AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tax Evasion: ಪ್ಯಾನ್, ಆಧಾರ್ ಕದ್ದು ಶೆಲ್ ಕಂಪನಿ ಮೂಲಕ ತೆರಿಗೆ ವಂಚಿಸುತ್ತಿದ್ದ ಜಾಲಗಳು ಬೆಳಕಿಗೆ; 30,000 ಕೋಟಿ ರೂ ಕರ್ಮಕಾಂಡ ಬಯಲು

Rs 30,000 Cr Tax Evasion Found By GST Authorities: ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಮಾಹಿತಿ ಕದ್ದು ಅದನ್ನು ಬಳಸಿ ಶೆಲ್ ಕಂಪನಿಗಳ ಮೂಲಕ ನಕಲಿ ಇನ್ವಾಯ್ಸ್ ಸೃಷ್ಟಿಸಿ ಮಾರುತ್ತಿದ್ದ 3 ಬಹುರಾಜ್ಯ ತಂಡಗಳನ್ನು ಜಿಎಸ್​ಟಿ ಅಧಿಕಾರಿಗಳು ಬಯಲಿಗೆಳೆದಿದ್ದಾರೆ.

Tax Evasion: ಪ್ಯಾನ್, ಆಧಾರ್ ಕದ್ದು ಶೆಲ್ ಕಂಪನಿ ಮೂಲಕ ತೆರಿಗೆ ವಂಚಿಸುತ್ತಿದ್ದ ಜಾಲಗಳು ಬೆಳಕಿಗೆ; 30,000 ಕೋಟಿ ರೂ ಕರ್ಮಕಾಂಡ ಬಯಲು
ಜಿಎಸ್​ಟಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 20, 2023 | 5:36 PM

Share

ನವದೆಹಲಿ: ನಕಲಿ ಅಥವಾ ಕಳುವುಗೊಂಡ ಪ್ಯಾನ್ ನಂಬರ್ ಮತ್ತು ಆಧಾರ್ ಕಾರ್ಡ್​ಗಳನ್ನು ಬಳಸುವುದೂ ಸೇರಿದಂತೆ ವಿವಿಧ ಮಾರ್ಗಗಳ ಮೂಲಕ ತೆರಿಗೆ ವಂಚಿಸುತ್ತಿದ್ದ ಪ್ರಕರಣಗಳನ್ನು ಜಿಎಸ್​ಟಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. 18,000ದಷ್ಟು ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್​ಗಳನ್ನು ದುರುಪಯೋಗಿಸಿಕೊಂಡು 4,000ದಷ್ಟು ಶೆಲ್ ಕಂಪನಿಗಳು ಮತ್ತು 16,000 ನಕಲಿ ಜಿಎಸ್​ಟಿ ನೊಂದಣಿಗಳನ್ನು ಮಾಡಲಾಗಿರುವುದು ಬೆಳಕಿಗೆ ಬಂದಿದೆ. 16 ರಾಜ್ಯಗಳಲ್ಲಿ ಈ ಅಕ್ರಮಗಳು ನಡೆದಿದ್ದು ಒಟ್ಟು ವಂಚನೆಯಾದ ತೆರಿಗೆಯ ಮೊತ್ತ 30,000 ಕೋಟಿ ರೂ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೇ 16ರಂದು ತೆರಿಗೆ ವಂಚನೆ ವಿರುದ್ಧ ಆರಂಭಗೊಂಡ ಜಿಎಸ್​ಟಿ ಅಧಿಕಾರಿಗಳ ಕಾರ್ಯಾಚರಣೆ ಎರಡು ತಿಂಗಳು ನಡೆದಿತ್ತು. ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಇತ್ಯಾದಿ ಸಂಸ್ಥೆಗಳ ಜೊತೆ ಸೇರಿ ಜಿಎಸ್​ಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. 16 ರಾಜ್ಯಗಳಲ್ಲಿ ಬಹಳ ಯೋಜಿತವಾಗಿ ಕಾರ್ಯಾಚರಣೆ ನಡೆದಿದ್ದು, 7ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ಇದನ್ನೂ ಓದಿIIFL Securities: ಐಐಎಫ್​ಎಲ್ ಸೆಕ್ಯೂರಿಟೀಸ್ ಮೇಲೆ ಸೆಬಿ ನಿರ್ಬಂಧ; ಷೇರುಬೆಲೆ ಶೇ. 18ಕ್ಕಿಂತ ಹೆಚ್ಚು ಕುಸಿತ

ಶೆಲ್ ಕಂಪನಿಗಳ ಮೂಲಕ ನಕಲಿ ಇನ್ವಾಯ್ಸ್​ಗಳನ್ನು ಸೃಷ್ಟಿಸಿ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆಯಬಯಸುವ ಬೇರೆ ಸಂಸ್ಥೆಗಳಿಗೆ ಅವನ್ನು ಮಾರಲಾಗುತ್ತಿತ್ತು. ಬಹುರಾಜ್ಯಗಳಲ್ಲಿ ಜಾಲಗಳನ್ನು ಹೊಂದಿರುವ ಮೂರು ತಂಡಗಳು ಈ ಕೃತ್ಯ ಎಸಗುತ್ತಿದ್ದುದನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದರು. ಕದಿಯಲಾದ ಪ್ಯಾನ್ ಮತ್ತು ಆಧಾರ್ ಕಾರ್ಡ್ ಮಾಹಿತಿ ಮೂಲಕ ಶೆಲ್ ಕಂಪನಿಗಳನ್ನು ಸ್ಥಾಪಿಸಿ, ನಕಲಿ ಇವೇ ಬಿಲ್ ಮತ್ತು ಇನ್ವಾಯ್ಸ್​ಗಳನ್ನು ಈ ತಂಡಗಳು ಸೃಷ್ಟಿಸುತ್ತಿದ್ದವು. ಬಳಿಕ ಇನ್ವಾಯ್ಸ್​ಗಳ ಅಗತ್ಯ ಇದ್ದ ಕಂಪನಿಗಳಿಗೆ ಅದನ್ನು ಮಾರಲಾಗುತ್ತಿತ್ತು.

ಗುಜರಾತ್​ನ ಭಾವನಗರ್ ಮತ್ತು ಸೂರತ್​ನಲ್ಲಿ ಆಧಾರ್ ಮತ್ತು ಪ್ಯಾನ್ ಕಾರ್ಡ್ ದುರ್ಬಳಕೆ ಮಾಡಿ ನಕಲಿ ಇನ್ವಾಯ್ಸ್ ತಯಾರಾಗುತ್ತಿದ್ದ ಪ್ರಕರಣ ಮೊದಲು ಬೆಳಕಿಗೆ ಬಂದಿದ್ದು. ಇದರ ಸುಳಿವು ಹಿಡಿದು ಹೊರಟ ಜಿಎಸ್​ಟಿ ಅಧಿಕಾರಿಗಳಿಗೆ 16 ರಾಜ್ಯಗಳಲ್ಲಿ ಜಾಲ ಇರುವುದು ಗೊತ್ತಾಗಿತ್ತು. ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಪಂಜಾಬ್, ಹರ್ಯಾಣ ಮೊದಲಾದ ರಾಜ್ಯಗಳಲ್ಲಿ ಈ ವಂಚಕರ ಜಾಲ ಹರಡಿತ್ತು.

ಇದನ್ನೂ ಓದಿAadhaar PAN: ನಿಮ್ಮ ಪ್ಯಾನ್ ನಂಬರ್ ಬೇರೆಯವರ ಆಧಾರ್​ಗೆ ಲಿಂಕ್ ಆಗಿದೆಯಾ? ಸರಿಪಡಿಸಲು ಹೀಗೆ ಮಾಡಿ

ಈ ಶೆಲ್ ಕಂಪನಿಗಳಿಗೆ ಯಾರ್ಯಾರನ್ನೋ ಡೈರೆಕ್ಟರ್​ಗಳಾಗಿ ಹೆಸರಿಸಲಾಗುತ್ತಿತ್ತು. ತಮ್ಮ ನಿವಾಸಕ್ಕೆ ತೆರಿಗೆ ನೋಟೀಸ್ ಬಂದ ಬಳಿಕವಷ್ಟೇ ಆ ವ್ಯಕ್ತಿಗಳಿಗೆ ತಮ್ಮ ಹೆಸರು ಯಾವುದೋ ಕಂಪನಿಯ ಡೈರೆಕ್ಟರ್ ಸ್ಥಾನಕ್ಕೆ ಹಾಕಲಾಗಿದೆ ಎಂಬುದು ಗೊತ್ತಾಗಿತ್ತು. ಆ ರೀತಿಯಲ್ಲಿ ವಂಚಕರ ಜಾಲ ಕಾರ್ಯನಿರ್ವಹಿಸುತ್ತಿತ್ತು.

ಈ ಶೆಲ್ ಕಂಪನಿಗಳ ಮೂಲಕ ಸೃಷ್ಟಿಯಾಗಿದ್ದ ನಕಲಿ ಇನ್ವಾಯ್ಸ್​ಗಳನ್ನು ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್​ಗೋಸ್ಕರ ಬಳಸಿದ ಕಂಪನಿಗಳಿಗೆ ಜಿಎಸ್​ಟಿ ಅಧಿಕಾರಿಗಳು ನೋಟೀಸ್ ಕೊಡಲಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:40 pm, Tue, 20 June 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ