AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದಿಂದ ರಾಜ್ಯಗಳಿಗೆ ಒಟ್ಟು 17,000 ಕೋಟಿ ರೂ. GST ಪರಿಹಾರ ಹಣ ಬಿಡುಗಡೆ, ಕರ್ನಾಟಕಕ್ಕೆ ಎಷ್ಟು ಬಂತು?

ಕೇಂದ್ರದಿಂದ ರಾಜ್ಯಗಳಿಗೆ ಒಟ್ಟು 17,000 ಕೋಟಿ ರೂ. GST ಪರಿಹಾರ ಹಣ ಬಿಡುಗಡೆಯಾಗಿದೆ. ಇದರಲ್ಲಿ ಕರ್ನಾಟಕಕ್ಕೆ ಎಷ್ಟು ಸಿಕ್ಕಿದೆ?

ಕೇಂದ್ರದಿಂದ ರಾಜ್ಯಗಳಿಗೆ ಒಟ್ಟು 17,000 ಕೋಟಿ ರೂ. GST ಪರಿಹಾರ ಹಣ  ಬಿಡುಗಡೆ, ಕರ್ನಾಟಕಕ್ಕೆ ಎಷ್ಟು ಬಂತು?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 25, 2022 | 8:20 PM

Share

ನವದೆಹಲಿ: ಕೇಂದ್ರ ಸರ್ಕಾರವು ದೇಶದ ವಿವಿಧ ರಾಜ್ಯಗಳಿಗೆ ನೀಡಬೇಕಿದ್ದ ಜಿಎಸ್​ಟಿ ಬಾಕಿ ಪರಿಹಾರದ ಹಣವನ್ನು ಇಂದು(ನವೆಂಬರ್ 25) ಬಿಡುಗಡೆ ಮಾಡಿದೆ. 2022ರ ಏಪ್ರಿಲ್‌ನಿಂದ ಜೂ.24ರ ಅವಧಿಯ ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ GST ಬಾಕಿ ಹಣ ಒಟ್ಟ 75 ಸಾವಿರ ಕೋಟಿ ಪರಿಹಾರ ಬಿಡುಗಡೆಗೊಳಿಸಿದೆ. ಇದರಲ್ಲಿ ಕರ್ನಾಟಕಕ್ಕೆ 1,915 ಕೋಟಿ ರೂಪಾಯಿ ಜಿಎಸ್​ಟಿ ಪರಿಹಾರ ಹಣ ಸಿಕ್ಕಿದೆ.

ಕೇಂದ್ರ ಸರ್ಕಾರ 2022-23ರ ಸಾಲಿನಲ್ಲಿ ಈವರೆಗೆ ಕೇಂದ್ರ ಸರ್ಕಾರ 1,15,662 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇದರಲ್ಲಿ ಈ ಬಾರಿಯ ಜಿಎಸ್​ಟಿ ಸಂಗ್ರಹದಲ್ಲಿ ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರಕ್ಕೆ 2081 ಕೋಟಿ ರೂ, ಸಿಕ್ಕಿದ್ದರೆ, ನಂತರ ಸ್ಥಾನದಲ್ಲಿರುವ ರ್ನಾಟಕಕ್ಕೆ 1,915 ಕೋಟಿ ರೂ. ನೀಡಿದೆ.

ಯಾವ ರಾಜ್ಯಕ್ಕೆ ಎಷ್ಟು ಜಿಎಸ್​ಟಿ ಪರಿಹಾರ ಹಣ?

* ಆಂಧ್ರ ಪ್ರದೇಶಕ್ಕೆ 682 ಕೋಟಿ ರೂ. * ಅಸ್ಸಾಂ-192 ಕೋಟಿ ರೂ. * ಬಿಹಾರ್-91 ಕೋಟಿ ರೂ. * ಛತ್ತೀಸ್​ಗಢ 500 ಕೋಟಿ ರೂ.. * ದೆಹಲಿ-1200 ಕೋಟಿ ರೂ., * ಗೋವಾ-119 ಕೋಟಿ ರೂ., * ಗುಜರಾತ್-856 ಕೋಟಿ ರೂ., * ಹರಿಯಾಣ 622 ಕೋಟಿ ರೂ.. * ಹಿಮಾಚಲ ಪ್ರದೇಶ-226 ಕೋಟಿ ರೂ,. * ಜಮ್ಮು ಮತ್ತು ಕಾಶ್ಮೀರ-208 ಕೋಟಿ ರೂ,. * ಜಾರ್ಖಂಡ್- 338 ಕೋಟಿ ರೂ.. * ಕರ್ನಾಟಕ-1915 ಕೋಟಿ ರೂ,. * ಕೇರಳ-713 ಕೋಟಿ ರೂ,. * ಮಧ್ಯಪ್ರದೇಶ- 722 ಕೋಟಿ ರೂ,. * ಮಹಾರಾಷ್ಟ್ರ- 2081 ಕೋಟಿ ರೂ.. * ಒಡಿಶಾ-524 ಕೋಟಿ ರೂ.. * ಪಾಂಡಿಚರಿ- 73 ಕೋಟಿ ರೂ.. * ಪಂಜಾಬ್-984 ಕೋಟಿ ರೂ.. * ರಾಜಸ್ಥಾನ-806 ಕೋಟಿ ರೂ.. * ತಮಿಳುನಾಡು-542 ಕೋಟಿ ರೂ.. * ಉತ್ತರ ಪ್ರದೇಶ-342 ಕೋಟಿ ರೂ.. * ಪಶ್ಚಿಮ ಬಂಗಾಳ-814 ಕೋಟಿ ರೂ,. ಎಲ್ಲಾ ರಾಜ್ಯಗಳಿಗೆ ಸೇರಿ ಒಟ್ಟು 17,000 ರೂ. ಬಿಡುಗಡೆ ಮಾಡಿದೆ

Published On - 7:39 pm, Fri, 25 November 22

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ