AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST collections: ಮೇ ತಿಂಗಳಲ್ಲಿ 2.01 ಲಕ್ಷ ಕೋಟಿ ರೂನಷ್ಟು ಜಿಎಸ್​​ಟಿ ಸಂಗ್ರಹ

GST collections in May month: 2025ರ ಮೇ ತಿಂಗಳಲ್ಲಿ ಭಾರತ ಸರ್ಕಾರ ಸಂಗ್ರಹಿಸಿದ ಜಿಎಸ್​​ಟಿ ಮೊತ್ತ 2.01 ಲಕ್ಷ ಕೋಟಿ ರೂ ಆಗಿದೆ. 2024ರ ಮೇ ತಿಂಗಳಲ್ಲಿ 1.72 ಲಕ್ಷ ಕೋಟಿ ರೂ ಜಿಎಸ್​​ಟಿ ಸಿಕ್ಕಿತ್ತು. ಹಿಂದಿನ ತಿಂಗಳಲ್ಲಿ, ಅಂದರೆ, 2025ರ ಏಪ್ರಿಲ್ ತಿಂಗಳಲ್ಲಿ ದಾಖಲೆಯ 2.37 ಲಕ್ಷ ಕೋಟಿ ರೂ ಟ್ಯಾಕ್ಸ್ ಕಲೆಕ್ಷನ್ಸ್ ಬಂದಿತ್ತು.

GST collections: ಮೇ ತಿಂಗಳಲ್ಲಿ 2.01 ಲಕ್ಷ ಕೋಟಿ ರೂನಷ್ಟು ಜಿಎಸ್​​ಟಿ ಸಂಗ್ರಹ
ಜಿಎಸ್​​ಟಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 01, 2025 | 6:33 PM

Share

ನವದೆಹಲಿ, ಜೂನ್ 1: ಕಳೆದ ತಿಂಗಳು (2025ರ ಮೇ) ಭಾರತದಲ್ಲಿ 2.01 ಲಕ್ಷ ಕೋಟಿ ರೂ ಜಿಎಸ್​​ಟಿ ಸಂಗ್ರಹ (GST collections) ಆಗಿದೆ. ಹಿಂದಿನ ವರ್ಷದ ಇದೇ ತಿಂಗಳಲ್ಲಿ (2024ರ ಮೇ) 1.72 ಲಕ್ಷ ಕೋಟಿ ರೂ ಜಿಎಸ್​​ಟಿ ಹರಿದು ಬಂದಿತ್ತು. ಅದಕ್ಕೆ ಹೋಲಿಸಿದರೆ ಈ ವರ್ಷದ ಮೇ ತಿಂಗಳಲ್ಲಿ ಜಿಎಸ್​​ಟಿ ಸಂಗ್ರಹ ಶೇ. 16.4ರಷ್ಟು ಹೆಚ್ಚಾಗಿದೆ. ಭಾನುವಾರ ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ದತ್ತಾಂಶದಿಂದ ಈ ಮಾಹಿತಿ ತಿಳಿದುಬಂದಿದೆ.

2025ರ ಮೇ ತಿಂಗಳಲ್ಲಿ ಒಟ್ಟಾರೆ ಜಿಎಸ್​​ಟಿ ಆದಾಯ (GST revenue) 4.37 ಲಕ್ಷ ಕೋಟಿ ರೂನಷ್ಟು ದಾಖಲಾಗಿದೆ. ಹಿಂದಿನ ವರ್ಷದಲ್ಲಿ ಇದು 3.83 ಲಕ್ಷ ಕೋಟಿ ರೂ ನಷ್ಟಿತ್ತು. ಇದರಲ್ಲಿ ಶೇ. 14.3ರಷ್ಟು ಏರಿಕೆ ಆಗಿದೆ.

ಇದನ್ನೂ ಓದಿ: ಇಎಲ್​​ಐ ಸ್ಕೀಮ್​​ಗೆ ಯುಎಎನ್ ಸಕ್ರಿಯಗೊಳಿಸಲು ಡೆಡ್​​ಲೈನ್ ವಿಸ್ತರಣೆ; ಏನಿದು ಯೋಜನೆ, ಸುಲಭದಲ್ಲಿ ಯುಎಎನ್ ಆ್ಯಕ್ಟಿವೇಟ್ ಹೇಗೆ?

ಇನ್ನು, ಮೇ ತಿಂಗಳಲ್ಲಿ ಸರ್ಕಾರವು ಜಿಎಸ್​​ಟಿ ರೀಫಂಡ್ ಮಾಡಿದ ಪ್ರಮಾಣ 27,210 ಕೋಟಿ ರೂ. ಹಿಂದಿನ ವರ್ಷದ ಮೇಗೆ ಹೋಲಿಸಿದರೆ ರೀಫಂಡ್ ಶೇ. 4ರಷ್ಟು ಕಡಿಮೆ ಆಗಿದೆ.

ಈ ರೀಫಂಡ್ ಕಳೆದು ಉಳಿಯುವ ನಿವ್ವಳ ಜಿಎಸ್​ಟಿ ಆದಾಯ 1,73,841 ಕೋಟಿ ರೂ ಆಗುತ್ತದೆ. ಇದರಲ್ಲಿ ಶೇ. 20.4ರಷ್ಟು ಹೆಚ್ಚಳ ಆಗಿದೆ.

ಈ ಬಾರಿಯ ಬಜೆಟ್​​​ನಲ್ಲಿ ಸರ್ಕಾರವು ಜಿಎಸ್​​ಟಿ ಆದಾಯದಲ್ಲಿ ಶೇ. 11ರಷ್ಟು ಏರಿಕೆ ಆಗಬಹುದು ಎಂದು ನಿರೀಕ್ಷಿಸಿದೆ. ಒಟ್ಟಾರೆ 11.78 ಲಕ್ಷ ಕೋಟಿ ರೂನಷ್ಟು ನಿವ್ವಳ ಜಿಎಸ್​​ಟಿ ತೆರಿಗೆಗಳು ಸಿಗಬಹುದು ಎಂಬುದು ಸರ್ಕಾರದ ಎಣಿಕೆ.

ಇದನ್ನೂ ಓದಿ: ADB support: ನಗರ ಮೂಲಸೌಕರ್ಯ ಬಲಪಡಿಸಲು ಭಾರತಕ್ಕೆ 10 ಬಿಲಿಯನ್ ಡಾಲರ್ ನೆರವಿಗೆ ಎಡಿಬಿ ಸಿದ್ಧ

ಈ ಹಣಕಾಸು ವರ್ಷದ ಮೊದಲೆರಡು ತಿಂಗಳಲ್ಲಿ ಜಿಎಸ್​​ಟಿ ಸಂಗ್ರಹ 2 ಲಕ್ಷ ಕೋಟಿ ರೂ ದಾಟಿದೆ. ಏಪ್ರಿಲ್​​​ನಲ್ಲಿ 2.37 ಲಕ್ಷ ಕೋಟಿ ರೂ ತೆರಿಗೆ ಸಿಕ್ಕಿತ್ತು. ಇದು ಇತಿಹಾಸದಲ್ಲೇ ಯಾವುದೇ ತಿಂಗಳಲ್ಲಿ ಬಂದ ಜಿಎಸ್​​ಟಿ ಸಂಗ್ರಹ. ಬಜೆಟ್ ಎಣಿಕೆಯಂತೆ ಈ ವರ್ಷದ ಜಿಎಸ್​​ಟಿ ಸಂಗ್ರಹದ ಗುರಿ ಈಡೇರುವ ನಿರೀಕ್ಷೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​