AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರುಬಿಸಿಲಿಗೆ ಬೆಳೆನಾಶದ ಭಯ; ರೈತರು ಬೆಳೆವಿಮೆ ಯೋಜನೆಯ ಲಾಭ ಪಡೆಯುವುದು ಹೇಗೆ? ಇಲ್ಲಿದೆ ಡೀಟೇಲ್ಸ್

Know How to Claim Crop Insurance compensation: ಬೇಸಿಗೆಯ ಬಿಸಿಗಾಳಿಗೆ ರೈತರ ಬೆಳೆಗಳು ನಾಶವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಕೇಂದ್ರದ ಪಿಎಂ ಫಸಲ್ ಬಿಮಾ ಯೋಜನೆಯಲ್ಲಿ ನೈಸರ್ಗಿಕ ವಿಕೋಪಗಳಿಂದ ಬೆಳೆ ನಾಶವಾದರೆ ಪರಿಹಾರ ಪಡೆಯಬಹುದು. ಇದರಲ್ಲಿ ಹೀಟ್​ವೇವ್ ಅಥವಾ ಬಿಸಿಗಾಳಿಯ ವಿಕೋಪವೂ ಇದೆ. ಬಿಸಿಗಾಳಿಯಿಂದ ಅಥವಾ ಇನ್ಯಾವುದಾದರೂ ಪ್ರಾಕೃತಿಕ ವಿಕೋಪಗಳಿಂದ ಬೆಳೆ ನಾಶವಾದರೆ, ಆ ಅವಘಡವಾಗಿ 72 ಗಂಟೆ ಅಥವಾ ಮೂರು ದಿನದೊಳಗೆ ಇನ್ಷೂರೆನ್ಸ ಕಂಪನಿ ಅಥವಾ ಸ್ಥಳೀಯ ಕೃಷಿ ಕಚೇರಿಗೆ ಮಾಹಿತಿ ನೀಡಬೇಕು. 14 ದಿನದಲ್ಲಿ ಪರಿಹಾರ ಸಿಗುವ ಸಾಧ್ಯತೆ ಇದೆ.

ಬಿರುಬಿಸಿಲಿಗೆ ಬೆಳೆನಾಶದ ಭಯ; ರೈತರು ಬೆಳೆವಿಮೆ ಯೋಜನೆಯ ಲಾಭ ಪಡೆಯುವುದು ಹೇಗೆ? ಇಲ್ಲಿದೆ ಡೀಟೇಲ್ಸ್
ಬೆಳೆನಾಶಕ್ಕೆ ಪರಿಹಾರ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 07, 2024 | 12:27 PM

ಈ ಬಾರಿ ಬೇಸಿಗೆಯಲ್ಲಿ ಬಿಸಿ ಬಹಳ ಅಧಿಕ ಮಟ್ಟದಲ್ಲಿ ಇದೆ. ಕರ್ನಾಟಕವೂ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಬಿಸಿಗಾಳಿಯ ಕಾಟ ತೀವ್ರವಾಗಿದೆ. ರೈತರ ಬೆಳೆಗಳಿಗೆ ಈ ಬಾರಿ ಹೆಚ್ಚು ಹಾನಿಯಾಗುವ (crop loss) ಸಾಧ್ಯತೆ ದಟ್ಟವಾಗಿದೆ. ಸಾಕಷ್ಟು ಖರ್ಚು ಮಾಡಿ ಬೆಳೆದ ಬೆಳೆ ಕೈಕೊಟ್ಟರೆ ರೈತರಿಗೆ ಚೇತರಿಸಿಕೊಳ್ಳಲು ಕಷ್ಟವಾಗುತ್ತದೆ. ಸಾಲದ ವಿಷವರ್ತುಲಕ್ಕೆ ಸಿಲುಕಬೇಕಾಗುತ್ತದೆ. ಅದಕ್ಕಾಗಿ ಸರ್ಕಾರ ಬೆಳೆ ವಿಮೆ ಯೋಜನೆಯನ್ನು ರೈತರಿಗಾಗಿ ಜಾರಿಗೆ ತಂದಿದೆ. ಪಿಎಂ ಫಸಲ್ ಬಿಮಾ ಯೋಜನೆ (PM Fasal Bima Yojana) 2016ರಲ್ಲಿ ಜಾರಿಗೆ ಬಂದಿದ್ದು, ಸಾಕಷ್ಟು ರೈತರಿಗೆ ಇದು ಸಮಾಧಾನದ ನಿಟ್ಟುಸಿರು ಬಿಡುವಂತೆ ಮಾಡಿದೆ.

ನೈಸರ್ಗಿಕ ವಿಕೋಪಗಳಿಂದ ಮತ್ತು ಅವಘಡಗಳಿಂದ ಬೆಳೆಗಳಿಗೆ ಹಾನಿಯಾದರೆ ವಿಮಾ ಯೋಜನೆ ಮೂಲಕ ಪರಿಹಾರ ಪಡೆಯಬಹುದು. ಅತಿವೃಷ್ಟಿ, ಅನಾವೃಷ್ಟಿ, ಬಿಸಿಗಾಳಿ, ಚಂಡಮಾರುತ, ಭೂಕುಸಿತ ಇತ್ಯಾದಿ ಪ್ರಾಕೃತಿಕ ಅವಘಡಗಳಿಂದ ಬೆಳೆ ನಾಶವಾದರೆ ರೈತರಿಗೆ ಪರಿಹಾರ ಸಿಗುತ್ತದೆ.

ಇದನ್ನೂ ಓದಿ: ಕಡಿಮೆ ಸಂಬಳ ಇದ್ದರೆ, ಉದ್ಯೋಗ ಕಳೆದುಕೊಂಡರೆ ಸಿಬಿಲ್ ಸ್ಕೋರ್ ಕಡಿಮೆ ಆಗುತ್ತಾ? ಇಲ್ಲಿದೆ ವಾಸ್ತವಿಕ ಅಂಶಗಳು

ಬೆಳೆನಾಶಕ್ಕೆ ಪರಿಹಾರ ಹೇಗೆ ಪಡೆಯುವುದು?

ಪ್ರಾಕೃತಿಕ ಅವಘಡದಿಂದ ಬೆಳೆ ನಾಶವಾದರೆ, ಆ ಘಟನೆಯಾಗಿ 72 ಗಂಟೆಯೊಳಗೆ ಸಂಬಂಧಿತ ಇನ್ಷೂರೆನ್ಸ್ ಕಂಪನಿ ಅಥವಾ ಸ್ಥಳೀಯ ಕೃಷಿ ಕಚೇರಿಗೆ ಮಾಹಿತಿ ನೀಡಬೇಕು. ಆಗ ಸಂಬಂಧಿತ ಅಧಿಕಾರಿಗಳು ಹಾನಿ ಎಷ್ಟಾಗಿದೆ ಎಂದು ಅಂದಾಜಿಸಲು ಸಾಧ್ಯವಾಗುತ್ತದೆ. ಇದಾದ ಬಳಿಕ ಪರಿಹಾರ ಪ್ರಕ್ರಿಯೆ ಚಾಲನೆಗೊಳ್ಳುತ್ತದೆ. ಬಿಸಿಗಾಳಿಯಿಂದ ಬೆಳೆಗೆ ಹಾನಿಯಾಗಿದ್ದರೂ 72 ಗಂಟೆಯೊಳಗೆ ಕೃಷಿ ಕಚೇರಿಯ ಗಮನಕ್ಕೆ ತರಬೇಕಾಗುತ್ತದೆ.

ಇದನ್ನೂ ಓದಿ: 50 ರೂ ಇಟ್ಟುಕೊಂಡು ದೇಶ ಬಿಟ್ಟು, ಬ್ರೂನೇ ಸುಲ್ತಾನರಿಂದ ಶಭಾಷ್​ಗಿರಿ ಪಡೆಯುವ ಮಟ್ಟಕ್ಕೆ ಬೆಳೆದ ರಿಯಲ್ ಎಸ್ಟೇಟ್ ಕಿಂಗ್

ಶೇ. 33ರಷ್ಟು ಬೆಳೆ ನಾಶವಾಗಿರಬೇಕು

ರೈತರು ಪಿಎಂ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಬೆಳೆ ಪರಿಹಾರ ಪಡೆಯುವುದಾದರೆ, ಕನಿಷ್ಠ ಶೇ. 33ರಷ್ಟಾದರೂ ಬೆಳೆಗೆ ಹಾನಿಯಾಗಿರಬೇಕು. ಆಗ ಪರಿಹಾರ ಕ್ಲೈಮ್ ಮಾಡಲು ಅರ್ಹರಿರುತ್ತೀರಿ. ಸಾಮಾನ್ಯವಾಗಿ ನೀವು ಇನ್ಷೂರೆನ್ಸ್ ಕ್ಲೈಮ್​ಗೆ ಅರ್ಜಿ ಸಲ್ಲಿಸಿದ 14 ದಿನದಲ್ಲಿ ಪರಿಹಾರ ಹಣ ನಿಮ್ಮ ಖಾತೆಗೆ ಬಂದಿರುತ್ತದೆ.

ಹೆಚ್ಚಿನ ಮಾಹಿತಿಗೆ ಫಸಲ್ ಬಿಮಾ ಯೋಜನೆಯ ಅಧಿಕೃತ ವೆಬ್​ಸೈಟ್​ನಲ್ಲಿ ನೋಡಬಹುದು: pmfby.gov.in/

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ