AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಹೆಚ್ಚಳ: ಸರ್ಕಾರ ಆದೇಶ

ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರವನ್ನು ಸರ್ಕಾರ ಶುಕ್ರವಾರ ಹೆಚ್ಚಳ ಮಾಡಿದ್ದು, ಬಡ್ಡಿದರ ಜುಲೈನಿಂದ ಸೆಪ್ಟೆಂಬರ್‌ವರೆಗಿನ ತ್ರೈಮಾಸಿಕ ಅವಧಿಗೆ ಅನ್ವಯವಾಗಲಿದೆ.

ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಹೆಚ್ಚಳ: ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jun 30, 2023 | 8:58 PM

Share

ಸಣ್ಣ ಉಳಿತಾಯ ಯೋಜನೆ (small savings schemes) ಗಳ ಮೇಲಿನ ಬಡ್ಡಿದರವನ್ನು ಸರ್ಕಾರ ಶುಕ್ರವಾರ ಹೆಚ್ಚಳ ಮಾಡಿದ್ದು, ಬಡ್ಡಿದರ ಜುಲೈನಿಂದ ಸೆಪ್ಟೆಂಬರ್‌ವರೆಗಿನ ತ್ರೈಮಾಸಿಕ ಅವಧಿಗೆ ಅನ್ವಯವಾಗಲಿದೆ. 1 , 2 , 3 ಮತ್ತು 5 ವರ್ಷಗಳ ಅವಧಿಯ ಠೇವಣಿಗಳ ಬಡ್ಡಿ ದರ ಹೆಚ್ಚಳ ಮಾಡಿದೆ. 5 ವರ್ಷಗಳ ಮರುಕಳಿಸುವ ಠೇವಣಿ ಶೇ 0.3ರಷ್ಟು,  ಅಂಚೆ ಕಛೇರಿಗಳಲ್ಲಿ 1ವರ್ಷ ಠೇವಣಿಯು ಶೇ 0.1, ಹಿರಿಯ ನಾಗರಿಕರ ಉಳಿತಾಯ ಯೋಜನೆ 0.3 ಮತ್ತು ಕಿಸಾನ್ ವಿಕಾಸ್ ಪತ್ರ ಮೇಲಿನ ಬಡ್ಡಿ ದರ ಏರಿಕೆ ಮಾಡಲಾಗಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರದ ಮೇಲಿನ ಬಡ್ಡಿ ದರಲ್ಲಿ ಯಾವುದೇ ಬದಲಾವಣೆ ಇಲ್ಲ.

ಕೇಂದ್ರ ಹಣಕಾಸು ಸಚಿವಾಲಯವು ಇಂದು ಹೊರಡಿಸಿದ ಅಧಿಸೂಚನೆಯ ಪ್ರಕಾರ, ಸರ್ಕಾರವು 1-ವರ್ಷ, 2-ವರ್ಷದ ಬಡ್ಡಿದರವನ್ನು ಕಳೆದ ತ್ರೈಮಾಸಿಕದಲ್ಲಿ 6.8%, 6.9% ರಿಂದ 6.9%, 7.0% ಕ್ಕೆ ಹೆಚ್ಚಿಸಿದೆ.

ಇದನ್ನೂ ಓದಿ: Online Shopping: ಆನ್​ಲೈನ್ ಶಾಪಿಂಗ್; ಬೆಂಗಳೂರಿಗರದೇ ಮೇಲುಗೈ; ಸಣ್ಣ ನಗರವಾಸಿಗಳೂ ಹಿಂದೆಬಿದ್ದಿಲ್ಲ; ಜನರಿಗೆ ಅಮೇಜಾನ್ ಫೇವರಿಟ್

ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಸರ್ಕಾರವು ಪ್ರತಿ ತ್ರೈಮಾಸಿಕ ಪರಿಶೀಲಿಸುತ್ತದೆ. ಸಣ್ಣ ಉಳಿತಾಯ ಯೋಜನೆಗಳಲ್ಲಿ ಎಸ್ಸಿಎಸ್ಎಸ್, ಮಾಸಿಕ ಆದಾಯ ಖಾತೆ ಯೋಜನೆ, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ, ಕಿಸಾನ್ ವಿಕಾಸ್ ಪತ್ರ ಇತ್ಯಾದಿ 1 ವರ್ಷದಿಂದ 5 ವರ್ಷಗಳ ಅವಧಿಯ ಉಳಿತಾಯ ಠೇವಣಿಗಳು ಸೇರಿವೆ.

ಹೊಸ ದರಗಳು ಜುಲೈ 1 ರಿಂದ ಅನ್ವಯ

ಸರ್ಕಾರ ನೀಡಿರುವ ಸಣ್ಣ ಉಳಿತಾಯ ಯೋಜನೆಗಳು ಚಿಲ್ಲರೆ ಹೂಡಿಕೆದಾರರಲ್ಲಿ ತಮ್ಮ ಸುರಕ್ಷಿತ ಸ್ವಭಾವ ಮತ್ತು ಇತರ ಹೂಡಿಕೆ ಆಯ್ಕೆಗಳಿಗೆ ಹೋಲಿಸಿದರೆ ತುಲನಾತ್ಮಕವಾಗಿ ಹೆಚ್ಚಿನ ಬಡ್ಡಿದರಗಳಿಂದ ಜನಪ್ರಿಯವಾಗಿವೆ.

ಹಿರಿಯ ನಾಗರಿಕರು, ಮಕ್ಕಳು ಮತ್ತು ಕಡಿಮೆ ಆದಾಯದ ವ್ಯಕ್ತಿಗಳು ಸೇರಿದಂತೆ ಸಮಾಜದ ವಿವಿಧ ವರ್ಗಗಳ ವೈವಿಧ್ಯಮಯ ಅಗತ್ಯಗಳನ್ನು ಪೂರೈಸಲು ಈ ಯೋಜನೆಗಳನ್ನು ವಿನ್ಯಾಸಗೊಳಿಸಲಾಗಿದೆ. ಆಯ್ದ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರವು ಹಿಂದಿನ ತ್ರೈಮಾಸಿಕಕ್ಕೆ ಹೋಲಿಸಿದರೆ ಕಡಿಮೆಯಾಗಿದೆ, ಆಗ ಸರ್ಕಾರವು 70 ಬಿಪಿಎಸ್ ಹೆಚ್ಚಳವನ್ನು ಘೋಷಿಸಿತ್ತು.

ಇದನ್ನೂ ಓದಿ: Sensex Points: ಸೆನ್ಸೆಕ್ಸ್ ಮೂರೇ ದಿನದಲ್ಲಿ 1,800 ಅಂಕಗಳ ಏರಿಕೆ; ಸೆನ್ಸೆಕ್ಸ್ ಪಾಯಿಂಟ್ ಹೇಗೆ ಲೆಕ್ಕಹಾಕಲಾಗುತ್ತೆ?

ಕಳೆದ ಎರಡು ತ್ರೈಮಾಸಿಕಗಳಲ್ಲಿ, ಸುಕನ್ಯಾ ಸಮೃದ್ಧಿ ಖಾತೆ ಯೋಜನೆ, ಹಿರಿಯ ನಾಗರಿಕರ ಉಳಿತಾಯ ಯೋಜನೆ, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ, ಕಿಸಾನ್ ವಿಕಾಸ್ ಪತ್ರ, ಮಾಸಿಕ ಆದಾಯ ಉಳಿತಾಯ ಯೋಜನೆ ಮತ್ತು ಎಲ್ಲಾ ಪೋಸ್ಟ್ ಆಫೀಸ್ ಸಮಯದ ಠೇವಣಿಗಳಂತಹ ಜನಪ್ರಿಯ ಯೋಜನೆಗಳ ಮೇಲಿನ ಬಡ್ಡಿ ದರಗಳನ್ನು ಸರ್ಕಾರ ಹೆಚ್ಚಿಸಿದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:44 pm, Fri, 30 June 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ