AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HDFC Bank FD Rate: ಎಚ್​ಡಿಎಫ್​ಸಿ ಬ್ಯಾಂಕ್​ ಫಿಕ್ಸೆಡ್​ ಡೆಪಾಸಿಟ್​ ಬಡ್ಡಿ ದರಗಳ ಹೆಚ್ಚಳ

ಖಾಸಗಿ ಬ್ಯಾಂಕ್ ಆದ ಎಚ್​ಡಿಎಫ್​ಸಿ ಬ್ಯಾಂಕ್​ನಿಂದ ಫೆಬ್ರವರಿ 14ನೇ ತಾರೀಕಿನಿಂದ ಅನ್ವಯ ಆಗುವಂತೆ ಫಿಕ್ಸೆಡ್​ ಡೆಪಾಸಿಟ್​ಗಳ ಮೇಲಿನ ಬಡ್ಡಿ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ.

HDFC Bank FD Rate: ಎಚ್​ಡಿಎಫ್​ಸಿ ಬ್ಯಾಂಕ್​ ಫಿಕ್ಸೆಡ್​ ಡೆಪಾಸಿಟ್​ ಬಡ್ಡಿ ದರಗಳ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 18, 2022 | 1:00 AM

Share

ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ (HDFC Bank) ನಿಶ್ಚಿತ ಠೇವಣಿಗಳನ್ನು ಹೊಂದಿರುವ ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಮುಖ್ಯವಾಗಿ, ಬ್ಯಾಂಕ್​ನಿಂದ ಕೆಲವು ಅವಧಿಯ ಫಿಕ್ಸೆಡ್​ ಡೆಪಾಸಿಟ್​ಗಳ ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಿದೆ. ಇದನ್ನು ಬ್ಯಾಂಕ್​ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಬ್ಯಾಂಕ್‌ನ ಅಪ್​ಡೇಟ್​ ಪ್ರಕಾರ, 2 ಕೋಟಿ ರೂಪಾಯಿಗಿಂತ ಕಡಿಮೆ ಠೇವಣಿಗಳ ಮೇಲಿನ ಬಡ್ಡಿದರಗಳನ್ನು 5ರಿಂದ 10 ಬೇಸಿಸ್ ಪಾಯಿಂಟ್‌ ಹೆಚ್ಚಿಸಲಾಗಿದೆ ಮತ್ತು ಪರಿಷ್ಕೃತ ದರಗಳು ಫೆಬ್ರವರಿ 14ರಿಂದ ಅನ್ವಯವಾಗುತ್ತವೆ. ಇದರ ಹೊರತಾಗಿ, ಖಾಸಗಿ ಬ್ಯಾಂಕ್​ ಒಂದು ವರ್ಷದ ಅವಧಿಯ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿ ದರವನ್ನು 10 ಬೇಸಿಸ್ ಪಾಯಿಂಟ್‌ಗಳಿಂದ ಹಿಂದಿನ ಶೇ 4.9ರಿಂದ ಶೇ 5ಕ್ಕೆ ಹೆಚ್ಚಿಸಿದೆ.

ಅಲ್ಲದೆ, 1-2 ವರ್ಷಗಳ ಮಧ್ಯದ ಅವಧಿಯನ್ನು ಹೊಂದಿರುವ ಠೇವಣಿಗಳ ಮೇಲಿನ ಬಡ್ಡಿ ದರವು ಶೇ 5 ಆಗಿದೆ. ಎರಡು-ಮೂರು ವರ್ಷಗಳ ಅವಧಿಯ ಫಿಕ್ಸೆಡ್ ಡೆಪಾಸಿಟ್​ಗಳ ಮೇಲಿನ ಬಡ್ಡಿ ದರವು ಶೇ 5.20 ಎಂದು ಬ್ಯಾಂಕ್ ಹೇಳಿದೆ. ಎಚ್​ಡಿಎಫ್​ಸಿ ಬ್ಯಾಂಕ್ ಪ್ರಕಾರ, 3ರಿಂದ 5 ವರ್ಷಗಳ ಅವಧಿಯ ಠೇವಣಿಗಳ ಮೇಲಿನ ದರಗಳನ್ನು 5 ಬೇಸಿಸ್ ಪಾಯಿಂಟ್‌ಗಳಿಂದ ಶೇ 5.45ಕ್ಕೆ ಹೆಚ್ಚಿಸಲಾಗಿದೆ. 5ರಿಂದ 10 ವರ್ಷಗಳ ಅವಧಿಯೊಂದಿಗೆ ಠೇವಣಿಗಳ ಮೇಲಿನ ಎಫ್​ಡಿ ದರವು ಪ್ರಸ್ತುತ ಶೇ 5.60 ಆಗಿದೆ. ಕಳೆದ ವಾರ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಯುಕೊ ಬ್ಯಾಂಕ್ ಕೂಡ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಪರಿಷ್ಕರಿಸಿದ್ದವು.

ಇನ್ನೂ ಅಚ್ಚರಿ ಎಂಬಂಥ ಕ್ರಮದಲ್ಲಿ, ಆರ್​ಬಿಐ ಹಣಕಾಸು ನೀತಿ ಸಮಿತಿಯು ಕಳೆದ ವಾರ ದರಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಿತು. ರೆಪೊ ದರ ಪ್ರಸ್ತುತ ಶೇ 4 ಮತ್ತು ರಿವರ್ಸ್ ರೆಪೊ ದರ ಶೇ 3.35ರಲ್ಲಿದೆ ಎಂದು ಆರ್​ಬಿಐ ಹೇಳಿದೆ.

ಇದನ್ನೂ ಓದಿ: HDFC Bank Q3 Results: ಎಚ್​ಡಿಎಫ್​ಸಿ ಬ್ಯಾಂಕ್ ಮೂರನೇ ತ್ರೈಮಾಸಿಕ ಲಾಭ 10342 ಕೋಟಿ ರೂಪಾಯಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ