AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಆರ್ಥಿಕ ಬೆಳವಣಿಗೆ ವೇಗ ಕನಿಷ್ಠ ಹಂತ ಮುಟ್ಟಿರಬಹುದು; ಇನ್ನೇನಿದ್ದರೂ ಮೇಲೇರುವ ಸಮಯ: ಎಚ್​ಎಸ್​ಬಿಸಿ ಎಂಎಫ್ ವರದಿ

HSBC MF's report predicts strong future growth of Indian economy: ಭಾರತದ ಆರ್ಥಿಕ ಬೆಳವಣಿಗೆಯ ಚಕ್ರವು ತಳಮಟ್ಟ ಮುಟ್ಟಿದೆ ಎಂದು ಎಚ್​ಎಸ್​ಬಿಸಿ ಎಂಎಫ್​ನ ವರದಿಯಲ್ಲಿ ಶುಭನುಡಿಯಲಾಗಿದೆ. ಭಾರತದ ಮುಂದಿನ ಆರ್ಥಿಕ ಬೆಳವಣಿಗೆಯು ಹೆಚ್ಚಿನ ವೇಗದಲ್ಲಿ ಸಾಗಬಹುದು ಎಂದು ಹೇಳಲಾಗಿದೆ. ತೈಲ ಬೆಲೆ ಇಳಿಕೆ, ಬಡ್ಡಿದರ ಇಳಿಕೆ, ಹೂಡಿಕೆ ಹೆಚ್ಚಳ ಇತ್ಯಾದಿ ಅಂಶಗಳು ಆರ್ಥಿಕ ಬೆಳವಣಿಗೆಗೆ ಪೂರಕವಾಗಿವೆ ಎಂದು ಈ ವರದಿ ಅಭಿಪ್ರಾಯಪಟ್ಟಿದೆ.

ಭಾರತದ ಆರ್ಥಿಕ ಬೆಳವಣಿಗೆ ವೇಗ ಕನಿಷ್ಠ ಹಂತ ಮುಟ್ಟಿರಬಹುದು; ಇನ್ನೇನಿದ್ದರೂ ಮೇಲೇರುವ ಸಮಯ: ಎಚ್​ಎಸ್​ಬಿಸಿ ಎಂಎಫ್ ವರದಿ
ಆರ್ಥಿಕತೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 14, 2025 | 4:58 PM

Share

ನವದೆಹಲಿ, ಅಕ್ಟೋಬರ್ 14: ಭಾರತದ ಆರ್ಥಿಕ ಬೆಳವಣಿಗೆ (GDP growth rate) ಶೇ. 8ಕ್ಕಿಂತಲೂ ಹೆಚ್ಚಿನ ವೇಗದಲ್ಲಿ ಆಗಬಹುದು ಎನ್ನುವ ನಿರೀಕ್ಷೆ ಕೆಲ ವರ್ಷಗಳ ಹಿಂದೆ ಇತ್ತು. ಆದರೆ, ಶೇ. 6-7ರ ಆಸುಪಾಸಿನ ಬೆಳವಣಿಗೆಗೆ ತೃಪ್ತಿಪಡುವಂತಾಗಿದೆ. ಈ ಮಂದಗತಿಗೆ ನಿರ್ದಿಷ್ಟ ಕಾರಣಗಳು ಕಾಣದಾಗಿವೆ. ಆದರೆ, ಎಚ್​ಎಸ್​ಬಿಸಿ ಎಂಎಫ್ ಸಂಸ್ಥೆಯ ವರದಿಯೊಂದು ಖುಷಿಯ ವಿಚಾರ ಪ್ರಸ್ತುತಪಡಿಸಿದೆ. ಭಾರತದ ಅಭಿವೃದ್ಧಿ ಚಕ್ರ ತನ್ನ ಕನಿಷ್ಠ ಮಟ್ಟ ಮುಟ್ಟಿರಬಹುದು ಎಂದು ಈ ವರದಿಯಲ್ಲಿ ಹೇಳಲಾಗಿದೆ. ಅಂದರೆ, ಜಿಡಿಪಿ ದರ ಕನಿಷ್ಠ ಹಂತ ಮುಟ್ಟಿದ್ದು, ಮುಂದಿನ ದಿನಗಳು ವೇಗದ ಚಲನೆಗೆ ಸಾಕ್ಷಿಯಾಗಲಿವೆ.

ಎಚ್​ಎಸ್​ಸಿಬಿ ಮ್ಯುಚುವಲ್ ಫಂಡ್ ಸಂಸ್ಥೆಯ ವರದಿ ಪ್ರಕಾರ ಭಾರತದ ಆರ್ಥಿಕತೆಯ ಎಲ್ಲಾ ಸಂಕೇತಗಳೂ ಸಕಾರಾತ್ಮಕವಾಗಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿ ವೇಗ ಹೆಚ್ಚಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಗೂಗಲ್​ನಿಂದ ಬೃಹತ್ ಎಐ ಹಬ್; 15 ಬಿಲಿಯನ್ ಡಾಲರ್ ಹೂಡಿಕೆ; ಪ್ರಧಾನಿ ಮೋದಿ ಸ್ವಾಗತ

‘ಬಡ್ಡಿದರ, ಹಣದ ಹರಿವಿನ ಚಕ್ರ, ಕಚ್ಚಾ ತೈಲ ಬೆಲೆಗಳಲ್ಲಿ ಇಳಿಕೆ, ಸಹಜ ಮುಂಗಾರು ಮೊದಲಾದ ಅಂಶಗಳು ಭಾರತದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿವೆ’ ಎಂದು ಈ ವರದಿಯಲ್ಲಿ ಹೇಳಲಾಗಿದೆ.

ಆದರೆ, ಜಾಗತಿಕ ವ್ಯಾಪಾರ ಅನಿಶ್ಚಿತತೆಯಿಂದ ಹಿಡಿದು ಖಾಸಗಿ ಬಂಡವಾಳ ವೆಚ್ಚದಲ್ಲಿ ಇಳಿಕೆವರೆಗೆ ಒಂದಷ್ಟು ಹಿನ್ನಡೆಗಳೂ ಇವೆ ಎಂದು ಈ ಎಚ್ಚರಿಸಿದೆ ಈ ವರದಿ.

ಇದನ್ನೂ ಓದಿ: ಟೆಲಿಗ್ರಾಮ್ ಸಿಇಒ ಆದರೂ ಮೊಬೈಲ್ ಮುಟ್ಟಲ್ಲ, ಒಂದೂ ಚಟ ಹೊಂದಿಲ್ಲ; ಪಾವೆಲ್ ದುರೋವ್ ಕಥೆ ಇದು…

ಈ ಹಿನ್ನಡೆಗಳ ಹೊರತಾಗಿಯೂ ಭಾರತದಲ್ಲಿ ಹೂಡಿಕೆಗಳು ಉತ್ತಮವಾಗಿ ಆಗಬಹುದು. ಖಾಸಗಿ ಬಂಡವಾಳ ವೆಚ್ಚದಲ್ಲಿ ಏರುಪೇರಾದರೂ ಸರ್ಕಾರಿ ಹೂಡಿಕೆಗಳು ಸರಾಗವಾಗಿ ಮುಂದುವರಿಯಬಹುದು. ಖಾಸಗಿ ಹೂಡಿಕೆಗಳೂ ಕೂಡ ಚೇತರಿಕೆ ಪಡೆಯಬಹುದು. ರಿಯಲ್ ಎಸ್ಟೇಟ್ ಚಕ್ರದಲ್ಲೂ ಚೇತರಿಕೆ ಆಗಬಹುದು ಎಂದು ಎಚ್​ಎಸ್​ಬಿಸಿ ಎಂಎಫ್​ನ ಈ ವರದಿಯಲ್ಲಿ ವಿವರಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ