AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakesh Jhunjhunwala: ‘ಬಿಗ್​​ ಬುಲ್’​ ರಾಕೇಶ್ ಜುಂಜುನ್​ವಾಲಾ ಬಗ್ಗೆ ನೀವು ತಿಳಿಯಬೇಕಾದ 5 ಅಪರೂಪದ ಸಂಗತಿಗಳಿವು

ಭಾರತದ ವಾರನ್ ಬಫೆಟ್ ಎಂದೇ ಖ್ಯಾತರಾಗಿದ್ದ ರಾಕೇಶ್ ಜುಂಜುನ್​ವಾಲಾರ ಕುರಿತಾದ ಕೆಲ ಸಂಗತಿಗಳು ಹೀಗಿವೆ.  

Rakesh Jhunjhunwala: ‘ಬಿಗ್​​ ಬುಲ್’​ ರಾಕೇಶ್ ಜುಂಜುನ್​ವಾಲಾ ಬಗ್ಗೆ ನೀವು ತಿಳಿಯಬೇಕಾದ 5 ಅಪರೂಪದ ಸಂಗತಿಗಳಿವು
ಉದ್ಯಮಿ ರಾಕೇಶ್​ ಜುಂಜುನ್​ವಾಲಾ
TV9 Web
| Edited By: |

Updated on:Aug 14, 2022 | 1:53 PM

Share

ಷೇರು ಮಾರುಕಟ್ಟೆಯ ‘ಬಿಗ್​ ಬುಲ್’​ ಎಂದೇ ಖ್ಯಾತಿಯನ್ನು ಹೊಂದಿದ್ದ ರಾಕೇಶ್ ಜುಂಜುನ್​ವಾಲಾ (Rakesh Jhunjhunwala) ತಮ್ಮ 62ನೇ ವಯಸ್ಸಿನಲ್ಲಿ  ನಿಧನರಾಗಿದ್ದಾರೆ. ಬಹುಅಂಗಾಂಗ ವೈಫಲ್ಯಗಳಿಂದ ಬಳಲುತ್ತಿದ್ದ ರಾಕೇಶ್ ಜುಂಜುನ್​ವಾಲಾ ಇಂದು ಬೆಳಗ್ಗೆ ಮುಂಬೈನ ಬ್ರೀಚ್​​ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆವಲ 5 ಸಾವಿರ ರೂಪಾಯಿಂದ ಷೇರು ವಹಿವಾಟನ್ನು ಆರಂಭಿಸಿದ್ದ ರಾಕೇಶ್ ಜುಂಜುನ್​ವಾಲಾ ತಮ್ಮ ಕೊನೆ ಗಳಿಗೆಯಲ್ಲಿ ಸುಮಾರು 40 ಸಾವಿರ ಕೋಟಿ ರೂಪಾಯಿ ಮೊತ್ತದ ನಿವ್ವಳ ಆಸ್ತಿ ಹೊಂದಿದ್ದರು. ಇದು ಅವರನ್ನು ಭಾರತದ 36ನೇ ಶ್ರೀಮಂತ ವ್ಯಕ್ತಿಯನ್ನಾಗಿ ಮಾಡಿತು. ಭಾರತದ ವಾರನ್ ಬಫೆಟ್ ಎಂದೇ ಖ್ಯಾತರಾಗಿದ್ದ ರಾಕೇಶ್ ಜುಂಜುನ್​ವಾಲಾರ ಕುರಿತಾದ ಕೆಲ ಸಂಗತಿಗಳು ಹೀಗಿವೆ.

ಇದನ್ನೂ ಓದಿ: Rakesh Jhunjhunwala: ಭಾರತದ ವಾರನ್ ಬಫೆಟ್ ಎಂದೇ ಖ್ಯಾತರಾಗಿದ್ದ ‘ಮನಿ ಮ್ಯಾಗ್ನೆಟ್’ ರಾಕೇಶ್ ಜುಂಜುನ್​ವಾಲಾ ನಿಧನ

ಐದು ಸಂಗತಿಗಳು ಹೀಗಿವೆ

  1. ರಾಕೇಶ್ ಜುಂಜುನ್​ವಾಲಾ ಜುಲೈ 5, 1960 ರಂದು ಹೈದರಾಬಾದ್‌ನಲ್ಲಿ ಜನಿಸಿದರು. ಆದರೆ ಅವರು ಬೆಳೆದಿದ್ದು ಮಾತ್ರ ಮುಂಬೈನಲ್ಲಿ. ರಾಕೇಶ್ ಜುಂಜುನ್​ವಾಲಾ ಅವರನ್ನು ಭಾರತದ ವಾರನ್ ಬಫೆಟ್ ಎಂದು ಕರೆಯಲಾಗುತ್ತದೆ.
  2. ಸಿಡೆನ್‌ಹ್ಯಾಮ್ ಕಾಲೇಜಿನಿಂದ ಪದವಿ ಪಡೆದ ರಾಕೇಶ್ ಜುಂಜುನ್​ವಾಲಾ, ನಂತರ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾಕ್ಕೆ ಸೇರಿಕೊಂಡರು. ಸ್ಟಾಕ್ ಮಾರುಕಟ್ಟೆ ಹೂಡಿಕೆದಾರರಾದ ರೇಖಾ ಜುಂಜುನ್‌ವಾಲಾ ಅವರನ್ನು ವಿವಾಹವಾದರು.
  3. ಜುನ್‌ಜುನ್‌ವಾಲಾ ಅವರು ಭಾರತದ ಷೇರು ಮಾರುಕಟ್ಟೆಯ ಬೆಳವಣಿಗೆಯ ಕನಸ್ಸನ್ನು ಹೊಂದಿದ್ದರು. ಮತ್ತು ಅವರು ಖರೀದಿಸಿದ ಯಾವುದೇ ಷೇರುಗಳು ಬಹುಪಾಲು ದುಪ್ಪಟ್ಟಾಗಿ ಮಾರ್ಪಟ್ಟಿವೆ.
  4. ರಾಕೇಶ್ ಜುಂಜುನ್​ವಾಲಾ ಅವರ ತಮ್ಮದೇ ಆದ ಖಾಸಗಿ ಓಡೆತನದ ಸ್ಟಾಕ್​ ಟ್ರೇಡಿಂಗ್ ಫರ್ಮ್​​​ ರೇರ್​​ ಎಂಟರ್​ಪ್ರೈಸಸ್​ನ್ನು ಹೊಂದಿದ್ದರು. ಮತ್ತು ಇತ್ತಿಚೇಗಷ್ಟೇ ಭಾರತದ ಹೊಸ ವಿಮಾನ ಸಂಸ್ಥೆ ಆಕಾಶ ಏರ್​ಲೈನ್ಸ್​ನ್ನು ಆರಂಭಿಸಿದ್ದರು.
  5. ವಿಮಾನಯಾನ ಕ್ಷೇತ್ರ ಉತ್ತಮವಾಗಿ ಕಾರ್ಯನಿರ್ವಹಿಸದ ಈ ಸಂದರ್ಭದಲ್ಲಿ ನೀವು ಯಾಕೆ ಏರ್​ಲೈನ್ಸ್​ನ್ನು ಆರಂಭಿಸಿದಿರಿ ಎಂಬ ಮಾತಿಗೆ ನಾನು ವೈಫಲ್ಯವನ್ನು ಅಥವಾ ಸೋಲನ್ನು ಅನುಭವಿಸಲು ಸಿದ್ಧನಾಗಿದ್ದೇನೆ ಎಂದು ಅವರು ಹೇಳಿದ್ದರು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:46 am, Sun, 14 August 22

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ