AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rural Development: ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರದಿಂದ 1,046 ಕೋಟಿ ರೂ. ಬಿಡುಗಡೆ

ಈ ಹಣದ ಒಟ್ಟು ಮೌಲ್ಯದಲ್ಲಿ ಶೇ 60ರಷ್ಟು ಪ್ರಮಾಣವನ್ನು ಸ್ವಚ್ಛತೆ, ಬಯಲು ಶೌಚಾಲಯ ಮುಕ್ತ ಯೋಜನೆಗಳ ಅನುಷ್ಠಾನಕ್ಕೆ ಬಳಸಬೇಕು ಎಂದು ಸೂಚಿಸಲಾಗಿದೆ.

Rural Development: ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರದಿಂದ 1,046 ಕೋಟಿ ರೂ. ಬಿಡುಗಡೆ
ಗ್ರಾಮೀಣ ಕುಡಿಯುವ ನೀರು ಯೋಜನೆಗೆ ಕೇಂದ್ರ ಸರ್ಕಾರವು ಹಣ ಬಿಡುಗಡೆ ಮಾಡಿದೆImage Credit source: www.indiawaterportal.org
TV9 Web
| Edited By: |

Updated on:Sep 01, 2022 | 12:12 PM

Share

ದೆಹಲಿ: ಕರ್ನಾಟಕದ ಗ್ರಾಮೀಣ ಅಭಿವೃದ್ಧಿಗಾಗಿ (Rural Development) ಸ್ಥಳೀಯ ಸಂಸ್ಥೆಗಳಿಗೆ (Rural Local Bodies) ಕೇಂದ್ರ ಹಣಕಾಸು ಇಲಾಖೆಯು (Union Finance Ministry) ₹ 1,046 ಕೋಟಿ ಬಿಡುಗಡೆ ಮಾಡಿದೆ. ದೇಶದ ವಿವಿಧ ರಾಜ್ಯಗಳಿಗೆ ಒಟ್ಟು ₹ 4,190 ಕೋಟಿ ನೀಡಲಾಗಿದೆ. 15ನೇ ಹಣಕಾಸು ಆಯೋಗದ ಶಿಫಾರಸು ಪ್ರಕಾರ ಈ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಣದ ಒಟ್ಟು ಮೌಲ್ಯದಲ್ಲಿ ಶೇ 60ರಷ್ಟು ಪ್ರಮಾಣವನ್ನು ಸ್ವಚ್ಛತೆ, ಬಯಲು ಶೌಚಾಲಯ ಮುಕ್ತ ಯೋಜನೆಗಳ ಅನುಷ್ಠಾನಕ್ಕೆ ಬಳಸಬೇಕು. ಕುಡಿಯುವ ನೀರು, ಮಳೆ ನೀರು ಕೊಯ್ಲು ಮತ್ತು ನೀರು ಮರುಬಳಕೆಯ ಸೌಕರ್ಯ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಮೊದಲು ಘೋಷಣೆ ಮಾಡಿರುವ ಅನುದಾನಕ್ಕೆ ಹೆಚ್ಚುವರಿಯಾಗಿ ಈ ಹಣವು ಸ್ಥಳೀಯ ಸಂಸ್ಥೆಗಳಿಗೆ ಲಭ್ಯವಾಗಲಿದೆ. ಕುಡಿಯುವ ನೀರು ಮತ್ತು ಸ್ವಚ್ಛತೆಗೆ ಆದ್ಯತೆ ನೀಡುವುದಾಗಿ ಕೇಂದ್ರ ಸರ್ಕಾರವು ಘೋಷಿಸಿದೆ. ಹೀಗಾಗಿ ಈ ಎರಡೂ ಯೋಜನೆಗಳಿಗೆ ಪೂರಕವಾಗಿಯೇ ಹೆಚ್ಚುವರಿ ಅನುದಾನ ಖರ್ಚು ಮಾಡಬೇಕು ಎಂದು ಕೇಂದ್ರ ಸೂಚಿಸಿದೆ.

ಈ ಅನುದಾನ ಪಡೆದುಕೊಳ್ಳಲು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಒಂದಿಷ್ಟು ಷರತ್ತುಗಳನ್ನು ಪೂರೈಸಬೇಕಾಗುತ್ತದೆ. ಪಾರದರ್ಶಕತೆ ನಿಯಮಗಳು, ನಿಯಮಿತವಾಗಿ ಚುನಾವಣೆಗಳನ್ನು ನಡೆಸಬೇಕು, ಪ್ರತಿ ವರ್ಷವೂ ನಿಗದಿತ ಪ್ರಮಾಣದ ಅಭಿವೃದ್ಧಿ ಸಾಧಿಸಬೇಕು ಎಂದು ಕೇಂದ್ರ ಸರ್ಕಾರವು ಹೇಳಿದೆ. ಕಳೆದ ವರ್ಷದ ಆದಾಯ ಮತ್ತು ವೆಚ್ಚದ ವಿವರಗಳನ್ನು ಸಾರ್ವಜನಿಕರಿಗೆ ಸಿಗುವಂತೆ ಆನ್​ಲೈನ್​ನಲಲ್ಲಿ ಪ್ರಕಟಿಸಬೇಕು. ಇದರ ಜೊತೆಗೆ ಇ-ಗ್ರಾಮ್​ಸ್ವರಾಜ್ ಮತ್ತು ಆಡಿಟ್ ಆನ್​ಲೈನ್ ಪೋರ್ಟಲ್​ಗಳಲ್ಲಿಯೂ ಮಾಹಿತಿ ಲಭ್ಯವಿರುವಂತೆ ಗಮನ ಹರಿಸಬೇಕು. ಸಂಪೂರ್ಣ ಚುನಾಯಿತ ಪ್ರತಿನಿಧಿಗಳು ಆಡಳಿತ ನಿರ್ವಹಿಸುವ ಸಂಸ್ಥೆಗಳಿಗೆ ಮಾತ್ರವೇ ಕೇಂದ್ರದ ಹೆಚ್ಚುವರಿ ಅನುದಾನ ಲಭ್ಯವಾಗಲಿದೆ.

ಕೇಂದ್ರದ ಅನುದಾನ ಬಳಸಲು ಇಚ್ಛಿಸುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಇ-ಗ್ರಾಮ್​ಸ್ವರಾಜ್​ ಪೋರ್ಟಲ್​ಗೆ ವಾರ್ಷಿಕ ಕಾರ್ಯಯೋಜನೆ ವಿವರಗಳನ್ನು ಅಪ್​ಲೋಡ್ ಮಾಡಬೇಕು. 15ನೇ ಹಣಕಾಸು ಆಯೋಗದಿಂದ ಬಂದ ಹಣವನ್ನು ಹೇಗೆ ಖರ್ಚು ಮಾಡಲಾಗಿದೆ ಎಂಬ ವಿವರವನ್ನೂ ಗ್ರಾಮ ಪಂಚಾಯಿತಿಗಳು ಒದಗಿಸಬೇಕು. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಹಣ ಬಿಡುಗಡೆ ಮಾಡಿದ 10 ದಿನಗಳ ಒಳಗೆ ಅದು ಗ್ರಾಮ ಪಂಚಾಯಿತಿಗಳಿಗೆ ತಲುಪಬೇಕು. ತಡವಾದರೆ ರಾಜ್ಯ ಸರ್ಕಾರಗಳು ಬಡ್ಡಿ ಕಟ್ಟಿಕೊಡಬೇಕಾಗುತ್ತದೆ ಎಂದು ಕೇಂದ್ರ ಹಣಕಾಸು ಇಲಾಖೆಯು ಎಚ್ಚರಿಸಿದೆ.

Published On - 12:02 pm, Thu, 1 September 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್