AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HDFC-HDFC Bank Merger: ಎಚ್​ಡಿಎಫ್​ಸಿ- ಎಚ್​ಡಿಎಫ್​ಸಿ ಬ್ಯಾಂಕ್ ವಿಲೀನದಿಂದ ಸಿಬ್ಬಂದಿ ಮೇಲೆ ಪರಿಣಾಮ ಇಲ್ಲ

ಎಚ್​ಡಿಎಫ್​ಸಿ- ಎಚ್​ಡಿಎಫ್​ಸಿ ಬ್ಯಾಂಕ್​ ವಿಲೀನ ಆಗುವುದಕ್ಕೆ ಎಲ್ಲ ಸಿದ್ಧತೆ ಆಗಿದೆ. ಇದರಿಂದ ಸಿಬ್ಬಂದಿ ಮೇಲೆ ಏನೂ ಪರಿಣಾಮ ಆಗಲ್ಲ ಎಂದು ಮುಖ್ಯಸ್ಥ ದೀಪಕ್ ಪರೇಖ್ ಹೇಳಿದ್ದಾರೆ.

HDFC-HDFC Bank Merger: ಎಚ್​ಡಿಎಫ್​ಸಿ- ಎಚ್​ಡಿಎಫ್​ಸಿ ಬ್ಯಾಂಕ್ ವಿಲೀನದಿಂದ ಸಿಬ್ಬಂದಿ ಮೇಲೆ ಪರಿಣಾಮ ಇಲ್ಲ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 04, 2022 | 2:05 PM

Share

ಕಾರ್ಪೊರೇಟ್​ ಇತಿಹಾಸದಲ್ಲಿ ಅತಿದೊಡ್ಡ ವಿಲೀನ ಎನಿಸಿಕೊಳ್ಳುವ, ಭಾರತದ ಅತಿ ದೊಡ್ಡ ಹೌಸಿಂಗ್ ಫೈನಾನ್ಸ್ ಕಂಪೆನಿಯಾದ ಎಚ್​ಡಿಎಫ್​ಸಿ ಲಿಮಿಟೆಡ್​ ಹಾಗೂ ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್ ಆದ ಎಚ್​ಡಿಎಫ್​ಸಿ ಬ್ಯಾಂಕ್ (HDFC Bank) ವಿಲೀನ ಆಗಲಿದೆ. ಈ ವಿಲೀನದಿಂದ ಸಿಬ್ಬಂದಿ ಮೇಲೆ ಯಾವುದೇ ಪರಿಣಾಮ ಆಗಲ್ಲ ಎಂದು ಎಚ್​ಡಿಎಫ್​ಸಿ ಲಿಮಿಟೆಡ್​ನ ಮುಖ್ಯಸ್ಥ ದೀಪಕ್ ಪರೇಖ್ ಹೇಳಿದ್ದಾರೆ. “ಎಚ್​ಡಿಎಫ್​ಸಿ- ಎಚ್​ಡಿಎಫ್​ಸಿ ಬ್ಯಾಂಕ್ ವಿಲೀನವು ಎಚ್​ಡಿಎಫ್​ಸಿ ಲಿಮಿಟೆಡ್ ಸಿಬ್ಬಂದಿಯ ಮೇಲೆ ಯಾವುದೇ ಪರಿಣಾಮ ಬೀರಲ್ಲ,” ಎಂದು ದೀಪಕ್ ಪರೇಖ್ ಹೇಳಿರುವುದನ್ನು ಉದಾಹರಿಸಿ, ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ವಿಲೀನದ ನಂತರ ಎಚ್​ಡಿಎಫ್​ಸಿಯು ಎಚ್​ಡಿಎಫ್​ಸಿ ಬ್ಯಾಂಕ್​ನಲ್ಲಿ ಶೇ 41ರಷ್ಟು ಪಾಲನ್ನು ಹೊಂದಿರುತ್ತದೆ ಎಂದು ವಿನಿಮಯ ಕೇಂದ್ರದ ಫೈಲಿಂಗ್​ನಲ್ಲಿ ಎಚ್​ಡಿಎಫ್​ಸಿ ಬ್ಯಾಂಕ್ ತಿಳಿಸಿದೆ.

ಈ ವ್ಯವಹಾರದ ಭಾಗವಾಗಿ ಎಚ್​ಡಿಎಫ್​ಸಿ ಲಿಮಿಟೆಡ್​ನ ಷೇರುದಾರರು ಎಚ್​ಡಿಎಫ್​ಸಿ ಬ್ಯಾಂಕ್​ನ (1 ರೂಪಾಯಿ ಮುಖ ಬೆಲೆ) 42 ಷೇರುಗಳನ್ನು ತಮ್ಮ ಬಳಿ ಇರುವ ಎಚ್​ಡಿಎಫ್​ಸಿ ಲಿಮಿಟೆಡ್​ನ 25 ಷೇರುಗಳಿಗೆ (2 ರೂ. ಮುಖಬೆಲೆ) ಪಡೆಯುತ್ತಾರೆ.

ಈ ಪ್ರಸ್ತಾವಿತ ವಿಲೀನವು 2024ರ ಹಣಕಾಸು ವರ್ಷದ ಎರಡನೇ ಅಥವಾ ಮೂರನೇ ತ್ರೈಮಾಸಿಕದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಎಚ್​ಡಿಎಫ್​ಸಿ ಹೇಳಿರುವಂತೆ, ಪ್ರಸ್ತಾವಿತ ವಹಿವಾಟು ಮೂಲಕ ಕೃಷಿಯಂಥ ಪ್ರಾಧಾನ್ಯ ವಲಯಕ್ಕೆ ಹೆಚ್ಚಿನ ಪ್ರಮಾಣದ ಸಾಲ ಒದಗಿಸಲು ಸಹಾಯ ಮಾಡುತ್ತದೆ. ಕಾರ್ಯ ನಿರ್ವಹಣೆ ದಕ್ಷತೆ ಹೆಚ್ಚಿಸುವುದಕ್ಕೆ ಮತ್ತು ಸಾಲ ಹಿಂತಿರುಗಿಸದವರ ಪ್ರಮಾಣ ಕಡಿಮೆ ಆಗಲಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: HDFC Bank: ಡಿಜಿಟಲ್​ ಆರಂಭವೂ ಸೇರಿದಂತೆ ಎಚ್​ಡಿಎಫ್​ಸಿ ಬ್ಯಾಂಕ್​ ಮೇಲಿನ ಎಲ್ಲ ನಿರ್ಬಂಧ ತೆರವುಗೊಳಿಸಿದ ಆರ್​ಬಿಐ

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?