AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಎಸ್​ಟಿ ಪೋರ್ಟಲ್​ನಲ್ಲಿ ಈಗ ತೆರಿಗೆ ಸಂಗ್ರಹ ಮತ್ತಿತರ ದಾಖಲೆಗಳು ಲಭ್ಯ; ಜುಲೈನಲ್ಲಿ 1.82 ಲಕ್ಷ ಕೋಟಿ ರೂ ತೆರಿಗೆ ಸಂಗ್ರಹ

GST collections on July 2024: ರಾಜ್ಯಗಳಿಂದ ಸಂಗ್ರಹವಾದ ಜಿಎಸ್​ಟಿ ತೆರಿಗೆ, ಕೇಂದ್ರದಿಂದ ರಾಜ್ಯಗಳಿಗೆ ಸಿಕ್ಕ ತೆರಿಗೆ ಪಾಲು ಇತ್ಯಾದಿ ವಿವರಗಳು ಈಗ ಜಿಎಸ್​ಟಿ ಪೋರ್ಟಲ್​ನಲ್ಲಿ ಅಪ್​ಲೋಡ್ ಆಗುತ್ತಿವೆ. ಸಾರ್ವಜನಿಕರು ಇದನ್ನು ವೀಕ್ಷಿಸಬಹುದು. ಜಿಎಸ್​​ಟಿ ಇಲಾಖೆಯಿಂದ ಇಂದು ಜುಲೈ ತಿಂಗಳ ಅಂಕಿ ಅಂಶ ಬಿಡುಗಡೆ ಆಗಿದ್ದು, 1.82 ಲಕ್ಷ ಕೋಟಿ ರೂ ಜಿಎಸ್​ಟಿ ಸಂಗ್ರಹವಾಗಿದೆ.

ಜಿಎಸ್​ಟಿ ಪೋರ್ಟಲ್​ನಲ್ಲಿ ಈಗ ತೆರಿಗೆ ಸಂಗ್ರಹ ಮತ್ತಿತರ ದಾಖಲೆಗಳು ಲಭ್ಯ; ಜುಲೈನಲ್ಲಿ 1.82 ಲಕ್ಷ ಕೋಟಿ ರೂ ತೆರಿಗೆ ಸಂಗ್ರಹ
ಜಿಎಸ್​ಟಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 01, 2024 | 8:56 PM

Share

ನವದೆಹಲಿ, ಆಗಸ್ಟ್ 1: ದೇಶಾದ್ಯಂತ ಸಂಗ್ರಹವಾಗುವ ಸರಕು ಮತ್ತು ಸೇವಾ ತೆರಿಗೆಯಾದ ಜಿಎಸ್​ಟಿ ವಿವರಗಳು ಈಗ ಜಿಎಸ್​ಟಿ ವೆಬ್​ಸೈಟ್​ನಲ್ಲಿ ಸಾರ್ವಜನಿಕ ವೀಕ್ಷಣೆಗೆ ಲಭ್ಯ ಇರಲಿವೆ. ಇದೀಗ ಜುಲೈ ತಿಂಗಳ ಜಿಎಸ್​ಟಿ ಸಂಗ್ರಹ ಮತ್ತು ರಾಜ್ಯವಾರು ಐಜಿಎಸ್​ಟಿ ಸೆಟಲ್ಮೆಂಟ್​ನ ದತ್ತಾಂಶವನ್ನು ಈ ವೆಬ್​ಸೈಟ್​ಗೆ (www.gst.gov.in/) ಹಾಕಲಾಗಿದೆ. ಜಾಲತಾಣದ ಮುಖ್ಯಪುಟದಲ್ಲಿರುವ ನ್ಯೂಸ್ ಅಂಡ್ ಅಪ್​ಡೇಟ್ಸ್ ಸೆಕ್ಷನ್ ಅಡಿಯಲ್ಲಿ ಇದನ್ನು ನೋಡಬಹುದು. ಇನ್ಮುಂದೆ ಪ್ರತೀ ತಿಂಗಳ ಜಿಎಸ್​ಟಿ ಸಂಗ್ರಹದ ಡಾಟಾವನ್ನು ಯಾರು ಬೇಕಾದರೂ ಈ ವೆಬ್​ಸೈಟ್​ನಲ್ಲಿ ನೋಡಬಹುದು.

ಈ ವೆಬ್​ಸೈಟ್​ನ ಡೌನ್​ಲೋಡ್ಸ್ ಸೆಕ್ಷನ್​ಗೆ ಹೋದರೆ ಅಲ್ಲಿರುವ ಜಿಎಸ್​ಟಿ ಸ್ಟಾಟಿಸ್ಟಿಕ್ಸ್ ಅಡಿಯಲ್ಲಿ 2017ರಿಂದೀಚೆ ಜಿಎಸ್​ಟಿ ರಿಟರ್ನ್ ಸಲ್ಲಿಕೆಯ ಪೂರ್ಣ ಮಾಹಿತಿ ಲಭಿಸುತ್ತದೆ. ರಾಜ್ಯವಾರು ಸಿಜಿಎಸ್​ಟಿ, ಎಸ್​ಜಿಎಸ್​ಟಿ, ಐಜಿಎಸ್​ಟಿ ಮತ್ತು ಸೆಸ್​ನ ವಿವರಗಳನ್ನೂ ಕಾಣಬಹುದು.

ಕರ್ನಾಟದಿಂದ ಹೆಚ್ಚಾದ ಜಿಎಸ್​ಟಿ ಕೊಡುಗೆ

ಇಂದು ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಜುಲೈ ತಿಂಗಳಲ್ಲಿ ಒಟ್ಟಾರೆ ಜಿಎಸ್​ಟಿ ಸಂಗ್ರಹ 1.82 ಲಕ್ಷ ಕೋಟಿ ರೂ ದಾಟಿದೆ. ರೀಫಂಡ್ ಕಳೆದು ಬಂದ ನಿವ್ವಳ ಜಿಎಸ್​ಟಿ ಸಂಗ್ರಹ 1,44,897 ಕೋಟಿ ರೂ ಇದೆ. ಕರ್ನಾಟಕದಲ್ಲಿ ಸಂಗ್ರಹವಾದ ಜಿಎಸ್​ಟಿ ಪ್ರಮಾಣ 13,025 ಕೋಟಿ ರೂ ಆಗಿದೆ. ಹಿಂದಿನ ವರ್ಷದ ಸಂಗ್ರಹಕ್ಕೆ ಹೋಲಿಸಿದರೆ ಶೇ. 13ರಷ್ಟು ತೆರಿಗೆ ಸಂಗ್ರಹ ಹೆಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿ ಜಿಎಸ್​ಟಿ ಸಂಗ್ರಹ 28,970 ಕೋಟಿ ರೂ ಆಗಿದೆ.

ಇದನ್ನೂ ಓದಿ: ಐಟಿ ರಿಟರ್ನ್ಸ್ ಸಲ್ಲಿಕೆಗೆ ಆಗಸ್ಟ್ 31ರವರೆಗೂ ಅವಕಾಶ? ಇದು ಸುಳ್ಳು ಸುದ್ದಿ ಎಂದ ಪಿಐಬಿ ಫ್ಯಾಕ್ಟ್ ಚೆಕ್ ಟೀಮ್

ಜುಲೈನಲ್ಲಿ ಅತಿಹೆಚ್ಚು ಜಿಎಸ್​ಟಿ ಸಂಗ್ರಹ ಮಾಡಿರುವ ರಾಜ್ಯಗಳ ಟಾಪ್ 10 ಪಟ್ಟಿ

  1. ಮಹಾರಾಷ್ಟ್ರ: 28,970 ಕೋಟಿ ರೂ
  2. ಕರ್ನಾಟಕ: 13,025 ಕೋಟಿ ರೂ
  3. ಗುಜರಾತ್: 11,015 ಕೋಟಿ ರೂ
  4. ತಮಿಳುನಾಡು: 10,490 ಕೋಟಿ ರೂ
  5. ಉತ್ತರಪ್ರದೇಶ: 9,125 ಕೋಟಿ ರೂ
  6. ಹರ್ಯಾಣ: 9,082 ಕೋಟಿ ರೂ
  7. ದೆಹಲಿ: 5,964 ಕೋಟಿ ರೂ
  8. ಪಶ್ಚಿಮ ಬಂಗಾಳ: 5,257 ಕೋಟಿ ರೂ
  9. ತೆಲಂಗಾಣ: 4,940 ಕೋಟಿ ರೂ
  10. ಒಡಿಶಾ: 4,925 ಕೋಟಿ ರೂ

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 8:52 pm, Thu, 1 August 24

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ