AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಾನಿಗೆ ‘ಶಾರ್ಟ್’ ಮಾಡಿದ್ದ ಹಿಂಡನ್ಬರ್ಗ್ ಜೊತೆ ಕೋಟಕ್ ಕೂಡ ತಳುಕು; ಸೆಬಿ ನೋಟೀಸ್​ನಲ್ಲಿ ಕೋಟಕ್ ಹೆಸರಿಲ್ಲ ಯಾಕೆ ಎಂದ ಹಿಂಡನ್ಬರ್ಗ್

Hindenburg vs Kotak vs Adani vs SEBI: ಅದಾನಿ ಗ್ರೂಪ್ ವಿರುದ್ಧ ತನ್ನ ವರದಿ ಸಂಬಂಧ ಸೆಬಿಯಿಂದ ತನಗೆ ಶೋಕಾಸ್ ನೋಟೀಸ್ ಬಂದಿದೆ ಎಂದು ಹಿಂಡನ್ಬರ್ಗ್ ರಿಸರ್ಚ್ ಸಂಸ್ಥೆ ಹೇಳಿ, ಸೆಬಿ ನಡೆಯನ್ನು ಲೇವಡಿ ಮಾಡಿದೆ. ಶಕ್ತಿಶಾಲಿ ವ್ಯಕ್ತಿಗಳ ಭ್ರಷ್ಟಾಚಾರ ಮತ್ತು ವಂಚನೆಯನ್ನು ಮುಚ್ಚಿಹಾಕಲು ಸೆಬಿ ಈ ಕೆಲಸ ಮಾಡಿದೆ ಎಂದು ಅಮೆರಿಕದ ಈ ಶಾರ್ಟ್ ಸೆಲ್ಲರ್ ಸಂಸ್ಥೆ ಹೇಳಿದೆ. ಹಾಗೆಯೇ, ಈ ಪ್ರಕರಣದಲ್ಲಿ ಕೋಟಕ್ ಮಹೀಂದ್ರ ಬ್ಯಾಂಕ್ ಪಾತ್ರ ಇದ್ದರೂ ಅದರ ಹೆಸರನ್ನು ಸೆಬಿ ಯಾಕೆ ಮುಚ್ಚಿಡುತ್ತಿದೆ ಎಂದೂ ಅದು ಕೇಳಿದೆ.

ಅದಾನಿಗೆ ‘ಶಾರ್ಟ್’ ಮಾಡಿದ್ದ ಹಿಂಡನ್ಬರ್ಗ್ ಜೊತೆ ಕೋಟಕ್ ಕೂಡ ತಳುಕು; ಸೆಬಿ ನೋಟೀಸ್​ನಲ್ಲಿ ಕೋಟಕ್ ಹೆಸರಿಲ್ಲ ಯಾಕೆ ಎಂದ ಹಿಂಡನ್ಬರ್ಗ್
ಹಿಂಡನ್ಬರ್ಗ್ ರಿಸರ್ಚ್ ಸಂಸ್ಥೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 02, 2024 | 11:26 AM

Share

ನವದೆಹಲಿ, ಜುಲೈ 2: ಅದಾನಿ ಗ್ರೂಪ್ ಮೇಲೆ ಎರಡು ವರ್ಷದ ಹಿಂದೆ ಗಂಭೀರ ಆರೋಪಗಳನ್ನು ಮಾಡಿ ಉದ್ಯಮ ಸಾಮ್ರಾಜ್ಯದ ಪತನಕ್ಕೆ ಕಾರಣವಾಗಿದ್ದ ಹಿಂಡನ್ಬರ್ಗ್ ರಿಸರ್ಚ್ ಸಂಸ್ಥೆ ಮತ್ತೊಂದು ಶಾಕಿಂಗ್ ಸಂಗತಿಯನ್ನು ಬಹಿರಂಗಪಡಿಸಿದೆ. ಅದಾನಿ ಗ್ರೂಪ್ ಸಂಸ್ಥೆಗಳ ಷೇರುಗಳನ್ನು ‘ಶಾರ್ಟ್’ ಮಾಡುವ ಕಾರ್ಯದಲ್ಲಿ ಕೋಟಕ್ ಮಹೀಂದ್ರ ಬ್ಯಾಂಕ್​ನ ಪಾತ್ರವನ್ನು ಅದು ಜಾಹೀರುಗೊಳಿಸಿದೆ. ಹಿಂಡನ್ಬರ್ಗ್ ತನ್ನ ಇನ್ವೆಸ್ಟರ್ ಪಾರ್ಟ್ನರ್ ಸಂಸ್ಥೆ ಮೂಲಕ ಅದಾನಿ ಷೇರುಗಳನ್ನು ಶಾರ್ಟ್ ಮಾಡಿದೆ. ಆಫ್​ಶೋರ್ ಫಂಡ್ ಸ್ಟ್ರಕ್ಚರ್ ಅನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ. ಈ ಆಫ್​ಶೋರ್ ಫಂಡ್ ಅನ್ನು ಹುಟ್ಟುಹಾಕಿ ನಿರ್ವಹಿಸುತ್ತಿರುವುದೇ ಕೋಟಕ್ ಮಹೀಂದ್ರ ಬ್ಯಾಂಕ್ ಎಂದು ಹಿಂಡನ್ಬರ್ಗ್ ಸಂಸ್ಥೆ ಹೇಳಿದೆ.

ಸೆಬಿಯಿಂದ ಶೋಕಾಸ್ ನೋಟೀಸ್ ಬಂದಿದ್ದಕ್ಕೆ ಕೋಟಕ್ ಹೆಸರು ಪ್ರಸ್ತಾಪಿಸಿದ ಹಿಂಡನ್ಬರ್ಗ್

ಲಾಭದ ಆಸೆಯಿಂದ ಅದಾನಿ ಗ್ರೂಪ್​ನ ಷೇರುಗಳ ಮೇಲೆ ಅಕ್ರಮವಾಗಿ ಬೆಟ್ ಇರಿಸಿದ್ದೇವೆ ಎಂದು ತಮಗೆ ಅದಾನಿ ಗ್ರೂಪ್ ಶೋಕಾಸ್ ನೀಡಿದೆ ಎಂದು ಹೇಳಿರುವ ಹಿಂಡನ್ಬರ್ಗ್ ರಿಸರ್ಚ್ ಸಂಸ್ಥೆ, ಸೆಬಿಯ ಈ ಕ್ರಮವನ್ನು ನಾನ್​ಸೆನ್ಸ್ ಎಂದು ಬಣ್ಣಿಸಿದೆ.

‘ಭಾರತದಲ್ಲಿನ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳು ನಡೆಸುವ ಭ್ರಷ್ಟಾಚಾರ ಮತ್ತು ವಂಚನೆಯನ್ನು ಬಹಿರಂಗಪಡಿಸುವವರ ಬಾಯಿ ಮುಚ್ಚಿಸುವ ಪ್ರಯತ್ನ ಇದಾಗಿದೆ. ಸೆಬಿ ಕಳುಹಿಸಿದ ನೋಟೀಸ್​ನಲ್ಲಿ ಕೆ-ಇಂಡಿಯಾ ಆಪೋರ್ಚೂನಿಟೀಸ್ ಫಂಡ್ ಹೆಸರನ್ನು ಪ್ರಸ್ತಾಪಿಸಿದೆ. ಆದರೆ, ಅದು ಕೋಟಕ್ ಮಹೀಂದ್ರ ಬ್ಯಾಂಕ್ ಎಂದು ಸ್ಪಷ್ಟವಾಗಿ ಹೇಳಿಲ್ಲ ಯಾಕೆ? ಮತ್ತೊಬ್ಬ ಪ್ರಭಾವಶಾಲಿ ವ್ಯಕ್ತಿಯನ್ನು ರಕ್ಷಿಸುವ ಕೆಲಸವೂ ಇದಾಗಿದೆ,’ ಎಂದು ಹಿಂಡನ್ಬರ್ಗ್ ರಿಸರ್ಚ್ ಸಂಸ್ಥೆ ಹೇಳಿದೆ.

ಇದನ್ನೂ ಓದಿ: ಭಾರತದಲ್ಲಿ ನಡೆಯುವ ಮದುವೆ ಸಂಖ್ಯೆ ಚೀನಾಗಿಂತಲೂ ಹೆಚ್ಚು; ವಿವಾಹ ಉದ್ಯಮ ಅಮೆರಿಕದಕ್ಕಿಂತಲೂ ಎರಡು ಪಟ್ಟು ದೊಡ್ಡದು: ಜೆಫರೀಸ್ ವರದಿ

ಇಲ್ಲಿ ಕೆ ಇಂಡಿಯಾ ಆಪೋರ್ಚುನಿಟೀಸ್ ಫಂಡ್ ಅನ್ನು ಕೋಟಕ್ ಮಹೀಂದ್ರ ಇನ್ವೆಸ್ಟ್​ಮೆಂಟ್ ಲಿ ಸಂಸ್ಥೆ ನಿರ್ವಹಿಸುತ್ತದೆ. ಇದು ಉದಯ್ ಕೋಟಕ್ ಅವರ ಕೋಟಕ್ ಮಹೀಂದ್ರ ಬ್ಯಾಂಕ್ ಅಧೀನದಲ್ಲಿರುವ ಸಂಸ್ಥೆಯಾಗಿದೆ. ಹಿಂಡನ್ಬರ್ಗ್ ಹೇಳಿರುವ ಪ್ರಭಾವಶಾಲಿ ವ್ಯಕ್ತಿ ಉದಯ್ ಕೋಟಕ್. ಕುತೂಹಲ ಎಂದರೆ ಉದಯ್ ಕೋಟಕ್ ಅವರು 2017ರಲ್ಲಿ ಸೆಬಿಯ ಕಾರ್ಪೊರೇಟ್ ಗವರ್ನೆನ್ಸ್ ಕಮಿಟಿಯ ಮುಖಂಡತ್ವ ವಹಿಸಿದ್ದರು.

ಯಾರದೋ ಪ್ರಭಾವಕ್ಕೊಳಗಾಗಿ ಸೆಬಿ ವರ್ತನೆ ತೋರುತ್ತಿದೆ. ನಿಜವಾದ ಅಪರಾಧಿಗಳನ್ನು ಮುಚ್ಚಿಟ್ಟು, ಅಪರಾಧದ ಬಗ್ಗೆ ಹೇಳಿದವರ ಬಾಯಿ ಮುಚ್ಚಿಸುವ ಕೆಲಸವನ್ನು ಸೆಬಿ ಮಾಡುತ್ತಿದೆ ಎಂದು ಹಿಂಡನ್ಬರ್ಗ್ ಸಂಸ್ಥೆ ಕಿಡಿಕಾರಿದೆ.

ಹಾಗೆಯೇ, ತನ್ನ ವಿವಿಧ ನೆಟ್ವರ್ಕ್​ಗಳನ್ನು ಬಳಸಿ ಅದಾನಿ ಸ್ಟಾಕ್​ಗಳನ್ನು ಶಾರ್ಟ್ ಮಾಡಿದ್ದೇವೆ ಎಂದು ಸೆಬಿ ಮಾಡಿರುವ ಆರೋಪವನ್ನು ಹಿಂಡನ್ಬರ್ಗ್ ಸಾರಾಸಗಟಾಗಿ ತಳ್ಳಿಹಾಕಿದೆ. ಭಾರತದಲ್ಲಿ ನಮ್ಮ ಒಂದೂ ಕಚೇರಿ ಇಲ್ಲ. ನಮ್ಮವರು ಒಬ್ಬರೂ ಇಲ್ಲಿ ಕೆಲಸ ಮಾಡುತ್ತಿಲ್ಲ. ಅದಾನಿ ಸ್ಟಾಕ್​ಗಳನ್ನು ಶಾರ್ಟ್ ಮಾಡಲು ಒಬ್ಬರೇ ಇನ್ವೆಸ್ಟರ್ ಪಾರ್ಟ್ನರ್ ಜೊತೆ ಡೀಲ್ ಮಾಡಿಕೊಂಡಿದ್ದು ಎಂದು ಅದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಹಣಕಾಸು ಅಕ್ರಮ ತಡೆಯಲು ಭಾರತ ಕೈಗೊಂಡ ಕ್ರಮಕ್ಕೆ ಎಫ್​ಎಟಿಎಫ್ ಮೆಚ್ಚುಗೆ; ವಿಶ್ವದ ಕೆಲವೇ ರಾಷ್ಟ್ರಗಳ ಸಾಲಿನಲ್ಲಿ ಭಾರತ

‘ಅದಾನಿ ಸಂಸ್ಥೆ ವಿಚಾರದಲ್ಲಿ ನಾವು ಮಾಡಿದ ಕೆಲಸವನ್ನು ಹಣಕಾಸು ದೃಷ್ಟಿಯಿಂದ ಮತ್ತು ವೈಯಕ್ತಿಕ ಸುರಕ್ಷತೆ ದೃಷ್ಟಿಯಿಂದ ನೋಡಿದರೆ ಏನೂ ಲಾಭದಾಯಕ ಅನಿಸುವುದಿಲ್ಲ. ಆದರೂ ಕೂಡ ಈವರೆಗೂ ನಾವು ಅತಿ ಹೆಮ್ಮೆ ಪಡುವ ಕೆಲಸ ಅದಾಗಿದೆ,’ ಎಂದು ಅಮೆರಿಕ ಮೂಲದ ಶಾರ್ಟ್​ಸೆಲ್ಲರ್ ಸಂಸ್ಥೆ ಹಿಂಡನ್ಬರ್ಗ್ ಹೇಳಿಕೊಂಡಿದೆ.

ಶಾರ್ಟ್ ಮಾಡುವುದೆಂದರೇನು?

ಅದಾನಿ ಸ್ಟಾಕ್ ಅನ್ನು ಶಾರ್ಟ್ ಮಾಡಲಾಯಿತು ಎಂದು ಮೇಲಿನ ಸುದ್ದಿಯಲ್ಲಿ ಹೇಳಲಾಗಿದೆ. ಶಾರ್ಟ್ ಎಂದರೆ ಒಂದು ಸ್ಟಾಕು ಕೆಳಗೆ ಕುಸಿಯುವಂತೆ ಮಾಡಿ, ಕಡಿಮೆ ಬೆಲೆಗೆ ಷೇರು ಖರೀದಿಸಿ ಬಳಿಕ ಲಾಭಕ್ಕೆ ಮಾರುವುದು. ಹಿಂಡನ್ಬರ್ಗ್ ವರದಿ ಬಂದ ಬಳಿಕ ಅದಾನಿ ಕಂಪನಿಗಳ ಷೇರುಬೆಲೆ ಪಾತಾಳಕ್ಕೆ ಕುಸಿದುಹೋಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು