AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST Council Meet: ಜಿಎಸ್​ಟಿ ಅಪರಾಧ; ಕೇಂದ್ರದಿಂದ ಕೆಲವು ವಿನಾಯಿತಿ ಸಾಧ್ಯತೆ

ಜಿಎಸ್​ಟಿ ನಿಯಮಗಳ ಅಡಿಯಲ್ಲಿ ಕ್ರಿಮಿನಲ್ ಕಾನೂನು ಕ್ರಮ ಕೈಗೊಳ್ಳಬೇಕಾದ ಮಿತಿಯನ್ನು 5 ಕೋಟಿ ರೂ.ನಿಂದ 20 ಕೋಟಿ ರೂ.ಗೆ ಹೆಚ್ಚಿಸುವ ಪ್ರಸ್ತಾವ ಮಂಡಳಿಯ ಮುಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

GST Council Meet: ಜಿಎಸ್​ಟಿ ಅಪರಾಧ; ಕೇಂದ್ರದಿಂದ ಕೆಲವು ವಿನಾಯಿತಿ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Dec 06, 2022 | 2:30 PM

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (GST Council) ಮಂಡಳಿಯು ಇದೇ 17ರಂದು ಸಭೆ ನಡೆಸಲಿದೆ. ಜಿಎಸ್​ಟಿ (GST) ಕಾನೂನಿನ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲಾಗಿರುವ ಕೆಲವು ನಿಯಮಗಳಲ್ಲಿ ಸಡಿಲ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ನಿರೀಕ್ಷೆ ಇದೆ. ಜಿಎಸ್​ಟಿ ನಿಯಮಗಳ ಅಡಿಯಲ್ಲಿ ಕ್ರಿಮಿನಲ್ ಕಾನೂನು ಕ್ರಮ ಕೈಗೊಳ್ಳಬೇಕಾದ ಮಿತಿಯನ್ನು 5 ಕೋಟಿ ರೂ.ನಿಂದ 20 ಕೋಟಿ ರೂ.ಗೆ ಹೆಚ್ಚಿಸುವ ಪ್ರಸ್ತಾವ ಮಂಡಳಿಯ ಮುಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅಧ್ಯಕ್ಷತೆಯಲ್ಲಿ ಜಿಎಸ್​ಟಿ ಮಂಡಳಿಯ ಸಭೆ ನಡೆಯಲಿದ್ದು, ರಾಜ್ಯಗಳ ಹಣಕಾಸು ಸಚಿವರೂ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇನ್​ಪುಟ್ ಟ್ಯಾಕ್ಸ್ ಕ್ರೆಡಿಟ್ ವಂಚನೆ ಅಥವಾ ದುರುಪಯೋಗದ ಮೊತ್ತವು 5 ಕೋಟಿ ರೂ.ಗಿಂತ ಹೆಚ್ಚಿದ್ದಲ್ಲಿ ಅಂಥ ತೆರಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬಹುದು ಎಂದು ಸೆಪ್ಟೆಂಬರ್​ನಲ್ಲಿ ಅಧಿಕಾರಿಗಳಿಗೆ ಸರ್ಕಾರ ಸೂಚಿಸಿತ್ತು. ತೆರಿಗೆದಾರರ ವಿರುದ್ಧ ಕ್ರಿಮಿನಲ್ ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಬಹುದು ಎಂದು ಸರ್ಕಾರ ಹೇಳಿತ್ತು.

ತೆರಿಗೆ ವಂಚನೆ ಆರೋಪ ಎದುರಿಸುತ್ತಿರುವವರ ವಿರುದ್ಧ ಕ್ರಿಮಿನಲ್ ಕಾನೂನು ಕ್ರಮ ಆರಂಭಿಸಲು ಇರುವ ಮಿತಿಯನ್ನು 20 ಕೋಟಿ ರೂ.ಗೆ ಹೆಚ್ಚಿಸಬೇಕೆಂಬ ಪ್ರಸ್ತಾವ ಈಗ ಸರ್ಕಾರದ ಮುಂದಿದೆ. ಜತೆಗೆ, ಮಿತಿಗಿಂತ ಕಡಿಮೆ ಮೊತ್ತದ ಜಿಎಸ್​ಟಿ ವಂಚನೆ ಆರೋಪ ಎದುರಿಸುತ್ತಿರುವವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬಾರದು ಎಂಬ ಪ್ರಸ್ತಾವಬೂ ಸರ್ಕಾರಕ್ಕೆ ಸಲ್ಲಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: GST Council Meet: ಡಿಸೆಂಬರ್ 17ಕ್ಕೆ ಜಿಎಸ್​ಟಿ ಮಂಡಳಿ ಸಭೆ; ಆನ್​ಲೈನ್​ ಗೇಮಿಂಗ್ ತೆರಿಗೆ ಹೆಚ್ಚಳ ಸಾಧ್ಯತೆ

ಈಗಾಗಲೇ ಭಾರತೀಯ ದಂಡ ಸಂಹಿತೆಯಲ್ಲಿ (IPC) ಅಡಕವಾಗಿರುವ ಅಪರಾಧಗಳನ್ನು ಜಿಎಸ್​ಟಿ ಕಾಯ್ದೆಯಿಂದ ತೆರವುಗೊಳಿಸಿ ಜಿಎಸ್​ಟಿಯನ್ನು ಮತ್ತಷ್ಟು ತೆರಿಗೆದಾರಸ್ನೇಹಿ ಮಾಡುವ ಬಗ್ಗೆ ಮಂಡಳಿ ಚಿಂತನೆ ನಡೆಸುತ್ತಿದೆ. ಜಿಎಸ್​​ಟಿ ಅಧಿಕಾರಿಗಳ ಕಾನೂನು ಸಮಿತಿಯು ಜಿಎಸ್​ಟಿ ಕಾಯ್ದೆಯ ಸೆಕ್ಷನ್ 132ರಲ್ಲಿ ಮಾಡಬೇಕಿರುವ ಬದಲಾವಣೆಗಳನ್ನು ಅಂತಿಮಗೊಳಿಸಿದೆ ಎಂದು ಅವರು ಹೇಳಿದ್ದಾರೆ.

ಜಿಎಸ್​ಟಿ ಕಾನೂನಿನಲ್ಲಿ ಬದಲಾವಣೆ ಮಾಡುವ ಪ್ರಸ್ತಾವಕ್ಕೆ ಮಂಡಳಿ ಅನುಮತಿ ನೀಡಿದರೆ ಜಿಎಸ್​ಟಿ ಕಾಯ್ದೆಗೆ ತಿದ್ದುಪಡಿ ಮಾಡಿ ಸಂಸತ್​ನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ. ಸಂಸತ್​​ ಅನುಮೋದನೆ ನೀಡಿದರೆ ರಾಜ್ಯ ಸರ್ಕಾರಗಳೂ ಜಿಎಸ್​ಟಿ ನಿಯಮಗಳಲ್ಲಿ ತಿದ್ದುಪಡಿ ಮಾಡಬೇಕಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆರೋಗ್ಯ ವಿಮೆ ಪ್ರೀಮಿಯಂನ ಜಿಎಸ್​ಟಿ ಮಿತಿಯನ್ನು ಈಗಿರುವ ಶೇಕಡಾ 18ಕ್ಕಿಂತ ಕಡಿಮೆ ಮಾಡಬೇಕು ಎಂಬ ಕುರಿತು ಅನೇಕ ಸಲಹೆಗಳನ್ನು ಸ್ವೀಕರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕ್ಯಾಸಿನೋಗಳು, ಆನ್​ಲೈನ್​ ಗೇಮಿಂಗ್ ಹಾಗೂ ಕುದುರೆ ರೇಸಿಂಗ್​ಗಳ ಮೇಲೆ ಜಿಎಸ್​ಟಿ ಪ್ರಮಾಣ ಹೆಚ್ಚಿಸುವಂತೆ ರಾಜ್ಯಗಳ ಹಣಕಾಸು ಸಚಿವರ ಸಮಿತಿ ವರದಿ ಸಿದ್ಧಪಡಿಸಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಜಿಎಸ್​ಟಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪಿಸುವ ಕುರಿತೂ ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ