AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕ ಲಾಭಕ್ಕೆ ಬೇಳೆಕಾಳುಗಳ ಮಾರಾಟ; ರೀಟೇಲ್ ಮಾರಾಟಗಾರರಿಗೆ ಸರ್ಕಾರ ಎಚ್ಚರಿಕೆ

Govt Warns Retailers: ಕಡಲೆ, ತೊಗರಿಬೇಳೆ, ಉದ್ದಿನಬೇಳೆಗಳ ಬೆಲೆ ಮಂಡಿಗಳಲ್ಲಿ ಕಡಿಮೆಗೊಂಡಿದ್ದರೂ ರೀಟೇಲ್ ಉದ್ದಿಮೆಗಳು ಬೆಲೆ ಕಡಿಮೆ ಮಾಡಿಲ್ಲ ಎಂದು ಸರ್ಕಾರ ಹೇಳಿದೆ. ಸೋಮವಾರ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ರೀಟೇಲ್ ಉದ್ಯಮ ಪ್ರತಿನಿಧಿಗಳ ನಡುವೆ ನಡೆದ ಸಭೆಯಲ್ಲಿ ಈ ಅಭಿಪ್ರಾಯ ಬಂದಿದೆ. ಮಿತಿಗಿಂತ ಹೆಚ್ಚು ದಾಸ್ತಾನು ಮಾಡುವುದು, ಅಧಿಕ ಲಾಭ ಇಟ್ಟುಕೊಳ್ಳುವುದು ಸರ್ಕಾರದ ಗಮನಕ್ಕೆ ಬಂದರೆ ಅಂತಹ ರೀಟೇಲರ್ ವಿರುದ್ಧ ಕ್ರಮ ಜರುಗಿಸಬೇಕಾಗುತ್ತದೆ ಎಂದು ಇಲಾಖೆ ಕಾರ್ಯದರ್ಶಿ ಎಚ್ಚರಿಕೆ ನೀಡಿದ್ದಾರೆ.

ಅಧಿಕ ಲಾಭಕ್ಕೆ ಬೇಳೆಕಾಳುಗಳ ಮಾರಾಟ; ರೀಟೇಲ್ ಮಾರಾಟಗಾರರಿಗೆ ಸರ್ಕಾರ ಎಚ್ಚರಿಕೆ
ಬೇಳೆಕಾಳು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 16, 2024 | 4:38 PM

Share

ನವದೆಹಲಿ, ಜುಲೈ 16: ಕಳೆದ ಒಂದು ತಿಂಗಳಲ್ಲಿ ದೇಶದ ಪ್ರಮುಖ ಮಂಡಿಗಳಲ್ಲಿ ಕಡಲೆಬೇಳೆ, ತೊಗರಿ ಬೇಳೆ ಮತ್ತು ಉದ್ದಿನಬೇಳೆಗಳ ಬೆಲೆ ಶೇ. 4ರವರೆಗೂ ಇಳಿಕೆ ಆಗಿದೆ. ಆದರೆ, ಈ ಬೇಳೆ ಕಾಳುಗಳ ರೀಟೇಲ್ ಬೆಲೆ ಮಾತ್ರ ಅನುಗುಣವಾಗಿ ಇಳಿಕೆ ಆಗಿಲ್ಲ ಎಂದು ಸರ್ಕಾರ ಪ್ರಶ್ನೆ ಮಾಡಿದೆ. ಭಾರತೀಯ ಚಿಲ್ಲರೆ ಮಾರಾಟಗಾರರ ಸಂಸ್ಥೆ (ಆರ್​ಎಐ) ಜೊತೆ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ನಡೆಸಿದ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಯಿತು. ಇಲಾಖೆ ಕಾರ್ಯದರ್ಶಿ ನಿಧಿ ಖರೆ ಅವರು ರೀಟೇಲ್ ಮಾರಾಟಗಾರರು ಬೆಲೆ ಇಳಿಸದೇ ಲಾಭದ ಮುಖ ನೋಡುತ್ತಿರಬಹುದು ಎಂದು ಹೇಳಿದರು. ಸರ್ಕಾರ ಬೆಲೆ ಏರಿಕೆ ತಡೆಯಲು ಹರಸಾಹಸ ನಡೆಸುತ್ತಿದೆ. ಇದಕ್ಕೆ ರೀಟೇಲ್ ಉದ್ಯಮ ಸಹಕಾರ ನೀಡಬೇಕು ಎಂದೂ ಅವರು ಮನವಿ ಮಾಡಿದರು.

ಈ ಸಭೆಯಲ್ಲಿ ರೀಟೇರ್ಸ್ ಅಸೋಸಿಯೇಶನ್ ಮಾತ್ರವಲ್ಲದೇ ರಿಲಾಯನ್ಸ್ ರೀಟೇಲ್, ಡಿ ಮಾರ್ಟ್, ಟಾಟಾ ಸ್ಟೋರ್ಸ್, ಸ್ಪೆನ್ಸರ್ಸ್, ಆರ್​ಎಸ್​ಪಿಜಿ, ವಿ ಮಾರ್ಟ್ ಮೊದಲಾದ ರೀಟೇಲ್ ಮಾರಾಟ ಸಂಸ್ಥೆಗಳ ಪ್ರತಿನಿಧಿಗಳೂ ಭಾಗವಹಿಸಿದ್ದರು. ರೀಟೇಲ್ ಮಾರಾಟದಲ್ಲಿ ಲಾಭದ ಅಂತರವನ್ನು ಕಡಿಮೆಗೊಳಿಸಿ, ಗ್ರಾಹಕರಿಗೆ ಕಡಿಮೆ ಬೆಲೆ ಸರಕು ಸಿಗುವ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುವುದಾಗಿ ರೀಟೇಲ್ ಮಾರಾಟ ಸಂಸ್ಥೆಗಳು ಈ ಸಭೆಯಲ್ಲಿ ಭರವಸೆ ನೀಡಿದವು.

ಇದನ್ನೂ ಓದಿ: PM Kisan: ಪಿಎಂ ಕಿಸಾನ್ ಹಣ ಶೇ. 30ರಷ್ಟು ಹೆಚ್ಚಿಸುವ ಸಾಧ್ಯತೆ; ಬಜೆಟ್​ನಲ್ಲಿ 80,000 ಕೋಟಿ ರೂ ನಿಯೋಜನೆ?

ಬೇಳೆಕಾಳುಗಳ ಆವಕ ಹೆಚ್ಚಿಸಲು ಸರ್ಕಾರದಿಂದ ಅವಿರತ ಯತ್ನ

ಬೇಳೆಕಾಳುಗಳನ್ನು ಬೆಳೆಯುವ ಕರ್ನಾಟಕ ಮೊದಲಾದ ಪ್ರಮುಖ ರಾಜ್ಯಗಳಲ್ಲಿ ತೊಗರಿ ಬೇಳೆ, ಉದ್ದಿನಬೇಳೆಗಳ ಉತ್ಪಾದನೆ ಹೆಚ್ಚಿಸಲು ಈ ರಾಜ್ಯಗಳ ರೈತರಿಗೆ ಉತ್ತಮ ಗುಣಮಟ್ಟದ ಬೀಜಗಳನ್ನು ವಿತರಿಸುವುದು ಸೇರಿದಂತೆ ಸರ್ಕಾರ ವಿವಿಧ ರೀತಿಯಲ್ಲಿ ಪ್ರಯತ್ನ ಮಾಡುತ್ತಿದೆ. ಕೇಂದ್ರ ಕೃಷಿ ಇಲಾಖೆ ಮತ್ತು ರಾಜ್ಯಗಳ ಕೃಷಿ ಇಲಾಖೆಗಳ ನಡುವೆ ಸಮನ್ವಯತೆ ತರಲಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ನಿಧಿ ಖರ್ ತಿಳಿಸಿದರು.

ದೊಡ್ಡ ರೀಟೇಲ್ ಮಾರಾಟ ಸಂಸ್ಥೆಗಳು ಸೇರಿದಂತೆ ಎಲ್ಲಾ ದಾಸ್ತಾನುದಾರರ ಬಳಿ ಎಷ್ಟೆಷ್ಟು ಸಂಗ್ರಹ ಇದೆ, ದಾಸ್ತಾನು ಮಿತಿಯೊಳಗೆ ಇದೆಯಾ ಎಂಬುದನ್ನು ಗಮನಿಸುತ್ತಿರುತ್ತೇವೆ. ಈ ರೀತಿ ನಿಯಮ ಮೀರಿ ಮಿತಿಗಿಂತ ಹೆಚ್ಚು ದಾಸ್ತಾನು ಇಡುವುದು ಮತ್ತು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡು ಬಂದರೆ ಸರ್ಕಾರದಿಂದ ಕಠಿಣ ಕ್ರಮ ಜಾರಿಯಾಗುತ್ತದೆ ಎಂದೂ ಈ ಸಭೆಯಲ್ಲಿ ರೀಟೇಲ್ ಉದ್ಯಮದ ಪ್ರತಿನಿಧಿಗಳಿಗೆ ನಿಧಿ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ರೀಟೇಲ್ ಬಳಿಕ ಹೋಲ್​ಸೇಲ್ ಹಣದುಬ್ಬರ ಏರಿಕೆ ಸರದಿ; ಜೂನ್ ತಿಂಗಳಲ್ಲಿ ಶೇ. 3.4ರಷ್ಟು ಡಬ್ಲ್ಯುಪಿಐ ಇನ್​ಫ್ಲೇಶನ್

ಸಭೆಯಲ್ಲಿ ಪಾಲ್ಗೊಂಡಿದ್ದ ಭಾರತೀಯ ರೀಟೇರ್ಸ್ ಅಸೋಸಿಯೇಶನ್ ಸಂಸ್ಥೆ ದೇಶಾದ್ಯಂತ 2,300 ಸದಸ್ಯರು ಮತ್ತು 6 ಲಕ್ಷ ಮಳಿಗೆಗಳನ್ನು ಹೊಂದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ