AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಿಕ್ ದ್ವಿಚಕ್ರ ವಾಹಗಳಿಗೆ 10,000 ರೂ ಸಬ್ಸಿಡಿ; 2025ರ ಮಾರ್ಚ್​ವರೆಗೂ ಮಾತ್ರ ಈ ಕೊಡುಗೆ

Electric vehicles subsidy: ಈ ಹಣಕಾಸು ವರ್ಷಾಂತ್ಯದವರೆಗೂ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ 10,000 ರೂ ಸಬ್ಸಿಡಿ, ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳಿಗೆ 50,000 ರೂ ಸಬ್ಸಿಡಿ ಸಿಗಲಿದೆ. ಪಿಎಂ ಇ-ಡ್ರೈವ್ ಯೋಜನೆಯಲ್ಲಿ 2025ರ ಮಾರ್ಚ್​ವರೆಗೂ ಈ ಸಬ್ಸಿಡಿ ಕೊಡಲಾಗುತ್ತದೆ. ಅದಾದ ಬಳಿಕ ಸಬ್ಸಿಡಿ ಪ್ರಮಾಣ ಅರ್ಧದಷ್ಟು ಕಡಿಮೆ ಆಗುತ್ತದೆ. ದ್ವಿಚಕ್ರ ವಾಹನಗಳಿಗೆ 5,000 ರೂ ಮತ್ತು ತ್ರಿಚಕ್ರ ವಾಹನಗಳಿಗೆ 25,000 ರೂ ಮಾತ್ರ ಸಬ್ಸಿಡಿ ಇರುತ್ತದೆ.

ಎಲೆಕ್ಟ್ರಿಕ್ ದ್ವಿಚಕ್ರ ವಾಹಗಳಿಗೆ 10,000 ರೂ ಸಬ್ಸಿಡಿ; 2025ರ ಮಾರ್ಚ್​ವರೆಗೂ ಮಾತ್ರ ಈ ಕೊಡುಗೆ
ಒಲಾ ಎಲೆಕ್ಟ್ರಿಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 13, 2024 | 1:00 PM

Share

ನವದೆಹಲಿ, ಸೆಪ್ಟೆಂಬರ್ 13: ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಉತ್ತೇಜನ ಕೊಡುವ ಸಲುವಾಗಿ ಸರ್ಕಾರ ಪಿಎಂ ಇ-ಡ್ರೈವ್ ಸಬ್ಸಿಡಿ ಸ್ಕೀಮ್ ಅನ್ನು ಆರಂಭಿಸಿದೆ. ಅದರಂತೆ ಎಲೆಕ್ಟ್ರಿಕ್ ವಾಹನಗಳಿಗೆ 50,000 ರುವರೆಗೆ ಸಬ್ಸಿಡಿ ಸಿಗಲಿದೆ. ಕೇಂದ್ರ ಬೃಹತ್ ಕೈಗಾರಿಕೆಗಳ ಸಚಿವ ಎಚ್​.ಡಿ. ಕುಮಾರಸ್ವಾಮಿ ನೀಡಿದ ಮಾಹಿತಿ ಪ್ರಕಾರ, ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ 10,000 ರೂ ಸಬ್ಸಿಡಿ ಸಿಗಲಿದೆ. ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳಿಗೆ 50,000 ರೂ ಸಬ್ಸಿಡಿ ಸಿಗಲಿದೆ. ಆದರೆ, ಕಾರು ಸೇರಿದಂತೆ ನಾಲ್ಕು ಚಕ್ರದ ಇವಿಗಳಿಗೆ ಸಬ್ಸಿಡಿ ಇರುವುದಿಲ್ಲ.

2025-26ರ ಹಣಕಾಸು ವರ್ಷದ ಅಂತ್ಯಕ್ಕೆ ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ವಾಹನಗಳ ಪ್ರಮಾಣ ಶೇ. 10ರಷ್ಟು ಇರಬೇಕು. ತ್ರಿಚಕ್ರ ವಾಹನ ಕ್ಷೇತ್ರದಲ್ಲಿ ಇವಿಗಳ ಸಂಖ್ಯೆ ಶೇ. 15ರಷ್ಟು ಇರಬೇಕು ಎಂಬುದು ಸರ್ಕಾರ ಗುರಿ. ಆ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ಹಾಕಿದೆ. ಇದರ ಭಾಗವಾಗಿ ಇ-ಡ್ರೈವ್ ಯೋಜನೆ ಹಾಕಲಾಗಿದೆ.

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳಿಗೆ ಈ ಹಣಕಾಸು ವರ್ಷಾಂತ್ಯದವರೆಗೂ ತಲಾ 10,000 ರೂ ಮತ್ತು 50,000 ರೂ ಸಬ್ಸಿಡಿ ಸಿಗಲಿದೆ. ಅದಾದ ಬಳಿಕ, ಅಂದರೆ ಏಪ್ರಿಲ್​ನಿಂದ ಸಬ್ಸಿಡಿ ಅರ್ಧದಷ್ಟು ಕಡಿಮೆ ಆಗುತ್ತದೆ. ಅಂದರೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನಕ್ಕೆ ಸಿಗುವ ಸಬ್ಸಿಡಿ 5,000 ರೂಗೆ ಇಳಿಯಲಿದೆ. ತ್ರಿಚಕ್ರ ವಾಹನಕ್ಕೆ ಸಬ್ಸಿಡಿ 25,000 ರೂ ಆಗಲಿದೆ.

ಇದನ್ನೂ ಓದಿ: ಅ. 31ರಿಂದ ಯುಪಿಐ ಲೈಟ್ ಆಟೊ ಟಾಪ್ ಅಪ್; ಏನಿದು ಹೊಸ ಫೀಚರ್?

ಪಿಎಂ ಇ-ಡ್ರೈವ್ ಯೋಜನೆಯಲ್ಲಿ ಸಬ್ಸಿಡಿ ಸೌಲಭ್ಯ ಮಾತ್ರವಲ್ಲ, ಇವಿ ವಾಹನಗಳಿಗೆ ಬೇಕಾದ ಚಾರ್ಜಿಂಗ್ ಸೌಕರ್ಯಗಳ ಅಭಿವೃದ್ಧಿಗೆ ಉತ್ತೇಜನ ಕೊಡಲಾಗುತ್ತದೆ. ಹಿಂದಿನ ಫೇಮ್ ಸ್ಕೀಮ್​ಗಳಲ್ಲಿದ್ದ ನ್ಯೂನತೆಗಳನ್ನು ಈ ಯೋಜನೆ ಮೂಲಕ ಸರಿಪಡಿಸಲಾಗಿದೆ. ದೇಶೀಯವಾಗಿ ತಯಾರಾದ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ಕೊಡಲಾಗುತ್ತದೆ. ಆದರೆ ಈ ಸೌಲಭ್ಯವನ್ನು ಕೆಲ ಕಾರ್ ಕಂಪನಿಗಳು ದುರ್ಬಳಕೆ ಮಾಡಿಕೊಂಡಿದ್ದಿದೆ. ವಿದೇಶಗಳಿಂದ ಆಮದು ಮಾಡಿಕೊಳ್ಳಲಾದ ಇವಿಗಳಿಗೂ ಸಬ್ಸಿಡಿ ಕ್ಲೇಮ್ ಮಾಡಲಾಗುತ್ತಿತ್ತು. ಈ ರೀತಿ ಪೋಲಾದ ಹಣವನ್ನು ಮರಳಿ ಪಡೆಯಲು ಸರ್ಕಾರ ಕ್ರಮ ಕೈಗೊಂಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ