AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ಪರ್ಸೆಂಟ್ ಟ್ಯಾಕ್ಸ್ ಹಾಕಿದ್ರೆ ಹೊಸ ಆವಿಷ್ಕಾರ ಹೇಗಾಗುತ್ತೆ? ಭಾರತದ ಪಾನೀಯ ಉದ್ಯಮ ಅಳಲು

40% tax on carbonated drinks hampers innovation: ಕಾರ್ಬೊನೇಟೆಡ್ ಡ್ರಿಂಕ್ಸ್ ಮೇಲೆ ಶೇ. 40ರಷ್ಟು ತೆರಿಗೆ ವಿಧಿಸುತ್ತಿರುವುದರಿಂದ ಆ ಕ್ಷೇತ್ರದಲ್ಲಿ ಇನ್ನೋವೇಶನ್ ಸಾಧ್ಯವಾಗುತ್ತಿಲ್ಲ ಎಂಬುದು ಇಂಡಿಯನ್ ಬೆವರೇಜಸ್ ಅಸೋಸಿಯೇಶನ್​ನ ಅನಿಸಿಕೆ. ಸಕ್ಕರೆ ಹೆಚ್ಚು ಇರುವ ಪಾನೀಯಗಳಿಗೂ, ಸಕ್ಕರೆ ಕಡಿಮೆ ಇರುವ ಪಾನೀಯಗಳಿಗೂ ಒಂದೇ ರೀತಿಯಲ್ಲಿ ತೆರಿಗೆ ವಿಧಿಸಲಾಗುತ್ತಿದೆ. ಇದರಿಂದ ಕಡಿಮೆ ಸಕ್ಕರೆ ಅಂಶದ ಪಾನೀಯಗಳ ತಯಾರಿಕೆಗೆ ಉತ್ತೇಜನ ಕಡಿಮೆ ಆಗುತ್ತದೆ ಎಂಬುದು ಜೆ.ಪಿ. ಮೀನಾ ಅವರ ಅಳಲು.

40 ಪರ್ಸೆಂಟ್ ಟ್ಯಾಕ್ಸ್ ಹಾಕಿದ್ರೆ ಹೊಸ ಆವಿಷ್ಕಾರ ಹೇಗಾಗುತ್ತೆ? ಭಾರತದ ಪಾನೀಯ ಉದ್ಯಮ ಅಳಲು
ಕೋಕ ಕೋಲಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 01, 2024 | 3:51 PM

Share

ನವದೆಹಲಿ, ಅಕ್ಟೋಬರ್ 1: ಪೆಪ್ಸಿ, ಕೋಕ ಕೋಲಾ ಇತ್ಯಾದಿ ಕಾರ್ಬನ್​ಯುಕ್ತ ಪಾನೀಯಗಳ ಮೇಲೆ ಗರಿಷ್ಠ ಶೇ. 40ರಷ್ಟು ತೆರಿಗೆ ವಿಧಿಸುವುದರಿಂದ ಈ ಕ್ಷೇತ್ರದಲ್ಲಿ ಹೊಸ ಆವಿಷ್ಕಾರ ಸಾಧ್ಯವಾಗುತ್ತಿಲ್ಲ ಎಂದು ಭಾರತೀಯ ಪಾನೀಯ ಸಂಸ್ಥೆಯಾದ ಐಬಿಎ ಪ್ರಧಾನ ಕಾರ್ಯದರ್ಶಿ ಜೆ.ಪಿ. ಮೀನಾ ಬೇಸರ ವ್ಯಕ್ತಪಡಿಸಿದ್ದಾರೆ. ಕೆಲ ಉತ್ಪನ್ನಗಳಿಗೆ ತೆರಿಗೆ ವಿಚಾರದಲ್ಲಿ ಅನ್ಯಾಯ ಆಗುತ್ತಿದೆ. ಪೂರ್ವಗ್ರಹವಾಗಿ ತೆರಿಗೆ ವಿಧಿಸುವ ಕ್ರಮವನ್ನು ನಿಲ್ಲಿಸಬೇಕು. ಕಡಿಮೆ ಸಕ್ಕರೆ, ಹಣ್ಣಿನ ಸಾರ ಇರುವ ಉತ್ಪನ್ನಗಳಿಗೂ ಶೇ. 40ರಷ್ಟು ಜಿಎಸ್​ಟಿ ವಿಧಿಸಲಾಗುತ್ತಿದೆ. ಇದರಿಂದ ಈ ಕ್ಷೇತ್ರದಲ್ಲಿ ಹೊಸ ಆವಿಷ್ಕಾರ ಸಾಧ್ಯವಾಗುತ್ತಿಲ್ಲ ಎಂದು ಜೆ.ಪಿ. ಮೀನಾ ಹೇಳಿದ್ದಾರೆ.

ಸಕ್ಕರೆ ರಹಿತವಾದ ಅಥವಾ ಕಡಿಮೆ ಸಕ್ಕರೆ ಇರುವ ಉತ್ಪನ್ನಗಳು ಇನ್ನೂ ಯೋಜನೆಯ ಹಂತದಲ್ಲೇ ಇವೆ. ಭಾರೀ ಮೊತ್ತದ ತೆರಿಗೆಯಿಂದಾಗಿ ಆವಿಷ್ಕಾರ ಸಾಧ್ಯವಾಗುತ್ತಿಲ್ಲ. ಇಂಥ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಆಗುತ್ತಿಲ್ಲ. ಈ ಕ್ಷೇತ್ರದಲ್ಲಿ ಆವಿಷ್ಕಾರ ಸಾಧ್ಯವಾದರೆ ಉದ್ಯೋಗ ಸೃಷ್ಟಿ ಸಾಧ್ಯವಾಗುತ್ತದೆ, ರೈತರಿಗೆ ಒಳ್ಳೆಯ ಬೆಲೆ ಸಿಗುತ್ತದೆ, ಸರಬರಾಜು ಸರಪಳಿ ವ್ಯವಸ್ಥೆಯಲ್ಲಿ ಹೆಚ್ಚೆಚ್ಚು ಹೂಡಿಕೆಗಳು ಮತ್ತು ಸ್ಟಾರ್ಟಪ್​ಗಳು ಬರುವಂತೆ ಸಹಾಯವಾಗಬಹುದು ಎಂದು ಮೀನಾ ತಿಳಿಸಿದ್ದಾರೆ.

ಭಾರತದಲ್ಲಿ ಕಾರ್ಬೊನೇಟೆಡ್ ಡ್ರಿಂಕ್​ಗಳಿಗೆ ಶೇ. 28ರಷ್ಟು ಜಿಎಸ್​ಟಿ ಇದೆ. ಜೊತೆಗೆ ಶೇ. 12ರಷ್ಟು ಕಾಂಪೆನ್ಸೇಶನ್ ಸೆಸ್ ಕೂಡ ಸೇರಿ ಒಟ್ಟು ತೆರಿಗೆ ಶೇ. 40ರಷ್ಟಿದೆ. ಆದರೆ, ಸಿಹಿ ತಿಂಡಿಗಳು, ಚಾಕೊಲೇಟ್​ಗಳಿಗೆ ಶೇ. 5ರಿಂದ 18ರಷ್ಟು ಮಾತ್ರವೇ ತೆರಿಗೆ ಇರುವುದು. ಬೇರೆ ದೇಶಗಳ ಮಾರುಕಟ್ಟೆಗಳಲ್ಲಿ ಸಿಹಿ ಅಂಶಗಳ ಆಧಾರದ ಮೇಲೆ ತೆರಿಗೆ ಪ್ರಮಾಣ ಇರುತ್ತದೆ. ಭಾರತದಲ್ಲಿ ಈ ರೀತಿ ಇಲ್ಲ ಎಂಬುದು ಇಂಡಿಯನ್ ಬೆವರೇಜಸ್ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿಗಳ ಅಳಲು.

ಇದನ್ನೂ ಓದಿ: ಆರೋಗ್ಯಕ್ಕೆ ಜನರ ಖಾಸಗಿ ವೆಚ್ಚಕ್ಕಿಂತ ಸರ್ಕಾರಿ ವೆಚ್ಚ ಅಧಿಕ; ಭಾರತದಲ್ಲಿ ಇದೇ ಮೊದಲು; ಇದು ಆಯುಷ್ಮಾನ್ ಸ್ಕೀಮ್ ಪರಿಣಾಮವಾ?

ನೀರಿನ ಬಾಟಲ್​ಗಳಿಗೆ ತೆರಿಗೆ ಹೆಚ್ಚಿದೆ…

ಹಣ್ಣಿನ ಪಾನೀಯಗಳಿಗೆ ಶೇ. 12ರಷ್ಟು ತೆರಿಗೆ ಇದೆ. ಆದರೆ, ನೀರಿನ ಬಾಟಲ್​ಗಳಿಗೆ ಶೇ. 18ರಷ್ಟು ಜಿಎಸ್​ಟಿ ಇದೆ. ನೀರು ಬಹಳ ಅಗತ್ಯದ ವಸ್ತು. ಕುಡಿಯುವ ಸ್ವಚ್ಛ ನೀರಿನ ಸಮಸ್ಯೆ ಇದೆ. ಈ ಕ್ಷೇತ್ರಕ್ಕೆ ಖಾಸಗಿ ವಲಯದ ಪಾತ್ರ ಮಹತ್ವ ಇರುತ್ತದೆ. ನೀರಿನ ಬಾಟಲ್​ಗೆ ವಿಧಿಸಲಾಗುತ್ತಿರುವ ತೆರಿಗೆಯನ್ನು ಕಡಿಮೆ ಮಾಡಬೇಕು ಎಂದೂ ಜೆ.ಪಿ. ಮೀನಾ ಮನವಿ ಮಾಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ