Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಮವರ್ಗದ ಸಂಖ್ಯೆ ಎರಡು ದಶಕದಲ್ಲಿ ಎರಡು ಪಟ್ಟು ಹೆಚ್ಚಳ ಸಾಧ್ಯತೆ; ಭಾರತದ ಆರ್ಥಿಕ ಪರಾಮರ್ಶೆ ಬಿಚ್ಚಿಟ್ಟ ಹಣಕಾಸು ಇಲಾಖೆ

2023 July Economic review report: ಸರ್ಕಾರದ ಬಂಡವಾಳ ವೆಚ್ಚವು ಮುಂಬರುವ ವರ್ಷಗಳಲ್ಲಿ ಆರ್ಥಿಕ ಪ್ರಗತಿಗೆ ಪುಷ್ಟಿ ಕೊಡುತ್ತದೆ. 2030ಕ್ಕಿಂತ ಬಹಳ ಮೊದಲೇ ಬಡತನ ನಿವಾರಣೆಯ ಗುರಿ ತಲುಪುತ್ತೇವೆ ಎಂದು ಕೇಂದ್ರ ವಿತ್ತ ಸಚಿವಾಲಯ ತನ್ನ ಜುಲೈ ತಿಂಗಳ ಮಾಸಿಕ ಆರ್ಥಿಕ ವಿಮರ್ಶಾ ವರದಿಯಲ್ಲಿ ತಿಳಿಸಿದೆ. ಈ ವರದಿಯ ಹೈಲೈಟ್ಸ್ ಇಲ್ಲಿವೆ...

ಮಧ್ಯಮವರ್ಗದ ಸಂಖ್ಯೆ ಎರಡು ದಶಕದಲ್ಲಿ ಎರಡು ಪಟ್ಟು ಹೆಚ್ಚಳ ಸಾಧ್ಯತೆ; ಭಾರತದ ಆರ್ಥಿಕ ಪರಾಮರ್ಶೆ ಬಿಚ್ಚಿಟ್ಟ ಹಣಕಾಸು ಇಲಾಖೆ
ಭಾರತದ ಆರ್ಥಿಕತೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 22, 2023 | 12:03 PM

ನವದೆಹಲಿ, ಆಗಸ್ಟ್ 22: ಭಾರತದಲ್ಲಿ ನಿರೀಕ್ಷೆಗಿಂತ ವೇಗದಲ್ಲಿ ಬಡತನ (Multidimensional Poverty) ನಿವಾರಣೆ ಆಗುತ್ತದೆ ಎಂದು ಕೇಂದ್ರ ಹಣಕಾಸು ಇಲಾಖೆ ವಿಶ್ವಾಸ ವ್ಯಕ್ತಪಡಿಸಿದೆ. ಜುಲೈ ತಿಂಗಳ ಮಾಸಿಕ ಆರ್ಥಿಕ ವಿಮರ್ಶಾ ವರದಿಯನ್ನು (Monthly Economic Review) ಬಿಡುಗಡೆ ಮಾಡಿರುವ ಹಣಕಾಸು ಸಚಿವಾಲಯ, ಮುಂದಿನ 23 ವರ್ಷಗಳಲ್ಲಿ ಭಾರತದಲ್ಲಿ ಮಧ್ಯಮವರ್ಗದ ಸಂಖ್ಯೆ ಎರಡು ಪಟ್ಟು ಹೆಚ್ಚುವ ಸಾಧ್ಯತೆಯನ್ನು ತೋರಿಸಿದೆ. ಹಾಗೆಯೇ, ಸದ್ಯ ಹಣದುಬ್ಬರಕ್ಕೆ ಕಾರಣವಾಗಿರುವ ಆಹಾರವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಹಣಕಾಸು ಇಲಾಖೆ ತನ್ನ ವರದಿಯಲ್ಲಿ ಮಾಹಿತಿ ನೀಡಿದೆ. ಈ ಬಾರಿ ಮುಂಗಾರು ಬೆಳೆಗಳು ಉತ್ತಮವಾಗಿ ಬರುವ ಸಾಧ್ಯತೆ ಇರುವುದರಿಂದ ಆಹಾರ ಭದ್ರತೆಗೆ ಸಹಾಯವಾಗುತ್ತದೆ ಎಂದು ಹೇಳಿದೆ.

ಕೇಂದ್ರ ಹಣಕಾಸು ಸಚಿವಾಲಯದ 2023 ಜುಲೈನ ಮಾಸಿಕ ವಿಮರ್ಶಾ ವರದಿಯ ಮುಖ್ಯಾಂಶಗಳು:

  • ಬಂಡವಾಳ ವೆಚ್ಚಕ್ಕೆ ಸರ್ಕಾರದ ಆದ್ಯತೆ ಮುಂದುವರಿದಿರುವುದು ಮುಂದಿನ ವರ್ಷಗಳಲ್ಲಿ ಪ್ರಗತಿಗೆ ಪುಷ್ಟಿ ಕೊಡುತ್ತದೆ.
  • ಪಿಎಂ ಗತಿಶಕ್ತಿ ಯೋಜನೆ ಮತ್ತು ನ್ಯಾಷನಲ್ ಇನ್​ಫ್ರಾಸ್ಟ್ರಕ್ಚರ್ ಪೈಪ್​ಲೈನ್ ಸಮನ್ವಯತೆಯಲ್ಲಿ ಹೊಸ ಇನ್​ಫ್ರಾಸ್ಟ್ರಕ್ಚರ್ ರೂಪಿಸಲು ಖಾಸಗಿ ವಲಯಕ್ಕೆ ಉತ್ತೇಜನ ಸಿಗುತ್ತದೆ.

ಇದನ್ನೂ ಓದಿ: Bengaluru Girl: ಬೆಂಗಳೂರಿನ 22 ವರ್ಷದ ಮಹಿಳಾ ಪೋಸ್ಟ್ ಮಾಸ್ಟರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಬಿಲ್ ಗೇಟ್ಸ್

  • ಸರ್ಕಾರದ ಇತ್ತೀಚಿನ ಪ್ರಯತ್ನಗಳು ಮುಂಬರುವ ದಿನಗಳಲ್ಲಿ ಆಹಾರ ಹಣದುಬ್ಬರ ನಿಯಂತ್ರಣಕ್ಕೆ ಕಾರಣವಾಗಬಹುದು.
  • ಆಹಾರ ವಸ್ತುಗಳ ಬೆಲೆ ಒತ್ತಡ ಸ್ಥಿತಿ ತಾತ್ಕಾಲಿಕ ಆಗಿರಬಹುದು. ಕೃಷಿ ವಲಯದ ಸ್ಥಿರ ಸಾಧನೆ ಇದಕ್ಕೆ ನಿದರ್ಶನ.
  • ಆಹಾರ ಭದ್ರತೆಗಾಗಿ ಆಹಾರಧಾನ್ಯಗಳ ಸಂಗ್ರಹ ಹೆಚ್ಚಿಸುವ ನಿಟ್ಟಿನಲ್ಲಿ ಗೋಧಿ ಮತ್ತು ಅಕ್ಕಿ ಖರೀದಿಸುವ ಪ್ರಕ್ರಿಯೆ ಸಮರ್ಪಕವಾಗಿ ನಡೆಯುತ್ತಿದೆ.
  • ಕನಿಷ್ಠ ಬೆಂಬಲ ಬೆಲೆ (ಎಂಎಸ್​ಪಿ) ಹೆಚ್ಚಿಸಿರುವುದು ಮತ್ತು ಆರೋಗ್ಯಯುತ ಮುಂಗಾರು ಬೆಳೆ ಸಾಧ್ಯತೆಯು ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಬೇಡಿಕೆಗೆ ಬಲ ಒದಗಿಸುತ್ತವೆ.
  • ಸರ್ವಿಸ್ ಸೆಕ್ಟರ್ ವಲಯದ ರಫ್ತು ಹೆಚ್ಚಳ ಜೊತೆ ಭಾರತದ ಬಾಹ್ಯ ವಲಯವೂ ಬಲ ತೋರಿಸಿದೆ. ಭಾರತದಲ್ಲಿ ಹೂಡಿಕೆಗಳು ಹರಿದುಬರುತ್ತಿರುವುದು ಆರ್ಥಿಕ ಪ್ರಗತಿ ಬಗ್ಗೆ ಹೂಡಿಕೆದಾರರಿಗೆ ಇರುವ ವಿಶ್ವಾಸವನ್ನು ತೋರಿಸುತ್ತಿದೆ.

ಇದನ್ನೂ ಓದಿ: ಇನ್ಫೋಸಿಸ್​ನಲ್ಲಿ ಆಫೀಸ್ ಬಾಯ್ ಆಗಿದ್ದವ ಇವತ್ತು ಎರಡು ಕಂಪನಿಗಳಿಗೆ ಸಿಇಒ; ಮೋದಿಯಿಂದಲೂ ಪ್ರಶಂಸೆಗೊಳಗಾದ ಭಗತ್​ನ ಯಶೋಗಾಥೆ

  • ರಾಷ್ಟ್ರೀಯ ಬಹು ಆಯಾಮದ ಬಡತನ ಸೂಚಿ (Multi-dimensional poverty index) 2025-16ರಿಂದ 2019-21ರ ಅವಧಿಯಲ್ಲಿ ಅರ್ಧದಷ್ಟು ಕಡಿಮೆ ಆಗಿದೆ. ಮಲ್ಟಿಡೈಮೆನ್ಷನಲ್ ಪಾವರ್ಟಿ ವಿಚಾರದಲ್ಲಿ ಸುಸ್ಥಿರ ಅಭಿವೃದ್ಧಿ ಗುರಿ (SDG- Sustainable development Target) ಈಡೇರಿಸಲು ನಿಗದಿ ಮಾಡಿರುವ 2030ರ ಟೈಮ್​ಲೈನ್​ಗಿಂತ ಬಹಳ ಮುಂಚೆಯೇ ಭಾರತ ತನ್ನ ಎಸ್​ಡಿಜಿ ಗುರಿ ತಲುಪುತ್ತದೆ.
  • 2046-47ರಲ್ಲಿ ಭಾರತದ ಒಟ್ಟಾರೆ ಜನಸಂಖ್ಯೆಯಲ್ಲಿ ಮಧ್ಯಮವರ್ಗದ ಪ್ರಮಾಣ ಶೇ. 31ರಿಂದ ಶೇ. 61ಕ್ಕೆ ಹೆಚ್ಚುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ