AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಎಸ್​ಟಿ ಕೌನ್ಸಿಲ್ ಸಭೆ: ಆನ್​ಲೈನ್ ಗೇಮಿಂಗ್​ಗೆ ತೆರಿಗೆ, ಎಸ್​ಜಿಎಸ್​ಟಿ ಕಾನೂನು ಜಾರಿ ಇತ್ಯಾದಿ ವಿಚಾರಗಳ ಬಗ್ಗೆ ಅವಲೋಕನ

GST Council Meeting: ಕಳೆದ ಬಾರಿ ನಡೆದ 51ನೇ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಆನ್ಲೈನ್ ಗೇಮಿಂಗ್ ಸೆಕ್ಟರ್​ನಲ್ಲಿ ಹಲವು ಪ್ರಮುಖ ತೆರಿಗೆ ಶಿಫಾರಸುಗಳನ್ನು ಮಾಡಲಾಗಿತ್ತು. ಇದಕ್ಕೆ ವಿವಿಧ ಕಾನೂನುಗಳಲ್ಲಿ ತಿದ್ದುಪಡಿಗಳನ್ನು ಮಾಡುವ ಅವಶ್ಯಕತೆ ಇದೆ. ಈ ತಿದ್ದುಪಡಿ ಕ್ರಮ ಆಯಾ ರಾಜ್ಯಗಳ ಕೈಯಲ್ಲಿರುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳಲ್ಲೂ ಏಕಪ್ರಕಾರದ ಕಾನೂನು ತಿದ್ದುಪಡಿಗಳಾಗಬೇಕು. ಈ ವಿಚಾರದಲ್ಲಿ ರಾಜ್ಯವಾರು ತೆಗೆದುಕೊಳ್ಳಲಾದ ಕ್ರಮಗಳನ್ನು 52ನೇ ಜಿಎಸ್​ಟಿ ಸಭೆಯಲ್ಲಿ ಅವಲೋಕಿಸಲಾಗುತ್ತದೆ.

ಜಿಎಸ್​ಟಿ ಕೌನ್ಸಿಲ್ ಸಭೆ: ಆನ್​ಲೈನ್ ಗೇಮಿಂಗ್​ಗೆ ತೆರಿಗೆ, ಎಸ್​ಜಿಎಸ್​ಟಿ ಕಾನೂನು ಜಾರಿ ಇತ್ಯಾದಿ ವಿಚಾರಗಳ ಬಗ್ಗೆ ಅವಲೋಕನ
ಜಿಎಸ್​ಟಿ ಕೌನ್ಸಿಲ್ ಸಭೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 06, 2023 | 6:37 PM

Share

ನವದೆಹಲಿ, ಅಕ್ಟೋಬರ್ 6: ಜಿಎಸ್​ಟಿ ಕೌನ್ಸಿಲ್ ಸಭೆ (GST Council Meeting) ಶನಿವಾರ ನಡೆಯುತ್ತಿದ್ದು, ಹಲವಾರು ನಿರ್ಧಾರಗಳ ತಾಂತ್ರಿಕ ತೊಡರುಗಳನ್ನು ನಿವಾರಿಸಲು ಪ್ರಯತ್ನ ಮಾಡಲಾಗುತ್ತದೆ. ಈ 52ನೇ ಜಿಎಸ್​ಟಿ ಕೌನ್ಸಿಲ್ ಸಭೆ ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿದ್ದು, ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. 51ನೇ ಜಿಎಸ್​ಟಿ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರದಲ್ಲಿ ಎಷ್ಟರಮಟ್ಟಿಗೆ ಜಾರಿಗೆ ತರಲಾಗಿದೆ ಎಂಬುದನ್ನು ಈ ಸಭೆಯಲ್ಲಿ ಚರ್ಚಿಸಲಾಗಬಹುದು. ಕ್ರಿಪ್ಟೋ ಮತ್ತು ಎನ್​ಎಫ್​ಟಿ ಟೋಕನ್​ಗಳಿಗೆ ತೆರಿಗೆ, ಇಎಸ್​ಒಪಿ ಬಗ್ಗೆ ಸ್ಪಷ್ಟನೆ, ವಿವಿಧ ರಾಜ್ಯಗಳಲ್ಲಿ ಎಸ್​ಜಿಎಸ್​ಟಿ ಕಾನೂನಿನ ಜಾರಿ ಎಷ್ಟು ಆಗಿದೆ ಇವೇ ನಾಳೆಯ ಸಭೆಯ ಅಜೆಂಡಾ ಆಗಿದೆ.

ಕಳೆದ ಬಾರಿ ನಡೆದ 51ನೇ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಆನ್ಲೈನ್ ಗೇಮಿಂಗ್ ಸೆಕ್ಟರ್​ನಲ್ಲಿ ಹಲವು ಪ್ರಮುಖ ತೆರಿಗೆ ಶಿಫಾರಸುಗಳನ್ನು ಮಾಡಲಾಗಿತ್ತು. ಇದಕ್ಕೆ ವಿವಿಧ ಕಾನೂನುಗಳಲ್ಲಿ ತಿದ್ದುಪಡಿಗಳನ್ನು ಮಾಡುವ ಅವಶ್ಯಕತೆ ಇದೆ. ಈ ತಿದ್ದುಪಡಿ ಕ್ರಮ ಆಯಾ ರಾಜ್ಯಗಳ ಕೈಯಲ್ಲಿರುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳಲ್ಲೂ ಏಕಪ್ರಕಾರದ ಕಾನೂನು ತಿದ್ದುಪಡಿಗಳಾಗಬೇಕು. ಈ ವಿಚಾರದಲ್ಲಿ ರಾಜ್ಯವಾರು ತೆಗೆದುಕೊಳ್ಳಲಾದ ಕ್ರಮಗಳನ್ನು ಅವಲೋಕಿಸಲಾಗುತ್ತದೆ.

ಇದನ್ನೂ ಓದಿ: ಚಲಾವಣೆಯಿಂದ ಹಿಂಪಡೆಯಲಾದ 2,000 ರೂ ನೋಟುಗಳಲ್ಲಿ ಈವರೆಗೆ ಮರಳಿರುವುದು ಎಷ್ಟು? ಆರ್​ಬಿಐ ನೀಡಿದ ಮಾಹಿತಿ ಇದು

ವರದಿಗಳ ಪ್ರಕಾರ, ಕೆಲ ರಾಜ್ಯಗಳಲ್ಲಿ ನಿರೀಕ್ಷಿತ ಕಾನೂನು ತಿದ್ದುಪಡಿಗಳಾಗಿಲ್ಲ. ಈ ವಿಚಾರದಲ್ಲಿ ರಾಜ್ಯಗಳು ಎದುರಿಸುತ್ತಿರುವ ತೊಡಕುಗಳು, ಅವುಗಳ ಆಕ್ಷೇಪಣೆಗಳು ಇತ್ಯಾದಿ ತೊಡರುಗಳನ್ನು ಜಿಎಸ್​ಟಿ ಸಭೆಯಲ್ಲಿ ಚರ್ಚಿಸಿ ಸಮಸ್ಯೆಗೆ ಪರಿಹಾರ ತರಲು ಪ್ರಯತ್ನಿಸಬಹುದು ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.

ಆನ್​ಲೈನ್ ಗೇಮಿಂಗ್​ಗೆ ಶೇ. 28ರಷ್ಟು ಜಿಎಸ್​ಟಿ ವಿಧಿಸಲಾಗುತ್ತಿದೆ. ಇದನ್ನು ಜಾರಿಗೆ ತರಲು ಇರುವ ತೊಡಕುಗಳನ್ನು ಜಿಎಸ್​ಟಿ ಸಭೆಯಲ್ಲಿ ಪರಿಶೀಲಿಸಿ ಅದಕ್ಕೆ ಪರಿಹಾರ ಹುಡುಕಬಹುದು ಎನ್ನಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು