AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣ ಹೊಟೆಲ್​ಗಳಿಗೆ ಜಿಎಸ್​ಟಿ ಬರೆ: ಹೊಟೆಲ್ ಮಾಲೀಕರ ಸಂಘದ ಅಸಮಾಧಾನ

ಕೇಂದ್ರ ಸರ್ಕಾರದ ಈ ನಿರ್ಣಯವು ಅವೈಜ್ಞಾನಿಕವಾಗಿದೆ. ದವಸ, ಧಾನ್ಯದ ವ್ಯಾಪಾರದ ಮೇಲೆಯೂ ದೊಡ್ಡ ಹೊರೆಯಾಗಲಿದೆ ಎಂದು ಅವರು ಹೇಳಿದರು.

ಸಣ್ಣ ಹೊಟೆಲ್​ಗಳಿಗೆ ಜಿಎಸ್​ಟಿ ಬರೆ: ಹೊಟೆಲ್ ಮಾಲೀಕರ ಸಂಘದ ಅಸಮಾಧಾನ
ಸಾಂದರ್ಭಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jul 17, 2022 | 12:57 PM

Share

ಬೆಂಗಳೂರು: ಜಿಎಸ್​ಟಿ ಮಂಡಳಿಯ ಸಭೆಯಲ್ಲಿ (GST Council Meet) ತೆಗೆದುಕೊಂಡ ನಿರ್ಣಯದಂತೆ ಕಡಿಮೆ ಬೆಲೆಯ ಹೊಟೆಲ್​ ರೂಮ್​ಗೆ ಶೇ 5ರ ಜಿಎಸ್​ಟಿ ವಿಧಿಸುವ ನಿರ್ಧಾರವನ್ನು ಬೃಹತ್ ಬೆಂಗಳೂರು ಹೊಟೆಲ್ ಮಾಲೀಕರ ಸಂಘವು (Hotel Owners Association) ವಿರೋಧಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಂಘದ ಅಧ್ಯಕ್ಷ ಪಿ.ಸಿ.ರಾವ್, ‘ಕಡಿಮೆ ಬಾಡಿಗೆ ಇರುವ, ₹ 1 ಸಾವಿರಕ್ಕಿಂತಲೂ ಕಡಿಮೆ ದರ ವಿಧಿಸುವ ಹೋಟೆಲ್​ಗಳಿಗೆ ಇದು ದೊಡ್ಡ ಹೊರೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಣಯವು ಅವೈಜ್ಞಾನಿಕವಾಗಿದೆ. ದವಸ, ಧಾನ್ಯದ ವ್ಯಾಪಾರದ ಮೇಲೆಯೂ ದೊಡ್ಡ ಹೊರೆಯಾಗಲಿದೆ. ಮಧ್ಯಮ ವರ್ಗ, ವಿದ್ಯಾರ್ಥಿಗಳು, ಪ್ರಯಾಣಿಕರಿಗೂ ತೊಂದರೆಯಾಗಲಿದೆ. ಈ ನಿರ್ಧಾರವನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯಬೇಕು. ಇಲ್ಲದಿದ್ದಲ್ಲಿ ಹೋಟೆಲ್ ಉದ್ಯಮಕ್ಕೆ ಭಾರಿ ಹೊಡೆತ ಬೀಳಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ಮೊಸರು, ಮಜ್ಜಿಗೆ, ಲಸ್ಸಿ ಬೆಲೆ ಹೆಚ್ಚಳ

ಇದನ್ನೂ ಓದಿ
Image
ಇಂದಿನಿಂದ ಮೊಸರು, ಮಜ್ಜಿಗೆ, ಲಸ್ಸಿ ಬೆಲೆ ಹೆಚ್ಚಳ
Image
GST: ಹಾಲಿನ ಉತ್ಪನ್ನಗಳು, ಆಹಾರ ಧಾನ್ಯಗಳ ಮೇಲೆ ಜಿಎಸ್​ಟಿ: ನಾಳೆಯಿಂದ ಜನಸಾಮಾನ್ಯನ ಮೇಲೆ ಬೆಲೆಏರಿಕೆಯ ಮತ್ತೊಂದು ಬರೆ
Image
ಕೆಎಂಎಫ್ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ? ಕೆಎಂಎಫ್ ಅಧ್ಯಕ್ಷರು ಸೇರಿ ಮೂವರಿಗೆ ಲೀಗಲ್ ನೋಟಿಸ್ ಜಾರಿ
Image
ಬೆಳಗಾವಿ ನಂದಿನಿ ಹಾಲು ಪೊಟ್ಟಣಗಳ ಮೇಲೆ ಹಿಂದಿ ಭಾಷೆಯಲ್ಲಿ ವಿವರಗಳು! ಹಿಂದಿ ಹೇರಿಕೆ ಆರಂಭಗೊಂಡಿತೇ?

ಹಾಲಿನ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರವು ಶೇ 5ರ ಸರಕು ಸೇವಾ ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು (Karnataka Milk Federation – KMF) ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಗಳನ್ನು ಹೆಚ್ಚಿಸಲು ತೀರ್ಮಾನಿಸಿದೆ. ಪ್ರತಿ ಉತ್ಪನ್ನದ ಮೇಲೆ ಸರಾಸರಿ ₹ 1ರಂದ ₹ 3ರವರೆಗೆ ಬೆಲೆ ಹೆಚ್ಚಾಗಲಿದೆ. ಈ ಮೊದಲು ಲೀಟರ್​ ಮೊಸರಿಗೆ ₹ 43 ಇತ್ತು. ನಾಳೆಯಿಂದ (ಜುಲೈ 18) ಅದು ₹ 46 ಆಗಲಿದೆ. ಅರ್ಧ ಲೀಟರ್ ಮೊಸರಿನ ಬೆಲೆ ₹ 22 ಇತ್ತು. ನಾಳೆಯಿಂದ ₹ 24 ಆಗಲಿದೆ. ಮಜ್ಜಿಗೆ 200 ಎಂಎಲ್ ಮಜ್ಜಿಗೆ ಹಾಗೂ ಲಸ್ಸಿ ಮೇಲೆ ₹ 1 ಹೆಚ್ಚಿಸಲಾಗಿದೆ. ಪಾಕೆಟ್​ಗಳ ಮೇಲೆ ಹಳೆಯ ದರಗಳೇ ನಮೂದಾಗಿರುತ್ತವೆ. ಆದರೆ ಗ್ರಾಹಕರು ಹೊಸದಾಗಿ ನಿಗದಿಪಡಿಸಿರುವಷ್ಟು ದರ ನೀಡಿ ಖರೀದಿಸಬೇಕು ಎಂದು ಕೆಎಂಎಫ್ ಪ್ರಕಟಣೆಯಲ್ಲಿ ತಿಳಿಸಿದೆ.

Published On - 12:55 pm, Sun, 17 July 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!