Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರದ ಮೇಲೆ ಜಿಎಸ್​ಟಿ ಹೇರಿಕೆ; ನಾಳೆ ಯಶವಂತಪುರ ಎಪಿಎಂಸಿ ಬಂದ್, ಅಕ್ಕಿಗಿರಣಿ ಮಾಲೀಕರ ಸಂಘದಿಂದ ಪ್ರತಿಭಟನೆ

ಗೋಧಿ, ಅಕ್ಕಿ, ಬೇಳೆಕಾಳುಗಳಿಗೆ ಕೇಂದ್ರ ಸರ್ಕಾರವು ಶೇ 5ರ ಜಿಎಸ್​ಟಿ ಹೇರಿರುವುದನ್ನು ವರ್ತಕರು ಹಾಗೂ ಕಾರ್ಮಿಕ ಸಂಘಟನೆಗಳು ಖಂಡಿಸಿವೆ.

ಆಹಾರದ ಮೇಲೆ ಜಿಎಸ್​ಟಿ ಹೇರಿಕೆ; ನಾಳೆ ಯಶವಂತಪುರ ಎಪಿಎಂಸಿ ಬಂದ್, ಅಕ್ಕಿಗಿರಣಿ ಮಾಲೀಕರ ಸಂಘದಿಂದ ಪ್ರತಿಭಟನೆ
ಜಿಎಸ್​ಟಿ ಹೇರಿಕೆ ಖಂಡಿಸಿ ಯಶವಂತಪುರ ಎಪಿಎಂಸಿ ವರ್ತಕರು, ಕಾರ್ಮಿಕರು ಪ್ರತಿಭಟನೆಗೆ ಮುಂದಾಗಿದ್ದಾರೆ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 14, 2022 | 8:00 AM

ಬೆಂಗಳೂರು: ಕೇಂದ್ರ ಸರ್ಕಾರವು ಆಹಾರ ಧಾನ್ಯಗಳ ಮೇಲೆಯೂ ಶೇ 5ರಷ್ಟು ಸರಕು ಸೇವಾ ಸುಂಕ (Goods and Service Tax – GST) ವಿಧಿಸಿರುವುದನ್ನು ಖಂಡಿಸಿ ಕೃಷಿ ಮಾರುಕಟ್ಟೆ ವಹಿವಾಟಿನಲ್ಲಿ ತೊಡಗಿಸಿಕೊಂಡಿರುವ ಹಲವು ಸಂಘಟನೆಗಳು ಎಪಿಎಂಸಿ ಶುಕ್ರವಾರ (ಜುಲೈ 15) ಯಾರ್ಡ್​ ಬಂದ್​ಗೆ ಕರೆ ಕೊಟ್ಟಿವೆ. ಯಶವಂತಪುರ ಎಪಿಎಂಸಿಯ ಮಾಲೀಕರು, ವರ್ತಕರು, ಕಾರ್ಮಿಕ ಸಂಘಟನೆಗಳು ಬಂದ್​ ಕರೆಗೆ ಬೆಂಬಲ ಘೋಷಿಸಿವೆ. ಗೋಧಿ, ಅಕ್ಕಿ, ಬೇಳೆಕಾಳುಗಳಿಗೆ ಕೇಂದ್ರ ಸರ್ಕಾರವು ಶೇ 5ರ ಜಿಎಸ್​ಟಿ ಹೇರಿರುವುದನ್ನು ವರ್ತಕರು ಹಾಗೂ ಕಾರ್ಮಿಕ ಸಂಘಟನೆಗಳು ಖಂಡಿಸಿವೆ. ಕೇಂದ್ರದ ನಿರ್ಧಾರ ವಿರೋಧಿಸಿ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಯಾರ್ಡ್ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಲು ಮುಂದಾಗಿದ್ದಾರೆ. ನಾನ್ ಬ್ರಾಂಡೆಡ್ ವಸ್ತುಗಳ ವರ್ತಕರಿಗೆ ಸರ್ಕಾರದ ಹೊಸ ನಡೆಯಿಂದ ಬಹಳ ದೊಡ್ಡ ನಷ್ಟವಾಗಲಿದೆ ಎಂದು ಎಪಿಎಂಸಿ ವ್ಯಾಪಾರಿಗಳು ಹೇಳಿದ್ದಾರೆ.

ಆಹಾರ ಧಾನ್ಯಗಳ ಮೇಲೆ ಶೇ 5ರ ಜಿಎಸ್​ಟಿ ವಿರೋಧಿಸಿ ನಾಳೆ ರಾಜ್ಯ ಅಕ್ಕಿ ಗಿರಣಿದಾರರ ಸಂಘವು ಜುಲೈ 15ರಂದು ಧರಣಿಗೆ ನಿರ್ಧರಿಸಲಾಗಿದೆ. ರಾಜ್ಯದಾದ್ಯಂತ ಎಲ್ಲ ಚಟುವಟಿಕೆಗಳನ್ನ ನಿಲ್ಲಿಸಿ ಪ್ರತಿಭಟನೆ ನಡೆಸಲಾಗುವುದು. ಕೇಂದ್ರ ಸರ್ಕಾರವು ಕೂಡಲೇ ಈ ಪ್ರಸ್ತಾವನೆಯನ್ನು ಹಿಂಪಡೆಯಬೇಕು. ಜಿಎಸ್​ಟಿ ಕೌನ್ಸಿಲ್ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು ಎಂದು ಸಂಘಟನೆಯ ಪ್ರತಿನಿಧಿಗಳು ಮನವಿ ಮಾಡಿದ್ದಾರೆ.

ಅಕ್ಕಿ ಗಿರಣಿದಾರರ ಸಂಘದ ಪ್ರತಿಭಟನೆಗೆ ದಿ ಬೆಂಗಳೂರು ಹೋಲ್ ಸೇಲ್ ಫುಡ್ ಅಂಡ್ ಗ್ರೇನ್ಸ್ ಅಂಡ ಪಲ್ಸಸ್ (ಮರ್ಚೆಂಟ್ಸ್ ಅಸೋಸಿಯೇಷನ್), ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಅಸೋಸಿಯೇಷನ್, ಕರ್ನಾಟಕ ರೋಲರ್ ಫ್ಲೋರ್ ಮಿಲ್ಲರ್ಸ್ ಅಸೋಸಿಯೇಷನ್, ನ್ಯೂ ತರಗುಪೇಟೆ ಮರ್ಚೆಂಟ್ಸ್ ಅಸೋಸಿಯೇಷನ್ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಉಡುಪಿ ಜಿಲ್ಲೆಯ ಅಕ್ಕಿಗಿರಣಿದಾರರ ಸಂಘವೂ ಧರಣಿಗೆ ಬೆಂಬಲ ವ್ಯಕ್ತಪಡಿಸಿದೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಜಿಎಸ್​ಟಿ ಮಂಡಳಿಯು ಆಹಾರ ಧಾನ್ಯಗಳ ಮೇಲೆ ವಿಧಿಸಿರುವ ಶೇ 5ರ ಜಿಎಸ್​ಟಿ ತೆರಿಗೆಯು ಜುಲೈ 18ರಿಂದ ಜಾರಿಗೆ ಬರಲಿದೆ. ಈ ತೆರಿಗೆಯಿಂದ ಅಕ್ಕಿ, ಜೋಳ, ರಾಗಿಯಂಥ ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗಲಿದೆ. ಈಗಾಗಲೇ ಹಣದುಬ್ಬರದಿಂದ ಕಂಗಾಲಾಗಿರುವ ಕಾರ್ಮಿಕರು, ಬಡವರು, ಮಧ್ಯಮವರ್ಗದ ಜನರು ಹೊಸ ಹೊರೆಯನ್ನು ಸಹಿಸಿಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ತೆರಿಗೆ ಹೇರುವ ನಿರ್ಧಾರ ಹಿಂಪಡೆಯಬೇಕು ಎಂದು ಸಂಘವು ಆಗ್ರಹಿಸಿದರು.

ಆಹಾರ ಧಾನ್ಯಗಳ ಮೇಲಿನ ತೆರಿಗೆ ತೆಗೆಯುವಂತೆ ಹಲವು ಬಾರಿ ಮನವಿ ನೀಡಿದರೂ ಜಿಎಸ್​ಟಿಯ ಕೇಂದ್ರ ಮತ್ತು ರಾಜ್ಯ ಕಚೇರಿಗಳಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಹೀಗಾಗಿ ಅನಿವಾರ್ಯವಾಗಿ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ. ಜುಲೈ 15 ಮತ್ತು 16ರಂದು ಅಕ್ಕಿಗಿರಣಿಗಳಿಗೆ ಸಂಬಂಧಿಸಿದ ಎಲ್ಲ ರೀತಿಯ ವಹಿವಾಟುಗಳನ್ನು ಸಂಪೂರ್ಣ ಬಂದ್ ಮಾಡಲಾಗುವುದು. ಪ್ರತಿಭಟನೆ ನಡೆಸಿದ ನಂತರ ತೆರಿಗೆ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಅಕ್ಕಿಗಿರಣಿದಾರರ ಸಂಘದ ಮುಖಂಡರಾದ ರಮೇಶ್ ನಾಯಕ್ ಹೇಳಿದ್ದಾರೆ.

Published On - 8:00 am, Thu, 14 July 22

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು