AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST Council Meet: ಜವಳಿ ಮೇಲಿನ ಜಿಎಸ್​ಟಿ ದರ ಏರಿಕೆ ನಿರ್ಧಾರ ಸರ್ವಾನುಮತದಿಂದ ಮುಂದೂಡಿಕೆ

ಡಿಸೆಂಬರ್ 31ರ ಶುಕ್ರವಾರ ನಡೆಯುತ್ತಿರುವ ಜಿಎಸ್​ಟಿ ಸಮಿತಿ ಸಭೆಯಲ್ಲಿ ಜವಳಿ ಮೇಲಿನ ಜಿಎಸ್​ಟಿ ದರ ಏರಿಕೆ ಮುಂದೂಡುವುದಕ್ಕೆ ಸರ್ವಾನುಮತದಿಂದ ನಿರ್ಧಾರ ಮಾಡಲಾಗಿದೆ.

GST Council Meet: ಜವಳಿ ಮೇಲಿನ ಜಿಎಸ್​ಟಿ ದರ ಏರಿಕೆ ನಿರ್ಧಾರ ಸರ್ವಾನುಮತದಿಂದ ಮುಂದೂಡಿಕೆ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 31, 2021 | 1:28 PM

Share

ಜಿಎಸ್​ಟಿ ಸಮಿತಿಯು ಶುಕ್ರವಾರ (ಡಿಸೆಂಬರ್ 31, 2021) ನಡೆದ ಸಭೆಯಲ್ಲಿ ಜವಳಿ ಮೇಲಿನ ಜಿಎಸ್​ಟಿ ದರ ಶೇ 5ರಿಂದ 12ಕ್ಕೆ ಏರಿಕೆ ಮಾಡುವ ನಿರ್ಧಾರವನ್ನು ಮುಂದೂಡುವುದಕ್ಕೆ ಸರ್ವಾನುಮತದಿಂದ ಒಪ್ಪಿದೆ. ಮುಂದಿನ ಜಿಎಸ್​ಟಿ ಸಮಿತಿ ಸಭೆಯಲ್ಲಿ ಭವಿಷ್ಯದ ನಕಾಶೆ ಬಗ್ಗೆ ಚರ್ಚಿಸಲಾಗುವುದು. ಜವಳಿ ಮೇಲಿನ ಜಿಎಸ್​ಟಿ ಶೇ 5ರಿಂದ ಶೇ 12ಕ್ಕೆ ಜನವರಿ 1ರಿಂದ ಜಾರಿಗೆ ಬರಬೇಕಿತ್ತು. ಡಿಸೆಂಬರ್ 30ರಂದು ಹಲವು ರಾಜ್ಯಗಳು ಜನವರಿ 1ರಿಂದ ಜವಳಿ ಉತ್ಪನ್ನಗಳ ಮೇಲಿನ ಹೆಚ್ಚಿನ ತೆರಿಗೆ ದರವನ್ನು ವಿರೋಧಿಸಿ, ದರ ಏರಿಕೆಯನ್ನು ತಡೆಹಿಡಿಯುವಂತೆ ಒತ್ತಾಯಿಸಿದವು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ಗುಜರಾತ್, ಪಶ್ಚಿಮ ಬಂಗಾಳ, ದೆಹಲಿ, ರಾಜಸ್ಥಾನ ಮತ್ತು ತಮಿಳುನಾಡು ರಾಜ್ಯಗಳು ಜವಳಿ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರವನ್ನು ಜನವರಿ 1, 2022ರಿಂದ ಜಾರಿಗೆ ಬರುವಂತೆ ಪ್ರಸ್ತುತ ಇರುವ ಶೇಕಡಾ 5ರಿಂದ ಶೇ 12ಕ್ಕೆ ಹೆಚ್ಚಿಸುವ ನಿರ್ಧಾರಕ್ಕೆ ಪರವಾಗಿಲ್ಲ ಎಂದು ಹೇಳಿವೆ.

ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಮತ್ತು ರಾಜ್ಯ ಹಣಕಾಸು ಸಚಿವರನ್ನು ಒಳಗೊಂಡ ಜಿಎಸ್‌ಟಿ ಸಮಿತಿ 46ನೇ ಸಭೆಯು ಡಿಸೆಂಬರ್ 31ರಂದು ನಡೆಯುತ್ತಿದೆ. ದರ ಏರಿಕೆ “ನಿರ್ಧಾರವನ್ನು ತಡೆಹಿಡಿಯುವ” ಗುಜರಾತ್‌ನ ಬೇಡಿಕೆಯನ್ನು, ವರ್ತಕರ ಒಕ್ಕೂಟದ ಮನವಿಯನ್ನು ಪರಿಗಣಿಸಲು ಒಂದೇ ಕಾರ್ಯಸೂಚಿಯೊಂದಿಗೆ ಈ ಸಭೆ ನಡೆದಿದೆ. ಜವಳಿ ಮೇಲಿನ ಸರಕು ಮತ್ತು ಸೇವಾ ತೆರಿಗೆ ಹೆಚ್ಚಳದ ವಿರುದ್ಧ ವರ್ತಕರ ಪ್ರತಿಭಟನೆಯನ್ನು ದೆಹಲಿ ಸರ್ಕಾರ ಬೆಂಬಲಿಸಿದೆ. ಮತ್ತು ಜಿಎಸ್‌ಟಿ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಡಿಸೆಂಬರ್ 30ರಂದು ಹೇಳಿದ್ದರು.

ಜಿಎಸ್‌ಟಿ ಶೇ 5ರಿಂದ ಶೇ 12ಕ್ಕೆ ಏರಿಕೆ ವಿರೋಧಿಸಿ ಜವಳಿ ವ್ಯಾಪಾರಿಗಳು ನಡೆಸುತ್ತಿರುವ ಪ್ರತಿಭಟನೆ ಸಮರ್ಥನೀಯ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಮತ್ತು ದೆಹಲಿ ಸರ್ಕಾರವು ತೆರಿಗೆ ದರಗಳನ್ನು ಕಡಿಮೆ ಮಾಡಲು ಮುಂದಾಗಿದೆ. ನಾನು ಜವಳಿ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ನಾಳೆ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಒತ್ತಾಯಿಸುತ್ತೇನೆ, ಎಂದು ದೆಹಲಿ ಸರ್ಕಾರದ ಹಣಕಾಸು ಇಲಾಖೆಯ ಉಸ್ತುವಾರಿ ಸಚಿವರೂ ಆಗಿರುವ ಸಿಸೋಡಿಯಾ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: GST Council Meet: ಡಿಸೆಂಬರ್ 31ರ ಜಿಎಸ್​ಟಿ ಸಮಿತಿ ಸಭೆಯಲ್ಲಿನ ಪ್ರಮುಖ ನಿರೀಕ್ಷೆ, ಬೇಡಿಕೆಗಳೇನು

Published On - 1:13 pm, Fri, 31 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ