AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan Yojana: ಪಿಎಂ ಕಿಸಾನ್ 13ನೇ ಕಂತಿಗೆ ಅರ್ಜಿ ಸಲ್ಲಿಕೆ ಹೇಗೆ, ಯಾವೆಲ್ಲ ದಾಖಲೆಗಳು ಬೇಕು? ಇಲ್ಲಿದೆ ಪೂರ್ಣ ಮಾಹಿತಿ

ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ಡಿಸೆಂಬರ್ 20ರಿಂದ 26ರ ನಡುವೆ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಿದೆ ಎಂದು ವರದಿಯಾಗಿದೆ. 13ನೇ ಕಂತಿಗೆ ಅರ್ಜಿ ಸಲ್ಲಿಕೆ ಹೇಗೆ, ಅರ್ಹತೆ ತಿಳಿಯುವುದು ಹೇಗೆ, ಯಾವೆಲ್ಲ ದಾಖಲೆಗಳು ಬೇಕು? ಇಲ್ಲಿದೆ ಪೂರ್ಣ ಮಾಹಿತಿ.

PM Kisan Yojana: ಪಿಎಂ ಕಿಸಾನ್ 13ನೇ ಕಂತಿಗೆ ಅರ್ಜಿ ಸಲ್ಲಿಕೆ ಹೇಗೆ, ಯಾವೆಲ್ಲ ದಾಖಲೆಗಳು ಬೇಕು? ಇಲ್ಲಿದೆ ಪೂರ್ಣ ಮಾಹಿತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on:Dec 19, 2022 | 5:29 PM

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM-KISAN) 12ನೇ ಕಂತನ್ನು ಈಗಾಗಲೇ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ ಇದೀಗ 13ನೇ ಕಂತಿನ ಬಿಡುಗಡೆಗೆ ಮುಂದಾಗಿದೆ. ಫಲಾನುಭವಿಗಳು ಹಣ ಬಿಡುಗಡೆಗೆ ಕಾಯುತ್ತಿದ್ದಾರೆ. ಯೋಜನೆಯಡಿ ನೋಂದಾಯಿತ ರೈತರಿಗೆ ಮೂರು ಕಂತುಗಳಲ್ಲಿ 2,000 ರೂ.ನಂತೆ ವಾರ್ಷಿಕ 6,000 ರೂ. ನೀಡಲಾಗುತ್ತಿದೆ. 13ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ಡಿಸೆಂಬರ್ 20ರಿಂದ 26ರ ನಡುವೆ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಿದೆ ಎಂದು ವರದಿಯಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆಯನ್ನು ಸರ್ಕಾರ ಮಾಡಬೇಕಿದೆ. ಯೋಜನೆಯಡಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ (DBT) ವರ್ಗಾವಣೆಯಾಗುತ್ತದೆ. ಹಣ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವ ಈ ಸಂದರ್ಭದಲ್ಲಿ, ಪಿಎಂ ಕಿಸಾನ್ 13ನೇ ಕಂತಿಗೆ ಅರ್ಜಿ ಸಲ್ಲಿಸುವುದು ಹೇಗೆ, ಯಾವೆಲ್ಲ ದಾಖಲೆಗಳು ಬೇಕು? ಇತ್ಯಾದಿ ಪೂರ್ತಿ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

13ನೇ ಕಂತಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಪಿಎಂ ಕಿಸಾನ್ ವೆಬ್​ಸೈಟ್​ಗೆ (http://pmkisan.gov.in/) ಭೇಟಿ ನೀಡುವ ಮೂಲಕ ಅರ್ಹ ಫಲಾನುಭವಿಗಳು ಆನ್​ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯ ಹಂತಗಳನ್ನು ಇಲ್ಲಿ ನೀಡಲಾಗಿದೆ.

ಇದನ್ನೂ ಓದಿ
Image
Google Layoffs: ಗೂಗಲ್ ಮಾತೃಸಂಸ್ಥೆ ಅಲ್ಫಾಬೆಟ್​ನಿಂದ 10,000 ಉದ್ಯೋಗಿಗಳ ವಜಾಕ್ಕೆ ಸಿದ್ಧತೆ; ವರದಿ
Image
ಡೆಬಿಟ್ ಕಾರ್ಡ್ ಇಲ್ಲದೆಯೂ ಫೋನ್​ ಪೇ ಆ್ಯಕ್ಟಿವೇಟ್ ಮಾಡಬಹುದು; ಹೇಗೆಂಬ ವಿವರ ಇಲ್ಲಿದೆ
Image
ಇನ್ನೂ ಆಧಾರ್, ಪ್ಯಾನ್ ಲಿಂಕ್ ಮಾಡಿಲ್ಲವೇ? ಬೇಗ ಮಾಡಿ; ಇಲ್ಲವಾದರೆ ನಿಷ್ಕ್ರಿಯವಾಗಲಿದೆ ಪ್ಯಾನ್ ಕಾರ್ಡ್
Image
Digital Wallets: ಡಿಜಿಟಲ್ ವಾಲೆಟ್​ನಲ್ಲಿ ಹೆಚ್ಚು ಹಣ ಇಡುವುದು ಉತ್ತಮಲ್ಲ; ತಜ್ಞರು ಹೀಗೆನ್ನಲು ಕಾರಣವಿದೆ

ಯಾವೆಲ್ಲ ದಾಖಲೆಗಳು ಬೇಕು?

  • ಆಧಾರ್ ಕಾರ್ಡ್
  • ಮೊಬೈಲ್ ಸಂಖ್ಯೆ
  • ಬ್ಯಾಂಕ್ ಖಾತೆ ವಿವರಗಳು

ಅರ್ಹ ಫಲಾನುಭವಿಗಳು ಯಾರು?

  • ಸಣ್ಣ ಮತ್ತು ಅತಿ ಸಣ್ಣ ರೈತರು ಯೋಜನೆಯ ಫಲಾನುಭವಿಗಳಾಗಿದ್ದಾರೆ. ಅರ್ಹ ರೈತರ ಕುಟುಂಬದವರು, ಅಂದರೆ ರೈತನ ಪತ್ನಿ, ಸಣ್ಣ ಮಕ್ಕಳೂ ಕಂತಿನ ಹಣ ಪಡೆಯಲು ಅರ್ಹರಾಗಿರುತ್ತಾರೆ.
  • ಅರ್ಹ ರೈತರು ಯಾರು ಎಂಬುದನ್ನು ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಗುರುತಿಸುತ್ತವೆ.

13ನೇ ಕಂತಿನ ಫಲಾನುಭವಿಗಳ ಅರ್ಹತೆ ಸ್ಥಿತಿಗತಿ ಪರಿಶೀಲನೆ ಹೇಗೆ?

  • ವೆಬ್​ಸೈಟ್​ಗೆ (www.kisan.gov.in) ಭೇಟಿ ನೀಡಿ.
  • ವೆಬ್ ಪುಟದ ಬಲಭಾಗದ ಅಂಚಿನಲ್ಲಿರುವ ‘ಫಾರ್ಮರ್ಸ್ ಕಾರ್ನರ್’ಗೆ ಸ್ಕ್ರಾಲ್ ಮಾಡಿ.
  • ‘ಬೆನಿಫೀಷಿಯರಿ ಸ್ಟೇಟಸ್’ ಎಂಬ ಸೆಕ್ಷನ್ ಅನ್ನು ಕ್ಲಿಕ್ ಮಾಡಿ.
  • ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಕಾಣಿಸುವ ಅರ್ಜಿಯಲ್ಲಿ ಫಲಾನುಭವಿಯ ಹೆಸರು ಭರ್ತಿ ಮಾಡಬೇಕು.
  • ಹೊಸ ಪುಟದಲ್ಲಿ ಯಾವುದನ್ನು ಹುಡುಕಲು ಬಯಸುತ್ತೀರಿ ಎಂಬ ಎರಡು ಆಯ್ಕೆಗಳಿರುತ್ತವೆ.
  • ದೂರವಾಣಿ ಸಂಖ್ಯೆ ಅಥವಾ ನೋಂದಣಿ ಸಂಖ್ಯೆಯನ್ನು ನೀವು ಆಯ್ಕೆ ಮಾಡಿಕೊಳ್ಳಬಹುದು.
  • ಮೊಬೈಲ್ ಫೋನ್ ಸಂಖ್ಯೆಯನ್ನೂ ಆಯ್ಕೆ ಮಾಡಬಹುದು.
  • ಮೊಬೈಲ್ ಫೋನ್ ಸಂಖ್ಯೆಯನ್ನು ನಮೂದಿಸಿದಾಗ ಒಟಿಪಿ ಸಂದೇಶ ಬರುತ್ತದೆ. ಅದನ್ನು ನಮೂದಿಸಬೇಕು.
  • ‘ಗೆಟ್ ಡಾಟಾ’ ಆಯ್ಕೆಯನ್ನು ಕ್ಲಿಕ್ ಮಾಡಿದಾಗ ಪಾವತಿ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬುದು ಕಾಣಿಸುತ್ತದೆ.
  • ನಂತರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಆಗಿದೆಯೇ ಇಲ್ಲವೇ ಎಂಬ ಸಂದೇಶ ಕಾಣಿಸುತ್ತದೆ.
  • ನೋಂದಣಿ ಸಂಖ್ಯೆಯ ಆಧಾರದಲ್ಲಿ ಸ್ಥಿತಿಗತಿ ಪರಿಶೀಲಿಸಲು ಬಯಸುತ್ತೀರಾದರೆ, ಅದನ್ನು ನಮೂದಿಸಿ. ನಂತರ ‘ಗೆಟ್ ಡಾಟಾ’ ಆಯ್ಕೆಯನ್ನು ಕ್ಲಿಕ್ ಮಾಡಿ. ನಂತರ ನಿಮಗೆ ಸ್ಥಿತಿಗತಿ ಏನಿದೆ ಎಂಬುದು ಕಾಣಿಸುತ್ತದೆ.
  • 13ನೇ ಕಂತಿನ ಹಣ ಬಿಡುಗಡೆ ಆಗಿದೆಯೋ ಇಲ್ಲವೋ ಎಂಬುದು ಸ್ಕ್ರೀನ್ ಮೇಲೆ ಕಾಣಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:10 am, Thu, 24 November 22

ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ