AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವರ್ಷದಲ್ಲಿ ಭಾರತದಲ್ಲಿ 400 ಕೋಟಿ ವ್ಯಾಕ್ಸಿನ್ ಡೋಸ್ ತಯಾರಿಕೆ: ಕೇಂದ್ರ ಆರೋಗ್ಯ ಕಾರ್ಯದರ್ಶಿ

India becoming world pharmacy center: ಭಾರತದಲ್ಲಿ ಅತಿಹೆಚ್ಚು ವ್ಯಾಕ್ಸಿನ್ ತಯಾರಿಕೆ ಆಗುತ್ತಿದೆ. ಕಳೆದ ಒಂದು ವರ್ಷದಲ್ಲಿ ಜಾಗತಿಕವಾಗಿ ತಯಾರಾಗಿರುವ 800 ಕೋಟಿ ಲಸಿಕೆ ಡೋಸ್​ಗಳಲ್ಲಿ 400 ಕೋಟಿ ಲಸಿಕೆಗಳು ಭಾರತದಲ್ಲೇ ತಯಾರಾಗಿವೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಪುಣ್ಯಾ ಸಲೀಲಾ ಶ್ರೀವಾಸ್ತವ ಹೇಳಿದ್ದಾರೆ. ಅಮೆರಿಕದ ಹೊರಗೆ ಇರುವ ಎಫ್​ಡಿಎ ಅನುಮೋದಿತ ಫಾರ್ಮಾ ಘಟಕಗಳಲ್ಲಿ ಶೇ. 25ರಷ್ಟು ಭಾರತದಲ್ಲೇ ಇವೆ ಎನ್ನುವ ಮಾಹಿತಿಯನ್ನು ಅವರು ನೀಡಿದ್ದಾರೆ.

ಒಂದು ವರ್ಷದಲ್ಲಿ ಭಾರತದಲ್ಲಿ 400 ಕೋಟಿ ವ್ಯಾಕ್ಸಿನ್ ಡೋಸ್ ತಯಾರಿಕೆ: ಕೇಂದ್ರ ಆರೋಗ್ಯ ಕಾರ್ಯದರ್ಶಿ
ವ್ಯಾಕ್ಸಿನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 17, 2024 | 12:53 PM

Share

ನವದೆಹಲಿ, ಅಕ್ಟೋಬರ್ 17: ಕಳೆದ ಒಂದು ವರ್ಷದ ಅವಧಿಯಲ್ಲಿ 800 ಕೋಟಿ ಲಸಿಕೆ ಡೋಸ್​ಗಳನ್ನು ತಯಾರಿಸಿ ವಿಶ್ವಾದ್ಯಂತ ಬಳಕೆ ಮಾಡಲಾಗಿದೆ. ಇದರಲ್ಲಿ ಅರ್ಧದಷ್ಟು ವ್ಯಾಕ್ಸಿನ್​ಗಳನ್ನು ಭಾರತದಲ್ಲೇ ತಯಾರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಪುಣ್ಯಾ ಸಲೀಲಾ ಶ್ರೀವಾಸ್ತವ ಹೇಳಿದ್ದಾರೆ. ಅಂದರೆ, ಭಾರತದಲ್ಲಿ ಒಂದು ವರ್ಷದಲ್ಲಿ 400 ಕೋಟಿ ವ್ಯಾಕ್ಸಿನ್ ಡೋಸ್​ಗಳನ್ನು ತಯಾರಿಸಲಾಗಿದೆ. ಅಮೆರಿಕ ಭಾರತ ಸ್ಟ್ರಾಟಿಜಿಕ್ ಪಾರ್ಟ್ನರ್​ಶಿಪ್ ಫೋರಂನಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ವಾರ್ಷಿಕ ಇಂಡಿಯಾ ಲೀಡರ್​ಶಿಪ್ ಸಮಿಟ್​ನಲ್ಲಿ ಮಾತನಾಡುತ್ತಾ ಪುಣ್ಯ ಅವರು ಈ ಮಾಹಿತಿ ನೀಡಿದ್ದಾರೆ.

ವ್ಯಾಕ್ಸಿನ್ ಮಾತ್ರವಲ್ಲ, ಔಷಧ ತಯಾರಿಕೆಯಲ್ಲೂ ಭಾರತ ಸೈ ಎನಿಸಿದೆ. ಜಗತ್ತಿನಲ್ಲಿ ಅತಿಹೆಚ್ಚು ಔಷಧ ತಯಾರಿಸುವ ದೇಶಗಳಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಜೆನೆರಿಕ್ ಮೆಡಿಸಿನ್​ಗಳ ಉತ್ಪಾದನೆಯಲ್ಲಿ ಭಾರತ ಮುಂಚೂಣಿಯಲ್ಲಿದೆ. ಅಮೆರಿಕ ಸೇರಿದಂತೆ ಜಾಗತಿಕವಾಗಿ ಹಲವು ದೇಶಗಳ ಆರೋಗ್ಯ ಕ್ಷೇತ್ರಕ್ಕೆ ಭಾರತದ ಕೊಡುಗೆ ಗಮನಾರ್ಹವಾಗಿದೆ ಎಂದು ಪುಣ್ಯ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತವನ್ನು ಮಟ್ಟಹಾಕಲು ಚೀನಾದ ಜಲಾಸ್ತ್ರ? ವಿಶ್ವದ ಅತಿದೊಡ್ಡ ಹೈಡ್ರೊಪವರ್ ಪ್ರಾಜೆಕ್ಟ್ ಆದ್ರೆ ಏನು ಗತಿ?

ಅಮೆರಿಕದ ಎಫ್​ಡಿಎ ಅನುಮೋದಿತ ಔಷಧ ತಯಾರಿಕೆ ಕೇಂದ್ರಗಳು ಭಾರತದಲ್ಲಿ ಸಾಕಷ್ಟಿವೆ. ಅಮೆರಿಕದ ಹೊರಗೆ ಇರುವ ಎಫ್​ಡಿಎ ಅನುಮೋದಿತ ಫಾರ್ಮಾ ಘಟಕಗಳಲ್ಲಿ ಶೇ. 25ರಷ್ಟು ಯೂನಿಟ್​ಗಳು ಭಾರತದಲ್ಲೇ ಇವೆ. ಇದು ಭಾರತದ ಔಷಧ ತಯಾರಿಕೆಯ ಉದ್ಯಮದ ಮಹತ್ವವನ್ನು ತೋರಿಸುತ್ತದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿಯಾದ ಆಕೆ ಅಭಿಪ್ರಾಯಪಟ್ಟಿದ್ದಾರೆ.

‘ಭಾರತೀಯ ಕಂಪನಿಗಳಿಂದ ತಯಾರಾಗಿ ಸರಬರಾಜಾಗುವ ಔಷಧಗಳಿಂದಾಗಿ 2022ರಲ್ಲಿ ಅಮೆರಿಕದ ಆರೋಗ್ಯ ಕ್ಷೇತ್ರಕ್ಕೆ 219 ಬಿಲಿಯನ್ ಡಾಲರ್​ನಷ್ಟು (19,000 ಕೋಟಿ ರೂ ಅಂದಾಜು) ಹಣ ಉಳಿತಾಯ ಆಗಿದೆ. 2013ರಿಂದ 2022ರ ಅವಧಿಯಲ್ಲಿ ಆ ದೇಶಕ್ಕೆ 1.3 ಟ್ರಿಲಿಯನ್ ಡಾಲರ್​ನಷ್ಟು ಹಣ ಉಳಿತಾಯ ಆಗಿದೆ ಎನ್ನುವ ಮಾಹಿತಿ ನನಗೆ ಸಿಕ್ಕಿದೆ,’ ಎಂದು ಪುಣ್ಯಾ ಸಲೀಲಾ ಶ್ರೀವಾಸ್ತವ ಹೇಳಿದ್ದಾರೆ.

ಇದನ್ನೂ ಓದಿ: ವಾಟ್ಸಾಪ್, ಇನ್ಸ್​ಟಾಗ್ರಾಮ್, ರಿಯಾಲಿಟಿ ಲ್ಯಾಬ್ಸ್ ಟೀಮ್​ನಿಂದ ಉದ್ಯೋಗಿಗಳ ಲೇ ಆಫ್

ಭಾರತದಲ್ಲಿ ಮೆಡಿಕಲ್ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ…

ರಾಷ್ಟ್ರೀಯ ವೈದ್ಯಕೀಯ ಆಯೋಗ ಕಾಯ್ದೆಯಲ್ಲಿನ ಅನಗತ್ಯ ನಿಯಮ ಹಾಗೂ ಕಾನೂನುಗಳನ್ನು ನಿವಾರಣೆ ಮಾಡುವ ಮೂಲಕ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದೆ. ಇದರಿಂದ ಮೆಡಕಲ್ ಮತ್ತು ನರ್ಸಿಂಗ್ ಕಾಲೇಜುಗಲ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ. ಈ ಕಾಲೇಜುಗಳಲ್ಲಿ ದಾಖಲಾತಿಗಳೂ ಕೂಡ ಹೆಚ್ಚಿವೆ. ತತ್​ಪರಿಣಾಮವಾಗಿ ರಾಷ್ಟ್ರೀಯ ಮತ್ತು ಜಾಗತಿಕ ಅಗತ್ಯಗಳಿಗೆ ಪೂರೈಸಲು ಸಾಧ್ಯವಾಗುತ್ತಿದೆ ಎಂದು ಪುಣ್ಯಾ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:51 pm, Thu, 17 October 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ