AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣಾ ನೀತಿಯಲ್ಲಿ ದೊಡ್ಡ ಬದಲಾವಣೆ; ಕ್ಷಿಪಣಿ ತಯಾರಿಕೆಗೆ ಖಾಸಗಿಯವರಿಗೂ ಸಿಗಲಿದೆ ಅವಕಾಶ

Indian government to allow private sector to participate in missile production: ಬಾಹ್ಯಾಕಾಶ ಕ್ಷೇತ್ರವನ್ನು ಖಾಸಗಿಯವರಿಗೆ ತೆರೆದಿಟ್ಟಿರುವ ಸರ್ಕಾರ ಈಗ ರಕ್ಷಣಾ ಕ್ಷೇತ್ರವನ್ನೂ ಹೆಚ್ಚೆಚ್ಚು ಮುಕ್ತಗೊಳಿಸುತ್ತಿದೆ. ಸರ್ಕಾರಿ ಸಂಸ್ಥೆಗಳ ಹೆಗಲಿಗೆ ಇದ್ದ ಕ್ಷಿಪಣಿಗಳ ಉತ್ಪಾದನೆಯ ಅವಕಾಶವನ್ನು ಖಾಸಗಿಯವರಿಗೂ ಕೊಡಲು ಸರ್ಕಾರ ನಿರ್ಧರಿಸಿದೆ. ಅಸ್ತ್ರ ಮಾರ್ಕ್-2, ಪ್ರಳಯ್ ಕ್ಷಿಪಣಿಗಳ ತಯಾರಿಕೆಗೆ ಟೆಂಡರ್ ಕರೆಯಬಹುದು.

ರಕ್ಷಣಾ ನೀತಿಯಲ್ಲಿ ದೊಡ್ಡ ಬದಲಾವಣೆ; ಕ್ಷಿಪಣಿ ತಯಾರಿಕೆಗೆ ಖಾಸಗಿಯವರಿಗೂ ಸಿಗಲಿದೆ ಅವಕಾಶ
ಡಿಆರ್​ಡಿಒ ಪರೀಕ್ಷಾರ್ಥ ಉಡಾಯಿಸಿದ ಒಂದು ಕ್ಷಿಪಣಿImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 12, 2026 | 5:48 PM

Share

ಮುಖ್ಯಾಂಶಗಳು

  • ಸರ್ಕಾರ ಈಗ ರಕ್ಷಣಾ ಕ್ಷೇತ್ರವನ್ನೂ ಹೆಚ್ಚೆಚ್ಚು ಮುಕ್ತಗೊಳಿಸುತ್ತಿದೆ.
  • ಕ್ಷಿಪಣಿಗಳ ಉತ್ಪಾದನೆಯ ಅವಕಾಶವನ್ನು ಖಾಸಗಿಯವರಿಗೂ ಕೊಡಲು ನಿರ್ಧರಿಸಿದೆ.
  • ಅಸ್ತ್ರ ಮಾರ್ಕ್-2, ಪ್ರಳಯ್ ಕ್ಷಿಪಣಿಗಳ ತಯಾರಿಕೆಗೆ ಟೆಂಡರ್ ಕರೆಯಬಹುದು.

ನವದೆಹಲಿ, ಜುಲೈ 12: ಭಾರತದ ರಕ್ಷಣಾ ವಲಯದಲ್ಲಿ ಒಂದು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಇನ್ನು ಮುಂದೆ ಕ್ಷಿಪಣಿ (Missile) ತಯಾರಿಕಾ ಕ್ಷೇತ್ರವನ್ನು ಖಾಸಗಿ ಕಂಪನಿಗಳಿಗೆ ಮುಕ್ತಗೊಳಿಸಲು ಸರ್ಕಾರ ಮುಂದಾಗಿದೆ. ಈವರೆಗೆ ಕ್ಷಿಪಣಿಗಳ ಉತ್ಪಾದನೆಯು ಹೆಚ್ಚಾಗಿ ‘ಭಾರತ್ ಡೈನಾಮಿಕ್ಸ್ ಲಿಮಿಟೆಡ್’ (BDL) ಇತ್ಯಾದಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸೀಮಿತವಾಗಿತ್ತು. ಆದರೆ, ಭಾರತೀಯ ಸಶಸ್ತ್ರ ಪಡೆಗಳ ಬೇಡಿಕೆ ಹೆಚ್ಚಾಗುತ್ತಿರುವುದು ಮತ್ತು ವಿದೇಶಗಳಿಂದಲೂ ಭಾರತೀಯ ಕ್ಷಿಪಣಿಗಳಿಗೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ, ಈ ಕ್ಷೇತ್ರವನ್ನು ಖಾಸಗಿ ಕಂಪನಿಗಳಿಗೆ ತೆರೆಯಲು ನಿರ್ಧರಿಸಲಾಗಿದೆ. ಇದು ‘ಆತ್ಮನಿರ್ಭರ ಭಾರತ’ ಅಭಿಯಾನದ ಭಾಗವಾಗಿದೆ.

ಖಾಸಗಿಯವರಿಂದ ಯಾವ ಕ್ಷಿಪಣಿಗಳು ಉತ್ಪಾದನೆಯಾಗಲಿವೆ?

  • ಅಸ್ತ್ರ ಮಾರ್ಕ್-2: ಇದು ಭಾರತದ ಅತ್ಯಾಧುನಿಕ ‘ಬಿಯಾಂಡ್ ವಿಶುವಲ್ ರೇಂಜ್’ (BVR) ಏರ್-ಟು-ಏರ್ ಕ್ಷಿಪಣಿಯಾಗಿದೆ. ಇದನ್ನು (Astra Mark-2) ಮೊದಲಿಗೆ ಖಾಸಗಿ ವಲಯದ ಮೂಲಕ ತಯಾರಿಸಲು ಸರ್ಕಾರ ಯೋಜನೆ ರೂಪಿಸಿದೆ. 180-200 ಕಿ.ಮೀ ವ್ಯಾಪ್ತಿಯ ಈ ಕ್ಷಿಪಣಿಯನ್ನು ತೇಜಸ್, ಸುಕೋಯ್ Su-30 MKI ಮತ್ತು ರಫೇಲ್ ಯುದ್ಧ ವಿಮಾನಗಳಲ್ಲಿ ಅಳವಡಿಸಲಾಗುತ್ತದೆ.
  • ಪ್ರಳಯ ಕ್ಷಿಪಣಿ: ಅಸ್ತ್ರದ ನಂತರ, 500 ಕಿ.ಮೀ ವ್ಯಾಪ್ತಿಯ ‘ಪ್ರಳಯ’ (Pralay) ಟ್ಯಾಕ್ಟಿಕಲ್ ಬ್ಯಾಲಿಸ್ಟಿಕ್ ಕ್ಷಿಪಣಿಯ ತಯಾರಿಕೆಯನ್ನು ಕೂಡ ಖಾಸಗಿ ಕಂಪನಿಗಳಿಗೆ ಹಸ್ತಾಂತರಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ರೈಲ್ವೆ ಟಿಕೆಟ್ ನಿಯಮಗಳ ಪರಿಷ್ಕರಣೆ; ಟಿಕೆಟ್​ನ ವಾಟ್ಸಾಪ್ ಸ್ಕ್ರೀನ್​ಶಾಟ್, ಫೋಟೋ, ಪಿಡಿಎಫ್ ಕಾಪಿಗಳು ಮಾನ್ಯವಾ?

ಕ್ಷಿಪಣಿ ತಯಾರಿಕೆಗೆ ರೇಸ್​ನಲ್ಲಿರುವ ಭಾರತದ ಖಾಸಗಿ ದಿಗ್ಗಜರು…

ಕ್ಷಿಪಣಿಗಳ ತಯಾರಿಕೆಗೆ ರಕ್ಷಣಾ ಸಚಿವಾಲಯವು ಶೀಘ್ರದಲ್ಲೇ ಟೆಂಡರ್ (RFP – Request for Proposal) ಕರೆಯಲಿದೆ. ಈ ರೇಸ್‌ನಲ್ಲಿ ಭಾಗವಹಿಸುವ ಸಾಧ್ಯತೆಯಿರುವ ಪ್ರಮುಖ ಖಾಸಗಿ ಕೈಗಾರಿಕಾ ಸಂಸ್ಥೆಗಳು ಈ ಕೆಳಕಂಡತಿವೆ:

  • ಟಾಟಾ ಗ್ರೂಪ್ (Tata Group)
  • ಅದಾನಿ ಡಿಫೆನ್ಸ್ (Adani Defence)
  • ಮಹೀಂದ್ರಾ ಗ್ರೂಪ್ (Mahindra Group)
  • ಭಾರತ್ ಫೋರ್ಜ್ (Bharat Forge)
  • ಐಕಾಮ್ (ICOMM)

ಖಾಸಗಿಯವರನ್ನು ಬಳಸಿಕೊಳ್ಳುವ ಈ ನಿರ್ಧಾರ ಏಕೆ?

  • ಉತ್ಪಾದನಾ ಸಾಮರ್ಥ್ಯ ಹೆಚ್ಚಳ: ಸದ್ಯದ ಸರ್ಕಾರಿ ಉತ್ಪಾದನಾ ಘಟಕಗಳ ಮೇಲೆ ಅತಿಯಾದ ಒತ್ತಡವಿದ್ದು, ಅದನ್ನು ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ.
  • ರಫ್ತು ಅವಕಾಶ: ಇತ್ತೀಚೆಗೆ ಇಂಡೋನೇಷ್ಯಾದಂತಹ ದೇಶಗಳು ಅಸ್ತ್ರ ಕ್ಷಿಪಣಿಯನ್ನು ಖರೀದಿಸಲು ಆಸಕ್ತಿ ತೋರಿವೆ. ಇಂತಹ ಅಂತಾರಾಷ್ಟ್ರೀಯ ಬೇಡಿಕೆಗಳನ್ನು ಪೂರೈಸಲು ಬೃಹತ್ ಪ್ರಮಾಣದಲ್ಲಿ ಉತ್ಪಾದನೆ ಅಗತ್ಯವಿದೆ.
  • ಯುದ್ಧ ಸಿದ್ಧತೆ: ಇತ್ತೀಚಿನ ಜಾಗತಿಕ ಸಂಘರ್ಷಗಳಿಂದ ಕಲಿಯುವ ಪಾಠಗಳ ಪ್ರಕಾರ, ಯುದ್ಧದ ಸಂದರ್ಭದಲ್ಲಿ ಕ್ಷಿಪಣಿಗಳ ಕೊರತೆಯಾಗದಂತೆ ನೋಡಿಕೊಳ್ಳಲು ವೇಗದ ಉತ್ಪಾದನೆಯ ಅಗತ್ಯವಿದೆ.

ಇದನ್ನೂ ಓದಿ: ಕ್ರೆಡಿಟ್ ಕಾರ್ಡ್ ಹೊಂದಿರುವವರು ದಿಢೀರ್ ಮೃತಪಟ್ಟರೆ ಬಿಲ್ ಕಟ್ಟೋರು ಯಾರು? ಕುಟುಂಬದವರ ಜವಾಬ್ದಾರಿಯೇ?

ಈ ನಿರ್ಧಾರವು ದೇಶದ ರಕ್ಷಣಾ ಸಾಮರ್ಥ್ಯವನ್ನು ಬಲಪಡಿಸುವುದಲ್ಲದೆ, ಖಾಸಗಿ ವಲಯದ ಮೂಲಕ ಉದ್ಯೋಗ ಸೃಷ್ಟಿ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಬೆಳವಣಿಗೆಗೆ ಸಹಕಾರಿಯಾಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:26 pm, Sun, 12 July 26

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ