ಜಿಎಸ್‌ಟಿ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ; ಏಪ್ರಿಲ್‌ನಲ್ಲಿ ಸಂಗ್ರಹವಾಗಿದ್ದು ₹1.68 ಲಕ್ಷ ಕೋಟಿ: ಹಣಕಾಸು ಸಚಿವಾಲಯ

ಏಪ್ರಿಲ್ 20, 2022 ರಂದು ಒಂದೇ ದಿನದಲ್ಲಿ 9.58 ಲಕ್ಷ ವಹಿವಾಟುಗಳ ಮೂಲಕ ₹57,847 ಕೋಟಿ ಪಾವತಿಸಿದಾಗ ಈ ತಿಂಗಳು ಅತಿ ಹೆಚ್ಚು ತೆರಿಗೆ ಸಂಗ್ರಹವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಜಿಎಸ್‌ಟಿ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ; ಏಪ್ರಿಲ್‌ನಲ್ಲಿ ಸಂಗ್ರಹವಾಗಿದ್ದು ₹1.68 ಲಕ್ಷ ಕೋಟಿ: ಹಣಕಾಸು ಸಚಿವಾಲಯ
ಸಾಂದರ್ಭಿಕ ಚಿತ್ರ
Follow us
| Updated By: ರಶ್ಮಿ ಕಲ್ಲಕಟ್ಟ

Updated on:May 01, 2022 | 7:27 PM

ದೆಹಲಿ: ಸರಕು ಮತ್ತು ಸೇವಾ ತೆರಿಗೆ (GST) ವರಮಾನವು ಮೊದಲ ಬಾರಿಗೆ ₹ 1.5 ಲಕ್ಷ ಕೋಟಿಯ ಗಡಿ ಮೀರಿದೆ. ಏಪ್ರಿಲ್‌ನಲ್ಲಿ ₹ 1,67,540 ಕೋಟಿ ಸಂಗ್ರಹ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ. ವೇಗವಾಗಿ ಆರ್ಥಿಕ ಚೇತರಿಕೆ, ಉತ್ತಮ ತೆರಿಗೆ ಆಡಳಿತ ಹಿನ್ನೆಲೆಯಲ್ಲಿ ಮಾರ್ಚ್‌ನಲ್ಲಿ ಹಿಂದಿನ ದಾಖಲೆಯ ₹ 1,42,095 ಕೋಟಿಗಿಂತ ಅಂದರೆ ಸುಮಾರು ಶೇ 18ರಷ್ಟು ಜಿಎಸ್‌ಟಿ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ. ಏಪ್ರಿಲ್ 20, 2022 ರಂದು ಒಂದೇ ದಿನದಲ್ಲಿ 9.58 ಲಕ್ಷ ವಹಿವಾಟುಗಳ ಮೂಲಕ ₹57,847 ಕೋಟಿ ಪಾವತಿಸಿದಾಗ ಈ ತಿಂಗಳು ಅತಿ ಹೆಚ್ಚು ತೆರಿಗೆ ಸಂಗ್ರಹವಾಗಿದೆ ಎಂದು ಸಚಿವಾಲಯ ತಿಳಿಸಿದೆ. ಕಳೆದ ವರ್ಷ ಇದೇ ದಿನಾಂಕದಂದು 7.22 ಲಕ್ಷ ವಹಿವಾಟಿನ ಮೂಲಕ ₹48,000 ಕೋಟಿಯಷ್ಟು ಗರಿಷ್ಠ ಏಕದಿನ ಪಾವತಿಯಾಗಿದೆ.ಇದು ಅನುವರ್ತನೆ ನಡವಳಿಕೆಯಲ್ಲಿ ಸ್ಪಷ್ಟ ಸುಧಾರಣೆಯನ್ನು ತೋರಿಸುತ್ತದೆ. ಅದೇ ವೇಳೆ ತೆರಿಗೆ ಆಡಳಿತವು ತೆರಿಗೆದಾರರನ್ನು ಸಕಾಲಿಕವಾಗಿ ರಿಟರ್ನ್‌ಗಳನ್ನು ಸಲ್ಲಿಸುವಂತೆ ಒತ್ತಾಯಿಸಲು ತೆಗೆದುಕೊಂಡ ಹಲವಾರು ಕ್ರಮಗಳ ಫಲಿತಾಂಶ ಇದಾಗಿದೆ. ರಿಟರ್ನ್ಸ್‌ ಸಲ್ಲಿಕೆ ಪ್ರಕ್ರಿಯೆ ಸರಳಗೊಳಿಸಲಾಗಿದ್ದು, ತೆರಿಗೆ ವಂಚಿಸುವವರ ವಿರುದ್ಧ ಕಠಿಣ ಕ್ರಮಗಳನ್ನೂ ತೆಗೆದುಕೊಳ್ಳಲಾಗುತ್ತಿದೆ. ಈ ಎಲ್ಲಾ ಕಾರಣಗಳಿಂದಾಗಿ ರಿಟರ್ನ್ಸ್‌ ಸಲ್ಲಿಕೆಯಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಸಚಿವಾಲಯ ಹೇಳಿದೆ.

ಇದೀಗ ಸತತ 10ನೇ ತಿಂಗಳು ಜಿಎಸ್‌ಟಿ ಆದಾಯ ₹ 1 ಲಕ್ಷ ಕೋಟಿ ದಾಟಿದೆ ಮತ್ತು ಏಪ್ರಿಲ್‌ನಲ್ಲಿ ₹ 1,67,540 ಕೋಟಿಗಳ ದಾಖಲೆ ಸಂಗ್ರಹವು ವರ್ಷದ ಹಿಂದೆ ಇದೇ ತಿಂಗಳಿನಲ್ಲಿ ಸಾಧಿಸಿದ ₹ 1,39,708 ಕೋಟಿಗಿಂತ ಶೇ 19.92 ಹೆಚ್ಚಾಗಿದೆ ಎಂದು ಅಧಿಕೃತ ಡೇಟಾ ತೋರಿಸಿದೆ.

ಏಪ್ರಿಲ್  2022 ರಲ್ಲಿ ಸಂಗ್ರಹಿಸಲಾದ ಒಟ್ಟು ಆದಾಯವು ₹33,159 ಕೋಟಿ ಕೇಂದ್ರೀಯ ಜಿಎಸ್‌ಟಿ (ಸಿಜಿಎಸ್‌ಟಿ), ₹41,793 ಕೋಟಿ ರಾಜ್ಯ ಜಿಎಸ್‌ಟಿ (ಎಸ್‌ಜಿಎಸ್‌ಟಿ) ಮತ್ತು ₹81,939 ಕೋಟಿ ಇಂಟಿಗ್ರೇಟೆಡ್ ಜಿಎಸ್‌ಟಿ (ಐಜಿಎಸ್‌ಟಿ) ಒಳಗೊಂಡಿದ್ದು ₹36,705 ಕೋಟಿ ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾಗಿದೆ. ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ ₹ 857 ಕೋಟಿ ಸೇರಿದಂತೆ ತಿಂಗಳ ಸೆಸ್ ಸಂಗ್ರಹಗಳು ₹ 10,649 ಕೋಟಿ ಆಗಿದೆ. ಸರ್ಕಾರವು ಐಜಿಎಸ್‌ಟಿಯಿಂದ ಸಿಜಿಎಸ್‌ಟಿಗೆ ₹33,423 ಕೋಟಿ ಮತ್ತು ಎಸ್‌ಜಿಎಸ್‌ಟಿಗೆ ₹26,962 ಕೋಟಿ ಇತ್ಯರ್ಥಪಡಿಸಿದೆ. ನಿಯಮಿತ ಇತ್ಯರ್ಥದ ನಂತರ ಏಪ್ರಿಲ್ 2022 ರಲ್ಲಿ ಕೇಂದ್ರ ಮತ್ತು ರಾಜ್ಯಗಳ ಒಟ್ಟು ಆದಾಯವು ಸಿಜಿಎಸ್‌ಟಿಗೆ ₹ 66,582 ಕೋಟಿ ಮತ್ತು ಎಸ್‌ಜಿಎಸ್‌ಟಿಗೆ ₹ 68,755 ಕೋಟಿಯಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಚ್ 2022 ರಲ್ಲಿ ಒಟ್ಟು ಇ-ವೇ ಬಿಲ್‌ಗಳ ಸಂಖ್ಯೆ 7.7 ಕೋಟಿಯಾಗಿದೆ, ಫೆಬ್ರವರಿ 2022 ರಲ್ಲಿ ಉತ್ಪತ್ತಿಯಾದ 6.8 ಕೋಟಿ ಇ-ವೇ ಬಿಲ್‌ಗಳಿಗಿಂತ ಇದು ಶೇ13 ಹೆಚ್ಚಾಗಿದೆ, ಇದು ವ್ಯಾಪಾರ ಚಟುವಟಿಕೆಯ ವೇಗದ ಚೇತರಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅದು ಹೇಳಿದೆ.

ಕರ್ನಾಟಕದಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ ಶೇ 19 ಏರಿಕೆ ಆದಾಗ್ಯೂ, ರಾಜ್ಯಗಳಾದ್ಯಂತ ಬೆಳವಣಿಗೆಯ ಪ್ರವೃತ್ತಿಗಳಲ್ಲಿ ವ್ಯಾಪಕ ವ್ಯತ್ಯಾಸಗಳಿವೆ. ಏಪ್ರಿಲ್‌ನಲ್ಲಿ ತಮಿಳುನಾಡಿನ ಸಂಗ್ರಹ ಕೇವಲ ಶೇ10 ರಷ್ಟು ಏರಿಕೆ ಕಂಡಿದ್ದು, ಮಹಾರಾಷ್ಟ್ರ ಶೇ 25, ಒಡಿಶಾ ಶೇ 28 ಹರಿಯಾಣ ಶೇ 23 ಮತ್ತು ಆಂಧ್ರಪ್ರದೇಶ ಶೇ 22 ರಷ್ಟು ಏರಿಕೆ ಕಂಡಿದೆ. ಕರ್ನಾಟಕ ಮತ್ತು ರಾಜಸ್ಥಾನ ಜಿಎಸ್‌ಟಿ ಸಂಗ್ರಹದಲ್ಲಿ ಶೇ 19 ಏರಿಕೆ ದಾಖಲಿಸಿದರೆ, ಬೆಳವಣಿಗೆ ದರವು ಗುಜರಾತ್‌ನಲ್ಲಿ ಶೇ17 ಮತ್ತು ತೆಲಂಗಾಣ, ಉತ್ತರ ಪ್ರದೇಶ ಮತ್ತು ದೆಹಲಿ ಶೇ 16 ಆಗಿದೆ.

ಬಿಹಾರ (-2%), ಮಣಿಪುರ (-33%), ಮಿಜೋರಾಂ (-19%) ಮತ್ತು ತ್ರಿಪುರಾ (-3%) ಸೇರಿದಂತೆ ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಒಂದು ವರ್ಷದ ಹಿಂದಿನ ಆದಾಯದಲ್ಲಿ ಕುಸಿತವನ್ನು ವರದಿ ಮಾಡಿದೆ. ಲಕ್ಷದೀಪ್‌ನಿಂದ ಜಿಎಸ್‌ಟಿ ಒಳಹರಿವು ವರ್ಷದಿಂದ ವರ್ಷಕ್ಕೆ 18% ಕುಸಿದಿದೆ, ಆದರೆ ದಮನ್ ಮತ್ತು ದಿಯುನಲ್ಲಿ ಶೇ 78 ಕಡಿಮೆಯಾಗಿದೆ.

ವಾಣಿಜ್ಯ  ವಿಭಾಗದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Sun, 1 May 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್