AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tax On PF: ಪಿಎಫ್​​ನ ಈ ಎಲ್ಲ ಮೊತ್ತ ಸೇರಿ ವರ್ಷಕ್ಕೆ 2.5 ಲಕ್ಷ ರೂಪಾಯಿ ದಾಟಿದರೆ ಬೀಳುತ್ತದೆ ತೆರಿಗೆ

ಪ್ರಾವಿಡೆಂಟ್ ಮೇಲಿನ ತೆರಿಗೆ ವಿಧಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಹೊಸ ನಿಯಮ ತರಲಾಗಿದೆ. ಆ ಬಗೆಗಿನ ವಿವರಣಾತ್ಮಕ ಲೇಖನ ಇಲ್ಲಿದೆ.

Tax On PF: ಪಿಎಫ್​​ನ ಈ ಎಲ್ಲ ಮೊತ್ತ ಸೇರಿ ವರ್ಷಕ್ಕೆ 2.5 ಲಕ್ಷ ರೂಪಾಯಿ ದಾಟಿದರೆ ಬೀಳುತ್ತದೆ ತೆರಿಗೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 18, 2022 | 12:49 PM

Share

ಉದ್ಯೋಗಿ- ಉದ್ಯೋಗದಾತರ ಕೊಡುಗೆ ಮತ್ತು ಗಳಿಸಿದ ಬಡ್ಡಿಯೂ ಸೇರಿದಂತೆ ವಾರ್ಷಿಕವಾಗಿ ರೂ. 2.50 ಲಕ್ಷಕ್ಕಿಂತ ಹೆಚ್ಚಿನ ಪ್ರಾವಿಡೆಂಟ್ ಫಂಡ್ (PF) ಕೊಡುಗೆಗಳಿಗೆ ಸರ್ಕಾರವು ತೆರಿಗೆ ವಿಧಿಸುತ್ತದೆ. ಅಂದಹಾಗೆ ಸರ್ಕಾರಿ ನೌಕರರಿಗೆ ಗರಿಷ್ಠ ರೂ. 5 ಲಕ್ಷ ಮಿತಿ ನಿಗದಿಪಡಿಸಲಾಗಿದೆ. ವರ್ಷದಲ್ಲಿ ಗಳಿಸಿದ ಆದಾಯದ ಮೇಲಿನ ತೆರಿಗೆ ಪಾವತಿಸುವುದನ್ನು ತಪ್ಪಿಸಲು ತಮ್ಮ ಪಿಎಫ್ ಖಾತೆಗಳಿಗೆ ದೊಡ್ಡ ಪ್ರಮಾಣದ ಹಣವನ್ನು ಠೇವಣಿ ಮಾಡಿದ ಶ್ರೀಮಂತ ಮತ್ತು ಹೆಚ್ಚಿನ ನಿವ್ವಳ ಮೌಲ್ಯದ (High Net Worth) ವ್ಯಕ್ತಿಗಳಿಂದ ದುರ್ಬಳಕೆಯ ಹಲವು ಪ್ರಕರಣಗಳನ್ನು ಉಲ್ಲೇಖಿಸಿ ಕೇಂದ್ರವು ತೆರಿಗೆ ವಿಧಿಸುವುದನ್ನು ಘೋಷಣೆ ಮಾಡಿದೆ. ಅಂದ ಹಾಗೆ, ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ ಆರ್ಗನೈಸೇಶನ್ (EPFO) ಪ್ರಸಕ್ತ ಹಣಕಾಸು ವರ್ಷ 2021-22ಕ್ಕೆ (FY 22) ಪಿಎಫ್​ ಮೇಲಿನ ಬಡ್ಡಿ ದರವನ್ನು 40 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಟ್ಟಕ್ಕೆ, ಅಂದರೆ ಶೇ 8.1ಕ್ಕೆ ಇಳಿಸಿದೆ. ಇಂಥ ಸನ್ನಿವೇಶದಲ್ಲಿ ಈ ನಿರ್ಧಾರ ಜಾರಿ ಆಗುತ್ತಿದೆ.

ಇತ್ತೀಚಿನ ಪಿಎಫ್​ ಮೇಲಿನ ತೆರಿಗೆ ಅರ್ಥವೇನು? ಹೊಸ ಆದಾಯ ತೆರಿಗೆ (IT) ನಿಯಮಗಳ ಅಡಿಯಲ್ಲಿ ಪಿಎಫ್​ ಖಾತೆಗಳನ್ನು ಏಪ್ರಿಲ್ 1, 2022ರಿಂದ ತೆರಿಗೆಗೆ ಒಳಪಡುವ ಮತ್ತು ತೆರಿಗೆಗೆ ಒಳಪಡದ ಕೊಡುಗೆ ಖಾತೆಗಳಾಗಿ ವಿಂಗಡಿಸುವ ಸಾಧ್ಯತೆಯಿದೆ. ಹೊಸ ನಿಯಮಗಳೊಂದಿಗೆ, ಹೆಚ್ಚಿನ ಆದಾಯವನ್ನು ಗಳಿಸುವ ಜನರು ಸರ್ಕಾರದ ಕಲ್ಯಾಣ ಯೋಜನೆಗಳ ಲಾಭ ಪಡೆಯುವುದನ್ನು ತಡೆಯುವ ಗುರಿಯನ್ನು ಕೇಂದ್ರವು ಹೊಂದಿದೆ.

ಉದ್ಯೋಗಿ, ಉದ್ಯೋಗದಾತರ ಕೊಡುಗೆಗಳು, ಸ್ವಯಂಪ್ರೇರಿತ (ವಾಲಂಟರಿ), ವೈಯಕ್ತಿಕ ಮತ್ತು ಗಳಿಸಿದ ಬಡ್ಡಿ ಸೇರಿದಂತೆ ಪಿಎಫ್​ ಖಾತೆಗಳಿಗೆ ರೂ. 2.5 ಲಕ್ಷಕ್ಕಿಂತ ಹೆಚ್ಚಿನ ಯಾವುದೇ ಕೊಡುಗೆಗಳನ್ನು ತೆರಿಗೆಯ ಆದಾಯ ಎಂದು ಪರಿಗಣಿಸಲಾಗುತ್ತದೆ. “ರೂ. 2.5 ಲಕ್ಷಕ್ಕಿಂತ ಹೆಚ್ಚಿನ ಪಿಎಫ್ ಕೊಡುಗೆಗಳ ಮೇಲಿನ ತೆರಿಗೆಯು ನೀವು ಬರುವ ಆದಾಯ ತೆರಿಗೆ ಸ್ಲ್ಯಾಬ್ ಅನ್ನು ಆಧರಿಸಿರುತ್ತದೆ ಮತ್ತು ಅದಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲಾಗುತ್ತದೆ,” ಎಂದು ಸ್ವತಂತ್ರ ತೆರಿಗೆ ಸಲಹೆಗಾರರೊಬ್ಬರು ಮಾಹಿತಿ ಹೇಳಿದ್ದಾರೆ.

ಇದನ್ನೂ ಓದಿ: EPF: ಇಪಿಎಫ್​ಒನಿಂದ ಉದ್ಯೋಗದಾತರ ಇಪಿಎಫ್​ ಟ್ರಸ್ಟ್‌ಗೆ ಇಪಿಎಫ್​ ಖಾತೆ ವರ್ಗಾವಣೆ ಹೇಗೆ? ಇಲ್ಲಿದೆ ಎಲ್ಲ ಮಾಹಿತಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ