AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home loan: ಭಾರತದಲ್ಲಿ ಗೃಹಸಾಲ ದುಂದು ವೆಚ್ಚವಾಗುತ್ತಿದೆ, ನಿಯಂತ್ರಣ ಮಾಡಲು ಬ್ಯಾಂಕ್​​ಗಳಿಗೆ ಆರ್​​ಬಿಐ ಎಚ್ಚರಿಕೆ

ಭಾರತದಲ್ಲಿ ಗೃಹಸಾಲ ಹೆಚ್ಚು ಪಡೆಯುತ್ತಿದ್ದಾರೆ. ಆದರೆ ಇದನ್ನು ಮನೆ ನಿರ್ಮಾಣಕ್ಕೆ ಬಳಸಿಕೊಳ್ಳುತ್ತಿಲ್ಲ. ಇದರಿಂದ ಬ್ಯಾಂಕುಗಳಿಗೆ ಹೊರೆಯಾಗುತ್ತಿದೆ ಎಂದು ಹೇಳಲಾಗಿದೆ. ಇದನ್ನು ನಿಯಂತ್ರಣ ಮಾಡಲು ಆರ್​​ಬಿಐ, ಬ್ಯಾಂಕುಗಳಿಗೆ ಆದೇಶ ನೀಡಿದೆ. ಗೃಹ ಸಾಲವು ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ಒಟ್ಟು 39.1 ಪ್ರತಿಶತದಷ್ಟು ಹೊಸ ಸಾಲವನ್ನು ಪಡೆಯಲಾಗಿದೆ ಎಂದು ಹೇಳಿದೆ. ಇದು ಕಳೆದ ವರ್ಷಕ್ಕಿಂತ 36.7 ಪ್ರತಿಶತದಷ್ಟು ಹೆಚ್ಚಾಗಿದೆ

Home loan: ಭಾರತದಲ್ಲಿ ಗೃಹಸಾಲ ದುಂದು ವೆಚ್ಚವಾಗುತ್ತಿದೆ, ನಿಯಂತ್ರಣ ಮಾಡಲು ಬ್ಯಾಂಕ್​​ಗಳಿಗೆ ಆರ್​​ಬಿಐ ಎಚ್ಚರಿಕೆ
ಅಕ್ಷಯ್​ ಪಲ್ಲಮಜಲು​​
|

Updated on:Apr 26, 2024 | 4:08 PM

Share

ಭಾರತದಲ್ಲಿ ಬ್ಯಾಂಕ್​​ಗಳಿಂದ ಹೆಚ್ಚು ಹೆಚ್ಚು ಸಾಲ ಪಡೆಯುತ್ತಿದ್ದಾರೆ. ಇದರಲ್ಲೂ ಗೃಹಸಾಲ (Home loan) ಹೆಚ್ಚು ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಕಳೆದ ವರ್ಷದ ಕೊನೆಯ ಮೂರು ತಿಂಗಳುಗಳಲ್ಲಿ ಭಾರತದಲ್ಲಿ ಗೃಹ ಸಾಲ ದಾಖಲೆಯ ಮಟ್ಟಕ್ಕೆ ಏರಿದೆ. ಗ್ರಾಹಕರು ಅಪಾಯಕಾರಿಯಾಗಿ ಸಾಲ ಹೊರೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂದು ಬ್ಯಾಂಕ್​​ಗಳಿಗೆ ಆತಂಕ ವ್ಯಕ್ತಪಡಿಸಿದೆ. ಗೃಹ ಸಾಲವು ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ಒಟ್ಟು 39.1 ಪ್ರತಿಶತದಷ್ಟು ಹೊಸ ಸಾಲವನ್ನು ಪಡೆಯಲಾಗಿದೆ ಎಂದು ಹೇಳಿದೆ. ಇದು ಕಳೆದ ವರ್ಷಕ್ಕಿಂತ 36.7 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಅರ್ಥಶಾಸ್ತ್ರಜ್ಞರಾದ ನಿಖಿಲ್ ಗುಪ್ತಾ ಮತ್ತು ಮೋತಿಲಾಲ್ ಓಸ್ವಾಲ್ ಫೈನಾನ್ಷಿಯಲ್ ಸರ್ವಿಸಸ್ ಲಿಮಿಟೆಡ್‌ನ ತನಿಶಾ ಲಾಧಾ ತನ್ನ ವರದಿಯಲ್ಲಿ ತಿಳಿಸಿದೆ.

ಅಂಕಿಅಂಶಗಳ ಪ್ರಕಾರ 2021 ರ ಜನವರಿ-ಮಾರ್ಚ್ ಅವಧಿಯಲ್ಲಿ 38.6 ಶೇಕಡಾಕ್ಕಿಂತ ಹೆಚ್ಚಾಗಿದೆ. ಒಟ್ಟು ಮನೆಯ ಸಾಲ ಶೇಕಡಾ 72 ರಷ್ಟಿದ್ದು, ವಸತಿ ರಹಿತ ಸಾಲವು ವಸತಿ ಸಾಲಕ್ಕಿಂತ ವೇಗವಾಗಿ ಬೆಳೆಯುತ್ತಿದೆ ಎಂದು ಹೇಳಿದ್ದಾರೆ. ಈ ಗೃಹ ಸಾಲ ಮನೆ ನಿರ್ಮಾಣಕ್ಕೆ ಪೂರ್ಣವಾಗಿ ಉಪಯೋಗವಾಗುತ್ತಿಲ್ಲ. ಇದನ್ನು ಗ್ರಾಹಕರು ವಸ್ತುಗಳನ್ನು ಹಾಗೂ ದುಂದುವೆಚ್ಚ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.

ವಸತಿಯೇತರ ಸಾಲವು ವರ್ಷದಿಂದ ವರ್ಷಕ್ಕೆ ಶೇಕಡಾ 18.3 ರಷ್ಟು ಹೆಚ್ಚಾಗಿದೆ, ಆದರೆ ವಸತಿಗಾಗಿ ತೆಗೆದುಕೊಂಡ ಸಾಲವು ಶೇಕಡಾ 12.2 ರಷ್ಟಿದೆ ಎಂದು ಹೇಳಿದೆ. ಭಾರತದ ಆರ್ಥಿಕತೆಯು ಸುಮಾರು 60 ಪ್ರತಿಶತದಷ್ಟು ಇಂತಹ ಕೆಲಸಕ್ಕೆ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ. ಆದರೆ ಆರ್​​ಬಿಐ, ಬ್ಯಾಂಕ್‌ಗಳ ಅಸುರಕ್ಷಿತ ಸಾಲದ ಏರಿಕೆಯ ನಿಯಂತ್ರಣ ಮಾಡಲು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ

ಕಳೆದ ವರ್ಷ ರಿಸರ್ವ್​​​ ಬ್ಯಾಂಕ್​​​ ಇಂತಹ ಸಾಲದ ಬಗ್ಗೆ ಎಚ್ಚರಿಕೆ ವಹಿಸುವಂತೆ ಹೇಳಿದೆ. ಬ್ಯಾಂಕ್‌ಗಳು ಅಸುರಕ್ಷಿತ ಸಾಲ ನೀಡುವ ಮೊದಲು ಪರಿಶೀಲನೆ ಹಾಗೂ ಆ ಸಾಲ ಯಾವುದಕ್ಕೆ ಉಪಯೋಗ ಮಾಡಲಾಗುತ್ತದೆ ಎಂಬುದನ್ನು ಮೊದಲು ನೋಡಬೇಕು ಎಂದು ಹೇಳಿದೆ. ಹಾಗೂ ಈ ಸಾಲದಿಂದ ದೇಶದ ಹಣಕಾಸಿನ ಉಳಿತಾ ಕುಸಿಯದಂತೆ ನೋಡಿಕೊಳ್ಳಿ ಎಂದು ಹೇಳಿದೆ.

ಅಸುರಕ್ಷಿತ ಸಾಲಗಳ ಹೆಚ್ಚುತ್ತಿರುವ ಕಾರಣ ಭಾರತದ ಬ್ಯಾಂಕ್​​ಗಳ ವಾರ್ಷಿಕ ಪತ್ರಗಳಲ್ಲಿ ಇದರ ಹೊರೆ ಹೆಚ್ಚಾಗಬಹುದು ಎಂಬ ಆತಂಕ ಹೆಚ್ಚಾಗಿದೆ. ಇದರಿಂದ ಆರ್ಥಿಕ ವ್ಯವಸ್ಥೆ ಆರ್ಥಿಕ ಸ್ಥಿರತೆಗೆ ತೊಂದರೆಯನ್ನು ಉಂಟು ಮಾಡಬಹುದು ಎಂದು ಹೇಳಿದೆ. ಈ ಸಾಲದಿಂದ ಆರ್ಥಿಕತೆಯ ಉತ್ಪಾದಕ ಅಗತ್ಯಗಳಿಗೆ ಸಾಲ ನೀಡುವ ಬ್ಯಾಂಕ್‌ಗಳ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:04 pm, Fri, 26 April 24

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ