ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಹೆಚ್ಚಳ: ಸರ್ಕಾರ ಆದೇಶ

ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರವನ್ನು ಸರ್ಕಾರ ಶುಕ್ರವಾರ ಹೆಚ್ಚಳ ಮಾಡಿದ್ದು, ಬಡ್ಡಿದರ ಜುಲೈನಿಂದ ಸೆಪ್ಟೆಂಬರ್‌ವರೆಗಿನ ತ್ರೈಮಾಸಿಕ ಅವಧಿಗೆ ಅನ್ವಯವಾಗಲಿದೆ.

ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಹೆಚ್ಚಳ: ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jun 30, 2023 | 8:58 PM

ಸಣ್ಣ ಉಳಿತಾಯ ಯೋಜನೆ (small savings schemes) ಗಳ ಮೇಲಿನ ಬಡ್ಡಿದರವನ್ನು ಸರ್ಕಾರ ಶುಕ್ರವಾರ ಹೆಚ್ಚಳ ಮಾಡಿದ್ದು, ಬಡ್ಡಿದರ ಜುಲೈನಿಂದ ಸೆಪ್ಟೆಂಬರ್‌ವರೆಗಿನ ತ್ರೈಮಾಸಿಕ ಅವಧಿಗೆ ಅನ್ವಯವಾಗಲಿದೆ. 1 , 2 , 3 ಮತ್ತು 5 ವರ್ಷಗಳ ಅವಧಿಯ ಠೇವಣಿಗಳ ಬಡ್ಡಿ ದರ ಹೆಚ್ಚಳ ಮಾಡಿದೆ. 5 ವರ್ಷಗಳ ಮರುಕಳಿಸುವ ಠೇವಣಿ ಶೇ 0.3ರಷ್ಟು,  ಅಂಚೆ ಕಛೇರಿಗಳಲ್ಲಿ 1ವರ್ಷ ಠೇವಣಿಯು ಶೇ 0.1, ಹಿರಿಯ ನಾಗರಿಕರ ಉಳಿತಾಯ ಯೋಜನೆ 0.3 ಮತ್ತು ಕಿಸಾನ್ ವಿಕಾಸ್ ಪತ್ರ ಮೇಲಿನ ಬಡ್ಡಿ ದರ ಏರಿಕೆ ಮಾಡಲಾಗಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರದ ಮೇಲಿನ ಬಡ್ಡಿ ದರಲ್ಲಿ ಯಾವುದೇ ಬದಲಾವಣೆ ಇಲ್ಲ.

ಕೇಂದ್ರ ಹಣಕಾಸು ಸಚಿವಾಲಯವು ಇಂದು ಹೊರಡಿಸಿದ ಅಧಿಸೂಚನೆಯ ಪ್ರಕಾರ, ಸರ್ಕಾರವು 1-ವರ್ಷ, 2-ವರ್ಷದ ಬಡ್ಡಿದರವನ್ನು ಕಳೆದ ತ್ರೈಮಾಸಿಕದಲ್ಲಿ 6.8%, 6.9% ರಿಂದ 6.9%, 7.0% ಕ್ಕೆ ಹೆಚ್ಚಿಸಿದೆ.

ಇದನ್ನೂ ಓದಿ: Online Shopping: ಆನ್​ಲೈನ್ ಶಾಪಿಂಗ್; ಬೆಂಗಳೂರಿಗರದೇ ಮೇಲುಗೈ; ಸಣ್ಣ ನಗರವಾಸಿಗಳೂ ಹಿಂದೆಬಿದ್ದಿಲ್ಲ; ಜನರಿಗೆ ಅಮೇಜಾನ್ ಫೇವರಿಟ್

ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಸರ್ಕಾರವು ಪ್ರತಿ ತ್ರೈಮಾಸಿಕ ಪರಿಶೀಲಿಸುತ್ತದೆ. ಸಣ್ಣ ಉಳಿತಾಯ ಯೋಜನೆಗಳಲ್ಲಿ ಎಸ್ಸಿಎಸ್ಎಸ್, ಮಾಸಿಕ ಆದಾಯ ಖಾತೆ ಯೋಜನೆ, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ, ಕಿಸಾನ್ ವಿಕಾಸ್ ಪತ್ರ ಇತ್ಯಾದಿ 1 ವರ್ಷದಿಂದ 5 ವರ್ಷಗಳ ಅವಧಿಯ ಉಳಿತಾಯ ಠೇವಣಿಗಳು ಸೇರಿವೆ.

ಹೊಸ ದರಗಳು ಜುಲೈ 1 ರಿಂದ ಅನ್ವಯ

ಸರ್ಕಾರ ನೀಡಿರುವ ಸಣ್ಣ ಉಳಿತಾಯ ಯೋಜನೆಗಳು ಚಿಲ್ಲರೆ ಹೂಡಿಕೆದಾರರಲ್ಲಿ ತಮ್ಮ ಸುರಕ್ಷಿತ ಸ್ವಭಾವ ಮತ್ತು ಇತರ ಹೂಡಿಕೆ ಆಯ್ಕೆಗಳಿಗೆ ಹೋಲಿಸಿದರೆ ತುಲನಾತ್ಮಕವಾಗಿ ಹೆಚ್ಚಿನ ಬಡ್ಡಿದರಗಳಿಂದ ಜನಪ್ರಿಯವಾಗಿವೆ.

ಹಿರಿಯ ನಾಗರಿಕರು, ಮಕ್ಕಳು ಮತ್ತು ಕಡಿಮೆ ಆದಾಯದ ವ್ಯಕ್ತಿಗಳು ಸೇರಿದಂತೆ ಸಮಾಜದ ವಿವಿಧ ವರ್ಗಗಳ ವೈವಿಧ್ಯಮಯ ಅಗತ್ಯಗಳನ್ನು ಪೂರೈಸಲು ಈ ಯೋಜನೆಗಳನ್ನು ವಿನ್ಯಾಸಗೊಳಿಸಲಾಗಿದೆ. ಆಯ್ದ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರವು ಹಿಂದಿನ ತ್ರೈಮಾಸಿಕಕ್ಕೆ ಹೋಲಿಸಿದರೆ ಕಡಿಮೆಯಾಗಿದೆ, ಆಗ ಸರ್ಕಾರವು 70 ಬಿಪಿಎಸ್ ಹೆಚ್ಚಳವನ್ನು ಘೋಷಿಸಿತ್ತು.

ಇದನ್ನೂ ಓದಿ: Sensex Points: ಸೆನ್ಸೆಕ್ಸ್ ಮೂರೇ ದಿನದಲ್ಲಿ 1,800 ಅಂಕಗಳ ಏರಿಕೆ; ಸೆನ್ಸೆಕ್ಸ್ ಪಾಯಿಂಟ್ ಹೇಗೆ ಲೆಕ್ಕಹಾಕಲಾಗುತ್ತೆ?

ಕಳೆದ ಎರಡು ತ್ರೈಮಾಸಿಕಗಳಲ್ಲಿ, ಸುಕನ್ಯಾ ಸಮೃದ್ಧಿ ಖಾತೆ ಯೋಜನೆ, ಹಿರಿಯ ನಾಗರಿಕರ ಉಳಿತಾಯ ಯೋಜನೆ, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ, ಕಿಸಾನ್ ವಿಕಾಸ್ ಪತ್ರ, ಮಾಸಿಕ ಆದಾಯ ಉಳಿತಾಯ ಯೋಜನೆ ಮತ್ತು ಎಲ್ಲಾ ಪೋಸ್ಟ್ ಆಫೀಸ್ ಸಮಯದ ಠೇವಣಿಗಳಂತಹ ಜನಪ್ರಿಯ ಯೋಜನೆಗಳ ಮೇಲಿನ ಬಡ್ಡಿ ದರಗಳನ್ನು ಸರ್ಕಾರ ಹೆಚ್ಚಿಸಿದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:44 pm, Fri, 30 June 23

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್