AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Financial changes: ಡಿಸೆಂಬರ್ 1ರಿಂದ ಜಾರಿ ಆಗಬಹುದಾದ ಪ್ರಮುಖ ಹಣಕಾಸು ವಿಚಾರದ ಬದಲಾವಣೆಗಳಿವು

2021ರ ಡಿಸೆಂಬರ್​ 1ರಿಂದ ನಿರೀಕ್ಷೆ ಮಾಡಬಹುದಾದದ ಬದಲಾವಣೆಗಳು ಇಲ್ಲಿವೆ. ಎಲ್​ಪಿಜಿ ಸಿಲಿಂಡರ್ ಸೇರಿದಂತೆ ಇತರ ಬದಲಾವಣೆಗಳ ಬಗ್ಗೆ ಮಾಹಿತಿ ವಿವರಿಸಲಾಗಿದೆ.

Financial changes: ಡಿಸೆಂಬರ್ 1ರಿಂದ ಜಾರಿ ಆಗಬಹುದಾದ ಪ್ರಮುಖ ಹಣಕಾಸು ವಿಚಾರದ ಬದಲಾವಣೆಗಳಿವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 30, 2021 | 11:45 AM

Share

ಪ್ರತಿ ತಿಂಗಳ ಮೊದಲ ದಿನದಂದು ಕೆಲವು ಹೊಸ ನಿಯಮಗಳು ಜಾರಿ ಆಗುತ್ತವೆ. ಅಥವಾ ಹಳೆಯ ನಿಯಮಗಳಲ್ಲಿ ಕೆಲವು ಬದಲಾವಣೆಗಳಾಗುತ್ತವೆ. ನವೆಂಬರ್ ತಿಂಗಳು ಮುಗಿಯಲಿದ್ದು, ಹೊಸ ತಿಂಗಳು ಆರಂಭವಾಗಲಿದೆ. ಡಿಸೆಂಬರ್ 1ರಂದು ಕೆಲವು ಹೊಸ ನಿಯಮಗಳು ಅನ್ವಯವಾಗುತ್ತವೆ. ಇವುಗಳ ಬಗ್ಗೆ ಇಲ್ಲಿ ಮಾಹಿತಿ ಇದೆ.

ಗ್ಯಾಸ್ ಸಿಲಿಂಡರ್ ಬೆಲೆ ಪ್ರತಿ ತಿಂಗಳ ಒಂದನೇ ತಾರೀಕಿನಂದು ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪರಿಶೀಲಿಸಲಾಗುತ್ತದೆ. ಅದರ ನಂತರ ಹೊಸ ಬೆಲೆಗಳನ್ನು ನಿಗದಿಪಡಿಸಲಾಗುತ್ತದೆ. ವಾಣಿಜ್ಯ ಮತ್ತು ಗೃಹಬಳಕೆಯ ಸಿಲಿಂಡರ್‌ಗಳಿಗೆ ಪ್ರತಿ ತಿಂಗಳ 1ರಂದು ಹೊಸ ದರಗಳನ್ನು ನಿಗದಿ ಮಾಡಲಾಗುತ್ತದೆ. ಪರಿಶೀಲನೆ ಬಳಿಕ ಸಿಲಿಂಡರ್ ಬೆಲೆ ಹೆಚ್ಚಾಗುವ ಅಥವಾ ಕಡಿಮೆಯಾಗುವ ಸಾಧ್ಯತೆ ಇದೆ. ಕೆಲವು ಬಾರಿ ಬೆಲೆಗಳಲ್ಲಿ ಯಾವುದೇ ಬದಲಾವಣೆ ಸಹ ಇರುವುದಿಲ್ಲ.

ಮನೆ ಸಾಲದ ಕೊಡುಗೆ ಬಹುತೇಕ ಬ್ಯಾಂಕ್‌ಗಳು ಹಬ್ಬದ ಸಮಯದಲ್ಲಿ ವಿವಿಧ ಗೃಹ ಸಾಲದ ಕೊಡುಗೆಗಳನ್ನು ನೀಡುತ್ತಿದ್ದವು. ಇವುಗಳಲ್ಲಿ ಹಲವು ಕಡಿಮೆ ಬಡ್ಡಿದರಗಳು ಮತ್ತು ಜೀರೋ ಪ್ರೊಸೆಸಿಂಗ್ ಶುಲ್ಕಗಳನ್ನು ಒಳಗೊಂಡಿದ್ದವು. ಹೆಚ್ಚಿನ ಬ್ಯಾಂಕ್‌ಗಳ ಈ ಕೊಡುಗೆಗಳು ಡಿಸೆಂಬರ್ 31, 2021ರಂದು ಕೊನೆಗೊಳ್ಳುತ್ತವೆ. ಆದರೆ ಎಲ್‌ಐಸಿ ಹೌಸಿಂಗ್ ಫೈನಾನ್ಸ್‌ನ ಆಫರ್ ನವೆಂಬರ್ 30ರಂದು ಕೊನೆಗೊಳ್ಳುತ್ತದೆ.

ಎಸ್​ಬಿಐ ಕ್ರೆಡಿಟ್ ಕಾರ್ಡ್ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದರೆ, ಡಿಸೆಂಬರ್ 1ರಿಂದ ಆ ಕ್ರೆಡಿಟ್ ಕಾರ್ಡ್‌ನೊಂದಿಗೆ ಇಎಂಐನಲ್ಲಿ ಶಾಪಿಂಗ್ ಮಾಡುವುದು ದುಬಾರಿ ಆಗಲಿದೆ. ಸದ್ಯಕ್ಕೆ, ಎಸ್‌ಬಿಐ ಕಾರ್ಡ್ ಬಳಸಲು ಬಡ್ಡಿಯನ್ನು ಮಾತ್ರ ಪಾವತಿಸಬೇಕಾಗುತ್ತದೆ, ಆದರೆ ಡಿಸೆಂಬರ್ 1ರಿಂದ ಪ್ರೊಸೆಸಿಂಗ್ ಶುಲ್ಕವನ್ನು ವಿಧಿಸಲಾಗುತ್ತದೆ.

ಯುಎಎನ್-ಆಧಾರ್ ಜೋಡಣೆ ನೀವು ಉದ್ಯೋಗದಲ್ಲಿದ್ದರೆ ಮತ್ತು ಯೂನಿವರ್ಸಲ್ ಅಕೌಂಟ್ ನಂಬರ್ (UAN) ಹೊಂದಿದ್ದರೆ, ನವೆಂಬರ್ 30ರೊಳಗೆ ಅದನ್ನು ಆಧಾರ್‌ನೊಂದಿಗೆ ಜೋಡಣೆ ಮಾಡಿ. ಡಿಸೆಂಬರ್ 1, 2021ರಿಂದ UAN ಮತ್ತು ಆಧಾರ್ ಜೋಡಣೆ ಮಾಡಿರುವುದನ್ನು ಪರಿಶೀಲಿಸಿರುವ ಉದ್ಯೋಗಿಗಳಿಗೆ ಮಾತ್ರ ECR (ಎಲೆಕ್ಟ್ರಾನಿಕ್ ಚಲನ್ ಕಮ್ ರಿಟರ್ನ್) ಅನ್ನು ಸಲ್ಲಿಸಲು ಕಂಪೆನಿಗಳನ್ನು ಕೇಳಲಾಗಿದೆ. ಇದರರ್ಥ ಉದ್ಯೋಗಿಯ UAN ಅನ್ನು ಆಧಾರ್ ವ್ಯಾಲಿಡೇಟ್ ಮಾಡದಿದ್ದಲ್ಲಿ ನಂತರ ECR ಅನ್ನು ಸಲ್ಲಿಸಲಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಪಿಎಫ್​ನಲ್ಲಿ ಉದ್ಯೋಗದಾತರಿಂದ ಪಡೆದ ಕೊಡುಗೆಯನ್ನು ನಿಲ್ಲಿಸಬಹುದು.

ಇದನ್ನೂ ಓದಿ: Life Certificate: ಈ ತಿಂಗಳೊಳಗೆ ಜೀವಿತ ಪ್ರಮಾಣ ಪತ್ರ ಸಲ್ಲಿಸದಿದ್ದರೆ ಮುಂದಿನ ತಿಂಗಳಿಂದ ಪಿಂಚಣಿ ಬರಲ್ಲ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ