ಬಿರುಬಿಸಿಲಿಗೆ ಬೆಳೆನಾಶದ ಭಯ; ರೈತರು ಬೆಳೆವಿಮೆ ಯೋಜನೆಯ ಲಾಭ ಪಡೆಯುವುದು ಹೇಗೆ? ಇಲ್ಲಿದೆ ಡೀಟೇಲ್ಸ್

Know How to Claim Crop Insurance compensation: ಬೇಸಿಗೆಯ ಬಿಸಿಗಾಳಿಗೆ ರೈತರ ಬೆಳೆಗಳು ನಾಶವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಕೇಂದ್ರದ ಪಿಎಂ ಫಸಲ್ ಬಿಮಾ ಯೋಜನೆಯಲ್ಲಿ ನೈಸರ್ಗಿಕ ವಿಕೋಪಗಳಿಂದ ಬೆಳೆ ನಾಶವಾದರೆ ಪರಿಹಾರ ಪಡೆಯಬಹುದು. ಇದರಲ್ಲಿ ಹೀಟ್​ವೇವ್ ಅಥವಾ ಬಿಸಿಗಾಳಿಯ ವಿಕೋಪವೂ ಇದೆ. ಬಿಸಿಗಾಳಿಯಿಂದ ಅಥವಾ ಇನ್ಯಾವುದಾದರೂ ಪ್ರಾಕೃತಿಕ ವಿಕೋಪಗಳಿಂದ ಬೆಳೆ ನಾಶವಾದರೆ, ಆ ಅವಘಡವಾಗಿ 72 ಗಂಟೆ ಅಥವಾ ಮೂರು ದಿನದೊಳಗೆ ಇನ್ಷೂರೆನ್ಸ ಕಂಪನಿ ಅಥವಾ ಸ್ಥಳೀಯ ಕೃಷಿ ಕಚೇರಿಗೆ ಮಾಹಿತಿ ನೀಡಬೇಕು. 14 ದಿನದಲ್ಲಿ ಪರಿಹಾರ ಸಿಗುವ ಸಾಧ್ಯತೆ ಇದೆ.

ಬಿರುಬಿಸಿಲಿಗೆ ಬೆಳೆನಾಶದ ಭಯ; ರೈತರು ಬೆಳೆವಿಮೆ ಯೋಜನೆಯ ಲಾಭ ಪಡೆಯುವುದು ಹೇಗೆ? ಇಲ್ಲಿದೆ ಡೀಟೇಲ್ಸ್
ಬೆಳೆನಾಶಕ್ಕೆ ಪರಿಹಾರ

Updated on: Apr 07, 2024 | 12:27 PM

ಈ ಬಾರಿ ಬೇಸಿಗೆಯಲ್ಲಿ ಬಿಸಿ ಬಹಳ ಅಧಿಕ ಮಟ್ಟದಲ್ಲಿ ಇದೆ. ಕರ್ನಾಟಕವೂ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಬಿಸಿಗಾಳಿಯ ಕಾಟ ತೀವ್ರವಾಗಿದೆ. ರೈತರ ಬೆಳೆಗಳಿಗೆ ಈ ಬಾರಿ ಹೆಚ್ಚು ಹಾನಿಯಾಗುವ (crop loss) ಸಾಧ್ಯತೆ ದಟ್ಟವಾಗಿದೆ. ಸಾಕಷ್ಟು ಖರ್ಚು ಮಾಡಿ ಬೆಳೆದ ಬೆಳೆ ಕೈಕೊಟ್ಟರೆ ರೈತರಿಗೆ ಚೇತರಿಸಿಕೊಳ್ಳಲು ಕಷ್ಟವಾಗುತ್ತದೆ. ಸಾಲದ ವಿಷವರ್ತುಲಕ್ಕೆ ಸಿಲುಕಬೇಕಾಗುತ್ತದೆ. ಅದಕ್ಕಾಗಿ ಸರ್ಕಾರ ಬೆಳೆ ವಿಮೆ ಯೋಜನೆಯನ್ನು ರೈತರಿಗಾಗಿ ಜಾರಿಗೆ ತಂದಿದೆ. ಪಿಎಂ ಫಸಲ್ ಬಿಮಾ ಯೋಜನೆ (PM Fasal Bima Yojana) 2016ರಲ್ಲಿ ಜಾರಿಗೆ ಬಂದಿದ್ದು, ಸಾಕಷ್ಟು ರೈತರಿಗೆ ಇದು ಸಮಾಧಾನದ ನಿಟ್ಟುಸಿರು ಬಿಡುವಂತೆ ಮಾಡಿದೆ.

ನೈಸರ್ಗಿಕ ವಿಕೋಪಗಳಿಂದ ಮತ್ತು ಅವಘಡಗಳಿಂದ ಬೆಳೆಗಳಿಗೆ ಹಾನಿಯಾದರೆ ವಿಮಾ ಯೋಜನೆ ಮೂಲಕ ಪರಿಹಾರ ಪಡೆಯಬಹುದು. ಅತಿವೃಷ್ಟಿ, ಅನಾವೃಷ್ಟಿ, ಬಿಸಿಗಾಳಿ, ಚಂಡಮಾರುತ, ಭೂಕುಸಿತ ಇತ್ಯಾದಿ ಪ್ರಾಕೃತಿಕ ಅವಘಡಗಳಿಂದ ಬೆಳೆ ನಾಶವಾದರೆ ರೈತರಿಗೆ ಪರಿಹಾರ ಸಿಗುತ್ತದೆ.

ಇದನ್ನೂ ಓದಿ: ಕಡಿಮೆ ಸಂಬಳ ಇದ್ದರೆ, ಉದ್ಯೋಗ ಕಳೆದುಕೊಂಡರೆ ಸಿಬಿಲ್ ಸ್ಕೋರ್ ಕಡಿಮೆ ಆಗುತ್ತಾ? ಇಲ್ಲಿದೆ ವಾಸ್ತವಿಕ ಅಂಶಗಳು

ಬೆಳೆನಾಶಕ್ಕೆ ಪರಿಹಾರ ಹೇಗೆ ಪಡೆಯುವುದು?

ಪ್ರಾಕೃತಿಕ ಅವಘಡದಿಂದ ಬೆಳೆ ನಾಶವಾದರೆ, ಆ ಘಟನೆಯಾಗಿ 72 ಗಂಟೆಯೊಳಗೆ ಸಂಬಂಧಿತ ಇನ್ಷೂರೆನ್ಸ್ ಕಂಪನಿ ಅಥವಾ ಸ್ಥಳೀಯ ಕೃಷಿ ಕಚೇರಿಗೆ ಮಾಹಿತಿ ನೀಡಬೇಕು. ಆಗ ಸಂಬಂಧಿತ ಅಧಿಕಾರಿಗಳು ಹಾನಿ ಎಷ್ಟಾಗಿದೆ ಎಂದು ಅಂದಾಜಿಸಲು ಸಾಧ್ಯವಾಗುತ್ತದೆ. ಇದಾದ ಬಳಿಕ ಪರಿಹಾರ ಪ್ರಕ್ರಿಯೆ ಚಾಲನೆಗೊಳ್ಳುತ್ತದೆ. ಬಿಸಿಗಾಳಿಯಿಂದ ಬೆಳೆಗೆ ಹಾನಿಯಾಗಿದ್ದರೂ 72 ಗಂಟೆಯೊಳಗೆ ಕೃಷಿ ಕಚೇರಿಯ ಗಮನಕ್ಕೆ ತರಬೇಕಾಗುತ್ತದೆ.

ಇದನ್ನೂ ಓದಿ: 50 ರೂ ಇಟ್ಟುಕೊಂಡು ದೇಶ ಬಿಟ್ಟು, ಬ್ರೂನೇ ಸುಲ್ತಾನರಿಂದ ಶಭಾಷ್​ಗಿರಿ ಪಡೆಯುವ ಮಟ್ಟಕ್ಕೆ ಬೆಳೆದ ರಿಯಲ್ ಎಸ್ಟೇಟ್ ಕಿಂಗ್

ಶೇ. 33ರಷ್ಟು ಬೆಳೆ ನಾಶವಾಗಿರಬೇಕು

ರೈತರು ಪಿಎಂ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಬೆಳೆ ಪರಿಹಾರ ಪಡೆಯುವುದಾದರೆ, ಕನಿಷ್ಠ ಶೇ. 33ರಷ್ಟಾದರೂ ಬೆಳೆಗೆ ಹಾನಿಯಾಗಿರಬೇಕು. ಆಗ ಪರಿಹಾರ ಕ್ಲೈಮ್ ಮಾಡಲು ಅರ್ಹರಿರುತ್ತೀರಿ. ಸಾಮಾನ್ಯವಾಗಿ ನೀವು ಇನ್ಷೂರೆನ್ಸ್ ಕ್ಲೈಮ್​ಗೆ ಅರ್ಜಿ ಸಲ್ಲಿಸಿದ 14 ದಿನದಲ್ಲಿ ಪರಿಹಾರ ಹಣ ನಿಮ್ಮ ಖಾತೆಗೆ ಬಂದಿರುತ್ತದೆ.

ಹೆಚ್ಚಿನ ಮಾಹಿತಿಗೆ ಫಸಲ್ ಬಿಮಾ ಯೋಜನೆಯ ಅಧಿಕೃತ ವೆಬ್​ಸೈಟ್​ನಲ್ಲಿ ನೋಡಬಹುದು: pmfby.gov.in/

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us