Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದಿಂದ ದೇಶಾದ್ಯಂತ ಸಹಕಾರಿ ಟ್ಯಾಕ್ಸಿ ಸೇವೆ? ಕ್ಯಾಬ್ ಚಾಲಕರಿಗೆ ಹೆಚ್ಚಲಿದೆ ಆದಾಯ

Sahakari taxi service in India: ಸರ್ಕಾರವು ಈಗ ದೇಶಾದ್ಯಂತ ಸಹಕಾರಿ ಟ್ಯಾಕ್ಸಿ ಸೇವೆ ಆರಂಭಿಸಲು ಯೋಜಿಸಿದೆ. ಕೇಂದ್ರ ಸಚಿವ ಅಮಿತ್ ಶಾ ಸಂಸತ್​​ನಲ್ಲಿ ಇಂದು ಈ ವಿಷಯ ತಿಳಿಸಿದ್ದಾರೆ. ನಮ್ಮ ಯಾತ್ರಿ ಮಾದರಿಯಲ್ಲಿ ಈ ಸಹಕಾರಿ ಟ್ಯಾಕ್ಸಿ ಸರ್ವಿಸ್ ಇರಲಿದೆ. ರೇಡ್​​ನಿಂದ ಸಿಗುವ ಎಲ್ಲಾ ಆದಾಯವು ಚಾಲಕರಿಗೆ ಹೋಗುತ್ತದೆ. ಓಲಾ, ಊಬರ್​​ನಂತಹ ಕಾರ್ಪೊರೇಟ್ ಕಂಪನಿಗಳಿಗೆ ನಿಕಟ ಪೈಪೋಟಿ ಸೃಷ್ಟಿಯಾಗಲಿದೆ.

ಸರ್ಕಾರದಿಂದ ದೇಶಾದ್ಯಂತ ಸಹಕಾರಿ ಟ್ಯಾಕ್ಸಿ ಸೇವೆ? ಕ್ಯಾಬ್ ಚಾಲಕರಿಗೆ ಹೆಚ್ಚಲಿದೆ ಆದಾಯ
ಟ್ಯಾಕ್ಸಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Mar 27, 2025 | 6:23 PM

ನವದೆಹಲಿ, ಮಾರ್ಚ್ 27: ಸಹಕಾರಿ ಪ್ರಯೋಗ ಈಗ ಕ್ಯಾಬ್ ಸರ್ವಿಸ್ ಕ್ಷೇತ್ರಕ್ಕೂ ಅಡಿ ಇಡುತ್ತಿದೆ. ಸರ್ಕಾರವು ಸಹಕಾರಿ ತತ್ವದ ಅಡಿಯಲ್ಲಿ ಟ್ಯಾಕ್ಸಿ ಸೇವೆ ಆರಂಭಿಸಲು ಯೋಜಿಸುತ್ತಿದೆ. ಎಕನಾಮಿಕ್ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಪ್ರಕಾರ ದೇಶಾದ್ಯಂತ ಸಹಕಾರಿ ಟ್ಯಾಕ್ಸಿ ಸರ್ವಿಸ್ (Sahakari  Taxi service) ಆರಂಭಿಸುವ ಸಾಧ್ಯತೆ ಇದೆ. ಕೇಂದ್ರ ಸಚಿವ ಅಮಿತ್ ಶಾ ಇಂದು ಬುಧವಾರ ಸಂಸತ್​​​ನಲ್ಲಿ ಈ ಪ್ರಸ್ತಾಪ ತೆರೆದಿಟ್ಟಿದ್ದಾರೆ. ಈ ಪ್ಲಾನ್ ಜಾರಿಗೆ ಬಂದರೆ ಓಲಾ, ಊಬರ್ ಇತ್ಯಾದಿ ರೇಡ್ ಹೇಲಿಂಗ್ ಪ್ಲಾಟ್​​ಫಾರ್ಮ್​​ಗಳಿಗೆ ನಡುಕ ಸೃಷ್ಟಿಯಾಗಬಹುದು.

ವರದಿ ಪ್ರಕಾರ, ಟ್ಯಾಕ್ಸಿ ಸೇವೆ ಕೇವಲ ಕಾರ್​ಗೆ ಮಾತ್ರ ಸೀಮಿತವಾಗಿರಲ್ಲ. ದ್ವಿಚಕ್ರ, ತ್ರಿಚಕ್ರ ವಾಹನಗಳನ್ನೂ ಟ್ಯಾಕ್ಸಿ ಸೇವೆಗೆ ಒಳಗೊಳ್ಳಲಾಗುತ್ತದೆ. ಅಂದರೆ, ಬೈಕ್ ಟ್ಯಾಕ್ಸಿ, ಆಟೊರಿಕ್ಷಾ, ಕ್ಯಾಬ್ ಸರ್ವಿಸ್ ಇರುತ್ತದೆ.

ಚಾಲಕರಿಗೆ ಎಲ್ಲಾ ಆದಾಯ ಹೋಗುತ್ತದೆ…?

ಓಲಾ ಮತ್ತು ಊಬರ್ ಪ್ಲಾಟ್​​ಫಾರ್ಮ್​​ಗಳಲ್ಲಿ ಒಂದು ರೇಡ್​​ನಲ್ಲಿ ಗ್ರಾಹಕರಿಂದ ಪಡೆಯಲಾಗುವ ಹಣದಲ್ಲಿ ಕಂಪನಿಗಳಿಗೆ ಸಾಕಷ್ಟು ಹಣ ಹೋಗುತ್ತದೆ. ಬಹಳಷ್ಟು ಚಾಲಕರು ಈ ಬಗ್ಗೆ ನಿತ್ಯವೂ ಅಳಲು ತೋಡಿಕೊಳ್ಳುವುದಿದೆ. ಆದರೆ, ಸರ್ಕಾರ ಯೋಜಿಸಿರುವ ಸಹಕಾರಿ ಟ್ಯಾಕ್ಸಿಯು ಲಾಭ ರಹಿತ ಉದ್ದೇಶದಿಂದ ನಡೆಸಲಾಗುತ್ತದೆ. ಒಂದು ರೇಡ್​​ನ್ಲಲಿ ಸಿಗುವ ಎಲ್ಲಾ ಹಣವೂ ನೇರವಾಗಿ ಚಾಲಕರಿಗೆ ಹೋಗುತ್ತದೆ.

ಇದನ್ನೂ ಓದಿ
Image
ಟಾಪ್-10 ಪಟ್ಟಿಯಿಂದ ಅಂಬಾನಿ ಔಟ್; ರೋಷನಿ ಮಿಂಚು
Image
ಹೊಸ ಎಸಿ ಖರೀದಿಗೆ ಸರ್ಕಾರದ ಇನ್ಸೆಂಟಿವ್ ಸ್ಕೀಮ್
Image
ವಾಹನಗಳಿಗೆ ಟ್ರಂಪ್ ಶೇ. 25 ಆಮದುಸುಂಕ ಬರೆ
Image
ಮಾರ್ಚ್ 31ರೊಳಗೆ ರೇಷನ್ ಕಾರ್ಡ್​​ಗೆ ಇ-ಕೆವೈಸಿ ಸಲ್ಲಿಸಿ

ಇದನ್ನೂ ಓದಿ: ಹಳೆಯ ಎಸಿ ಕೊಟ್ಟು ಹೊಸ 5 ಸ್ಟಾರ್ ಎಸಿ ಪಡೆಯಿರಿ; ವಿದ್ಯುತ್ ಉಳಿತಾಯದ ಜೊತೆಗೆ ಸರ್ಕಾರದಿಂದಲೂ ಇನ್ಸೆಂಟಿವ್

ಬಹುತೇಕ ಇದು ನಮ್ಮ ಯಾತ್ರಿ ಮಾದರಿಯಲ್ಲಿ ರೂಪಿಸಲಾಗುತ್ತಿರುವ ಯೋಜನೆಯಾಗಿದೆ. ಬೆಂಗಳೂರು ಮೊದಲಾದ ಹಲವೆಡೆ ನಮ್ಮ ಯಾತ್ರಿ ಟ್ಯಾಕ್ಸಿ ಸರ್ವಿಸ್ ಚಾಲನೆಯಲ್ಲಿದೆ. ಇದು ಖಾಸಗಿ ಕಂಪನಿಯಾದರೂ, ಇದರಲ್ಲಿ ಬಹುತೇಕ ಎಲ್ಲಾ ಆದಾಯವು ಚಾಲಕರಿಗೆ ಸಂದಾಯವಾಗುತ್ತದೆ.

ಭಾರತದಲ್ಲಿ ಬೇಡಿಕೆಗಿಂತ ಕಡಿಮೆ ಕ್ಯಾಬ್​​ಗಳ ಲಭ್ಯತೆ?

ಭಾರತದಲ್ಲಿ ಟ್ಯಾಕ್ಸಿ ಮಾರುಕಟ್ಟೆ ಈಗ 23 ಬಿಲಿಯನ್ ಡಾಲರ್ ಗಾತ್ರದ್ದಾಗಿದೆ. ಇದು ಇನ್ನೈದು ವರ್ಷದಲ್ಲಿ ಬಹುತೇಕ ದ್ವಿಗುಣಗೊಳ್ಳುವ ನಿರೀಕ್ಷೆ ಇದೆ. ಆನ್ಲೈನ್ ಕ್ಯಾಬ್ ಬುಕಿಂಗ್​​ಗೆ ಭಾರತದಲ್ಲಿ ಸದ್ಯ ಸಾಕಷ್ಟು ಬೇಡಿಕೆ ಇದೆ. ಈ ಬೇಡಿಕೆ ಪೂರೈಸುವಷ್ಟು ಸಂಖ್ಯೆಯಲ್ಲಿ ಸದ್ಯ ಭಾರತದಲ್ಲಿ ಕ್ಯಾಬ್​​ಗಳಿಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಮೊದಲ ಮೇಡ್ ಇನ್ ಇಂಡಿಯಾ ಎಂಆರ್​​ಐ ಸ್ಕ್ಯಾನರ್, ಲಿನಿಯರ್ ಆಕ್ಸಲರೇಟರ್; ವೈದ್ಯಕೀಯ ತಂತ್ರಜ್ಞಾನದಲ್ಲಿ ಸ್ವಾವಲಂಬನೆಯತ್ತ ಭಾರತ

ಹೀಗಾಗಿ, ಹೆಚ್ಚೆಚ್ಚು ಕ್ಯಾಬ್ ಅಗ್ರಿಗೇಟರ್​​ಗಳು, ಕ್ಯಾಬ್ ಚಾಲಕರು ಈ ಉದ್ಯಮಕ್ಕೆ ಬರಬೇಕಿದೆ. ಓಲಾ ಮತ್ತು ಊಬರ್ ಸಂಸ್ಥೆಗಳು ಈಗಲೂ ಈ ಮಾರುಕಟ್ಟೆಯಲ್ಲಿ ಹೆಚ್ಚಿನ ಪಾಲು ಹೊಂದಿವೆ. ರ್ಯಾಪಿಡೋ ಸಂಸ್ಥೆ ಕೂಡ ಪ್ರವೇಶ ಮಾಡಿದೆ. ನಮ್ಮ ಯಾತ್ರಿ ಹಂತ ಹಂತವಾಗಿ ಮಾರುಕಟ್ಟೆ ಆಕ್ರಮಿಸಿಕೊಳ್ಳುತ್ತಿದೆ. ಆದರೆ, ಬೇಡಿಕೆ ಪೂರೈಸುವಷ್ಟು ಸಂಖ್ಯೆಯಲ್ಲಿ ಕ್ಯಾಬ್​​ಗಳಿಲ್ಲ. ಈಗ ಸರ್ಕಾರದಿಂದ ನಡೆಸಲಾಗುವ ಸಹಕಾರಿ ಟ್ಯಾಕ್ಸಿ ಸೇವೆಯು ಹೊಸ ಕ್ಯಾಬ್​​ಗಳನ್ನು ಆಕರ್ಷಿಸಲು ಸಾಧ್ಯವಾಗುತ್ತದಾ ನೋಡಬೇಕು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:17 pm, Thu, 27 March 25

ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ