AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tobacco: ತಂಬಾಕು ಉತ್ಪನ್ನ ತಯಾರಿಸುವ ಯಂತ್ರಗಳ ನೊಂದಣಿ ಆಗದಿದ್ದರೆ ಲಕ್ಷ ರೂ ದಂಡ: ಆದಾಯ ಸೋರಿಕೆ ತಡೆಗೆ ಸರ್ಕಾರ ಕ್ರಮ

GST Updates: ಪಾನ್ ಮಸಾಲ, ಗುಟ್ಕಾ ತಯಾರಿಸುವ ಯಂತ್ರೋಪಕರಣಗಳನ್ನು ಜಿಎಸ್​ಟಿ ಪ್ರಾಧಿಕಾರದ ಬಳಿ ನೊಂದಾಯಿಸಬೇಕು ಎಂಬ ನಿಯಮ ಇದೆ. ಈ ಕಾನೂನನ್ನು ಪಾಲಿಸದೇ ಹೋದರೆ ಅಂಥ ಯಂತ್ರೋಪಕರಣಕ್ಕೆ ಒಂದು ಲಕ್ಷ ರೂ ದಂಡ ವಿಧಿಸುವ ಹೊಸ ಕಾನೂನು ಮಾಡಲಾಗಿದೆ. ತಂಬಾಕು ಉದ್ಯಮದಿಂದ ಬರುವ ತೆರಿಗೆ ಆದಾಯದಲ್ಲಿ ಸೋರಿಕೆ ತಡೆಯಲು ಮಾಡಿರುವ ಈ ನಿಯಮ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ.

Tobacco: ತಂಬಾಕು ಉತ್ಪನ್ನ ತಯಾರಿಸುವ ಯಂತ್ರಗಳ ನೊಂದಣಿ ಆಗದಿದ್ದರೆ ಲಕ್ಷ ರೂ ದಂಡ: ಆದಾಯ ಸೋರಿಕೆ ತಡೆಗೆ ಸರ್ಕಾರ ಕ್ರಮ
ಗುಟ್ಕಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 04, 2024 | 4:21 PM

Share

ನವದೆಹಲಿ, ಫೆ. 4: ಪಾನ್ ಮಸಾಲ, ಗುಟ್ಕಾ ಇತ್ಯಾದಿ ತಂಬಾಕು ಉತ್ಪನ್ನಗಳ (tobacco products) ತಯಾರಕರು ತಮ್ಮ ಪ್ಯಾಕಿಂಗ್ ಯಂತ್ರೋಪಕರಣವನ್ನು (packing machinery) ನೊಂದಾಯಿಸದೇ ಹೋದರೆ ಒಂದು ಲಕ್ಷ ರೂ ದಂಡ ಕಟ್ಟಬೇಕಾಗುತ್ತದೆ. ಹಾಗಂತ ಸರ್ಕಾರ ಹೊಸ ಕಟ್ಟಳೆ ಹೊರಡಿಸಿದೆ. ತಂಬಾಕು ಉದ್ಯಮದಿಂದ ಸರ್ಕಾರ ಬರುವ ಆದಾಯದಲ್ಲಿ ಸೋರಿಕೆ (Tax evasion) ತಡೆಯುವ ಯತ್ನವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್ 1ರಿಂದ ಈ ಹೊಸ ಕಾನೂನು ಜಾರಿಗೆ ಬರುತ್ತದೆ. ತಂಬಾಕು ಉತ್ಪನ್ನ ತಯಾರಿಸುವ ಯಂತ್ರವನ್ನು ಜಿಎಸ್​ಟಿ ಪ್ರಾಧಿಕಾರದಲ್ಲಿ ನಮೂದಿಸುವುದು ಕಡ್ಡಾಯವಾಗಿರಲಿದೆ. ಈ ಮುಂಚೆಯೇ ಈ ನಿಯಮ ಇತ್ತಾದರೂ ಬಹಳಷ್ಟು ಮಂದಿ ಇದನ್ನು ಪಾಲಿಸುತ್ತಿರಲಿಲ್ಲ. ಈಗ ಕೇಂದ್ರೀಯ ಜಿಎಸ್​ಟಿ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು ಅದರಂತೆ ಒಂದು ಲಕ್ಷ ರೂ ದಂಡ ವಿಧಿಸುವ ಕ್ರಮ ಸೇರಿಸಲಾಗಿದೆ.

2024ರ ಹಣಕಾಸು ಮಸೂದೆಯಲ್ಲಿ ಈ ಜಿಎಸ್​ಟಿ ಕಾಯ್ದೆಗೆ ತಿದ್ದುಪಡಿ ಇದೆ. ಯಂತ್ರೋಪಕರಣವನ್ನು ನೊಂದಾಯಿಸದೇ ಹೋದಲ್ಲಿ ಒಂದು ಲಕ್ಷ ರೂ ದಂಡ ವಿಧಿಸುವುದರ ಒತೆಗೆ ಆ ಯಂತ್ರೋಪಕರಣವನ್ನೇ ಜಫ್ತಿ ಮಾಡಿಕೊಳ್ಳುವ ಅಧಿಕಾರವನ್ನು ಜಿಎಸ್​ಟಿ ಅಧಿಕಾರಿಗಳು ಹೊಂದಿರುತ್ತಾರೆ.

ಇದನ್ನೂ ಓದಿ: ವರ್ಕ್ ಫ್ರಂ ಹೋಮ್ ಬೇಡ ಎಂದ ಸಾಫ್ಟ್​ವೇರ್ ಕಂಪನಿ ವಿರುದ್ಧ ತಿರುಗಿಬಿದ್ದ 5,000ಕ್ಕೂ ಹೆಚ್ಚು ಉದ್ಯೋಗಿಗಳು

ಯಂತ್ರೋಪಕರಣ ನೊಂದಾಯಿಸುವುದನ್ನು ಕಡ್ಡಾಯ ಪಡಿಸಿರುವುದು ಯಾಕೆ?

ಪಾನ್ ಮಸಾಲ ಮತ್ತು ಗುಟ್ಕಾ ವ್ಯವಹಾರದಲ್ಲಿ ತೆರಿಗೆ ಕಳ್ಳತನ ಆಗುತ್ತಿರುವುದು ಬೆಳಕಿಗೆ ಬಂದಿತ್ತು. ಈ ತೆರಿಗೆ ಆದಾಯ ಸೋರಿಕೆ ಆಗುವುದನ್ನು ತಡೆಯಲು ರಾಜ್ಯ ಹಣಕಾಸು ಸಚಿವರನ್ನೊಳಗೊಂಡ ಸಮಿತಿ ವರದಿ ಮಂಡಿಸಿತ್ತು. ಕಳೆದ ವರ್ಷ (2023) ಫೆಬ್ರುವರಿಯಲ್ಲಿ ನಡೆದ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಈ ವರದಿಗೆ ಅನುಮೋದನೆ ಕೊಡಲಾಯಿತು. ಯಂತ್ರೋಪಕರಣಗಳನ್ನು ಜಿಎಸ್​ಟಿ ಪ್ರಾಧಿಕಾರದಲ್ಲಿ ನೊಂದಾಯಿಸುವುದನ್ನು ಕಡ್ಡಾಯಗೊಳಿಸಬೇಕೆಂಬ ಸಲಹೆ ಆ ವರದಿಯಲ್ಲಿ ತಿಳಿಸಲಾಗಿತ್ತು.

ಆದರೂ ಕೂಡ ಬಹಳಷ್ಟು ಗುಟ್ಕಾ ಕಂಪನಿಗಳು ಈ ನಿಯಮ ಪಾಲಿಸುತ್ತಿಲ್ಲ ಎಂಬುದು ಗೊತ್ತಾಯಿತು. ಹೀಗಾಗಿ, ಹಣಕಾಸು ಮಸೂದೆ ಮೂಲಕ ಕಾನೂನಿನಲ್ಲಿ ತಿದ್ದುಪಡಿ ತಂದು, ನೊಂದಣಿಯಾದ ಪ್ರತಿಯೊಂದು ಯಂತ್ರೋಪಕರಣಕ್ಕೂ ಒಂದು ಲಕ್ಷ ರೂ ದಂಡ ಹಾಕುವ ಕ್ರಮ ಘೋಷಿಸಲಾಗಿದೆ. ಮಾರ್ಚ್ 31ರವರೆಗೂ ಇದಕ್ಕೆ ಕಾಲಾವಕಾಶ ಇದೆ.

ಇದನ್ನೂ ಓದಿ: ಕೇವಲ 27ರ ವಯಸ್ಸಿಗೆ ಬಿಲಿಯನೇರ್ ಆದ ಪರ್ಲ್ ಕಪೂರ್; ಇವರು ಕಟ್ಟಿದ ಝೈಬರ್ 365 ಏಷ್ಯಾದ ಅತಿವೇಗದ ಯೂನಿಕಾರ್ನ್

ತಂಬಾಕು ಉತ್ಪನ್ನಗಳ ಯಂತ್ರೋಪಕರಣ ನೊಂದಾಯಿಸುವುದು ಹೇಗೆ?

ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಸುವ ಪ್ರತಿಯೊಂದು ಯಂತ್ರ ಹಾಗೂ ಅದರ ಉತ್ಪನ್ನ ಸಾಮರ್ಥ್ಯದ ವಿವರವನ್ನು ಜಿಎಸ್​ಟಿ ಎಸ್​ಆರ್​ಎಂ-1 ಫಾರ್ಮ್​ನಲ್ಲಿ ನಮೂದಿಸಬೇಕು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ