AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toyota Car: ಭಾರತದ ಈ ಟೆಕ್ ಕಂಪನಿ ಉದ್ಯೋಗಿಗಳಿಗಿಲ್ಲ ವಜಾ ಭೀತಿ; ಸಿಕ್ಕಿತು ಟೊಯೊಟಾ ಕಾರು ಉಡುಗೊರೆ!

Toyota Car Gift For Employees; ಅಹಮದಾಬಾದ್​​ನ ತ್ರಿದ್ಯಾ ಇನ್ಫೋಟೆಕ್ ಕಂಪನಿಯ ಸಿಇಒ ರಮೇಶ್ ಮರಂದ್ ಕಂಪನಿಯಲ್ಲಿ ಆರಂಭದಿಂದಲೂ ಇರುವ 13 ಮಂದಿ ಉದ್ಯೋಗಿಗಳಿಗೆ ಟೊಯೊಟಾ ಕಾರು ಉಡುಗೊರೆ ನೀಡಿದ್ದಾರೆ.

Toyota Car: ಭಾರತದ ಈ ಟೆಕ್ ಕಂಪನಿ ಉದ್ಯೋಗಿಗಳಿಗಿಲ್ಲ ವಜಾ ಭೀತಿ; ಸಿಕ್ಕಿತು ಟೊಯೊಟಾ ಕಾರು ಉಡುಗೊರೆ!
ಉಡುಗೊರೆ ಸ್ವೀಕರಿಸಿದ ಕಾರುಗಳೊಂದಿಗೆ ತ್ರಿದ್ಯಾ ಇನ್ಫೋಟೆಕ್ ಉದ್ಯೋಗಿಗಳು (ಚಿತ್ರ ಕೃಪೆ; ಲೈವ್​ಮಿಂಟ್)Image Credit source: Livemint
ಗಣಪತಿ ಶರ್ಮಾ
|

Updated on:Feb 03, 2023 | 1:06 PM

Share

ಬೆಂಗಳೂರು: ಮೈಕ್ರೋಸಾಫ್ಟ್, ಗೂಗಲ್, ಅಮೆಜಾನ್ ಸೇರಿದಂತೆ ಜಾಗತಿಕ ಟೆಕ್ ದೈತ್ಯ ಕಂಪನಿಗಳೆಲ್ಲ ಉದ್ಯೋಗಿಗಳನ್ನು (Layoff) ವಜಾಗೊಳಿಸುತ್ತಿವೆ. ತಂತ್ರಜ್ಞಾನ ಕ್ಷೇತ್ರದ (Tech Companies) ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿ ಎದುರಿಸುತ್ತಿರುವ ಸಂದರ್ಭದಲ್ಲೇ ಗುಜರಾತ್​​ನ ಟೆಕ್ ಕಂಪನಿಯೊಂದರ ಸಿಇಒ, ಆರಂಭದಿಂದಲೂ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ಟೊಯೊಟಾ ಪ್ರೀಮಿಯಂ ಕಾರು ಉಡುಗೊರೆ ನೀಡಿ ಗಮನ ಸೆಳೆದಿದ್ದಾರೆ. ಗುಜರಾತ್​ನ ಅಹಮದಾಬಾದ್​​ನಲ್ಲಿ (Ahmedabad) ಪ್ರಧಾನ ಕಚೇರಿ ಹೊಂದಿರುವ ತ್ರಿದ್ಯಾ ಇನ್ಫೋಟೆಕ್ (Tridhya Infotech) ಕಂಪನಿಯ ಸಿಇಒ ರಮೇಶ್ ಮರಂದ್ (Ramesh Marand) ಕಂಪನಿಯಲ್ಲಿ ಆರಂಭದಿಂದಲೂ ಇರುವ 13 ಮಂದಿ ಉದ್ಯೋಗಿಗಳಿಗೆ ಕಾರು ಉಡುಗೊರೆ ನೀಡಿದ್ದಾರೆ. ಉಳಿದ ಎಲ್ಲ ಉದ್ಯೋಗಿಗಳಿಗೂ ಉಡುಗೊರೆ ನೀಡುವ ಬಗ್ಗೆ ಯೋಚಿಸುತ್ತಿರುವುದಾಗಿ ತಿಳಿಸಿದ್ದಾರೆ.

ಆರೋಗ್ಯ, ವಿಮೆ, ಚಿಲ್ಲರೆ ಮಾರಾಟ ಮತ್ತು ಇಂಧನ ಕ್ಷೇತ್ರಗಳಿಗೆ ಸಾಫ್ಟ್​ವೇರ್ ಅಭಿವೃದ್ಧಿಪಡಿಸಿಕೊಡುವ ತ್ರಿದ್ಯಾ ಟೆಕ್ ಕಂಪನಿಯು ಏಷ್ಯಾ, ಯುರೋಪ್ ಹಾಗೂ ಆಸ್ಟ್ರೇಲಿಯಾದಲ್ಲಿ ಗ್ರಾಹಕರನ್ನು ಹೊಂದಿದೆ. ಉದ್ದಿಮೆಗಳಿಗೆ ತಂತ್ರಜ್ಞಾನದ ನೆರವನ್ನೂ ಕಂಪನಿ ಒದಗಿಸಿಕೊಡುತ್ತಿದೆ.

ಇದನ್ನೂ ಓದಿ: Pinterest Layoff: ಪಿಂಟ್​​ರೆಸ್ಟ್​​ನಿಂದಲೂ ಉದ್ಯೋಗ ಕಡಿತ; 150 ಮಂದಿ ವಜಾ

ಕಾರು ಉಡುಗೊರೆ ಪಡೆದ ಉದ್ಯೋಗಿಗಳು ಕಂಪನಿಯ ಆರಂಭದಿಂದಲೂ ನಮ್ಮ ಜತೆಗಿದ್ದಾರೆ. ಸ್ಥಿರವಾದ ಉದ್ಯೋಗವನ್ನು ಬಿಟ್ಟು ನಮ್ಮ ಸ್ಟಾರ್ಟಪ್​ ಸೇರಿದ ಇವರೆಲ್ಲ ಕಂಪನಿಯ ಯಶಸ್ಸಿಗಾಗಿ ಕಠಿಣ ಪರಿಶ್ರಮ ವಹಿಸಿದ್ದಾರೆ ಮತ್ತು ಕಂಪನಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ರಮೇಶ್ ಮರಂದ್ ತಿಳಿಸಿರುವುದಾಗಿ ‘ಆಜ್​ತಕ್’ ವರದಿ ಮಾಡಿದೆ.

ಯಾರು ರಮೇಶ್ ಮರಂದ್​?

ರಮೇಶ್ ಮರಂದ್ ಅವರು ತ್ರಿದ್ಯಾ ಇನ್ಫೋಟೆಕ್ ಸಿಇಒ. ಉದ್ಯಮ ಅಭಿವೃದ್ಧಿ ಮತ್ತು ಮಾರ್ಕೆಟಿಂಗ್ ವಿಭಾಗದಲ್ಲಿ 12 ವರ್ಷಗಳ ವೃತ್ತಿ ಅನುಭವ ಹೊಂದಿದ್ದಾರೆ. ಬ್ರಿಟನ್ ಮೂಲದ ಸಾಫ್ಟ್​ವೇರ್ ಉತ್ಪನ್ನ ಅಭಿವೃದ್ಧಿ ಕಂಪನಿ ಶಾಲಿಗ್ರಾಮ್ ಇನ್ಫೋಟೆಕ್​​ನ ಸಹಭಾಗಿತ್ವವನ್ನೂ ಹೊಂದಿದ್ದಾರೆ. ಲಿಂಕ್ಡ್​​​ಇನ್​​ನಲ್ಲಿ 30,000 ಫಾಲೋವರ್​​ಗಳನ್ನು ಹೊಂದಿದ್ದಾರೆ. ‘ನನ್ನ ಕನಸನ್ನು ನನಸು ಮಾಡುವುದಕ್ಕಾಗಿ ಶ್ರಮಿಸುತ್ತಿದ್ದೇನೆ. ಈ ವಿಚಾರದಲ್ಲಿ ನಾನು ಸ್ವಾರ್ಥಿಯೂ ಹೌದು. ಆದರೆ, ನಾನು ಪ್ರಾಮಾಣಿಕ. ಗ್ರಾಹಕರಿಗೆ, ಸ್ನೇಹಿತರಿಗೆ ಬದ್ಧನಾಗಿರುವ ಮೊದಲು ನನಗಾಗಿ ಬದ್ಧತೆಯಿಂದಿರುತ್ತೇನೆ’ ಎಂದು ತಮ್ಮ ಬಗ್ಗೆ ಬರೆದುಕೊಂಡಿದ್ದಾರೆ.

ಉದ್ಯೋಗಿಗಳಿಗೆ ಕಂಪನಿಗಳು ಭಾರೀ ಉಡುಗೊರೆ ನೀಡಿರುವ ಬಗ್ಗೆ ಈ ಹಿಂದೆಯೂ ವರದಿಯಾಗಿವೆ. 2022ರ ಏಪ್ರಿಲ್​ನಲ್ಲಿ ಚೆನ್ನೈ ಮೂಲದ ಐಟಿ ಕಂಪನಿ ‘ಐಡಿಯಾಸ್2ಐಟಿ’ ಉದ್ಯೋಗಿಗಳಿಗೆ 100 ಕಾರುಗಳನ್ನು ಉಡುಗೊರೆ ನೀಡಿತ್ತು. 10 ವರ್ಷಗಳಿಗಿಂತಲೂ ಹೆಚ್ಚು ಕಾಲ ಕಂಪನಿಯಲ್ಲಿ ಕಾರ್ಯನಿರ್ವಹಿಸಿದ ಉದ್ಯೋಗಿಗಳಿಗೆ ಉಡುಗೊರೆ ನೀಡಲಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:03 pm, Fri, 3 February 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ