AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HMPV Virus: ಷೇರು ಮಾರುಕಟ್ಟೆ ಮೇಲೂ ಎಚ್​ಎಂಪಿವಿ ವೈರಸ್ ಪ್ರಭಾವ, ಸಾವಿರಕ್ಕೂ ಹೆಚ್ಚು ಅಂಶ ಕುಸಿದ ಸೆನ್ಸೆಕ್ಸ್

ಕರ್ನಾಟಕದಲ್ಲಿ ಎಚ್​ಎಂಪಿವಿ ವೈರಸ್ ಪತ್ತೆಯಾಗಿರುವ ವಿಚಾರ ದೇಶದ ಷೇರುಮಾರುಕಟ್ಟೆ ಮೇಲೆ ಗಂಭೀರ ನಕಾರಾತ್ಮಕ ಪರಿಣಾಮ ಬೀರಿದೆ. ಕೋವಿಡ್-19 ಸಾಂಕ್ರಾಮಿಕದ ಸಂದರ್ಭದ ಭೀತಿ ಹೂಡಿಕೆದಾರರಲ್ಲಿ ಮತ್ತೆ ಮನಮಾಡಿರುವ ಶಂಕೆ ಮೂಡಿದ್ದು, ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ಹಾಗೂ ನಿಫ್ಟಿ ತೀವ್ರ ಕುಸಿತ ಕಂಡಿವೆ.

HMPV Virus: ಷೇರು ಮಾರುಕಟ್ಟೆ ಮೇಲೂ ಎಚ್​ಎಂಪಿವಿ ವೈರಸ್ ಪ್ರಭಾವ, ಸಾವಿರಕ್ಕೂ ಹೆಚ್ಚು ಅಂಶ ಕುಸಿದ ಸೆನ್ಸೆಕ್ಸ್
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Jan 06, 2025 | 12:58 PM

Share

ಮುಂಬೈ, ಜನವರಿ 6: ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಎಚ್​ಎಂಪಿವಿ ವೈರಸ್ ಪತ್ತೆಯಾಗಿದೆ ಎಂಬ ವಿಚಾರ ಷೇರು ಮಾರುಕಟ್ಟೆಗಳಲ್ಲಿಯೂ ತಲ್ಲಣಕ್ಕೆ ಕಾರಣವಾಗಿದೆ. ಪರಿಣಾಮವಾಗಿ ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 1100 ಅಂಕಗಳಿಗಿಂತ ಹೆಚ್ಚು ಕುಸಿದರೆ, ನಿಫ್ಟಿ ಶೇ 1 ಕ್ಕಿಂತ ಹೆಚ್ಚು ಕುಸಿತವನ್ನು ದಾಖಲಿಸಿತು.

ಮಧ್ಯಾಹ್ನ 12.30 ರ ವೇಳೆಗೆ ಸೆನ್ಸೆಕ್ಸ್ 1,100 ಅಂಶ ಕುಸಿದು 78,065 ಕ್ಕೆ ಇಳಿಕೆಯಾಯಿತು. ನಿಫ್ಟಿ 23,600 ಅಂಶಗಳಿಗೆ ಕುಸಿಯಿತು.

ಲೋಹಗಳು, ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು, ರಿಯಲ್ ಎಸ್ಟೇಟ್, ತೈಲ ಮತ್ತು ಅನಿಲ, ಹಣಕಾಸು ಸಂಸ್ಥೆಗಳ ಷೇರುಗಳು ನಕಾರಾತ್ಮಕ ವಹಿವಾಟು ದಾಖಲಿಸಿದವು.

ಯಾವೆಲ್ಲ ಷೇರುಗಳ ವಹಿವಾಟು ಕುಸಿತ?

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಷೇರುಗಳ ಮೌಲ್ಯದಲ್ಲಿ ಶೇ 7 ರಷ್ಟು ಕುಸಿದವು. ಬ್ಯಾಂಕ್ ಆಫ್ ಬರೋಡಾ, ಎಚ್‌ಪಿಸಿಎಲ್, ಬಿಪಿಸಿಎಲ್, ಟಾಟಾ ಸ್ಟೀಲ್, ಅದಾನಿ ಎನರ್ಜಿ ಸೊಲ್ಯೂಷನ್ಸ್ ಮತ್ತು ಪಿಎನ್‌ಬಿ ಷೇರುಗಳ ಸಹ ತಲಾ ಶೇ 4-5 ರಷ್ಟು ಕುಸಿತ ಕಂಡಿವೆ. ಎಚ್‌ಡಿಎಫ್‌ಸಿ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಕೋಟಕ್ ಮಹೀಂದ್ರಾ ಬ್ಯಾಂಕ್‌ನಂತಹ ಪ್ರಮುಖ ಷೇರುಗಳು ಸೆನ್ಸೆಕ್ಸ್ ಕುಸಿತಕ್ಕೆ ಗಮನಾರ್ಹ ಕೊಡುಗೆ ನೀಡಿದವು.

ಎಚ್​ಎಂಪಿವಿ ಪ್ರಕರಣದ ಅನಿರೀಕ್ಷಿತ ಸುದ್ದಿಯು ಮಾರುಕಟ್ಟೆ ಮೇಲೆ ಪ್ರಭಾವ ಬೀರಿರುವುದು ನಿಜ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಇಬ್ಬರು ಮಕ್ಕಳಲ್ಲಿ ಎಚ್​ಎಂಪಿವಿ ವೈರಸ್ ಪತ್ತೆ

ಕರ್ನಾಟಕದ ಬೆಂಗಳೂರಿನಲ್ಲಿ ಇಬ್ಬರು ಶಿಶುಗಳಲ್ಲಿ ಎಚ್​ಎಂಪಿವಿ (HMPV) ವೈರಸ್ ಸೋಮವಾರ ಬೆಳಗ್ಗೆ ದೃಢಪಟ್ಟಿದೆ. ಆದರೆ, ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ಸೇ ಇದು ಎಂಬುದು ದೃಢಪಟ್ಟಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಆದಾಗ್ಯೂ, ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಎಚ್​ಎಂಪಿವಿ ವೈರಸ್ ಭಾರತದಲ್ಲೂ ಇದೆ. ಇದು ಚೀನಾ ವೈರಸ್​ ಎಂಬುದು ದೃಢಪಟ್ಟಿಲ್ಲ ಹಾಗಾಗಿ ಆತಂಕ ಬೇಡ ಎಂದೂ ಆರೋಗ್ಯ ಇಲಾಖೆ ಹೇಳಿದೆ. ಆದಾಗ್ಯೂ ಷೇರುಮಾರುಕಟ್ಟೆ ಮೇಲೆ ಇದು ಗಂಭೀರ ಪರಿಣಾಮ ಬೀರಿರುವುದು ನಿಜ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:49 pm, Mon, 6 January 25

Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ