AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan eKYC: ಪಿಎಂ ಕಿಸಾನ್ ಇಕೆವೈಸಿ ಅವಧಿ ವಿಸ್ತರಣೆ; ಇದನ್ನು ಮಾಡುವ ಹಂತಹಂತದ ವಿವರಣೆ ಇಲ್ಲಿದೆ

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಲಾಭವನ್ನು ಪಡೆಯುವುದಕ್ಕೆ ರೈತ ಫಲಾನುಭವಿಗಳು ಇಕೆವೈಸಿ ಪೂರ್ಣಗೊಳಿಸಬೇಕಾಗುತ್ತದೆ. ಅದು ಹೇಗೆ ಎಂಬುದರ ವಿವರ ಇಲ್ಲಿದೆ.

PM Kisan eKYC: ಪಿಎಂ ಕಿಸಾನ್ ಇಕೆವೈಸಿ ಅವಧಿ ವಿಸ್ತರಣೆ; ಇದನ್ನು ಮಾಡುವ ಹಂತಹಂತದ ವಿವರಣೆ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 22, 2022 | 11:14 PM

Share

ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಎಂಬುದು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಇದರ ಅಡಿ ನೋಂದಣಿ ಮಾಡಲಾದ ರೈತರಿಗೆ ವಾರ್ಷಿಕ 6,000 ರೂಪಾಯಿ ಆದಾಯದ ನೆರವನ್ನು ಮೂರು ಸಮಾನ ಕಂತುಗಳಲ್ಲಿ ಒದಗಿಸುತ್ತದೆ. ಮತ್ತೊಂದೆಡೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಪಿಎಂ ಕಿಸಾನ್ ಯೋಜನೆಯ (PM-KISAN) ಹಣಕಾಸಿನ ಪ್ರಯೋಜನವನ್ನು ಪಡೆಯಲು ರೈತರು ತಮ್ಮ ಕೆವೈಸಿ ಕಾರ್ಯವನ್ನು ಪೂರ್ಣಗೊಳಿಸಬೇಕು. ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ, ಭಾರತ ಸರ್ಕಾರವು ಪಿಎಂ ಕಿಸಾನ್ (PM-Kisan) ಖಾತೆ ಕೆವೈಸಿ ಪೂರ್ತಿ ಮಾಡಲು ಗಡುವನ್ನು ವಿಸ್ತರಿಸಿದೆ. ಕೇಂದ್ರವು 2022ರ ಮೇ 31ರ ಗಡುವನ್ನು ನಿಗದಿಪಡಿಸಿತ್ತು, ಆದರೆ ರೈತರ ಅನುಕೂಲಕ್ಕಾಗಿ 11ನೇ ಕಂತು ರೂ. 2000 ಪಡೆಯಲು ಅದನ್ನು ಈಗ 31ನೇ ಜುಲೈ 2022ರ ವರೆಗೆ ವಿಸ್ತರಿಸಲಾಗಿದೆ.

ಪಿಎಂ ಕಿಸಾನ್ ಪೋರ್ಟಲ್ ಪ್ರಕಾರ, “ಪಿಎಂ ಕಿಸಾನ್ ನೋಂದಾಯಿತ ರೈತರಿಗೆ eKYC ಕಡ್ಡಾಯವಾಗಿದೆ. OTP ಆಧಾರಿತ eKYC PMKISAN ಪೋರ್ಟಲ್‌ನಲ್ಲಿ ಲಭ್ಯವಿದೆ ಅಥವಾ ಬಯೋಮೆಟ್ರಿಕ್ ಆಧಾರಿತ eKYCಗಾಗಿ ಹತ್ತಿರದ ಸಿಎಸ್​ಸಿ ಕೇಂದ್ರಗಳನ್ನು ಸಂಪರ್ಕಿಸಬಹುದು. ಎಲ್ಲ ಪಿಎಂಕಿಸಾನ್ ಫಲಾನುಭವಿಗಳಿಗೆ eKYCಯ ಗಡುವನ್ನು 31 ಜುಲೈ 2022ರ ವರೆಗೆ ವಿಸ್ತರಿಸಲಾಗಿದೆ.”

ಆಫ್​ಲೈನ್​ ಮೂಲಕ ಇಕೆವೈಸಿ ಪೂರ್ಣಗೊಳಿಸುವುದು ಹೇಗೆ ಅಂತ ನೋಡಿದರೆ, ಹತ್ತಿರದ ಸಿಎಸ್​ಸಿ ಸೆಂಟರ್​ ಅನ್ನು ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಭೇಟಿ ಮಾಡಬೇಕು. ಬಯೋಮೆಟ್ರಿಕ್ ಮಾಹಿತಿ ನೀಡುವ ಮೂಲಕ ಇಕೆವೈಸಿ ಸಾಧ್ಯ.

ಪಿಎಂ ಕಿಸಾನ್ ಯೋಜನೆಗಾಗಿ ಇಕೆವೈಸಿ ಪ್ರಕ್ರಿಯೆಯನ್ನು ಹೇಗೆ ಪೂರ್ಣಗೊಳಿಸುವುದು?

1. http://pmkisan.nic.in/ ಗೆ ಭೇಟಿ ನೀಡಿ ಮತ್ತು ‘ಫಾರ್ಮರ್ಸ್ ಕಾರ್ನರ್’ ವಿಭಾಗದ ಅಡಿಯಲ್ಲಿ ‘eKYC’ ಕ್ಲಿಕ್ ಮಾಡಿ.

2. ಈಗ ನಿಮ್ಮನ್ನು ‘OTP ಆಧಾರಿತ Ekyc’ ಪುಟಕ್ಕೆ ಮರು ನಿರ್ದೇಶಿಸಲಾಗುತ್ತದೆ, ಅಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು ಮತ್ತು ನಂತರ ‘search’ ಕ್ಲಿಕ್ ಮಾಡಿ.

3. ನಿಮ್ಮ ಆಧಾರ್ ಸಂಖ್ಯೆಯನ್ನು ಪ್ರದರ್ಶಿಸಿದ ನಂತರ, ಆಧಾರ್‌ನೊಂದಿಗೆ ಲಿಂಕ್ ಮಾಡಲಾದ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು ನಂತರ ‘Get OTP’ ಕ್ಲಿಕ್ ಮಾಡಿ.

4. ನೀವು ಈಗ ನಿಮ್ಮ ನೋಂದಾಯಿತ ಅಥವಾ ಆಧಾರ್-ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯಲ್ಲಿ ಒಂದು-ಬಾರಿ ಪಾಸ್‌ವರ್ಡ್ (OTP) ಅನ್ನು ಪಡೆಯುತ್ತೀರಿ, ಅಗತ್ಯವಿರುವ ಕ್ಷೇತ್ರದಲ್ಲಿ OTP ಅನ್ನು ನಮೂದಿಸಿ ಮತ್ತು ಮುಂದುವರಿಯಿರಿ.

5. ಒಮ್ಮೆ OTP ಪರಿಶೀಲಿಸಿದ ನಂತರ, ಎಲ್ಲ ವಿವರಗಳು ಹೊಂದಾಣಿಕೆಯಾದರೆ eKYC ಕಾರ್ಯವು ಯಶಸ್ವಿಯಾಗಿ ಪೂರ್ಣಗೊಳ್ಳುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: PM Kisan Yojana: ಪಿಎಂ ಕಿಸಾನ್ ಯೋಜನೆ -ಕರ್ನಾಟಕದ 47.86 ಲಕ್ಷ ರೈತರಿಗೆ ನೇರವಾಗಿ 956.71 ಕೋಟಿ ರೂ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published On - 11:14 pm, Wed, 22 June 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ