AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dearness Allowance: ಜುಲೈ 1ರಿಂದಲೇ ಕೇಂದ್ರ ಸರ್ಕಾರಿ ನೌಕರರಿಗೆ ಪರಿಷ್ಕೃತ ತುಟ್ಟಿಭತ್ಯೆ ಪಾವತಿ

ಕೇಂದ್ರ ಸರ್ಕಾರದ 65 ಲಕ್ಷ ನಿವೃತ್ತ ಉದ್ಯೋಗಿಗಳು ಮತ್ತು 52 ಲಕ್ಷ ಉದ್ಯೋಗಿಗಳು ಈ ಸೌಲಭ್ಯಕ್ಕೆ ಫಲಾನುಭವಿಗಳಾಗಿದ್ದಾರೆ. ಇವರೆಲ್ಲರಿಗೂ ಕೇಂದ್ರ ಸರ್ಕಾರದ ಸೌಲಭ್ಯವನ್ನು ಮತ್ತೆ ಮೊದಲಿನಂತೆಯೇ ಪಡೆದುಕೊಳ್ಳಲಿದ್ದಾರೆ. 

Dearness Allowance: ಜುಲೈ 1ರಿಂದಲೇ ಕೇಂದ್ರ ಸರ್ಕಾರಿ ನೌಕರರಿಗೆ ಪರಿಷ್ಕೃತ ತುಟ್ಟಿಭತ್ಯೆ ಪಾವತಿ
ಸಾಂದರ್ಭಿಕ ಚಿತ್ರ
guruganesh bhat
| Edited By: |

Updated on:Apr 23, 2021 | 6:18 PM

Share

ದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಜುಲೈನಿಂದ ಸಂಪೂರ್ಣ ತುಟ್ಟಿ ಭತ್ಯೆ ಸೌಲಭ್ಯಗಳನ್ನು ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಜುಲೈ1ರಿಂದಲೇ ಪರಿಷ್ಕೃತ  ತುಟ್ಟಿ ಭತ್ಯೆ ಸೌಲಭ್ಯಗಳ ಮೂರು ಕಂತುಗಳನ್ನು ಪಾವತಿಸಲಾಗುವುದು ಎಂದು ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಈ ಕುರಿತು ಮೇಲ್ಮನೆಗೆ ಅವರು ಪತ್ರ ಬರೆದಿದ್ದಾರೆ.

ಸದ್ಯ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಶೇ17ರಷ್ಟು ತುಟ್ಟಿ ಭತ್ಯೆ ಸೌಲಭ್ಯ ಪಡೆಯುತ್ತಿದ್ದಾರೆ. ಈ ದರ ಶೇ 28ಕ್ಕೆ ಹೆಚ್ಚಳವಾಗಲಿದೆ. ತುಟ್ಟಿ ಭತ್ಯೆ ಸೌಲಭ್ಯದಲ್ಲಿ 2020ರ ಜನವರಿ 1ರಿಂದ ಶೇ 3ರಷ್ಟು ಹೆಚ್ಚಳ, 2020ರ ಜುಲೈನಿಂದ ಶೇ4ರಷ್ಟು ಹೆಚ್ಚಳ, 2021ರ ಜನವರಿ 1ರಿಂದ ಶೇ4ರಷ್ಟು ಹೆಚ್ಚಳವಾಗಲಿದೆ. ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ , ಈ ಹಿಂದಿನ ಮೂರು ದರಗಳನ್ನು ಮತ್ತೆ ನೀಡಲಾಗುವುದು ಎಂದಿದ್ದಾರೆ.

ಕೊವಿಡ್ ಸೋಂಕಿನ ಹೆಚ್ಚಳದಿಂದ ಡಿಎ ಸೌಲಭ್ಯಗಳನ್ನು ಜನವರಿ 1, 2020ರಿಂದಲೇ ಕೇಂದ್ರ ಸರ್ಕಾರ ತಡೆ ಹಿಡಿದಿತ್ತು. ತದನಂತರ ಜುಲೈ 2020ರ ಕಂತು ಮತ್ತು ಜನವರಿ 2021ರ ಕಂತುಗಳನ್ನು ಸಹ ಕೇಂದ್ರ ಸರ್ಕಾರ ಪಾವತಿಸಿರಲಿಲ್ಲ. ಆದರೆ ಇದೀಗ ಘೋಷಿಸಿರುವ ಪ್ರಕಾರ ಮುಂದಿನ ಜುಲೈ 1ರಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆ ಸೌಲಭ್ಯ ಮತ್ತೆ ದೊರೆಯಲಿದೆ. ತಡೆ ಹಿಡಿಯಲಾಗಿದ್ದ ಮೂರು ಕಂತುಗಳ ತುಟ್ಟಿ ಭತ್ಯೆ ಸೌಲಭ್ಯಗಳಿಗೂ ಅಂದಿನ ಮಾನದಂಡಗಳಿಗೆ ಅನುಗುಣವಾಗಿಯೇ ದೊರೆಯಲಿವೆ. ಮುಂದಿನ ಜುಲೈನಲ್ಲಿ ಪರಿಷ್ಕೃತ ಡಿಎ ಸೌಲಭ್ಯವನ್ನು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಪಡೆಯಲಿದ್ದಾರೆ.

ಕೇಂದ್ರ ಸರ್ಕಾರದ 65 ಲಕ್ಷ ನಿವೃತ್ತ ಉದ್ಯೋಗಿಗಳು ಮತ್ತು 52 ಲಕ್ಷ ಉದ್ಯೋಗಿಗಳು ಈ ಸೌಲಭ್ಯಕ್ಕೆ ಫಲಾನುಭವಿಗಳಾಗಿದ್ದಾರೆ. ಇವರೆಲ್ಲರಿಗೂ ಕೇಂದ್ರ ಸರ್ಕಾರದ ಸೌಲಭ್ಯವನ್ನು ಮತ್ತೆ ಮೊದಲಿನಂತೆಯೇ ಪಡೆದುಕೊಳ್ಳಲಿದ್ದಾರೆ.  1-7-2021ರಿಂದ ಕ್ಯುಮುಲೇಟಿವ್ ಪರಿಷ್ಕೃತ ದರದಲ್ಲಿ ಆರಂಭಿಸಲಾಗುವುದು ಎಂದು ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಎಂದಿದ್ದಾರೆ. ಇದರರ್ಥ ಏನೆಂದರೆ, ಪರಿಷ್ಕೃತ ತುಟ್ಟಿ ಭತ್ಯೆ ದರವು ಕಳೆದ ವರ್ಷ ಸ್ಥಗಿತವಾಗಿದ್ದ ದರಕ್ಕಿಂತ ಹೆಚ್ಚಿನದಾಗಿರುತ್ತದೆ.

ಇದನ್ನೂ ಓದಿ: ಕೇರಳ ಸರ್ಕಾರಿ ಆಸ್ಪತ್ರೆಗಳಿಗೆ ಭಾರತ್ ಪೆಟ್ರೋಲಿಯಂ ಸಂಸ್ಥೆಯಿಂದ ದಿನಕ್ಕೆ 1.5 ಟನ್ ಮೆಡಿಕಲ್​​ ಆಕ್ಸಿಜನ್​ ಪೂರೈಕೆ

45 ವರ್ಷ ಮೇಲ್ಪಟ್ಟ, ಕೇಂದ್ರ ಸರ್ಕಾರಿ ನೌಕರರು ಕೊವಿಡ್​-19 ಲಸಿಕೆ ಸ್ವೀಕರಿಸಲು ಸರ್ಕಾರದ ಸೂಚನೆ

(how DA restoration will impact take home pay of central govt employees from July 1 2021)

Published On - 12:47 pm, Fri, 16 April 21

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್