ತೆರಿಗೆ ಕಳ್ಳತನ ಆರೋಪ; ಆನ್ಲೈನ್ ಗೇಮಿಂಗ್ ಕಂಪನಿಗಳಿಗೆ 1 ಲಕ್ಷಕೋಟಿ ರೂ ಲೆಕ್ಕ ಕೇಳಿ ಶೋಕಾಸ್ ನೋಟೀಸ್

GST Notice To Online Gaming Companies: ಇಲ್ಲಿಯವರೆಗೆ 1 ಲಕ್ಷ ಕೋಟಿ ರೂ ಮೊತ್ತದ ತೆರಿಗೆ ವಂಚನೆ ಬಗ್ಗೆ ಆನ್ಲೈನ್ ಗೇಮಿಂಗ್ ಕಂಪನಿಗಳಿಗೆ ಸೆಪ್ಟೆಂಬರ್​ನಲ್ಲಿ ಶೋಕಾಸ್ ನೋಟೀಸ್ ಜಾರಿ ಮಾಡಲಾಗಿದೆ. ಡ್ರೀಮ್11 ಮೊದಲಾದ ಆನ್ಲೈನ್ ಗೇಮಿಂಗ್ ಕಂಪನಿಗಳು, ಡೆಲ್ಟಾ ಕಾರ್ಟ್ ಇತ್ಯಾದಿ ಕ್ಯಾಸಿನೋ ಆಪರೇಟಿಂಗ್ ಕಂಪನಿಗಳಿಗೆ ಜಿಎಸ್​ಟಿ ಇಲಾಖೆ ನೋಟೀಸ್ ಕೊಟ್ಟಿದೆ. 2022ರ ಸೆಪ್ಟೆಂಬರ್​ನಲ್ಲಿ ಗೇಮ್ಸ್​ಕ್ರಾಫ್ಟ್ ಎಂಬ ಕಂಪನಿ 21,000 ಕೋಟಿ ರೂ ಜಿಎಸ್​ಟಿ ತೆರಿಗೆ ಕಟ್ಟಿಲ್ಲವೆಂದು ಆರೋಪಿಸಿ ನೋಟೀಸ್ ಕೊಡಲಾಗಿತ್ತು. ಆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಗೇಮ್ಸ್​ಕ್ರಾಫ್ಟ್ ಪರವಾಗಿ ತಿರ್ಪು ನೀಡಿತ್ತು.

ತೆರಿಗೆ ಕಳ್ಳತನ ಆರೋಪ; ಆನ್ಲೈನ್ ಗೇಮಿಂಗ್ ಕಂಪನಿಗಳಿಗೆ 1 ಲಕ್ಷಕೋಟಿ ರೂ ಲೆಕ್ಕ ಕೇಳಿ ಶೋಕಾಸ್ ನೋಟೀಸ್
ಜಿಎಸ್​ಟಿ
Follow us
|

Updated on: Oct 25, 2023 | 2:52 PM

ನವದೆಹಲಿ, ಅಕ್ಟೋಬರ್ 25: ತೆರಿಗೆ ಕಳ್ಳತನ ಮಾಡಲಾಗಿದೆ ಎಂದು ವಿವಿಧ ಆನ್ಲೈನ್ ಗೇಮಿಂಗ್ ಕಂಪನಿಗಳ ವಿರುದ್ಧ ಜಿಎಸ್​ಟಿ ಅಧಿಕಾರಿಗಳು ಶೋಕಾಸ್ ನೋಟೀಸ್ (show cause notice) ನೀಡಿದ್ದಾರೆ. ಈ ಕಂಪನಿಗಳಿಂದ ಆಗಿರುವ ತೆರಿಗೆ ವಂಚನೆಯ ಒಟ್ಟು ಮೊತ್ತ 1 ಲಕ್ಷಕೋಟಿ ರೂ ಎಂದೆನ್ನಲಾಗಿದೆ. ವಿವಿಧ ಅವಧಿಗಳಲ್ಲಿ ಈ ಸಂಸ್ಥೆಗಳಿಗೆ ಶೋಕಾಸ್ ನೋಟೀಸ್ ನೀಡಲಾಗಿದೆ. ಒಂದು ವರ್ಷದ ಹಿಂದೆ, 2022ರ ಸೆಪ್ಟೆಂಬರ್​ನಲ್ಲಿ ಗೇಮ್ಸ್​ಕ್ರಾಫ್ಟ್ ಎಂಬ ಕಂಪನಿ 21,000 ಕೋಟಿ ರೂ ಜಿಎಸ್​ಟಿ ತೆರಿಗೆ ಕಟ್ಟಿಲ್ಲವೆಂದು ಆರೋಪಿಸಿ ನೋಟೀಸ್ ಕೊಡಲಾಗಿತ್ತು. ಆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಗೇಮ್ಸ್​ಕ್ರಾಫ್ಟ್ ಪರವಾಗಿ ತಿರ್ಪು ನೀಡಿತ್ತಾದರೂ ಕೇಂದ್ರ ಸರ್ಕಾರ ಸುಪ್ರೀಮ್ ಕೋರ್ಟ್​ನಲ್ಲಿ ಸ್ಪೆಷಲ್ ಲೀವ್ ಪೆಟಿಶನ್ ಹಾಕಿದೆ.

ಗೇಮ್ಸ್​ಕ್ರಾಫ್ಟ್ ಮಾತ್ರವಲ್ಲದೇ ಡ್ರೀಮ್11 ಮೊದಲಾದ ಆನ್ಲೈನ್ ಗೇಮಿಂಗ್ ಕಂಪನಿಗಳು, ಡೆಲ್ಟಾ ಕಾರ್ಟ್ ಇತ್ಯಾದಿ ಕ್ಯಾಸಿನೋ ಆಪರೇಟಿಂಗ್ ಕಂಪನಿಗಳಿಗೆ ಇದೇ ಸೆಪ್ಟೆಂಬರ್ ತಿಂಗಳಲ್ಲಿ ಜಿಎಸ್​ಟಿ ಇಲಾಖೆಯಿಂದ ಶೋಕಾಸ್ ನೋಟೀಸ್ ಜಾರಿ ಮಾಡಲಾಗಿದೆ.

‘ಇಲ್ಲಿಯವರೆಗೆ 1 ಲಕ್ಷ ಕೋಟಿ ರೂ ಮೊತ್ತದ ತೆರಿಗೆ ವಂಚನೆ ಬಗ್ಗೆ ಆನ್ಲೈನ್ ಗೇಮಿಂಗ್ ಕಂಪನಿಗಳಿಗೆ ನೋಟೀಸ್ ಸಲ್ಲಿಸಲಾಗಿದೆ,’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ ವಿವಿಧ ಮಾಧ್ಯಮಗಳು ಉಲ್ಲೇಖಿಸಿ ವರದಿ ಮಾಡಿವೆ.

ಇದನ್ನೂ ಓದಿ: ಪಿಎಂ ಸ್ವನಿಧಿ ಯೋಜನೆಯ ಲಾಭ ಪಡೆದವರಲ್ಲಿ ಸಾಮಾನ್ಯೇತರ ವರ್ಗದವರು, ಮಹಿಳೆಯರೇ ಹೆಚ್ಚು, ಎಸ್​​ಬಿಐ ಸಂಶೋಧನಾ ವರದಿ: ಮೋದಿ ಮೆಚ್ಚುಗೆ

ವಿದೇಶೀ ಕಂಪನಿಗಳ ನೊಂದಣಿ

ವಿದೇಶದ ಆನ್ಲೈನ್ ಗೇಮಿಂಗ್ ಕಂಪನಿಗಳು ಭಾರತದಲ್ಲಿ ನೊಂದಣಿ ಆಗಬೇಕೆಂದು ಕಡ್ಡಾಯಪಡಿಸಿ ಜಿಎಸ್​ಟಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಅಕ್ಟೋಬರ್ 1ರಿಂದ ಈ ನಿಯಮ ಜಾರಿಯಲ್ಲಿದೆ. ಆದರೆ, ಇಲ್ಲಿಯವರೆಗೆ ಯಾವ್ಯಾವ ವಿದೇಶೀ ಗೇಮಿಂಗ್ ಕಂಪನಿಗಳು ಭಾರತದಲ್ಲಿ ನೊಂದಣಿ ಮಾಡಿಕೊಂಡಿವೆ ಎಂಬ ಮಾಹಿತಿ ಸದ್ಯಕ್ಕೆ ದೊರೆತಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ