AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST collections: ಮೇ ತಿಂಗಳಲ್ಲಿ 2.01 ಲಕ್ಷ ಕೋಟಿ ರೂನಷ್ಟು ಜಿಎಸ್​​ಟಿ ಸಂಗ್ರಹ

GST collections in May month: 2025ರ ಮೇ ತಿಂಗಳಲ್ಲಿ ಭಾರತ ಸರ್ಕಾರ ಸಂಗ್ರಹಿಸಿದ ಜಿಎಸ್​​ಟಿ ಮೊತ್ತ 2.01 ಲಕ್ಷ ಕೋಟಿ ರೂ ಆಗಿದೆ. 2024ರ ಮೇ ತಿಂಗಳಲ್ಲಿ 1.72 ಲಕ್ಷ ಕೋಟಿ ರೂ ಜಿಎಸ್​​ಟಿ ಸಿಕ್ಕಿತ್ತು. ಹಿಂದಿನ ತಿಂಗಳಲ್ಲಿ, ಅಂದರೆ, 2025ರ ಏಪ್ರಿಲ್ ತಿಂಗಳಲ್ಲಿ ದಾಖಲೆಯ 2.37 ಲಕ್ಷ ಕೋಟಿ ರೂ ಟ್ಯಾಕ್ಸ್ ಕಲೆಕ್ಷನ್ಸ್ ಬಂದಿತ್ತು.

GST collections: ಮೇ ತಿಂಗಳಲ್ಲಿ 2.01 ಲಕ್ಷ ಕೋಟಿ ರೂನಷ್ಟು ಜಿಎಸ್​​ಟಿ ಸಂಗ್ರಹ
ಜಿಎಸ್​​ಟಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 01, 2025 | 6:33 PM

Share

ನವದೆಹಲಿ, ಜೂನ್ 1: ಕಳೆದ ತಿಂಗಳು (2025ರ ಮೇ) ಭಾರತದಲ್ಲಿ 2.01 ಲಕ್ಷ ಕೋಟಿ ರೂ ಜಿಎಸ್​​ಟಿ ಸಂಗ್ರಹ (GST collections) ಆಗಿದೆ. ಹಿಂದಿನ ವರ್ಷದ ಇದೇ ತಿಂಗಳಲ್ಲಿ (2024ರ ಮೇ) 1.72 ಲಕ್ಷ ಕೋಟಿ ರೂ ಜಿಎಸ್​​ಟಿ ಹರಿದು ಬಂದಿತ್ತು. ಅದಕ್ಕೆ ಹೋಲಿಸಿದರೆ ಈ ವರ್ಷದ ಮೇ ತಿಂಗಳಲ್ಲಿ ಜಿಎಸ್​​ಟಿ ಸಂಗ್ರಹ ಶೇ. 16.4ರಷ್ಟು ಹೆಚ್ಚಾಗಿದೆ. ಭಾನುವಾರ ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ದತ್ತಾಂಶದಿಂದ ಈ ಮಾಹಿತಿ ತಿಳಿದುಬಂದಿದೆ.

2025ರ ಮೇ ತಿಂಗಳಲ್ಲಿ ಒಟ್ಟಾರೆ ಜಿಎಸ್​​ಟಿ ಆದಾಯ (GST revenue) 4.37 ಲಕ್ಷ ಕೋಟಿ ರೂನಷ್ಟು ದಾಖಲಾಗಿದೆ. ಹಿಂದಿನ ವರ್ಷದಲ್ಲಿ ಇದು 3.83 ಲಕ್ಷ ಕೋಟಿ ರೂ ನಷ್ಟಿತ್ತು. ಇದರಲ್ಲಿ ಶೇ. 14.3ರಷ್ಟು ಏರಿಕೆ ಆಗಿದೆ.

ಇದನ್ನೂ ಓದಿ: ಇಎಲ್​​ಐ ಸ್ಕೀಮ್​​ಗೆ ಯುಎಎನ್ ಸಕ್ರಿಯಗೊಳಿಸಲು ಡೆಡ್​​ಲೈನ್ ವಿಸ್ತರಣೆ; ಏನಿದು ಯೋಜನೆ, ಸುಲಭದಲ್ಲಿ ಯುಎಎನ್ ಆ್ಯಕ್ಟಿವೇಟ್ ಹೇಗೆ?

ಇನ್ನು, ಮೇ ತಿಂಗಳಲ್ಲಿ ಸರ್ಕಾರವು ಜಿಎಸ್​​ಟಿ ರೀಫಂಡ್ ಮಾಡಿದ ಪ್ರಮಾಣ 27,210 ಕೋಟಿ ರೂ. ಹಿಂದಿನ ವರ್ಷದ ಮೇಗೆ ಹೋಲಿಸಿದರೆ ರೀಫಂಡ್ ಶೇ. 4ರಷ್ಟು ಕಡಿಮೆ ಆಗಿದೆ.

ಈ ರೀಫಂಡ್ ಕಳೆದು ಉಳಿಯುವ ನಿವ್ವಳ ಜಿಎಸ್​ಟಿ ಆದಾಯ 1,73,841 ಕೋಟಿ ರೂ ಆಗುತ್ತದೆ. ಇದರಲ್ಲಿ ಶೇ. 20.4ರಷ್ಟು ಹೆಚ್ಚಳ ಆಗಿದೆ.

ಈ ಬಾರಿಯ ಬಜೆಟ್​​​ನಲ್ಲಿ ಸರ್ಕಾರವು ಜಿಎಸ್​​ಟಿ ಆದಾಯದಲ್ಲಿ ಶೇ. 11ರಷ್ಟು ಏರಿಕೆ ಆಗಬಹುದು ಎಂದು ನಿರೀಕ್ಷಿಸಿದೆ. ಒಟ್ಟಾರೆ 11.78 ಲಕ್ಷ ಕೋಟಿ ರೂನಷ್ಟು ನಿವ್ವಳ ಜಿಎಸ್​​ಟಿ ತೆರಿಗೆಗಳು ಸಿಗಬಹುದು ಎಂಬುದು ಸರ್ಕಾರದ ಎಣಿಕೆ.

ಇದನ್ನೂ ಓದಿ: ADB support: ನಗರ ಮೂಲಸೌಕರ್ಯ ಬಲಪಡಿಸಲು ಭಾರತಕ್ಕೆ 10 ಬಿಲಿಯನ್ ಡಾಲರ್ ನೆರವಿಗೆ ಎಡಿಬಿ ಸಿದ್ಧ

ಈ ಹಣಕಾಸು ವರ್ಷದ ಮೊದಲೆರಡು ತಿಂಗಳಲ್ಲಿ ಜಿಎಸ್​​ಟಿ ಸಂಗ್ರಹ 2 ಲಕ್ಷ ಕೋಟಿ ರೂ ದಾಟಿದೆ. ಏಪ್ರಿಲ್​​​ನಲ್ಲಿ 2.37 ಲಕ್ಷ ಕೋಟಿ ರೂ ತೆರಿಗೆ ಸಿಕ್ಕಿತ್ತು. ಇದು ಇತಿಹಾಸದಲ್ಲೇ ಯಾವುದೇ ತಿಂಗಳಲ್ಲಿ ಬಂದ ಜಿಎಸ್​​ಟಿ ಸಂಗ್ರಹ. ಬಜೆಟ್ ಎಣಿಕೆಯಂತೆ ಈ ವರ್ಷದ ಜಿಎಸ್​​ಟಿ ಸಂಗ್ರಹದ ಗುರಿ ಈಡೇರುವ ನಿರೀಕ್ಷೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ