AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST Council Meet: ಜಿಎಸ್​ಟಿ ಅಪರಾಧ; ಕೇಂದ್ರದಿಂದ ಕೆಲವು ವಿನಾಯಿತಿ ಸಾಧ್ಯತೆ

ಜಿಎಸ್​ಟಿ ನಿಯಮಗಳ ಅಡಿಯಲ್ಲಿ ಕ್ರಿಮಿನಲ್ ಕಾನೂನು ಕ್ರಮ ಕೈಗೊಳ್ಳಬೇಕಾದ ಮಿತಿಯನ್ನು 5 ಕೋಟಿ ರೂ.ನಿಂದ 20 ಕೋಟಿ ರೂ.ಗೆ ಹೆಚ್ಚಿಸುವ ಪ್ರಸ್ತಾವ ಮಂಡಳಿಯ ಮುಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

GST Council Meet: ಜಿಎಸ್​ಟಿ ಅಪರಾಧ; ಕೇಂದ್ರದಿಂದ ಕೆಲವು ವಿನಾಯಿತಿ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Updated By: Ganapathi Sharma|

Updated on: Dec 06, 2022 | 2:30 PM

Share

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (GST Council) ಮಂಡಳಿಯು ಇದೇ 17ರಂದು ಸಭೆ ನಡೆಸಲಿದೆ. ಜಿಎಸ್​ಟಿ (GST) ಕಾನೂನಿನ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲಾಗಿರುವ ಕೆಲವು ನಿಯಮಗಳಲ್ಲಿ ಸಡಿಲ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ನಿರೀಕ್ಷೆ ಇದೆ. ಜಿಎಸ್​ಟಿ ನಿಯಮಗಳ ಅಡಿಯಲ್ಲಿ ಕ್ರಿಮಿನಲ್ ಕಾನೂನು ಕ್ರಮ ಕೈಗೊಳ್ಳಬೇಕಾದ ಮಿತಿಯನ್ನು 5 ಕೋಟಿ ರೂ.ನಿಂದ 20 ಕೋಟಿ ರೂ.ಗೆ ಹೆಚ್ಚಿಸುವ ಪ್ರಸ್ತಾವ ಮಂಡಳಿಯ ಮುಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅಧ್ಯಕ್ಷತೆಯಲ್ಲಿ ಜಿಎಸ್​ಟಿ ಮಂಡಳಿಯ ಸಭೆ ನಡೆಯಲಿದ್ದು, ರಾಜ್ಯಗಳ ಹಣಕಾಸು ಸಚಿವರೂ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇನ್​ಪುಟ್ ಟ್ಯಾಕ್ಸ್ ಕ್ರೆಡಿಟ್ ವಂಚನೆ ಅಥವಾ ದುರುಪಯೋಗದ ಮೊತ್ತವು 5 ಕೋಟಿ ರೂ.ಗಿಂತ ಹೆಚ್ಚಿದ್ದಲ್ಲಿ ಅಂಥ ತೆರಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬಹುದು ಎಂದು ಸೆಪ್ಟೆಂಬರ್​ನಲ್ಲಿ ಅಧಿಕಾರಿಗಳಿಗೆ ಸರ್ಕಾರ ಸೂಚಿಸಿತ್ತು. ತೆರಿಗೆದಾರರ ವಿರುದ್ಧ ಕ್ರಿಮಿನಲ್ ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಬಹುದು ಎಂದು ಸರ್ಕಾರ ಹೇಳಿತ್ತು.

ತೆರಿಗೆ ವಂಚನೆ ಆರೋಪ ಎದುರಿಸುತ್ತಿರುವವರ ವಿರುದ್ಧ ಕ್ರಿಮಿನಲ್ ಕಾನೂನು ಕ್ರಮ ಆರಂಭಿಸಲು ಇರುವ ಮಿತಿಯನ್ನು 20 ಕೋಟಿ ರೂ.ಗೆ ಹೆಚ್ಚಿಸಬೇಕೆಂಬ ಪ್ರಸ್ತಾವ ಈಗ ಸರ್ಕಾರದ ಮುಂದಿದೆ. ಜತೆಗೆ, ಮಿತಿಗಿಂತ ಕಡಿಮೆ ಮೊತ್ತದ ಜಿಎಸ್​ಟಿ ವಂಚನೆ ಆರೋಪ ಎದುರಿಸುತ್ತಿರುವವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬಾರದು ಎಂಬ ಪ್ರಸ್ತಾವಬೂ ಸರ್ಕಾರಕ್ಕೆ ಸಲ್ಲಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: GST Council Meet: ಡಿಸೆಂಬರ್ 17ಕ್ಕೆ ಜಿಎಸ್​ಟಿ ಮಂಡಳಿ ಸಭೆ; ಆನ್​ಲೈನ್​ ಗೇಮಿಂಗ್ ತೆರಿಗೆ ಹೆಚ್ಚಳ ಸಾಧ್ಯತೆ

ಈಗಾಗಲೇ ಭಾರತೀಯ ದಂಡ ಸಂಹಿತೆಯಲ್ಲಿ (IPC) ಅಡಕವಾಗಿರುವ ಅಪರಾಧಗಳನ್ನು ಜಿಎಸ್​ಟಿ ಕಾಯ್ದೆಯಿಂದ ತೆರವುಗೊಳಿಸಿ ಜಿಎಸ್​ಟಿಯನ್ನು ಮತ್ತಷ್ಟು ತೆರಿಗೆದಾರಸ್ನೇಹಿ ಮಾಡುವ ಬಗ್ಗೆ ಮಂಡಳಿ ಚಿಂತನೆ ನಡೆಸುತ್ತಿದೆ. ಜಿಎಸ್​​ಟಿ ಅಧಿಕಾರಿಗಳ ಕಾನೂನು ಸಮಿತಿಯು ಜಿಎಸ್​ಟಿ ಕಾಯ್ದೆಯ ಸೆಕ್ಷನ್ 132ರಲ್ಲಿ ಮಾಡಬೇಕಿರುವ ಬದಲಾವಣೆಗಳನ್ನು ಅಂತಿಮಗೊಳಿಸಿದೆ ಎಂದು ಅವರು ಹೇಳಿದ್ದಾರೆ.

ಜಿಎಸ್​ಟಿ ಕಾನೂನಿನಲ್ಲಿ ಬದಲಾವಣೆ ಮಾಡುವ ಪ್ರಸ್ತಾವಕ್ಕೆ ಮಂಡಳಿ ಅನುಮತಿ ನೀಡಿದರೆ ಜಿಎಸ್​ಟಿ ಕಾಯ್ದೆಗೆ ತಿದ್ದುಪಡಿ ಮಾಡಿ ಸಂಸತ್​ನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ. ಸಂಸತ್​​ ಅನುಮೋದನೆ ನೀಡಿದರೆ ರಾಜ್ಯ ಸರ್ಕಾರಗಳೂ ಜಿಎಸ್​ಟಿ ನಿಯಮಗಳಲ್ಲಿ ತಿದ್ದುಪಡಿ ಮಾಡಬೇಕಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆರೋಗ್ಯ ವಿಮೆ ಪ್ರೀಮಿಯಂನ ಜಿಎಸ್​ಟಿ ಮಿತಿಯನ್ನು ಈಗಿರುವ ಶೇಕಡಾ 18ಕ್ಕಿಂತ ಕಡಿಮೆ ಮಾಡಬೇಕು ಎಂಬ ಕುರಿತು ಅನೇಕ ಸಲಹೆಗಳನ್ನು ಸ್ವೀಕರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕ್ಯಾಸಿನೋಗಳು, ಆನ್​ಲೈನ್​ ಗೇಮಿಂಗ್ ಹಾಗೂ ಕುದುರೆ ರೇಸಿಂಗ್​ಗಳ ಮೇಲೆ ಜಿಎಸ್​ಟಿ ಪ್ರಮಾಣ ಹೆಚ್ಚಿಸುವಂತೆ ರಾಜ್ಯಗಳ ಹಣಕಾಸು ಸಚಿವರ ಸಮಿತಿ ವರದಿ ಸಿದ್ಧಪಡಿಸಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಜಿಎಸ್​ಟಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪಿಸುವ ಕುರಿತೂ ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ