Mukesh Ambani: ಮುಕೇಶ್, ನೀತಾ ಅಂಬಾನಿ ಚಾಲಕ ತಿಂಗಳಿಗೆ ಪಡೆಯುವ ವೇತನ ಎಷ್ಟು?

ದೊಡ್ಡ ಮೊತ್ತದ ವೇತನ ಪಡೆಯುವ ಚಾಲಕನ ಕೆಲಸ ಬಹಳ ಸುಲಭ ಅಂತ ಅಂದುಕೊಂಡರೆ ತಪ್ಪಾಗಬಹುದು. ಅಂಬಾನಿಯವರ ದುಬಾರಿ ಮತ್ತು ಐಷಾರಾಮಿ ವಿಧವಿಧದ ಕಾರುಗಳನ್ನು ಚಲಾಯಿವುದರಲ್ಲಿ ಆತ ಪರಿಣಿತನಾಗಿರಬೇಕಾಗುತ್ತದೆ.

Mukesh Ambani: ಮುಕೇಶ್, ನೀತಾ ಅಂಬಾನಿ ಚಾಲಕ ತಿಂಗಳಿಗೆ ಪಡೆಯುವ ವೇತನ ಎಷ್ಟು?
ಮುಕೇಶ್ ಅಂಬಾನಿ
Follow us
|

Updated on: Mar 03, 2023 | 8:44 PM

ಮುಂಬೈ: ರಿಲಯನ್ಸ್ ಮಾಲೀಕರಾದ ಮುಕೇಶ್ ಅಂಬಾನಿ (Mukesh Ambani) ಹಾಗೂ ಅವರ ಪತ್ನಿ ನೀತಾ ಅಂಬಾನಿ (Nita Ambani) ವಿಶ್ವದ ಅತ್ಯಂತ ಶ್ರೀಮಂತರಲ್ಲಿ ಪ್ರಮುಖರು. ಇಷ್ಟೇ ಅಲ್ಲ, ಅಂಬಾನಿ ಕುಟುಂಬ ವಿಶ್ವದಲ್ಲೇ ಎರಡನೇ ಅತಿ ದುಬಾರಿ ನಿವಾಸವನ್ನು ಹೊಂದಿದೆ. ಜಗತ್ತಿನ ದುಬಾರಿ ನಿವಾಸಗಳ ಪೈಕಿ ಅಂಬಾನಿಯ ನಿವಾಸ ಆಂಟಿಲಿಯಾ (Antilia) ಬಕಿಂಗ್​ಹ್ಯಾಂ ಅರಮನೆಯ ನಂತರದ ಸ್ಥಾನ ಪಡೆದಿದೆ. ಆಂಟಿಲಿಯಾದಲ್ಲಿ ನಡೆಯುವ ಚಟುವಟಿಕೆಗಳು, ಅದರ ನಿರ್ವಹಣೆಗೆ ತಗಲುವ ಕೆಲಸ ಇತ್ಯಾದಿಗಳ ಬಗ್ಗೆ ಕೇಳಿದರೆ ನಿಜಕ್ಕೂ ಅಚ್ಚರಿಯಾಗಬಹುದು. ಸುಮಾರು 600 ಸಿಬ್ಬಂದಿ ಈ ನಿವಾಸದಲ್ಲಿ ಕೆಲಸ ಮಾಡುತ್ತಾರೆ ಎಂದು ಇತ್ತೀಚೆಗೆ ವರದಿಯೊಂತು ತಿಳಿಸಿತ್ತು. ಹಾಗಿದ್ದರೆ ಇಷ್ಟೆಲ್ಲ ಐಷಾರಾಮಿ ಜೀವನ ನಡೆಸುವ ಅಂಬಾನಿಯವರ ಕಾರು ಚಾಲಕ ತಿಂಗಳಿಗೆ ಎಷ್ಟು ವೇತನ ಪಡೆಯುತ್ತಾರೆ ಎಂಬುದು ತಿಳಿದಿದೆಯೇ? ಆ ಕುರಿತು ಇಲ್ಲಿದೆ ಮಾಹಿತಿ.

ಅಂಬಾನಿಯಂಥ ಉದ್ಯಮಿಯ ಕಾರು ಚಾಲಕನಾಗುವುದೆಂದರೆ ಸುಲಭದ ಕೆಲಸವಲ್ಲ. ಕಠಿಣ ತರಬೇತಿ ಪಡೆಯುವುದರ ಜತೆಗೆ ಅನೇಕ ವಿಚಾರಗಳನ್ನು ತಿಳಿದಿರಬೇಕಾಗುತ್ತದೆ. ಉದ್ಯಮಿ ದಂಪತಿಯ ಐಷಾರಾಮಿ ಜೀವನಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಬೇಕಿರುತ್ತದೆ. ಕಾರಿನ ಚಾಲಕನನ್ನು ನೇಮಕ ಮಾಡುವ ಜವಾಬ್ದಾರಿಯನ್ನು ಖಾಸಗಿ ಕಂಪನಿಯೊಂದಕ್ಕೆ ನೀಡಲಾಗಿದೆ. ಖಾಸಗಿ ಕಂಪನಿಯು ಗುತ್ತಿಗೆ ಆಧಾರದಲ್ಲಿ ಚಾಲಕನ ನೇಮಕ ಮಾಡುತ್ತದೆ.

ಮುಕೇಶ್ ಅಂಬಾನಿಯ ಚಾಲಕನಿಗೆ ತಿಂಗಳಿಗೆ 2 ಲಕ್ಷ ರೂ. ವೇತನ ನೀಡಲಾಗುತ್ತದೆ ಎನ್ನಲಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುವವರಿಗೂ ದೊರೆಯ ವೇತನ ಅಂಬಾನಿ ಚಾಲಕನಿಗೆ ದೊರೆಯುತ್ತಿರುವುದು ಇದರಿಂದ ತಿಳಿದುಬಂದಿದೆ.

ಇದನ್ನೂ ಓದಿ: Post Office Savings: ಆನ್​ಲೈನ್, ಆಫ್​​ಲೈನ್​ನಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ ಬ್ಯಾಲೆನ್ಸ್​ ಪರಿಶೀಲಿಸಲು ಹೀಗೆ ಮಾಡಿ

ಆದರೆ, ಇಷ್ಟೊಂದು ವೇತನ ಪಡೆಯುವ ಚಾಲಕನ ಕೆಲಸ ಬಹಳ ಸುಲಭ ಅಂತ ಅಂದುಕೊಂಡರೆ ತಪ್ಪಾಗಬಹುದು. ಅಂಬಾನಿಯವರ ದುಬಾರಿ ಮತ್ತು ಐಷಾರಾಮಿ ವಿಧವಿಧದ ಕಾರುಗಳನ್ನು ಚಲಾಯಿವುದರಲ್ಲಿ ಆತ ಪರಿಣಿತನಾಗಿರಬೇಕಾಗುತ್ತದೆ.

ಆಂಟಿಲಿಯಾದಲ್ಲಿ ಕಾರ್ಯನಿರ್ವಹಿಸುವ ಕೆಲವು ಸಿಬ್ಬಂದಿಗೂ 2 ಲಕ್ಷ ರೂ.ವರೆಗೆ ವೇತನ ನೀಡಲಾಗುತ್ತದೆ ಎಂದು ಇತ್ತೀಚೆಗೆ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ನಿವಾಸದ ಪ್ಲಂಬಿಂಗ್ ಕೆಲಸ ನಿರ್ವಹಿಸುವ ಸಿಬ್ಬಂದಿಗೂ ಸರಿಸುಮಾರು ಇಷ್ಟೇ ವೇತನ ನೀಡಲಾಗುತ್ತದೆ ಎನ್ನಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ