AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home loan: ಭಾರತದಲ್ಲಿ ಗೃಹಸಾಲ ದುಂದು ವೆಚ್ಚವಾಗುತ್ತಿದೆ, ನಿಯಂತ್ರಣ ಮಾಡಲು ಬ್ಯಾಂಕ್​​ಗಳಿಗೆ ಆರ್​​ಬಿಐ ಎಚ್ಚರಿಕೆ

ಭಾರತದಲ್ಲಿ ಗೃಹಸಾಲ ಹೆಚ್ಚು ಪಡೆಯುತ್ತಿದ್ದಾರೆ. ಆದರೆ ಇದನ್ನು ಮನೆ ನಿರ್ಮಾಣಕ್ಕೆ ಬಳಸಿಕೊಳ್ಳುತ್ತಿಲ್ಲ. ಇದರಿಂದ ಬ್ಯಾಂಕುಗಳಿಗೆ ಹೊರೆಯಾಗುತ್ತಿದೆ ಎಂದು ಹೇಳಲಾಗಿದೆ. ಇದನ್ನು ನಿಯಂತ್ರಣ ಮಾಡಲು ಆರ್​​ಬಿಐ, ಬ್ಯಾಂಕುಗಳಿಗೆ ಆದೇಶ ನೀಡಿದೆ. ಗೃಹ ಸಾಲವು ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ಒಟ್ಟು 39.1 ಪ್ರತಿಶತದಷ್ಟು ಹೊಸ ಸಾಲವನ್ನು ಪಡೆಯಲಾಗಿದೆ ಎಂದು ಹೇಳಿದೆ. ಇದು ಕಳೆದ ವರ್ಷಕ್ಕಿಂತ 36.7 ಪ್ರತಿಶತದಷ್ಟು ಹೆಚ್ಚಾಗಿದೆ

Home loan: ಭಾರತದಲ್ಲಿ ಗೃಹಸಾಲ ದುಂದು ವೆಚ್ಚವಾಗುತ್ತಿದೆ, ನಿಯಂತ್ರಣ ಮಾಡಲು ಬ್ಯಾಂಕ್​​ಗಳಿಗೆ ಆರ್​​ಬಿಐ ಎಚ್ಚರಿಕೆ
ಅಕ್ಷಯ್​ ಪಲ್ಲಮಜಲು​​
|

Updated on:Apr 26, 2024 | 4:08 PM

Share

ಭಾರತದಲ್ಲಿ ಬ್ಯಾಂಕ್​​ಗಳಿಂದ ಹೆಚ್ಚು ಹೆಚ್ಚು ಸಾಲ ಪಡೆಯುತ್ತಿದ್ದಾರೆ. ಇದರಲ್ಲೂ ಗೃಹಸಾಲ (Home loan) ಹೆಚ್ಚು ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಕಳೆದ ವರ್ಷದ ಕೊನೆಯ ಮೂರು ತಿಂಗಳುಗಳಲ್ಲಿ ಭಾರತದಲ್ಲಿ ಗೃಹ ಸಾಲ ದಾಖಲೆಯ ಮಟ್ಟಕ್ಕೆ ಏರಿದೆ. ಗ್ರಾಹಕರು ಅಪಾಯಕಾರಿಯಾಗಿ ಸಾಲ ಹೊರೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂದು ಬ್ಯಾಂಕ್​​ಗಳಿಗೆ ಆತಂಕ ವ್ಯಕ್ತಪಡಿಸಿದೆ. ಗೃಹ ಸಾಲವು ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ಒಟ್ಟು 39.1 ಪ್ರತಿಶತದಷ್ಟು ಹೊಸ ಸಾಲವನ್ನು ಪಡೆಯಲಾಗಿದೆ ಎಂದು ಹೇಳಿದೆ. ಇದು ಕಳೆದ ವರ್ಷಕ್ಕಿಂತ 36.7 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಅರ್ಥಶಾಸ್ತ್ರಜ್ಞರಾದ ನಿಖಿಲ್ ಗುಪ್ತಾ ಮತ್ತು ಮೋತಿಲಾಲ್ ಓಸ್ವಾಲ್ ಫೈನಾನ್ಷಿಯಲ್ ಸರ್ವಿಸಸ್ ಲಿಮಿಟೆಡ್‌ನ ತನಿಶಾ ಲಾಧಾ ತನ್ನ ವರದಿಯಲ್ಲಿ ತಿಳಿಸಿದೆ.

ಅಂಕಿಅಂಶಗಳ ಪ್ರಕಾರ 2021 ರ ಜನವರಿ-ಮಾರ್ಚ್ ಅವಧಿಯಲ್ಲಿ 38.6 ಶೇಕಡಾಕ್ಕಿಂತ ಹೆಚ್ಚಾಗಿದೆ. ಒಟ್ಟು ಮನೆಯ ಸಾಲ ಶೇಕಡಾ 72 ರಷ್ಟಿದ್ದು, ವಸತಿ ರಹಿತ ಸಾಲವು ವಸತಿ ಸಾಲಕ್ಕಿಂತ ವೇಗವಾಗಿ ಬೆಳೆಯುತ್ತಿದೆ ಎಂದು ಹೇಳಿದ್ದಾರೆ. ಈ ಗೃಹ ಸಾಲ ಮನೆ ನಿರ್ಮಾಣಕ್ಕೆ ಪೂರ್ಣವಾಗಿ ಉಪಯೋಗವಾಗುತ್ತಿಲ್ಲ. ಇದನ್ನು ಗ್ರಾಹಕರು ವಸ್ತುಗಳನ್ನು ಹಾಗೂ ದುಂದುವೆಚ್ಚ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.

ವಸತಿಯೇತರ ಸಾಲವು ವರ್ಷದಿಂದ ವರ್ಷಕ್ಕೆ ಶೇಕಡಾ 18.3 ರಷ್ಟು ಹೆಚ್ಚಾಗಿದೆ, ಆದರೆ ವಸತಿಗಾಗಿ ತೆಗೆದುಕೊಂಡ ಸಾಲವು ಶೇಕಡಾ 12.2 ರಷ್ಟಿದೆ ಎಂದು ಹೇಳಿದೆ. ಭಾರತದ ಆರ್ಥಿಕತೆಯು ಸುಮಾರು 60 ಪ್ರತಿಶತದಷ್ಟು ಇಂತಹ ಕೆಲಸಕ್ಕೆ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ. ಆದರೆ ಆರ್​​ಬಿಐ, ಬ್ಯಾಂಕ್‌ಗಳ ಅಸುರಕ್ಷಿತ ಸಾಲದ ಏರಿಕೆಯ ನಿಯಂತ್ರಣ ಮಾಡಲು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ

ಕಳೆದ ವರ್ಷ ರಿಸರ್ವ್​​​ ಬ್ಯಾಂಕ್​​​ ಇಂತಹ ಸಾಲದ ಬಗ್ಗೆ ಎಚ್ಚರಿಕೆ ವಹಿಸುವಂತೆ ಹೇಳಿದೆ. ಬ್ಯಾಂಕ್‌ಗಳು ಅಸುರಕ್ಷಿತ ಸಾಲ ನೀಡುವ ಮೊದಲು ಪರಿಶೀಲನೆ ಹಾಗೂ ಆ ಸಾಲ ಯಾವುದಕ್ಕೆ ಉಪಯೋಗ ಮಾಡಲಾಗುತ್ತದೆ ಎಂಬುದನ್ನು ಮೊದಲು ನೋಡಬೇಕು ಎಂದು ಹೇಳಿದೆ. ಹಾಗೂ ಈ ಸಾಲದಿಂದ ದೇಶದ ಹಣಕಾಸಿನ ಉಳಿತಾ ಕುಸಿಯದಂತೆ ನೋಡಿಕೊಳ್ಳಿ ಎಂದು ಹೇಳಿದೆ.

ಅಸುರಕ್ಷಿತ ಸಾಲಗಳ ಹೆಚ್ಚುತ್ತಿರುವ ಕಾರಣ ಭಾರತದ ಬ್ಯಾಂಕ್​​ಗಳ ವಾರ್ಷಿಕ ಪತ್ರಗಳಲ್ಲಿ ಇದರ ಹೊರೆ ಹೆಚ್ಚಾಗಬಹುದು ಎಂಬ ಆತಂಕ ಹೆಚ್ಚಾಗಿದೆ. ಇದರಿಂದ ಆರ್ಥಿಕ ವ್ಯವಸ್ಥೆ ಆರ್ಥಿಕ ಸ್ಥಿರತೆಗೆ ತೊಂದರೆಯನ್ನು ಉಂಟು ಮಾಡಬಹುದು ಎಂದು ಹೇಳಿದೆ. ಈ ಸಾಲದಿಂದ ಆರ್ಥಿಕತೆಯ ಉತ್ಪಾದಕ ಅಗತ್ಯಗಳಿಗೆ ಸಾಲ ನೀಡುವ ಬ್ಯಾಂಕ್‌ಗಳ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:04 pm, Fri, 26 April 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ