AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tax On PF: ಪಿಎಫ್​​ನ ಈ ಎಲ್ಲ ಮೊತ್ತ ಸೇರಿ ವರ್ಷಕ್ಕೆ 2.5 ಲಕ್ಷ ರೂಪಾಯಿ ದಾಟಿದರೆ ಬೀಳುತ್ತದೆ ತೆರಿಗೆ

ಪ್ರಾವಿಡೆಂಟ್ ಮೇಲಿನ ತೆರಿಗೆ ವಿಧಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಹೊಸ ನಿಯಮ ತರಲಾಗಿದೆ. ಆ ಬಗೆಗಿನ ವಿವರಣಾತ್ಮಕ ಲೇಖನ ಇಲ್ಲಿದೆ.

Tax On PF: ಪಿಎಫ್​​ನ ಈ ಎಲ್ಲ ಮೊತ್ತ ಸೇರಿ ವರ್ಷಕ್ಕೆ 2.5 ಲಕ್ಷ ರೂಪಾಯಿ ದಾಟಿದರೆ ಬೀಳುತ್ತದೆ ತೆರಿಗೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 18, 2022 | 12:49 PM

Share

ಉದ್ಯೋಗಿ- ಉದ್ಯೋಗದಾತರ ಕೊಡುಗೆ ಮತ್ತು ಗಳಿಸಿದ ಬಡ್ಡಿಯೂ ಸೇರಿದಂತೆ ವಾರ್ಷಿಕವಾಗಿ ರೂ. 2.50 ಲಕ್ಷಕ್ಕಿಂತ ಹೆಚ್ಚಿನ ಪ್ರಾವಿಡೆಂಟ್ ಫಂಡ್ (PF) ಕೊಡುಗೆಗಳಿಗೆ ಸರ್ಕಾರವು ತೆರಿಗೆ ವಿಧಿಸುತ್ತದೆ. ಅಂದಹಾಗೆ ಸರ್ಕಾರಿ ನೌಕರರಿಗೆ ಗರಿಷ್ಠ ರೂ. 5 ಲಕ್ಷ ಮಿತಿ ನಿಗದಿಪಡಿಸಲಾಗಿದೆ. ವರ್ಷದಲ್ಲಿ ಗಳಿಸಿದ ಆದಾಯದ ಮೇಲಿನ ತೆರಿಗೆ ಪಾವತಿಸುವುದನ್ನು ತಪ್ಪಿಸಲು ತಮ್ಮ ಪಿಎಫ್ ಖಾತೆಗಳಿಗೆ ದೊಡ್ಡ ಪ್ರಮಾಣದ ಹಣವನ್ನು ಠೇವಣಿ ಮಾಡಿದ ಶ್ರೀಮಂತ ಮತ್ತು ಹೆಚ್ಚಿನ ನಿವ್ವಳ ಮೌಲ್ಯದ (High Net Worth) ವ್ಯಕ್ತಿಗಳಿಂದ ದುರ್ಬಳಕೆಯ ಹಲವು ಪ್ರಕರಣಗಳನ್ನು ಉಲ್ಲೇಖಿಸಿ ಕೇಂದ್ರವು ತೆರಿಗೆ ವಿಧಿಸುವುದನ್ನು ಘೋಷಣೆ ಮಾಡಿದೆ. ಅಂದ ಹಾಗೆ, ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ ಆರ್ಗನೈಸೇಶನ್ (EPFO) ಪ್ರಸಕ್ತ ಹಣಕಾಸು ವರ್ಷ 2021-22ಕ್ಕೆ (FY 22) ಪಿಎಫ್​ ಮೇಲಿನ ಬಡ್ಡಿ ದರವನ್ನು 40 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಟ್ಟಕ್ಕೆ, ಅಂದರೆ ಶೇ 8.1ಕ್ಕೆ ಇಳಿಸಿದೆ. ಇಂಥ ಸನ್ನಿವೇಶದಲ್ಲಿ ಈ ನಿರ್ಧಾರ ಜಾರಿ ಆಗುತ್ತಿದೆ.

ಇತ್ತೀಚಿನ ಪಿಎಫ್​ ಮೇಲಿನ ತೆರಿಗೆ ಅರ್ಥವೇನು? ಹೊಸ ಆದಾಯ ತೆರಿಗೆ (IT) ನಿಯಮಗಳ ಅಡಿಯಲ್ಲಿ ಪಿಎಫ್​ ಖಾತೆಗಳನ್ನು ಏಪ್ರಿಲ್ 1, 2022ರಿಂದ ತೆರಿಗೆಗೆ ಒಳಪಡುವ ಮತ್ತು ತೆರಿಗೆಗೆ ಒಳಪಡದ ಕೊಡುಗೆ ಖಾತೆಗಳಾಗಿ ವಿಂಗಡಿಸುವ ಸಾಧ್ಯತೆಯಿದೆ. ಹೊಸ ನಿಯಮಗಳೊಂದಿಗೆ, ಹೆಚ್ಚಿನ ಆದಾಯವನ್ನು ಗಳಿಸುವ ಜನರು ಸರ್ಕಾರದ ಕಲ್ಯಾಣ ಯೋಜನೆಗಳ ಲಾಭ ಪಡೆಯುವುದನ್ನು ತಡೆಯುವ ಗುರಿಯನ್ನು ಕೇಂದ್ರವು ಹೊಂದಿದೆ.

ಉದ್ಯೋಗಿ, ಉದ್ಯೋಗದಾತರ ಕೊಡುಗೆಗಳು, ಸ್ವಯಂಪ್ರೇರಿತ (ವಾಲಂಟರಿ), ವೈಯಕ್ತಿಕ ಮತ್ತು ಗಳಿಸಿದ ಬಡ್ಡಿ ಸೇರಿದಂತೆ ಪಿಎಫ್​ ಖಾತೆಗಳಿಗೆ ರೂ. 2.5 ಲಕ್ಷಕ್ಕಿಂತ ಹೆಚ್ಚಿನ ಯಾವುದೇ ಕೊಡುಗೆಗಳನ್ನು ತೆರಿಗೆಯ ಆದಾಯ ಎಂದು ಪರಿಗಣಿಸಲಾಗುತ್ತದೆ. “ರೂ. 2.5 ಲಕ್ಷಕ್ಕಿಂತ ಹೆಚ್ಚಿನ ಪಿಎಫ್ ಕೊಡುಗೆಗಳ ಮೇಲಿನ ತೆರಿಗೆಯು ನೀವು ಬರುವ ಆದಾಯ ತೆರಿಗೆ ಸ್ಲ್ಯಾಬ್ ಅನ್ನು ಆಧರಿಸಿರುತ್ತದೆ ಮತ್ತು ಅದಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲಾಗುತ್ತದೆ,” ಎಂದು ಸ್ವತಂತ್ರ ತೆರಿಗೆ ಸಲಹೆಗಾರರೊಬ್ಬರು ಮಾಹಿತಿ ಹೇಳಿದ್ದಾರೆ.

ಇದನ್ನೂ ಓದಿ: EPF: ಇಪಿಎಫ್​ಒನಿಂದ ಉದ್ಯೋಗದಾತರ ಇಪಿಎಫ್​ ಟ್ರಸ್ಟ್‌ಗೆ ಇಪಿಎಫ್​ ಖಾತೆ ವರ್ಗಾವಣೆ ಹೇಗೆ? ಇಲ್ಲಿದೆ ಎಲ್ಲ ಮಾಹಿತಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?