AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣ ಹೊಟೆಲ್​ಗಳಿಗೆ ಜಿಎಸ್​ಟಿ ಬರೆ: ಹೊಟೆಲ್ ಮಾಲೀಕರ ಸಂಘದ ಅಸಮಾಧಾನ

ಕೇಂದ್ರ ಸರ್ಕಾರದ ಈ ನಿರ್ಣಯವು ಅವೈಜ್ಞಾನಿಕವಾಗಿದೆ. ದವಸ, ಧಾನ್ಯದ ವ್ಯಾಪಾರದ ಮೇಲೆಯೂ ದೊಡ್ಡ ಹೊರೆಯಾಗಲಿದೆ ಎಂದು ಅವರು ಹೇಳಿದರು.

ಸಣ್ಣ ಹೊಟೆಲ್​ಗಳಿಗೆ ಜಿಎಸ್​ಟಿ ಬರೆ: ಹೊಟೆಲ್ ಮಾಲೀಕರ ಸಂಘದ ಅಸಮಾಧಾನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 17, 2022 | 12:57 PM

Share

ಬೆಂಗಳೂರು: ಜಿಎಸ್​ಟಿ ಮಂಡಳಿಯ ಸಭೆಯಲ್ಲಿ (GST Council Meet) ತೆಗೆದುಕೊಂಡ ನಿರ್ಣಯದಂತೆ ಕಡಿಮೆ ಬೆಲೆಯ ಹೊಟೆಲ್​ ರೂಮ್​ಗೆ ಶೇ 5ರ ಜಿಎಸ್​ಟಿ ವಿಧಿಸುವ ನಿರ್ಧಾರವನ್ನು ಬೃಹತ್ ಬೆಂಗಳೂರು ಹೊಟೆಲ್ ಮಾಲೀಕರ ಸಂಘವು (Hotel Owners Association) ವಿರೋಧಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಂಘದ ಅಧ್ಯಕ್ಷ ಪಿ.ಸಿ.ರಾವ್, ‘ಕಡಿಮೆ ಬಾಡಿಗೆ ಇರುವ, ₹ 1 ಸಾವಿರಕ್ಕಿಂತಲೂ ಕಡಿಮೆ ದರ ವಿಧಿಸುವ ಹೋಟೆಲ್​ಗಳಿಗೆ ಇದು ದೊಡ್ಡ ಹೊರೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಣಯವು ಅವೈಜ್ಞಾನಿಕವಾಗಿದೆ. ದವಸ, ಧಾನ್ಯದ ವ್ಯಾಪಾರದ ಮೇಲೆಯೂ ದೊಡ್ಡ ಹೊರೆಯಾಗಲಿದೆ. ಮಧ್ಯಮ ವರ್ಗ, ವಿದ್ಯಾರ್ಥಿಗಳು, ಪ್ರಯಾಣಿಕರಿಗೂ ತೊಂದರೆಯಾಗಲಿದೆ. ಈ ನಿರ್ಧಾರವನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯಬೇಕು. ಇಲ್ಲದಿದ್ದಲ್ಲಿ ಹೋಟೆಲ್ ಉದ್ಯಮಕ್ಕೆ ಭಾರಿ ಹೊಡೆತ ಬೀಳಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ಮೊಸರು, ಮಜ್ಜಿಗೆ, ಲಸ್ಸಿ ಬೆಲೆ ಹೆಚ್ಚಳ

ಇದನ್ನೂ ಓದಿ
Image
ಇಂದಿನಿಂದ ಮೊಸರು, ಮಜ್ಜಿಗೆ, ಲಸ್ಸಿ ಬೆಲೆ ಹೆಚ್ಚಳ
Image
GST: ಹಾಲಿನ ಉತ್ಪನ್ನಗಳು, ಆಹಾರ ಧಾನ್ಯಗಳ ಮೇಲೆ ಜಿಎಸ್​ಟಿ: ನಾಳೆಯಿಂದ ಜನಸಾಮಾನ್ಯನ ಮೇಲೆ ಬೆಲೆಏರಿಕೆಯ ಮತ್ತೊಂದು ಬರೆ
Image
ಕೆಎಂಎಫ್ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ? ಕೆಎಂಎಫ್ ಅಧ್ಯಕ್ಷರು ಸೇರಿ ಮೂವರಿಗೆ ಲೀಗಲ್ ನೋಟಿಸ್ ಜಾರಿ
Image
ಬೆಳಗಾವಿ ನಂದಿನಿ ಹಾಲು ಪೊಟ್ಟಣಗಳ ಮೇಲೆ ಹಿಂದಿ ಭಾಷೆಯಲ್ಲಿ ವಿವರಗಳು! ಹಿಂದಿ ಹೇರಿಕೆ ಆರಂಭಗೊಂಡಿತೇ?

ಹಾಲಿನ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರವು ಶೇ 5ರ ಸರಕು ಸೇವಾ ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು (Karnataka Milk Federation – KMF) ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಗಳನ್ನು ಹೆಚ್ಚಿಸಲು ತೀರ್ಮಾನಿಸಿದೆ. ಪ್ರತಿ ಉತ್ಪನ್ನದ ಮೇಲೆ ಸರಾಸರಿ ₹ 1ರಂದ ₹ 3ರವರೆಗೆ ಬೆಲೆ ಹೆಚ್ಚಾಗಲಿದೆ. ಈ ಮೊದಲು ಲೀಟರ್​ ಮೊಸರಿಗೆ ₹ 43 ಇತ್ತು. ನಾಳೆಯಿಂದ (ಜುಲೈ 18) ಅದು ₹ 46 ಆಗಲಿದೆ. ಅರ್ಧ ಲೀಟರ್ ಮೊಸರಿನ ಬೆಲೆ ₹ 22 ಇತ್ತು. ನಾಳೆಯಿಂದ ₹ 24 ಆಗಲಿದೆ. ಮಜ್ಜಿಗೆ 200 ಎಂಎಲ್ ಮಜ್ಜಿಗೆ ಹಾಗೂ ಲಸ್ಸಿ ಮೇಲೆ ₹ 1 ಹೆಚ್ಚಿಸಲಾಗಿದೆ. ಪಾಕೆಟ್​ಗಳ ಮೇಲೆ ಹಳೆಯ ದರಗಳೇ ನಮೂದಾಗಿರುತ್ತವೆ. ಆದರೆ ಗ್ರಾಹಕರು ಹೊಸದಾಗಿ ನಿಗದಿಪಡಿಸಿರುವಷ್ಟು ದರ ನೀಡಿ ಖರೀದಿಸಬೇಕು ಎಂದು ಕೆಎಂಎಫ್ ಪ್ರಕಟಣೆಯಲ್ಲಿ ತಿಳಿಸಿದೆ.

Published On - 12:55 pm, Sun, 17 July 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?