AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಷೂರೆನ್ಸ್ ಮೇಲೆ ಜಿಎಸ್​ಟಿ ಎಷ್ಟಿರಬೇಕು? 13 ಸಚಿವರ ಸಮಿತಿ ರಚನೆ; ಅ. 30ಕ್ಕೆ ವರದಿ ಸಲ್ಲಿಕೆ

Insurance GST rate revision: ಲೈಫ್ ಇನ್ಷೂರೆನ್ಸ್ ಮತ್ತು ಹೆಲ್ತ್ ಇನ್ಷೂರೆನ್ಸ್ ಪ್ಲಾನ್​ಗಳ ಪ್ರೀಮಿಯಮ್ ಹಣಕ್ಕೆ ವಿಧಿಸಲಾಗುತ್ತಿರುವ ಜಿಎಸ್​​ಟಿ ತೆರಿಗೆ ದರ ಪರಿಷ್ಕರಿಸಲು ಸರ್ಕಾರ ಮುಂದಾಗಿದೆ. ಜಿಎಸ್​ಟಿ ಮಂಡಳಿ ಸೆ. 15ರಂದು 13 ರಾಜ್ಯಗಳ ಗ್ರೂಪ್ ಆಫ್ ಮಿನಿಸ್ಟರ್ಸ್ ಒಳಗೊಂಡ ಸಮಿತಿಯೊಂದನ್ನು ರಚಿಸಿದೆ. ಅಕ್ಟೋಬರ್ 30ರೊಳಗೆ ಈ ಜಿಒಎಂ ತನ್ನ ವರದಿಯನ್ನು ಸಲ್ಲಿಸಲಿದೆ. ಇದರ ಶಿಫಾರಸುಗಳ ಆಧಾರದ ಮೇಲೆ ನವೆಂಬರ್​ನಲ್ಲಿ ಜಿಎಸ್​ಟಿ ಮಂಡಳಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದೆ.

ಇನ್ಷೂರೆನ್ಸ್ ಮೇಲೆ ಜಿಎಸ್​ಟಿ ಎಷ್ಟಿರಬೇಕು? 13 ಸಚಿವರ ಸಮಿತಿ ರಚನೆ; ಅ. 30ಕ್ಕೆ ವರದಿ ಸಲ್ಲಿಕೆ
ಇನ್ಷೂರೆನ್ಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 16, 2024 | 12:41 PM

Share

ನವದೆಹಲಿ, ಸೆಪ್ಟೆಂಬರ್ 16: ಆರೋಗ್ಯ ವಿಮೆ ಮತ್ತು ಜೀವ ವಿಮೆಗಳ ಪ್ರೀಮಿಯಮ್ ಹಣದ ಮೇಲೆ ಶೇ. 18ರಷ್ಟಿರುವ ಜಿಎಸ್​ಟಿ ದರವನ್ನು ತೆಗೆದುಹಾಕಬೇಕು ಅಥವಾ ಕಡಿಮೆ ಮಾಡಬೇಕು ಎನ್ನುವ ಒತ್ತಾಯ ಎಲ್ಲೆಡೆ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ದರ ಪರಿಷ್ಕರಣೆಗಾಗಿ ಸಮಿತಿಯೊಂದನ್ನು ರಚಿಸಲಾಗಿದೆ. ನಿನ್ನೆ ಭಾನುವಾರ ಜಿಎಸ್​ಟಿ ಕೌನ್ಸಿಲ್ 13 ಸಚಿವರ ಸಮಿತಿಯೊಂದನ್ನು (ಜಿಒಎಂ) ರಚಿಸಿದೆ. ಈ ಸಮಿತಿಯು ಸರಕು ಮತ್ತು ಸೇವಾ ತೆರಿಗೆ ಮಂಡಳಿಗೆ ತನ್ನ ವರದಿಯನ್ನು ಅಕ್ಟೋಬರ್ 30ರೊಳಗೆ ಸಲ್ಲಿಸುವ ನಿರೀಕ್ಷೆ ಇದೆ. ಸೆಪ್ಟೆಂಬರ್ 9ರಂದು ನಡೆದ 65ನೇ ಜಿಎಸ್​ಟಿ ಮಂಡಳಿ ಸಭೆಯಲ್ಲಿ ಇನ್ಷೂರೆನ್ಸ್ ಪ್ರೀಮಿಯಮ್ ಮೇಲಿನ ಜಿಎಸ್​ಟಿ ದರವನ್ನು ಪರಿಶೀಲಿಸಿ ಪರಿಷ್ಕರಣೆ ನಡೆಸಲು ಗ್ರೂಪ್ ಆಫ್ ಮಿನಿಸ್ಟರ್ಸ್ ಅನ್ನು ಸ್ಥಾಪಿಸಲು ನಿರ್ಧರಿಸಲಾಗಿತ್ತು.

ಅ. 30ಕ್ಕೆ ಈ ಸಚಿವರ ಸಮಿತಿ ತನ್ನ ಶಿಫಾರಸುಗಳನ್ನು ಸಲ್ಲಿಸುವ ನಿರೀಕ್ಷೆ ಇದೆ. ಈ ಜಿಒಎಂ ವರದಿಯಲ್ಲಿನ ಅಂಶಗಳ ಆಧಾರದ ಮೇಲೆ ಜಿಎಸ್​ಟಿ ಮಂಡಳಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದೆ. ನವೆಂಬರ್​ನಲ್ಲಿ ಜಿಎಸ್​ಟಿ ಮಂಡಳಿಯ 55ನೇ ಸಭೆ ನಡೆಯಲಿದೆ.

ಇದನ್ನೂ ಓದಿ: UPI Transaction Limit: ಕೆಲ ಯುಪಿಐ ಪಾವತಿ ಮಿತಿ 5 ಲಕ್ಷ ರೂಗೆ ಹೆಚ್ಚಳ; ಇವತ್ತಿನಿಂದ ಅಪ್​ಡೇಟೆಡ್ ಸೌಲಭ್ಯ ಜಾರಿ

ಕರ್ನಾಟಕದ ಸದಸ್ಯರಿದ್ದಾರೆ ಜಿಒಎಂನಲ್ಲಿ

ಇನ್ಷೂರೆನ್ಸ್ ಮೇಲಿನ ಜಿಎಸ್​ಟಿಯನ್ನು ಪರಿಶೀಲಿಸಲು ರಚಿಸಲಾಗಿರುವ ಸಚಿವರ ಸಮಿತಿಯಲ್ಲಿ 13 ರಾಜ್ಯಗಳ ಪ್ರತಿನಿಧಿಗಳಿದ್ದಾರೆ. ಕರ್ನಾಟಕ, ಬಿಹಾರ, ಉತ್ತರಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಕೇರಳ, ಆಂಧ್ರಪ್ರದೇಶ, ಗೋವಾ, ಗುಜರಾತ್, ಮೇಘಾಲಯ, ಪಂಜಾಬ್, ತಮಿಳುನಾಡು ಮತ್ತು ತೆಲಂಗಾಣ ರಾಜ್ಯಗಳ ಸದಸ್ಯರು ಈ ಸಮಿತಿಯಲ್ಲಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಜಿಒಎಂನ ಸಂಚಾಲಕರಾಗಿದ್ದಾರೆ.

ಹಿರಿಯ ನಾಗರಿಕರು, ಮಧ್ಯಮ ವರ್ಗದವರು, ಮಾನಸಿ ಅಸ್ವಸ್ಥರು ಇತ್ಯಾದಿ ಬೇರೆ ಬೇರೆ ವಿಭಾಗಗಳಲ್ಲಿ ವಿವಿಧ ಇನ್ಷೂರೆನ್ಸ್ ಪ್ಲಾನ್​ಗಳ ಪ್ರೀಮಿಯಮ್​ಗಳಿಗೆ ಎಷ್ಟು ಜಿಎಸ್​ಟಿ ಇರಬೇಕು, ಅಥವಾ ಪೂರ್ಣವಾಗಿ ಜಿಎಸ್​ಟಿಯೇ ಇರಬಾರದಾ ಎಂಬಿತ್ಯಾದಿ ಅಂಶಗಳನ್ನು ಅಮೂಲಾಗ್ರವಾಗಿ ಅವಲೋಕಿಸಲಿರುವ ಈ ಸಮಿತಿಯು ಅಕ್ಟೋಬರ್ ಅಂತ್ಯದೊಳಗೆ ವರದಿ ಸಲ್ಲಿಸಲು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಗಾಂಧಿನಗರದಲ್ಲಿ ಜಾಗತಿಕ ಮರುಬಳಕೆ ಇಂಧನ ಸಭೆ ಮತ್ತು ಎಕ್ಸ್​ಪೋ ಕಾರ್ಯಕ್ರಮ ಇಂದು ಆರಂಭ

54ನೇ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಫಿಟ್ಮೆಂಟ್ ಕಮಿಟಿಯು ಇನ್ಷೂರೆನ್ಸ್ ಪ್ರೀಮಿಯಮ್​ಗೆ ಜಿಎಸ್​ಟಿ ಕಡಿಮೆ ಮಾಡುವುದರಿಂದ ಅಥವಾ ತೆಗೆದುಹಾಕುವುದರಿಂದ ಆಗಬಹುದಾದ ನಷ್ಟವನ್ನು ಮನದಟ್ಟು ಮಾಡಿಕೊಡಲು ಯತ್ನಿಸಿತ್ತು. ಜಿಎಸ್​ಟಿ ಸಂಗ್ರಹದಲ್ಲಿ ಹೆಚ್ಚಿನ ಪಾಲು ರಾಜ್ಯಗಳಿಗೆ ಹೋಗುತ್ತವೆ. ಆದ್ದರಿಂದ ರಾಜ್ಯಗಳಿಗೂ ತೆರಿಗೆ ಸಂಗ್ರಹ ಕಡಿಮೆ ಆಗಬಹುದು ಎನ್ನುವ ಅಂಶವನ್ನು ಸಭೆಯಲ್ಲಿ ತಿಳಿಸಲಾಯಿತು ಎನ್ನಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು