಗಿದೆ. ಕಳೆದ ಜುಲೈ 1ರಂದು ಕೇಂದ್ರ ಸರ್ಕಾರವು ಒಂದು ಲೀಟರ್​ ಪೆಟ್ರೋಲ್ ಮತ್ತು ವೈಮಾನಿಕ ಇಂಧನದ ಮೇಲೆ ₹ 6 ಮತ್ತು ಡೀಸೆಲ್ ಮೇಲೆ ಎಟಿಎಫ್​ ರಫ್ತಿನ ಮೇಲೆ ₹ 13ರ ಸುಂಕ ವಿಧಿಸಿತ್ತು. ಪ್ರತಿ ಟನ್ ದೇಶೀಯ ಕಚ್ಚಾತೈಲ ಮಾರಾಟದ ಮೇಲೆ ₹ 23,250ರ ವಿಂಡ್​ಫಾಲ್ ಟ್ಯಾಕ್ಸ್ ಹೇರಿತ್ತು.

ವಿದೇಶಿ ವಿನಿಮಯ ಮೀಸಲು ಸಂಗ್ರಹ, ಜಾಗತಿಕ ಕಚ್ಚಾ ತೈಲ ಬೆಲೆ ಹಾಗೂ ಇತರ ವಿದ್ಯಮಾನಗಳನ್ನು ಆಧರಿಸಿ ಪ್ರತಿ 15 ದಿನಗಳಿಗೆ ಒಮ್ಮೆ ದೇಶೀಯ ಕಚ್ಚಾ ತೈಲ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ವಿಂಡ್​ಫಾಲ್ ಟ್ಯಾಕ್ಸ್ ಪರಿಷ್ಕರಿಸಲಾಗುವುದು ಎಂದು ಕಂದಾಯ ಇಲಾಖೆ ಕಾರ್ಯದರ್ಶಿ ತರುಣ್ ಬಜಾಜ್ ಹೇಳಿದ್ದಾರೆ.

ಭಾರತ ಸರ್ಕಾರವು ಜುಲೈ 1ರಂದು ಮೊದಲ ಬಾರಿಗೆ ವಿಂಡ್​ಫಾಲ್ ಟ್ಯಾಕ್ಸ್​ ವಿಧಿಸಿತ್ತು. ರಷ್ಯಾ-ಉಕ್ರೇನ್ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಾಗಿತ್ತು. ದೇಶೀಯ ಉತ್ಪನ್ನಗಳನ್ನು ಜಾಗತಿಕ ಮಾರುಕಟ್ಟೆಯಲ್ಲಿ ಮಾರುತ್ತಿದ್ದ ತೈಲ ಕಂಪನಿಗಳು ಉತ್ತಮ ಆದಾಯ ಗಳಿಸುತ್ತಿದ್ದವು. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಪ್ರಾತಿನಿಧಿಕ ಉತ್ಪನ್ನವಾಗಿರುವ ಬ್ರೆಂಟ್​ ಕ್ರೂಡ್​ ಗರಿಷ್ಠ ಮಟ್ಟದಲ್ಲಿ ವಹಿವಾಟಾಗುತ್ತಿತ್ತು.

Published On - 9:05 am, Thu, 1 September 22

ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ