ತೆರಿಗೆ ಕಳ್ಳತನ ಆರೋಪ; ಆನ್ಲೈನ್ ಗೇಮಿಂಗ್ ಕಂಪನಿಗಳಿಗೆ 1 ಲಕ್ಷಕೋಟಿ ರೂ ಲೆಕ್ಕ ಕೇಳಿ ಶೋಕಾಸ್ ನೋಟೀಸ್

GST Notice To Online Gaming Companies: ಇಲ್ಲಿಯವರೆಗೆ 1 ಲಕ್ಷ ಕೋಟಿ ರೂ ಮೊತ್ತದ ತೆರಿಗೆ ವಂಚನೆ ಬಗ್ಗೆ ಆನ್ಲೈನ್ ಗೇಮಿಂಗ್ ಕಂಪನಿಗಳಿಗೆ ಸೆಪ್ಟೆಂಬರ್​ನಲ್ಲಿ ಶೋಕಾಸ್ ನೋಟೀಸ್ ಜಾರಿ ಮಾಡಲಾಗಿದೆ. ಡ್ರೀಮ್11 ಮೊದಲಾದ ಆನ್ಲೈನ್ ಗೇಮಿಂಗ್ ಕಂಪನಿಗಳು, ಡೆಲ್ಟಾ ಕಾರ್ಟ್ ಇತ್ಯಾದಿ ಕ್ಯಾಸಿನೋ ಆಪರೇಟಿಂಗ್ ಕಂಪನಿಗಳಿಗೆ ಜಿಎಸ್​ಟಿ ಇಲಾಖೆ ನೋಟೀಸ್ ಕೊಟ್ಟಿದೆ. 2022ರ ಸೆಪ್ಟೆಂಬರ್​ನಲ್ಲಿ ಗೇಮ್ಸ್​ಕ್ರಾಫ್ಟ್ ಎಂಬ ಕಂಪನಿ 21,000 ಕೋಟಿ ರೂ ಜಿಎಸ್​ಟಿ ತೆರಿಗೆ ಕಟ್ಟಿಲ್ಲವೆಂದು ಆರೋಪಿಸಿ ನೋಟೀಸ್ ಕೊಡಲಾಗಿತ್ತು. ಆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಗೇಮ್ಸ್​ಕ್ರಾಫ್ಟ್ ಪರವಾಗಿ ತಿರ್ಪು ನೀಡಿತ್ತು.

ತೆರಿಗೆ ಕಳ್ಳತನ ಆರೋಪ; ಆನ್ಲೈನ್ ಗೇಮಿಂಗ್ ಕಂಪನಿಗಳಿಗೆ 1 ಲಕ್ಷಕೋಟಿ ರೂ ಲೆಕ್ಕ ಕೇಳಿ ಶೋಕಾಸ್ ನೋಟೀಸ್
ಜಿಎಸ್​ಟಿ

Updated on: Oct 25, 2023 | 2:52 PM

ನವದೆಹಲಿ, ಅಕ್ಟೋಬರ್ 25: ತೆರಿಗೆ ಕಳ್ಳತನ ಮಾಡಲಾಗಿದೆ ಎಂದು ವಿವಿಧ ಆನ್ಲೈನ್ ಗೇಮಿಂಗ್ ಕಂಪನಿಗಳ ವಿರುದ್ಧ ಜಿಎಸ್​ಟಿ ಅಧಿಕಾರಿಗಳು ಶೋಕಾಸ್ ನೋಟೀಸ್ (show cause notice) ನೀಡಿದ್ದಾರೆ. ಈ ಕಂಪನಿಗಳಿಂದ ಆಗಿರುವ ತೆರಿಗೆ ವಂಚನೆಯ ಒಟ್ಟು ಮೊತ್ತ 1 ಲಕ್ಷಕೋಟಿ ರೂ ಎಂದೆನ್ನಲಾಗಿದೆ. ವಿವಿಧ ಅವಧಿಗಳಲ್ಲಿ ಈ ಸಂಸ್ಥೆಗಳಿಗೆ ಶೋಕಾಸ್ ನೋಟೀಸ್ ನೀಡಲಾಗಿದೆ. ಒಂದು ವರ್ಷದ ಹಿಂದೆ, 2022ರ ಸೆಪ್ಟೆಂಬರ್​ನಲ್ಲಿ ಗೇಮ್ಸ್​ಕ್ರಾಫ್ಟ್ ಎಂಬ ಕಂಪನಿ 21,000 ಕೋಟಿ ರೂ ಜಿಎಸ್​ಟಿ ತೆರಿಗೆ ಕಟ್ಟಿಲ್ಲವೆಂದು ಆರೋಪಿಸಿ ನೋಟೀಸ್ ಕೊಡಲಾಗಿತ್ತು. ಆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಗೇಮ್ಸ್​ಕ್ರಾಫ್ಟ್ ಪರವಾಗಿ ತಿರ್ಪು ನೀಡಿತ್ತಾದರೂ ಕೇಂದ್ರ ಸರ್ಕಾರ ಸುಪ್ರೀಮ್ ಕೋರ್ಟ್​ನಲ್ಲಿ ಸ್ಪೆಷಲ್ ಲೀವ್ ಪೆಟಿಶನ್ ಹಾಕಿದೆ.

ಗೇಮ್ಸ್​ಕ್ರಾಫ್ಟ್ ಮಾತ್ರವಲ್ಲದೇ ಡ್ರೀಮ್11 ಮೊದಲಾದ ಆನ್ಲೈನ್ ಗೇಮಿಂಗ್ ಕಂಪನಿಗಳು, ಡೆಲ್ಟಾ ಕಾರ್ಟ್ ಇತ್ಯಾದಿ ಕ್ಯಾಸಿನೋ ಆಪರೇಟಿಂಗ್ ಕಂಪನಿಗಳಿಗೆ ಇದೇ ಸೆಪ್ಟೆಂಬರ್ ತಿಂಗಳಲ್ಲಿ ಜಿಎಸ್​ಟಿ ಇಲಾಖೆಯಿಂದ ಶೋಕಾಸ್ ನೋಟೀಸ್ ಜಾರಿ ಮಾಡಲಾಗಿದೆ.

‘ಇಲ್ಲಿಯವರೆಗೆ 1 ಲಕ್ಷ ಕೋಟಿ ರೂ ಮೊತ್ತದ ತೆರಿಗೆ ವಂಚನೆ ಬಗ್ಗೆ ಆನ್ಲೈನ್ ಗೇಮಿಂಗ್ ಕಂಪನಿಗಳಿಗೆ ನೋಟೀಸ್ ಸಲ್ಲಿಸಲಾಗಿದೆ,’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ ವಿವಿಧ ಮಾಧ್ಯಮಗಳು ಉಲ್ಲೇಖಿಸಿ ವರದಿ ಮಾಡಿವೆ.

ಇದನ್ನೂ ಓದಿ: ಪಿಎಂ ಸ್ವನಿಧಿ ಯೋಜನೆಯ ಲಾಭ ಪಡೆದವರಲ್ಲಿ ಸಾಮಾನ್ಯೇತರ ವರ್ಗದವರು, ಮಹಿಳೆಯರೇ ಹೆಚ್ಚು, ಎಸ್​​ಬಿಐ ಸಂಶೋಧನಾ ವರದಿ: ಮೋದಿ ಮೆಚ್ಚುಗೆ

ವಿದೇಶೀ ಕಂಪನಿಗಳ ನೊಂದಣಿ

ವಿದೇಶದ ಆನ್ಲೈನ್ ಗೇಮಿಂಗ್ ಕಂಪನಿಗಳು ಭಾರತದಲ್ಲಿ ನೊಂದಣಿ ಆಗಬೇಕೆಂದು ಕಡ್ಡಾಯಪಡಿಸಿ ಜಿಎಸ್​ಟಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಅಕ್ಟೋಬರ್ 1ರಿಂದ ಈ ನಿಯಮ ಜಾರಿಯಲ್ಲಿದೆ. ಆದರೆ, ಇಲ್ಲಿಯವರೆಗೆ ಯಾವ್ಯಾವ ವಿದೇಶೀ ಗೇಮಿಂಗ್ ಕಂಪನಿಗಳು ಭಾರತದಲ್ಲಿ ನೊಂದಣಿ ಮಾಡಿಕೊಂಡಿವೆ ಎಂಬ ಮಾಹಿತಿ ಸದ್ಯಕ್ಕೆ ದೊರೆತಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us