AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dearness Allowance: ಜುಲೈ 1ರಿಂದಲೇ ಕೇಂದ್ರ ಸರ್ಕಾರಿ ನೌಕರರಿಗೆ ಪರಿಷ್ಕೃತ ತುಟ್ಟಿಭತ್ಯೆ ಪಾವತಿ

ಕೇಂದ್ರ ಸರ್ಕಾರದ 65 ಲಕ್ಷ ನಿವೃತ್ತ ಉದ್ಯೋಗಿಗಳು ಮತ್ತು 52 ಲಕ್ಷ ಉದ್ಯೋಗಿಗಳು ಈ ಸೌಲಭ್ಯಕ್ಕೆ ಫಲಾನುಭವಿಗಳಾಗಿದ್ದಾರೆ. ಇವರೆಲ್ಲರಿಗೂ ಕೇಂದ್ರ ಸರ್ಕಾರದ ಸೌಲಭ್ಯವನ್ನು ಮತ್ತೆ ಮೊದಲಿನಂತೆಯೇ ಪಡೆದುಕೊಳ್ಳಲಿದ್ದಾರೆ. 

Dearness Allowance: ಜುಲೈ 1ರಿಂದಲೇ ಕೇಂದ್ರ ಸರ್ಕಾರಿ ನೌಕರರಿಗೆ ಪರಿಷ್ಕೃತ ತುಟ್ಟಿಭತ್ಯೆ ಪಾವತಿ
ಸಾಂದರ್ಭಿಕ ಚಿತ್ರ
Follow us
guruganesh bhat
| Updated By: Digi Tech Desk

Updated on:Apr 23, 2021 | 6:18 PM

ದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಜುಲೈನಿಂದ ಸಂಪೂರ್ಣ ತುಟ್ಟಿ ಭತ್ಯೆ ಸೌಲಭ್ಯಗಳನ್ನು ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಜುಲೈ1ರಿಂದಲೇ ಪರಿಷ್ಕೃತ  ತುಟ್ಟಿ ಭತ್ಯೆ ಸೌಲಭ್ಯಗಳ ಮೂರು ಕಂತುಗಳನ್ನು ಪಾವತಿಸಲಾಗುವುದು ಎಂದು ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಈ ಕುರಿತು ಮೇಲ್ಮನೆಗೆ ಅವರು ಪತ್ರ ಬರೆದಿದ್ದಾರೆ.

ಸದ್ಯ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಶೇ17ರಷ್ಟು ತುಟ್ಟಿ ಭತ್ಯೆ ಸೌಲಭ್ಯ ಪಡೆಯುತ್ತಿದ್ದಾರೆ. ಈ ದರ ಶೇ 28ಕ್ಕೆ ಹೆಚ್ಚಳವಾಗಲಿದೆ. ತುಟ್ಟಿ ಭತ್ಯೆ ಸೌಲಭ್ಯದಲ್ಲಿ 2020ರ ಜನವರಿ 1ರಿಂದ ಶೇ 3ರಷ್ಟು ಹೆಚ್ಚಳ, 2020ರ ಜುಲೈನಿಂದ ಶೇ4ರಷ್ಟು ಹೆಚ್ಚಳ, 2021ರ ಜನವರಿ 1ರಿಂದ ಶೇ4ರಷ್ಟು ಹೆಚ್ಚಳವಾಗಲಿದೆ. ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ , ಈ ಹಿಂದಿನ ಮೂರು ದರಗಳನ್ನು ಮತ್ತೆ ನೀಡಲಾಗುವುದು ಎಂದಿದ್ದಾರೆ.

ಕೊವಿಡ್ ಸೋಂಕಿನ ಹೆಚ್ಚಳದಿಂದ ಡಿಎ ಸೌಲಭ್ಯಗಳನ್ನು ಜನವರಿ 1, 2020ರಿಂದಲೇ ಕೇಂದ್ರ ಸರ್ಕಾರ ತಡೆ ಹಿಡಿದಿತ್ತು. ತದನಂತರ ಜುಲೈ 2020ರ ಕಂತು ಮತ್ತು ಜನವರಿ 2021ರ ಕಂತುಗಳನ್ನು ಸಹ ಕೇಂದ್ರ ಸರ್ಕಾರ ಪಾವತಿಸಿರಲಿಲ್ಲ. ಆದರೆ ಇದೀಗ ಘೋಷಿಸಿರುವ ಪ್ರಕಾರ ಮುಂದಿನ ಜುಲೈ 1ರಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆ ಸೌಲಭ್ಯ ಮತ್ತೆ ದೊರೆಯಲಿದೆ. ತಡೆ ಹಿಡಿಯಲಾಗಿದ್ದ ಮೂರು ಕಂತುಗಳ ತುಟ್ಟಿ ಭತ್ಯೆ ಸೌಲಭ್ಯಗಳಿಗೂ ಅಂದಿನ ಮಾನದಂಡಗಳಿಗೆ ಅನುಗುಣವಾಗಿಯೇ ದೊರೆಯಲಿವೆ. ಮುಂದಿನ ಜುಲೈನಲ್ಲಿ ಪರಿಷ್ಕೃತ ಡಿಎ ಸೌಲಭ್ಯವನ್ನು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಪಡೆಯಲಿದ್ದಾರೆ.

ಕೇಂದ್ರ ಸರ್ಕಾರದ 65 ಲಕ್ಷ ನಿವೃತ್ತ ಉದ್ಯೋಗಿಗಳು ಮತ್ತು 52 ಲಕ್ಷ ಉದ್ಯೋಗಿಗಳು ಈ ಸೌಲಭ್ಯಕ್ಕೆ ಫಲಾನುಭವಿಗಳಾಗಿದ್ದಾರೆ. ಇವರೆಲ್ಲರಿಗೂ ಕೇಂದ್ರ ಸರ್ಕಾರದ ಸೌಲಭ್ಯವನ್ನು ಮತ್ತೆ ಮೊದಲಿನಂತೆಯೇ ಪಡೆದುಕೊಳ್ಳಲಿದ್ದಾರೆ.  1-7-2021ರಿಂದ ಕ್ಯುಮುಲೇಟಿವ್ ಪರಿಷ್ಕೃತ ದರದಲ್ಲಿ ಆರಂಭಿಸಲಾಗುವುದು ಎಂದು ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಎಂದಿದ್ದಾರೆ. ಇದರರ್ಥ ಏನೆಂದರೆ, ಪರಿಷ್ಕೃತ ತುಟ್ಟಿ ಭತ್ಯೆ ದರವು ಕಳೆದ ವರ್ಷ ಸ್ಥಗಿತವಾಗಿದ್ದ ದರಕ್ಕಿಂತ ಹೆಚ್ಚಿನದಾಗಿರುತ್ತದೆ.

ಇದನ್ನೂ ಓದಿ: ಕೇರಳ ಸರ್ಕಾರಿ ಆಸ್ಪತ್ರೆಗಳಿಗೆ ಭಾರತ್ ಪೆಟ್ರೋಲಿಯಂ ಸಂಸ್ಥೆಯಿಂದ ದಿನಕ್ಕೆ 1.5 ಟನ್ ಮೆಡಿಕಲ್​​ ಆಕ್ಸಿಜನ್​ ಪೂರೈಕೆ

45 ವರ್ಷ ಮೇಲ್ಪಟ್ಟ, ಕೇಂದ್ರ ಸರ್ಕಾರಿ ನೌಕರರು ಕೊವಿಡ್​-19 ಲಸಿಕೆ ಸ್ವೀಕರಿಸಲು ಸರ್ಕಾರದ ಸೂಚನೆ

(how DA restoration will impact take home pay of central govt employees from July 1 2021)

Published On - 12:47 pm, Fri, 16 April 21

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್