AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಹೆಚ್ಚಳ: ಸರ್ಕಾರ ಆದೇಶ

ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರವನ್ನು ಸರ್ಕಾರ ಶುಕ್ರವಾರ ಹೆಚ್ಚಳ ಮಾಡಿದ್ದು, ಬಡ್ಡಿದರ ಜುಲೈನಿಂದ ಸೆಪ್ಟೆಂಬರ್‌ವರೆಗಿನ ತ್ರೈಮಾಸಿಕ ಅವಧಿಗೆ ಅನ್ವಯವಾಗಲಿದೆ.

ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಹೆಚ್ಚಳ: ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 30, 2023 | 8:58 PM

Share

ಸಣ್ಣ ಉಳಿತಾಯ ಯೋಜನೆ (small savings schemes) ಗಳ ಮೇಲಿನ ಬಡ್ಡಿದರವನ್ನು ಸರ್ಕಾರ ಶುಕ್ರವಾರ ಹೆಚ್ಚಳ ಮಾಡಿದ್ದು, ಬಡ್ಡಿದರ ಜುಲೈನಿಂದ ಸೆಪ್ಟೆಂಬರ್‌ವರೆಗಿನ ತ್ರೈಮಾಸಿಕ ಅವಧಿಗೆ ಅನ್ವಯವಾಗಲಿದೆ. 1 , 2 , 3 ಮತ್ತು 5 ವರ್ಷಗಳ ಅವಧಿಯ ಠೇವಣಿಗಳ ಬಡ್ಡಿ ದರ ಹೆಚ್ಚಳ ಮಾಡಿದೆ. 5 ವರ್ಷಗಳ ಮರುಕಳಿಸುವ ಠೇವಣಿ ಶೇ 0.3ರಷ್ಟು,  ಅಂಚೆ ಕಛೇರಿಗಳಲ್ಲಿ 1ವರ್ಷ ಠೇವಣಿಯು ಶೇ 0.1, ಹಿರಿಯ ನಾಗರಿಕರ ಉಳಿತಾಯ ಯೋಜನೆ 0.3 ಮತ್ತು ಕಿಸಾನ್ ವಿಕಾಸ್ ಪತ್ರ ಮೇಲಿನ ಬಡ್ಡಿ ದರ ಏರಿಕೆ ಮಾಡಲಾಗಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರದ ಮೇಲಿನ ಬಡ್ಡಿ ದರಲ್ಲಿ ಯಾವುದೇ ಬದಲಾವಣೆ ಇಲ್ಲ.

ಕೇಂದ್ರ ಹಣಕಾಸು ಸಚಿವಾಲಯವು ಇಂದು ಹೊರಡಿಸಿದ ಅಧಿಸೂಚನೆಯ ಪ್ರಕಾರ, ಸರ್ಕಾರವು 1-ವರ್ಷ, 2-ವರ್ಷದ ಬಡ್ಡಿದರವನ್ನು ಕಳೆದ ತ್ರೈಮಾಸಿಕದಲ್ಲಿ 6.8%, 6.9% ರಿಂದ 6.9%, 7.0% ಕ್ಕೆ ಹೆಚ್ಚಿಸಿದೆ.

ಇದನ್ನೂ ಓದಿ: Online Shopping: ಆನ್​ಲೈನ್ ಶಾಪಿಂಗ್; ಬೆಂಗಳೂರಿಗರದೇ ಮೇಲುಗೈ; ಸಣ್ಣ ನಗರವಾಸಿಗಳೂ ಹಿಂದೆಬಿದ್ದಿಲ್ಲ; ಜನರಿಗೆ ಅಮೇಜಾನ್ ಫೇವರಿಟ್

ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಸರ್ಕಾರವು ಪ್ರತಿ ತ್ರೈಮಾಸಿಕ ಪರಿಶೀಲಿಸುತ್ತದೆ. ಸಣ್ಣ ಉಳಿತಾಯ ಯೋಜನೆಗಳಲ್ಲಿ ಎಸ್ಸಿಎಸ್ಎಸ್, ಮಾಸಿಕ ಆದಾಯ ಖಾತೆ ಯೋಜನೆ, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ, ಕಿಸಾನ್ ವಿಕಾಸ್ ಪತ್ರ ಇತ್ಯಾದಿ 1 ವರ್ಷದಿಂದ 5 ವರ್ಷಗಳ ಅವಧಿಯ ಉಳಿತಾಯ ಠೇವಣಿಗಳು ಸೇರಿವೆ.

ಹೊಸ ದರಗಳು ಜುಲೈ 1 ರಿಂದ ಅನ್ವಯ

ಸರ್ಕಾರ ನೀಡಿರುವ ಸಣ್ಣ ಉಳಿತಾಯ ಯೋಜನೆಗಳು ಚಿಲ್ಲರೆ ಹೂಡಿಕೆದಾರರಲ್ಲಿ ತಮ್ಮ ಸುರಕ್ಷಿತ ಸ್ವಭಾವ ಮತ್ತು ಇತರ ಹೂಡಿಕೆ ಆಯ್ಕೆಗಳಿಗೆ ಹೋಲಿಸಿದರೆ ತುಲನಾತ್ಮಕವಾಗಿ ಹೆಚ್ಚಿನ ಬಡ್ಡಿದರಗಳಿಂದ ಜನಪ್ರಿಯವಾಗಿವೆ.

ಹಿರಿಯ ನಾಗರಿಕರು, ಮಕ್ಕಳು ಮತ್ತು ಕಡಿಮೆ ಆದಾಯದ ವ್ಯಕ್ತಿಗಳು ಸೇರಿದಂತೆ ಸಮಾಜದ ವಿವಿಧ ವರ್ಗಗಳ ವೈವಿಧ್ಯಮಯ ಅಗತ್ಯಗಳನ್ನು ಪೂರೈಸಲು ಈ ಯೋಜನೆಗಳನ್ನು ವಿನ್ಯಾಸಗೊಳಿಸಲಾಗಿದೆ. ಆಯ್ದ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರವು ಹಿಂದಿನ ತ್ರೈಮಾಸಿಕಕ್ಕೆ ಹೋಲಿಸಿದರೆ ಕಡಿಮೆಯಾಗಿದೆ, ಆಗ ಸರ್ಕಾರವು 70 ಬಿಪಿಎಸ್ ಹೆಚ್ಚಳವನ್ನು ಘೋಷಿಸಿತ್ತು.

ಇದನ್ನೂ ಓದಿ: Sensex Points: ಸೆನ್ಸೆಕ್ಸ್ ಮೂರೇ ದಿನದಲ್ಲಿ 1,800 ಅಂಕಗಳ ಏರಿಕೆ; ಸೆನ್ಸೆಕ್ಸ್ ಪಾಯಿಂಟ್ ಹೇಗೆ ಲೆಕ್ಕಹಾಕಲಾಗುತ್ತೆ?

ಕಳೆದ ಎರಡು ತ್ರೈಮಾಸಿಕಗಳಲ್ಲಿ, ಸುಕನ್ಯಾ ಸಮೃದ್ಧಿ ಖಾತೆ ಯೋಜನೆ, ಹಿರಿಯ ನಾಗರಿಕರ ಉಳಿತಾಯ ಯೋಜನೆ, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ, ಕಿಸಾನ್ ವಿಕಾಸ್ ಪತ್ರ, ಮಾಸಿಕ ಆದಾಯ ಉಳಿತಾಯ ಯೋಜನೆ ಮತ್ತು ಎಲ್ಲಾ ಪೋಸ್ಟ್ ಆಫೀಸ್ ಸಮಯದ ಠೇವಣಿಗಳಂತಹ ಜನಪ್ರಿಯ ಯೋಜನೆಗಳ ಮೇಲಿನ ಬಡ್ಡಿ ದರಗಳನ್ನು ಸರ್ಕಾರ ಹೆಚ್ಚಿಸಿದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:44 pm, Fri, 30 June 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು