AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Holiday: ಗುರುನಾನಕ್ ಜಯಂತಿ: ಯಾವ್ಯಾವ ರಾಜ್ಯಗಳಲ್ಲಿ ಬ್ಯಾಂಕುಗಳಿಗೆ ರಜೆ ಇದೆ, ಇಲ್ಲಿದೆ ಡೀಟೇಲ್ಸ್

Guru Nanak Dev Jayanti: ಕಾರ್ತೀಕ ಪೌರ್ಣಿಮೆ ದಿನವಾದ ಇಂದು (ನವೆಂಬರ್ 27) ಸಿಖ್ ಧರ್ಮಸಂಸ್ಥಾಪಕ ಗುರುನಾನಕ್ ದೇವ್ ಅವರ ಜಯಂತಿ ಇದೆ. ಹಲವು ರಾಜ್ಯಗಳಲ್ಲಿ ಸರ್ಕಾರಿ ರಜೆ ಇದೆ. ಆರ್​ಬಿಐ ರಜಾ ಕ್ಯಾಲೆಂಡರ್​ನ ಪಟ್ಟಿಯಲ್ಲಿ ಗುರುನಾನಕ್ ಜಯಂತಿ ಇದೆ. ಬೆಂಗಳೂರು ಸೇರಿದಂತೆ ನಾನಾ ಸ್ಥಳಗಳಲ್ಲಿ ಬ್ಯಾಂಕುಗಳು ಬಂದ್ ಆಗಿರುತ್ತವೆ. ಕರ್ನಾಟಕದಲ್ಲಿ ಈ ಗುರುವಾರವೂ ಕನಕದಾಸ ಜಯಂತಿ ಪ್ರಯುಕ್ತ ರಜೆ ಇದೆ.

Bank Holiday: ಗುರುನಾನಕ್ ಜಯಂತಿ: ಯಾವ್ಯಾವ ರಾಜ್ಯಗಳಲ್ಲಿ ಬ್ಯಾಂಕುಗಳಿಗೆ ರಜೆ ಇದೆ, ಇಲ್ಲಿದೆ ಡೀಟೇಲ್ಸ್
ಬ್ಯಾಂಕು ರಜೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 27, 2023 | 10:35 AM

Share

ನವದೆಹಲಿ, ನವೆಂಬರ್ 27: ಇಂದು ಸಿಖ್ ಧರ್ಮ ಸಂಸ್ಥಾಪಕ ಮತ್ತು ಅವರ ಮೊದಲ ಧರ್ಮಗುರು ಗುರುನಾನಕ್ ಅವರ ಜಯಂತಿ (Guru Nanak Jayanti) ಇದೆ. ಕಾರ್ತೀಕ ಮಾಸದ ಪೌರ್ಣಮಿಯಂದು ನಾನಕ್ ಅವರ ಜನ್ಮದಿನ. ಇಂದು ಕಾರ್ತೀಕ ಪೌರ್ಣಿಮೆ. ಇವತ್ತು ಗುರುನಾನಕ್ ದೇವರ 554ನೇ ಜಯಂತಿ. ಈ ದಿನ ಕೆಲ ರಾಜ್ಯಗಳಲ್ಲಿ ಸರ್ಕಾರಿ ರಜೆ ಇದೆ. ಆರ್​ಬಿಐನ ರಜಾ ವೇಳಾಪಟ್ಟಿಯಲ್ಲಿ (RBI Holiday Calender) ಗುರುನಾನಕ್ ಜಯಂತಿ ಇದೆ. ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಬ್ಯಾಂಕುಗಳಿಗೆ ನವೆಂಬರ್ 27ರಂದು ರಜೆ ಇದೆ.

ನವೆಂಬರ್ 27, ಗುರು ನಾನಕ್​ರ ಜನ್ಮದಿನದಂದು ಬ್ಯಾಂಕುಗಳಿಗೆ ರಜೆ ಇರುವ ಸ್ಥಳಗಳು

ಪಂಜಾಬ್ ಮತ್ತು ಹರ್ಯಾಣ ರಾಜ್ಯಗಳಲ್ಲದೇ ಅಗಾರ್ತಲಾ, ಐಜ್ವಾಲ್, ಬೆಲಾಪುರ್, ಭೋಪಾಲ್, ಭುಬನೇಶ್ವರ್, ಚಂದೀಗಡ್, ಡೆಹ್ರಾಡೂನ್, ಹೈದರಾಬಾದ್, ಇಟಾನಗರ್, ಜೈಪುರ್, ಜಮ್ಮು, ಕಾನಪುರ್, ಕೊಹಿಮಾ, ಕೋಲ್ಕತಾ, ಲಕ್ನೋ, ಮುಂಬೈ, ನಾಗಪುರ್, ನವದೆಹಲಿ, ರಾಯಪುರ್, ರಾಂಚಿ, ಶಿಮ್ಲಾ, ಶ್ರೀನಗರ್, ಅಹ್ಮದಾಬಾದ್, ಬೆಂಗಳೂರು, ಚೆನ್ನೈ, ಗ್ಯಾಂಗ್​ಟಾಕ್, ಗುವಾಹಟಿ, ಹೈದರಾಬಾದ್, ಇಂಫಾಲ್, ಕೊಚ್ಚಿ, ಪಣಜಿ, ಶಿಲ್ಲಾಂಗ್ ಮತ್ತು ತಿರುವನಂತಪುರಂ ನಗರಗಳಲ್ಲಿ ಗುರುನಾನಕ್ ಜಯಂತಿಯಂದು ಬ್ಯಾಂಕುಗಳು ಬಂದ್ ಆಗಿರುತ್ತವೆ.

ಇದನ್ನೂ ಓದಿ: ಡಿಸೆಂಬರ್​ನಲ್ಲಿ ಬ್ಯಾಂಕುಗಳಿಗೆ 18 ದಿನ ರಜೆ; ಕರ್ನಾಟಕದಲ್ಲಿ ಯಾವ್ಯಾವತ್ತು ರಜೆ? 6 ದಿನ ಬ್ಯಾಂಕ್ ಮುಷ್ಕರದ ಬರೆ

ಕನಕದಾಸ ಜಯಂತಿ: ನವೆಂಬರ್ 30ಕ್ಕೂ ರಜೆ

ಈ ನವೆಂಬರ್ ತಿಂಗಳ ಕೊನೆಯಲ್ಲಿ, ಅಂದರೆ 30ನೇ ತಾರೀಖಿನಂದು ಕರ್ನಾಟಕದಲ್ಲೆಡೆ ಸರ್ಕಾರಿ ರಜೆ ಇದೆ. ಅಂದು ಕನಕದಾಸ ಜಯಂತಿ ಇದ್ದು, ಬ್ಯಾಂಕುಗಳಿಗೂ ರಜೆ ಇರುತ್ತದೆ.

ಡಿಸೆಂಬರ್ ತಿಂಗಳಲ್ಲಿ 18 ರಜೆ

ಡಿಸೆಂಬರ್ ತಿಂಗಳಲ್ಲಿ ಆರ್​ಬಿಐ ಕ್ಯಾಲೆಂಡರ್ ಪ್ರಕಾರ 18 ರಜೆಗಳಿವೆ. ಇದರಲ್ಲಿ ಭಾನುವಾರ ಮತ್ತು ಶನಿವಾರದ ರಜೆಗಳೂ ಒಳಗೊಂಡಿವೆ. ಕರ್ನಾಟಕದಲ್ಲಿ ಒಟ್ಟು 8 ದಿನಗಳು ಬ್ಯಾಂಕಿಗೆ ರಜೆ ಇರುತ್ತದೆ. ಡಿಸೆಂಬರ್ 25ರಂದು ಕ್ರಿಸ್ಮಸ್​ಗೆ ರಜೆ ಇದೆ. ಅದು ಬಿಟ್ಟರೆ ಉಳಿದ ರಜೆಗಳು ಭಾನುವಾರ ಮತ್ತು ಶನಿವಾರದ ರಜೆಗಳೇ ಆಗಿವೆ.

ಇದನ್ನೂ ಓದಿ: ಟಾಟಾನಾ, ಬಿರ್ಲಾನಾ?; ದೇಶದ ಅತಿದೊಡ್ಡ ಸಾಲಗಾರರು ಯಾರು? ಇಲ್ಲಿದೆ ಟಾಪ್-10 ಪಟ್ಟಿ

ಹಾಗೆಯೇ, ಡಿಸೆಂಬರ್ ಮೊದಲೆರಡು ವಾರದಲ್ಲಿ ಅಖಿಲ ಭಾರತ ಬ್ಯಾಂಕ್ ಮುಷ್ಕರ ಇದೆ. ಡಿಸೆಂಬರ್ 11ರಂದು ಎಲ್ಲಾ ಖಾಸಗಿ ಬ್ಯಾಂಕುಗಳು ಬಂದ್ ಆಗಿರುತ್ತವೆ. ಡಿಸೆಂಬರ್ 4ರಿಂದ 8ರವರೆಗೆ ವಿವಿಧ ಸರ್ಕಾರಿ ಬ್ಯಾಂಕುಗಳು ಕಾರ್ಯನಿರ್ವಹಿಸುವುದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!